Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:24 - ಪರಿಶುದ್ದ ಬೈಬಲ್‌

24 ಲೇವಿಯರಲ್ಲಿ ಇವರು ಮುಖಂಡರು: ಹಷಬ್ಯ, ಶೇರೇಬ್ಯ, ಕದ್ಮೀಯೇಲನ ಮಗನಾದ ಯೇಷೂವ ಮತ್ತು ಅವನ ಸಹೋದರರು. ಇವರು ತಮ್ಮ ಸಹೋದರರ ಎದುರು ನಿಂತು ಸ್ತೋತ್ರಗೀತೆ ಹಾಡುವರು. ಹೀಗೆ ಪರಸ್ಪರ ಹಾಡುವುದು ದೇವರ ಮನುಷ್ಯನಾದ ದಾವೀದನ ಆಜ್ಞೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಈ ಲೇವಿ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಆದ ಯೋಯಾಕೀಮ್, ರಾಜ್ಯಪಾಲನಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನೂ ಆದ ಎಜ್ರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಈ ಲೇವಿಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಆದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನೂ ಆದ ಎಜ್ರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಲೇವಿಯರ ಮುಖ್ಯಸ್ಥರಾದ ಹಷಬ್ಯನೂ, ಶೇರೇಬ್ಯನೂ; ಕದ್ಮಿಯೇಲನ ಮಗನಾದ ಯೇಷೂವನೂ, ಅವರಿಗೆ ಎದುರಾದ ತಂಡವಾಗಿ ನಿಂತ ಅವರ ಸಹೋದರರೂ, ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಕೃತಜ್ಞತಾಸ್ತುತಿ ಮಾಡುವುದಕ್ಕೆ ವರ್ಗ ವರ್ಗಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:24
18 ತಿಳಿವುಗಳ ಹೋಲಿಕೆ  

ಮತ್ತನ್ಯ, (ಮತ್ತನ್ಯನು ಮೀಕನ ಮಗ; ಮೀಕನು ಜಬ್ದೀಯ ಮಗ; ಜಬ್ದೀಯು ಆಸಾಫನ ಮಗ. ಆಸಾಫನು ಗಾಯಕರ ನಾಯಕನಾಗಿದ್ದು ಪ್ರಾರ್ಥನೆ ಮತ್ತು ಸ್ತುತಿಗೀತೆಗಳಲ್ಲಿ ಜನರನ್ನು ನಡೆಸುತ್ತಿದ್ದನು.) ಬಕ್ಬುಕ್ಯ (ಇವನು ತನ್ನ ಸಹೋದರರಲ್ಲಿ ಎರಡನೆ ಸ್ಥಾನ ಪಡೆದಿದ್ದನು), ಮತ್ತು ಶಮ್ಮೂವನ ಮಗನಾದ ಅಬ್ದ, (ಶಮ್ಮೂವನು ಗಾಲಾಲನ ಮಗ; ಗಾಲಾಲನು ಯೆದೂತೂನನ ಮಗ).


ಆಮೇಲೆ ಲೇವಿಯರಾದ ಯೇಷೂವ, ಬಾನೀ, ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ ಮತ್ತು ಕೆನಾನೀ ಎಂಬವರು ಮೆಟ್ಟಿಲ ಮೇಲೆ ನಿಂತುಕೊಂಡು ಗಟ್ಟಿಯಾದ ಸ್ವರದಲ್ಲಿ ತಮ್ಮ ದೇವರಾದ ಯೆಹೋವನಿಗೆ ಮೊರೆಯಿಟ್ಟರು.


ಅವರೆಲ್ಲಾ ನಿಂತಿರುವಾಗ ಲೇವಿಯರು ಧರ್ಮಶಾಸ್ತ್ರವನ್ನು ಅವರಿಗೆ ಓದಿತಿಳಿಸಿದರು. ಅವರು ಯಾರೆಂದರೆ: ಯೇಷೂವ, ಬಾನೀ, ಶೇರಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್ ಮತ್ತು ಪೆಲಾಯ.


ಲೇವಿ ಕುಲದವರು ಯಾರೆಂದರೆ: ಹೋದವ್ಯನ ಕುಟುಂಬಕ್ಕೆ ಸೇರಿದ ಯೇಷೂವ ಮತ್ತು ಕದ್ಮೀಯೇಲರ ಸಂತತಿಯವರು 74


ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರದಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಾಯಕರಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ದ್ವಾರಗಳನ್ನು ಕಾಯುವುದಕ್ಕೆ ಅವರನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು.


ಆ ಸ್ತ್ರೀಯು, “ಈಗ ನಿಜವಾಗಿಯೂ ನೀನು ದೇವಮನುಷ್ಯನೆಂಬುದು ನನಗೆ ತಿಳಿಯಿತು. ಯೆಹೋವನು ನಿನ್ನ ಮೂಲಕ ನಿಜವಾಗಿಯೂ ಮಾತಾಡುತ್ತಾನೆಂಬುದು ನನಗೆ ತಿಳಿದಿದೆ” ಎಂದು ಹೇಳಿದಳು.


ಒಂದು ದಿವಸ ಯೆಹೂದ ಕುಲದ ಕೆಲವರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಬಳಿಗೆ ಬಂದರು. ಅವರಲ್ಲಿ ಕನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಒಬ್ಬನಾಗಿದ್ದನು. ಕಾಲೇಬನು ಯೆಹೋಶುವನಿಗೆ, “ಕಾದೇಶ್‌ಬರ್ನೇಯದಲ್ಲಿ ಯೆಹೋವನು ತನ್ನ ಸೇವಕನಾದ ಮೋಶೆಯೊಂದಿಗೆ ನಮ್ಮಿಬ್ಬರ ವಿಷಯವಾಗಿ ಮಾತಾಡಿದ್ದು ನಿನಗೆ ನೆನಪಿದೆಯಷ್ಟೇ.


ದೇವರ ಮನುಷ್ಯನಾದ ಮೋಶೆಯು ತಾನು ಸಾಯುವ ಮೊದಲು ಇಸ್ರೇಲರನ್ನು ಆಶೀರ್ವದಿಸಿದನು.


ಆದ್ದರಿಂದ ದೇವರ ಸೇವಕರು ಸಿದ್ಧರೂ ಸಕಲ ಸತ್ಕಾರ್ಯಗಳಿಗೆ ಸನ್ನದ್ಧರೂ ಆಗಬಲ್ಲರು.


ಆದರೆ ನೀನು ದೇವರ ಮನುಷ್ಯ. ಆದ್ದರಿಂದ ಈ ಎಲ್ಲಾ ಸಂಗತಿಗಳಿಂದ ದೂರವಾಗಿರು. ದೇವರ ಸೇವೆಯನ್ನು ಮಾಡುತ್ತಾ ಉತ್ತಮಮಾರ್ಗದಲ್ಲಿ ಜೀವಿಸಲು ಪ್ರಯತ್ನಿಸು; ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತೆಗಳನ್ನು ಹೊಂದಿದವನಾಗಿರು.


ಎಲ್ಯಾಷೀಬನ ಮಗನಾದ ಯೋಹಾನಾನನ ತನಕ ಲೇವಿಕುಲದ ಕುಟುಂಬನಾಯಕರ ಹೆಸರುಗಳನ್ನು ಚರಿತ್ರಾಪುಸ್ತಕದಲ್ಲಿ ದಾಖಲು ಮಾಡಿಯದೆ.


ಅಲ್ಲಿ ಆಸಾಫನ ಸಹೋದರರಾದ ಶೆಮಾಯ, ಅಜರೇಲ್, ಮಿಲಲೈ, ಗಿಲಲೈ, ಮಾಯೈ, ನೆತನೇಲ್, ಯೆಹೂದ ಮತ್ತು ಹನಾನೀ ಇದ್ದರು. ದೇವಮನುಷ್ಯನಾದ ದಾವೀದನು ತಯಾರಿಸಿದ್ದ ವಾದ್ಯಗಳು ಅವರ ಬಳಿಯಲ್ಲಿದ್ದವು. ಎಜ್ರನು ಗೋಡೆಯನ್ನು ಪ್ರತಿಷ್ಠೆ ಮಾಡಲು ಒಂದು ತಂಡದ ಜನರನ್ನು ತನ್ನೊಂದಿಗೆ ಕರೆದುಕೊಂಡು ಹೋದನು.


ದಾವೀದನು ಕೆಲವು ಮಂದಿ ಯಾಜಕರನ್ನು ಒಡಂಬಡಿಕೆಯ ಪೆಟ್ಟಿಗೆಯ ಸೇವೆಮಾಡುವುದಕ್ಕಾಗಿ ನೇಮಿಸಿದನು. ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರ ಸಲ್ಲಿಸುವುದು ಮತ್ತು ಆತನನ್ನು ಕೊಂಡಾಡುವುದೇ ಇವರ ಕೆಲಸವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು