Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:1 - ಪರಿಶುದ್ದ ಬೈಬಲ್‌

1 ಯೆಹೂದ ಪ್ರಾಂತಕ್ಕೆ ಹಿಂತಿರುಗಿದ ಯಾಜಕರ ಮತ್ತು ಲೇವಿಯರ ಪಟ್ಟಿ: ಅವರು ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೇಷೂವನೊಡನೆ ಹಿಂದಿರುಗಿದರು. ಅವರು ಯಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೇಷೂವ ಇವರೊಡನೆ ಯೆಹೂದ ದೇಶಕ್ಕೆ ಬಂದ ಯಾಜಕರು ಮತ್ತು ಲೇವಿಯರು ಯಾರಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಶೆಯಲ್ತೀಯೇಲನ ಮಗ ಜೆರುಬ್ಬಾಬೆಲ್ ಹಾಗು ಯೇಷೂವ ಇವರೊಡನೆ ಜುದೇಯ ನಾಡಿಗೆ ಹಿಂದಿರುಗಿ ಬಂದ ಯಾಜಕರು ಮತ್ತು ಲೇವಿಯರ ಪಟ್ಟಿ : ಯಾಜಕರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೇಷೂವ ಇವರೊಡನೆ [ಯೆಹೂದ ದೇಶಕ್ಕೆ] ಬಂದ ಯಾಜಕರೂ ಲೇವಿಯರೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನ ಮತ್ತು ಯೇಷೂವನ ಸಂಗಡ ಹೋದ ಯಾಜಕರೂ ಲೇವಿಯರೂ ಯಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:1
22 ತಿಳಿವುಗಳ ಹೋಲಿಕೆ  

ಆ ಬೆಳ್ಳಿಬಂಗಾರಗಳಿಂದ ಒಂದು ಕಿರೀಟವನ್ನು ಮಾಡಿ ಯೆಹೋಶುವನ ತಲೆಯ ಮೇಲಿಟ್ಟು ಅವನಿಗೆ ಹೀಗೆ ಹೇಳಿರಿ: (ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಇವನ ತಂದೆ ಯೆಹೋಜಾದಾಕನು.)


“ಶೆಯಲ್ತಿಯೇಲನ ಮಗನೂ ರಾಜ್ಯಪಾಲನೂ ಆಗಿರುವ ಜೆರುಬ್ಬಾಬೆಲನಿಗೂ ಮಹಾಯಾಜಕನೂ ಯೆಹೋಚಾದಾಕನ ಮಗನೂ ಆಗಿರುವ ಯೆಹೋಶುವನಿಗೂ ಮತ್ತು ಎಲ್ಲಾ ಜನರಿಗೂ ಈ ವಿಷಯಗಳನ್ನು ತಿಳಿಸು.


ಬಳಿಕ ದೇವರಾದ ಯೆಹೋವನು ಆಲಯವನ್ನು ಕಟ್ಟುವಂತೆ ಜನರನ್ನು ಪ್ರೇರೇಪಿಸಿದನು. ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು. ಯೆಹೋಚಾದಾಕನ ಮಗನಾದ ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು ಅಲ್ಲದೆ ಯೆಹೋವನು ಆಲಯವನ್ನು ಕಟ್ಟಲು ಎಲ್ಲಾ ಜನರನ್ನು ಪ್ರೋತ್ಸಾಹಿಸಿದನು. ಆದ್ದರಿಂದ ಅವರೆಲ್ಲರೂ ತಮ್ಮ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟಲು ಪ್ರಾರಂಭಿಸಿದರು.


ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನೂ ಪ್ರಧಾನಯಾಜಕನೂ ಆದ ಯೆಹೋಶುವನಿಗೂ ಸಂದೇಶವನ್ನು ಕೊಡಲು ದೇವರಾದ ಯೆಹೋವನು ಹಗ್ಗಾಯನನ್ನು ಕಳುಹಿಸಿದನು. ಆದ್ದರಿಂದ ಇವರು ಮತ್ತು ಎಲ್ಲಾ ಜನರು ತಮ್ಮ ದೇವರಾದ ಯೆಹೋವನ ಸ್ವರವನ್ನು ಮತ್ತು ಪ್ರವಾದಿಯಾದ ಹಗ್ಗಾಯನ ಮಾತುಗಳನ್ನು ಕೇಳಿದರು ಮತ್ತು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.


ಪರ್ಶಿಯಾದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಹಗ್ಗಾಯನಿಗೆ ಯೆಹೋವನಿಂದ ಸಂದೇಶವು ಬಂದಿತು. ಈ ಸಂದೇಶವು ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೋಸ್ಕರ, ಯೆಹೋಚಾದಾಕನ ಮಗನಾದ ಯೆಹೋಶುವನಿಗೋಸ್ಕರ ಬಂದಿತು. ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು; ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಸಂದೇಶವು ಇದೇ:


ಯೇಷೂವನು ಯೋಯಾಕೀಮನ ತಂದೆ; ಯೋಯಾಕೀಮನು ಎಲ್ಯಾಷೀಬನ ತಂದೆ; ಎಲ್ಯಾಷೀಬನು ಯೋಯಾದನ ತಂದೆ;


ಇವರು ಜೆರುಬ್ಬಾಬೆಲ್‌ನೊಂದಿಗೆ ಹಿಂತಿರುಗಿದರು. ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್ ಮತ್ತು ಬಾಣ. ಇಸ್ರೇಲಿನ ಜನರಲ್ಲಿ ಹಿಂದೆ ಬಂದವರ ವಿವರ:


ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೇಲ್ ಮತ್ತು ಯೋಚಾದಾಕನ ಮಗನಾದ ಯೇಷೂವನೂ ಜೆರುಸಲೇಮಿನಲ್ಲಿ ದೇವಾಲಯವನ್ನು ಕಟ್ಟುವ ಕಾರ್ಯವನ್ನು ಮತ್ತೆ ಪ್ರಾರಂಭಿಸಿದರು. ದೇವರ ಪ್ರವಾದಿಗಳೆಲ್ಲರೂ ಅವರೊಂದಿಗಿದ್ದು ಅವರನ್ನು ಪ್ರೋತ್ಸಾಹಪಡಿಸುತ್ತಿದ್ದರು.


ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೋಚಾದಾಕನ ಮಗನಾದ ಯೇಷೂವನು ಕೆಲಸವನ್ನು ಪ್ರಾರಂಭಿಸಿದರು. ಅವರ ಸಹೋದರರು, ಯಾಜಕರು, ಲೇವಿಯರು ಮತ್ತು ಅವರೊಂದಿಗೆ ಸೆರೆಯಿಂದ ಬಂದವರೆಲ್ಲರೂ ಕೆಲಸ ಮಾಡಿದರು. ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಲೇವಿಯವರನ್ನು ಮೇಲ್ವಿಚಾರಕರನ್ನಾಗಿ ಅವರು ನೇಮಿಸಿದರು.


ಆಗ ಯೋಚಾದಾಕನ ಮಗನಾದ ಯೇಷೂವನೂ ಅವನೊಂದಿಗೆ ಇದ್ದ ಯಾಜಕರೂ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಅವನೊಂದಿಗಿದ್ದ ಜನರೊಂದಿಗೆ ಇಸ್ರೇಲ್ ದೇವರಿಗೆ ಯಜ್ಞವೇದಿಕೆಯನ್ನು ಕಟ್ಟಿದರು. ದೇವರ ಸೇವಕನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ದೇವರಿಗೆ ಯಜ್ಞವನ್ನು ಸಮರ್ಪಿಸಲು ಇವರು ವೇದಿಕೆಯನ್ನು ಕಟ್ಟಿದರು.


ಎಜ್ರನೊಂದಿಗೆ ಇಸ್ರೇಲರ ಬಹುಮಂದಿ ಜೆರುಸಲೇಮಿಗೆ ಬಂದರು. ಅವರಲ್ಲಿ ಯಾಜಕರೂ ಲೇವಿಯರೂ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಅರಸನಾದ ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅವರು ಜೆರುಸಲೇಮಿಗೆ ಬಂದು ತಲುಪಿದರು.


ಲೇವಿಕುಲದವರಲ್ಲಿ ಕೆಲವು ವರ್ಗಗಳವರು ಬೆನ್ಯಾಮೀನರ ಪ್ರದೇಶಕ್ಕೆ ಹೋದರು.


ಅಮರ್ಯ, ಮಲ್ಲೂಕ್, ಹಟ್ಟೂಷ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು