ನೆಹೆಮೀಯ 12:27 - ಪರಿಶುದ್ದ ಬೈಬಲ್27 ಜನರು ಜೆರುಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸಿದರು. ಅವರು ಎಲ್ಲಾ ಲೇವಿಯರನ್ನು ನಗರಕ್ಕೆ ಕರೆತಂದು ಪ್ರತಿಷ್ಠೆ ಮಾಡಿದರು. ಅವರು ದೇವರಿಗೆ ಸ್ತುತಿಪದಗಳನ್ನು, ತಾಳ, ಸ್ವರಮಂಡಲ, ಕಿನ್ನರಿಗಳನ್ನು ಬಾರಿಸುತ್ತಾ ಹಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೆರೂಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು, ಕೀರ್ತನೆ ಗಾಯನಗಳಿಂದಲೂ ತಾಳ, ಸ್ವರಮಂಡಲ ಹಾಗು ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಕರೆಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಜೆರುಸಲೇಮಿನ ಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ, ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು ಕೀರ್ತನಗಾಯನಗಳಿಂದಲೂ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಕರೆಯಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೆರೂಸಲೇವಿುನ ಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು ಕೀರ್ತನಗಾಯನಗಳಿಂದಲೂ ತಾಳ ಸ್ವರಮಂಡಲ ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವದಕ್ಕಾಗಿ ಯೆರೂಸಲೇವಿುಗೆ ಕರೆಯಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ, ಹಾಡುವುದರಿಂದಲೂ, ತಾಳಗಳಿಂದಲೂ, ವೀಣೆಗಳಿಂದಲೂ, ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವುದಕ್ಕೆ ಲೇವಿಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು. ಅಧ್ಯಾಯವನ್ನು ನೋಡಿ |
ಗಾಯಕರ ಸ್ವರವೂ ತುತ್ತೂರಿಗಳ ಶಬ್ದವೂ ಒಬ್ಬನದೆಯೋ ಎಂಬಂತೆ ತೋರಿಬಂತು. ಅವರು ದೇವರನ್ನು ಸ್ತುತಿಸಿ ಕೊಂಡಾಡಿದಾಗ ಒಂದೇ ಶಬ್ದವು ಹೊರಟಿತ್ತು. ಅವರು ತಮ್ಮ ತಾಳ, ತಂತಿವಾದ್ಯಗಳನ್ನು ಗಟ್ಟಿಯಾಗಿ ಬಾರಿಸಿದರು. “ಯೆಹೋವನಿಗೆ ಸ್ತೋತ್ರವಾಗಲಿ; ಆತನು ಒಳ್ಳೆಯವನು; ಆತನ ಪ್ರೀತಿಯು ಶಾಶ್ವತವಾದದ್ದು” ಎಂದು ಗಾಯಕರು ಹಾಡಿದರು. ಆಗ ದೇವಾಲಯವು ಯೆಹೋವನ ತೇಜಸ್ಸಿನಿಂದ ಕೂಡಿದ ಮೋಡದಿಂದ ತುಂಬಿಹೋಯಿತು.
ಯಾಜಕರು ತಮ್ಮ ಕೆಲಸಗಳನ್ನು ಮಾಡಲು ತಮ್ಮ ತಮ್ಮ ಸ್ಥಳಗಳಲ್ಲಿ ತಯಾರಾಗಿ ನಿಂತಿದ್ದರು. ಲೇವಿಕುಲದ ಗಾಯಕರು ತಮ್ಮ ವಾದ್ಯಗಳೊಂದಿಗೆ ದೇವರನ್ನು ಸ್ತುತಿಸಲು ನಿಂತಿದ್ದರು. ಆ ವಾದ್ಯಗಳನ್ನು ಅರಸನಾದ ದಾವೀದನು ದೇವರನ್ನು ಸ್ತುತಿಸುವದಕ್ಕೋಸ್ಕರ ತಯಾರಿಸಿದ್ದನು. ಯಾಜಕರೂ ಲೇವಿಯರೂ, “ದೇವರಾದ ಯೆಹೋವನ ಕೃಪೆಯು ನಿರಂತರವಾದದ್ದು” ಎಂದು ಹೇಳುತ್ತಿದ್ದರು. ಯಾಜಕರು ಲೇವಿಯರಿಗೆ ಎದುರಾಗಿ ನಿಂತುಕೊಂಡು ತುತ್ತೂರಿಯನ್ನು ಊದಿದರು. ಇಸ್ರೇಲರೆಲ್ಲರೂ ನಿಂತುಕೊಂಡರು.