Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:27 - ಪರಿಶುದ್ದ ಬೈಬಲ್‌

27 ಜನರು ಜೆರುಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸಿದರು. ಅವರು ಎಲ್ಲಾ ಲೇವಿಯರನ್ನು ನಗರಕ್ಕೆ ಕರೆತಂದು ಪ್ರತಿಷ್ಠೆ ಮಾಡಿದರು. ಅವರು ದೇವರಿಗೆ ಸ್ತುತಿಪದಗಳನ್ನು, ತಾಳ, ಸ್ವರಮಂಡಲ, ಕಿನ್ನರಿಗಳನ್ನು ಬಾರಿಸುತ್ತಾ ಹಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆರೂಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು, ಕೀರ್ತನೆ ಗಾಯನಗಳಿಂದಲೂ ತಾಳ, ಸ್ವರಮಂಡಲ ಹಾಗು ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಕರೆಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಜೆರುಸಲೇಮಿನ ಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ, ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು ಕೀರ್ತನಗಾಯನಗಳಿಂದಲೂ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಕರೆಯಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೆರೂಸಲೇವಿುನ ಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು ಕೀರ್ತನಗಾಯನಗಳಿಂದಲೂ ತಾಳ ಸ್ವರಮಂಡಲ ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವದಕ್ಕಾಗಿ ಯೆರೂಸಲೇವಿುಗೆ ಕರೆಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ, ಹಾಡುವುದರಿಂದಲೂ, ತಾಳಗಳಿಂದಲೂ, ವೀಣೆಗಳಿಂದಲೂ, ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವುದಕ್ಕೆ ಲೇವಿಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:27
34 ತಿಳಿವುಗಳ ಹೋಲಿಕೆ  

ದಾವೀದನು ಲೇವಿಯರಿಗೆ ತಮ್ಮ ಸಹೋದರರಾದ ಗಾಯಕರನ್ನು ಕರೆದುಕೊಂಡು ಬರಲು ಹೇಳಿದನು. ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ತಂದು ಆನಂದಗೀತೆಗಳನ್ನು ಹಾಡುವಂತೆ ಅವರಿಗೆ ತಿಳಿಸಿದನು.


ರಾಜನಾದ ಹಿಜ್ಕೀಯನು ಮತ್ತು ಅವನ ಅಧಿಕಾರಿಗಳು ಯೆಹೋವನಿಗೆ ಸ್ತೋತ್ರ ಮಾಡಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಆಸಾಫ ಮತ್ತು ಅರಸನಾಗಿದ್ದ ದಾವೀದನು ರಚಿಸಿದ್ದ ಹಾಡುಗಳನ್ನು ಗಾಯಕರು ಹಾಡಿ ದೇವರನ್ನು ಸ್ತುತಿಸಿದರು. ಹೀಗೆ ಜನರೆಲ್ಲಾ ಸಂತೋಷಪಟ್ಟರು. ಅವರೆಲ್ಲರು ಅಡ್ಡಬಿದ್ದು ದೇವರನ್ನು ಆರಾಧಿಸಿದರು.


ಗಾಯಕರ ಸ್ವರವೂ ತುತ್ತೂರಿಗಳ ಶಬ್ದವೂ ಒಬ್ಬನದೆಯೋ ಎಂಬಂತೆ ತೋರಿಬಂತು. ಅವರು ದೇವರನ್ನು ಸ್ತುತಿಸಿ ಕೊಂಡಾಡಿದಾಗ ಒಂದೇ ಶಬ್ದವು ಹೊರಟಿತ್ತು. ಅವರು ತಮ್ಮ ತಾಳ, ತಂತಿವಾದ್ಯಗಳನ್ನು ಗಟ್ಟಿಯಾಗಿ ಬಾರಿಸಿದರು. “ಯೆಹೋವನಿಗೆ ಸ್ತೋತ್ರವಾಗಲಿ; ಆತನು ಒಳ್ಳೆಯವನು; ಆತನ ಪ್ರೀತಿಯು ಶಾಶ್ವತವಾದದ್ದು” ಎಂದು ಗಾಯಕರು ಹಾಡಿದರು. ಆಗ ದೇವಾಲಯವು ಯೆಹೋವನ ತೇಜಸ್ಸಿನಿಂದ ಕೂಡಿದ ಮೋಡದಿಂದ ತುಂಬಿಹೋಯಿತು.


ಹೀಗೆ ಎಲ್ಲಾ ಇಸ್ರೇಲರು ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಬಂದರು. ಅವರು ಕೊಂಬುಗಳನ್ನೂ ತುತ್ತೂರಿಗಳನ್ನೂ ಊದಿದರು; ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ಬಾರಿಸಿದರು; ಆನಂದದಿಂದ ಆರ್ಭಟಿಸಿದರು.


“ಆ ಲೇವಿಯ ಅಧಿಕಾರಿಗಳು ಸೈನಿಕರಿಗೆ, ‘ನಿಮ್ಮಲ್ಲಿ ಯಾರಾದರೂ ಹೊಸಮನೆಯನ್ನು ಕಟ್ಟಿ ಗೃಹಪ್ರವೇಶ ಮಾಡಿರದಿದ್ದರೆ ಅವನು ತನ್ನ ಮನೆಗೆ ಹೋಗಲಿ. ಒಂದುವೇಳೆ ಅವನು ರಣರಂಗದಲ್ಲಿ ಸತ್ತರೆ ಇನ್ನೊಬ್ಬನು ಅವನ ಮನೆಗೆ ಸೇರಿಕೊಳ್ಳಬಹುದು.


ದಾವೀದನು ಅವರಿಗೆ, “ನೀವು ಲೇವಿಕುಲದ ನಾಯಕರು. ನೀವೂ ಉಳಿದ ಲೇವಿಯರೂ ನಿಮ್ಮನ್ನು ಶುದ್ಧಪಡಿಸಿಕೊಳ್ಳಬೇಕು. ಅನಂತರ ಇಸ್ರೇಲಿನ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ನಾನು ಅದಕ್ಕಾಗಿ ಸಿದ್ಧಮಾಡಿರುವ ಸ್ಥಳಕ್ಕೆ ತರಬೇಕು.


ದಾವೀದನು ಆರೋನನ ಸಂತತಿಯವರನ್ನೂ ಲೇವಿಯರನ್ನೂ ಕರೆದನು.


ಆಗ ನಾಲ್ಕು ಜೀವಿಗಳು ಮತ್ತು ಇಪ್ಪತ್ನಾಲ್ಕು ಮಂದಿ ಹಿರಿಯರು ಆ ಕುರಿಮರಿಯ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. ಪ್ರತಿಯೊಬ್ಬರ ಕೈಯಲ್ಲೂ ಒಂದೊಂದು ತಂತಿವಾದ್ಯವಿತ್ತು. ಧೂಪವು ತುಂಬಿದ್ದ ಚಿನ್ನದ ಪಾತ್ರೆಗಳನ್ನು ಅವರು ಹಿಡಿದುಕೊಂಡಿದ್ದರು. ಪಾತ್ರೆಗಳು ದೇವರ ಪರಿಶುದ್ಧ ಜನರ ಪ್ರಾರ್ಥನೆಗಳಾಗಿದ್ದವು.


ಯಾವಾಗಲೂ ಪ್ರಭುವಿನಲ್ಲಿ ಆನಂದಿಸಿರಿ; ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ಅವರು ನೃತ್ಯಮಾಡುತ್ತಾ ಝಲ್ಲರಿಗಳನ್ನು ಬಡಿಯುತ್ತಾ ಹಾರ್ಪ್‌ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸ್ತುತಿಸಲಿ.


ಯೆಹೋವನೇ, ನನ್ನನ್ನು ಇಕ್ಕಟ್ಟುಗಳಿಂದ ಮೇಲೆತ್ತಿದವನು ನೀನೇ; ಶತ್ರುಗಳಿಗೆ ಸೋತುಹೋಗಿ ಅವರ ಹಾಸ್ಯಕ್ಕೆ ಗುರಿಯಾಗದಂತೆ ಮಾಡಿದವನು ನೀನೇ; ಆದ್ದರಿಂದ ನಿನ್ನನ್ನು ಕೊಂಡಾಡುವೆನು.


ಉಳಿದ ಜನರೂ ಯಾಜಕರೂ ಮತ್ತು ಲೇವಿಯರೂ ಯೆಹೂದದ ಬೇರೆಬೇರೆ ಊರು ಪಟ್ಟಣಗಳಲ್ಲಿ ವಾಸಿಸಿದರು. ತಮ್ಮತಮ್ಮ ಪೂರ್ವಿಕರು ನೆಲೆಸಿದ ಸ್ಥಳಗಳಲ್ಲಿಯೇ ನೆಲೆಸಿದರು.


ಸೆರೆವಾಸದಿಂದ ಮರಳಿಬಂದ ಇಸ್ರೇಲರು ಬಿಡಾರಗಳನ್ನು ಹಾಕಿಕೊಂಡು ಅವುಗಳಲ್ಲಿ ವಾಸಿಸಿದರು. ನೂನನ ಮಗನಾದ ಯೆಹೋಶುವನ ಕಾಲದಿಂದ ಇಂದಿನವರೆಗೂ ಇಸ್ರೇಲರು ಇಂಥ ಪರ್ಣಶಾಲೆಗಳ ಹಬ್ಬವನ್ನು ಆಚರಿಸಲಿಲ್ಲ. ಪ್ರತಿಯೊಬ್ಬರೂ ಬಹು ಸಂತೋಷಗೊಂಡಿದ್ದರು.


ಅನಂತರ ಇಸ್ರೇಲರೆಲ್ಲರೂ ಸೇರಿ ದೇವಾಲಯವನ್ನು ಅತ್ಯಂತ ಹರ್ಷದಿಂದ ಪ್ರತಿಷ್ಠೆ ಮಾಡಿದರು. ಸೆರೆವಾಸದಿಂದ ಹಿಂತಿರುಗಿ ಬಂದಿದ್ದ ಯಾಜಕರು, ಲೇವಿಯರು ಮತ್ತು ಎಲ್ಲಾ ಜನರು ಈ ಆಚರಣೆಯಲ್ಲಿ ಭಾಗವಹಿಸಿದರು.


ಯಾಜಕರು ತಮ್ಮ ಕೆಲಸಗಳನ್ನು ಮಾಡಲು ತಮ್ಮ ತಮ್ಮ ಸ್ಥಳಗಳಲ್ಲಿ ತಯಾರಾಗಿ ನಿಂತಿದ್ದರು. ಲೇವಿಕುಲದ ಗಾಯಕರು ತಮ್ಮ ವಾದ್ಯಗಳೊಂದಿಗೆ ದೇವರನ್ನು ಸ್ತುತಿಸಲು ನಿಂತಿದ್ದರು. ಆ ವಾದ್ಯಗಳನ್ನು ಅರಸನಾದ ದಾವೀದನು ದೇವರನ್ನು ಸ್ತುತಿಸುವದಕ್ಕೋಸ್ಕರ ತಯಾರಿಸಿದ್ದನು. ಯಾಜಕರೂ ಲೇವಿಯರೂ, “ದೇವರಾದ ಯೆಹೋವನ ಕೃಪೆಯು ನಿರಂತರವಾದದ್ದು” ಎಂದು ಹೇಳುತ್ತಿದ್ದರು. ಯಾಜಕರು ಲೇವಿಯರಿಗೆ ಎದುರಾಗಿ ನಿಂತುಕೊಂಡು ತುತ್ತೂರಿಯನ್ನು ಊದಿದರು. ಇಸ್ರೇಲರೆಲ್ಲರೂ ನಿಂತುಕೊಂಡರು.


ಹೆಬ್ರೋನ್ ಸಂತಾನದ ಚರಿತ್ರೆಗನುಸಾರವಾಗಿ ಯೆರೀಯನು ಅವರ ಅಧಿಪತಿಯಾಗಿದ್ದನು. ದಾವೀದನು ನಲವತ್ತು ವರ್ಷ ಇಸ್ರೇಲಿನ ಅರಸನಾಗಿದ್ದ ಕಾಲದಲ್ಲಿ ತನ್ನ ಜನರ ಚರಿತ್ರೆಯನ್ನು ಕಂಡುಹಿಡಿದು ದಾಖಲೆ ಮಾಡಲು ಆಜ್ಞೆಯಿತ್ತಿದ್ದನು. ಗಿಲ್ಯಾದಿನ ಯಾಜೇರ್ ಎಂಬಲ್ಲಿ ಹೆಬ್ರೋನ್ ಸಂತಾನಕ್ಕೆ ಸೇರಿದವರಲ್ಲಿ ಬಹಳ ಮಂದಿ ಅನುಭವಶಾಲಿಗಳಾದ ಕಾರ್ಮಿಕರು ದೊರಕಿದರು.


ನಾಲ್ಕು ಸಾವಿರ ಮಂದಿ ಲೇವಿಯರು ದ್ವಾರಪಾಲಕರಾಗಿಯೂ ನಾಲ್ಕು ಸಾವಿರ ಮಂದಿ ಲೇವಿಯರು ಗಾಯಕರಾಗಿಯೂ ಸೇವೆ ಮಾಡಬೇಕು. ನಾನು ಅವರಿಗಾಗಿ ವಿಶೇಷ ವಾದ್ಯಗಳನ್ನು ತಯಾರಿಸಿಟ್ಟಿರುತ್ತೇನೆ. ಅವರು ಅವುಗಳನ್ನು ನುಡಿಸುತ್ತಾ ದೇವರಿಗೆ ಸ್ತೋತ್ರ ಮಾಡಬೇಕು” ಅಂದನು.


ಮೊದಲನೇ ಗುಂಪಿನ ಗಾಯಕರಿಗೆ ಆಸಾಫನು ಮುಖಂಡನಾಗಿದ್ದನು. ಆಸಾಫನ ಗುಂಪಿನವರು ತಾಳ ಬಾರಿಸಿದರು. ಜೆಕರ್ಯನು ಎರಡನೇ ಗುಂಪಿನ ನಾಯಕನು. ಬೇರೆ ಲೇವಿಯರು ಯಾರೆಂದರೆ: ಉಜ್ಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್ ಮತ್ತು ಯೆಗೀಯೇಲ್. ಇವರು ಲೈರ್ ಮತ್ತು ಹಾರ್ಪ್ ವಾದ್ಯಗಳನ್ನು ಬಾರಿಸಿದರು.


ದಾವೀದನೂ ಎಲ್ಲಾ ಇಸ್ರೇಲರೂ ದೇವರ ಮುಂದೆ ಸಂತೋಷದಿಂದ ಹಾಡುತ್ತಾ ಕುಣಿಯುತ್ತಾ ಹೋದರು. ಹಾರ್ಪ್‌ವಾದ್ಯವನ್ನು, ಲೈರ್‌ವಾದ್ಯವನ್ನು, ತಬಲವನ್ನು, ತಾಳವನ್ನು ಮತ್ತು ತುತ್ತೂರಿಯನ್ನು ಬಾರಿಸುತ್ತಾ ಹಾಡುತ್ತಾ ದೇವರಿಗೆ ಸ್ತೋತ್ರ ಮಾಡಿದರು.


ತರುವಾಯ ಜನರು ದಾವೀದನಿಗೆ, “ದೇವರ ಪವಿತ್ರ ಪೆಟ್ಟಿಗೆಯು ಓಬೇದೆದೋಮನ ಮನೆಯಲ್ಲಿರುವುದರಿಂದ ಯೆಹೋವನು ಅವನ ಕುಟುಂಬವನ್ನೂ ಅವನ ಸಮಸ್ತವನ್ನೂ ಆಶೀರ್ವದಿಸಿದನು.” ಎಂದು ಹೇಳಿದರು. ಆದ್ದರಿಂದ ದಾವೀದನು ಹೋಗಿ ಓಬೇದೆದೋಮನ ಮನೆಯಿಂದ ಪವಿತ್ರ ಪೆಟ್ಟಿಗೆಯನ್ನು ಸಂತೋಷದಿಂದ ತಂದನು.


ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಜನರೂ ಒಟ್ಟಾಗಿ ಸೇರಿ ದೇವರ ಸನ್ನಿಧಾನದಲ್ಲಿ ಸಂತೋಷಪಡಿರಿ. ನಿಮ್ಮ ಹೆಂಡತಿಮಕ್ಕಳನ್ನು ಅಲ್ಲದೆ ನಿಮ್ಮ ಸೇವಕಸೇವಕಿಯರನ್ನು ನಿಮ್ಮ ಪಟ್ಟಣದಲ್ಲಿರುವ ಲೇವಿಯರನ್ನು ಮತ್ತು ವಿಧವೆಯರನ್ನು, ಅನಾಥರನ್ನು, ಪರದೇಶಿಗಳನ್ನು ಕರೆದುಕೊಂಡು ಸಂತೋಷಪಡಿರಿ.


ಸೊಲೊಮೋನನು ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಒಂದು ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಸಮಾಧಾನಯಜ್ಞವನ್ನಾಗಿ ಅರ್ಪಿಸಿದನು. ಹೀಗೆ ರಾಜನು ಮತ್ತು ಇಸ್ರೇಲರು ಆಲಯವನ್ನು ಯೆಹೋವನಿಗೆ ಪ್ರತಿಷ್ಠಿಸಿದರು.


ದಾವೀದನೂ ಅರಸನ ದರ್ಶಿಯಾಗಿದ್ದ ಗಾದನೂ ಮತ್ತು ಪ್ರವಾದಿಯಾಗಿದ್ದ ನಾತಾನನೂ ಆಜ್ಞಾಪಿಸಿದಂತೆ, ಅರಸನಾದ ಹಿಜ್ಕೀಯನು ಲೇವಿಯರನ್ನು ತಾಳ, ತಂತಿವಾದ್ಯ ಮತ್ತು ಕಿನ್ನರಿಗಳೊಂದಿಗೆ ದೇವಾಲಯದಲ್ಲಿ ಇರಿಸಿದನು. ಈ ಆಜ್ಞೆಯು ಯೆಹೋವನಿಂದ ಪ್ರವಾದಿಗಳ ಮೂಲಕ ಬಂದಿತ್ತು.


ಆ ವಿಶೇಷ ದಿನದಲ್ಲಿ ಯಾಜಕರು ಹೆಚ್ಚಿನ ಸಂಖ್ಯೆಯಲ್ಲಿ ಯಜ್ಞವನ್ನರ್ಪಿಸಿದರು. ಜನರೆಲ್ಲಾ ಸಂತೋಷಪಟ್ಟರು. ದೇವರು ಅವರಿಗೆಲ್ಲಾ ಅತ್ಯಾನಂದವನ್ನು ಉಂಟುಮಾಡಿದನು; ಹೆಂಗಸರೂ ಮಕ್ಕಳೂ ಉತ್ಸಾಹದಿಂದ ಆನಂದಿಸಿದರು; ಜೆರುಸಲೇಮಿನಿಂದ ಹೊರಟ ಅವರ ಹರ್ಷಧ್ವನಿಯು ಬಹುದೂರದವರೆಗೆ ಕೇಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು