Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:30 - ಪರಿಶುದ್ದ ಬೈಬಲ್‌

30 ಆದ್ದರಿಂದ ಯಾಜಕರೂ ಲೇವಿಯರೂ ಶಾಸ್ತ್ರೋಕ್ತವಾಗಿ ತಮ್ಮನ್ನು ಶುದ್ಧಪಡಿಸಿಕೊಂಡರು. ಅನಂತರ ಜನರನ್ನೂ ಜೆರುಸಲೇಮಿನ ಗೋಡೆಯನ್ನೂ ಬಾಗಿಲುಗಳನ್ನೂ ಶಾಸ್ತ್ರೋಕ್ತವಾಗಿ ಶುದ್ಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ, ಊರುಬಾಗಿಲುಗಳನ್ನೂ, ಗೋಡೆಯನ್ನು ಶುದ್ಧಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ ಊರುಬಾಗಿಲುಗಳನ್ನೂ ಗೋಡೆಯನ್ನೂ ಶುದ್ಧಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ ಊರುಬಾಗಲುಗಳನ್ನೂ ಗೋಡೆಯನ್ನೂ ಶುದ್ಧಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯಾಜಕರೂ, ಲೇವಿಯರೂ ತಮ್ಮನ್ನು ಶುದ್ಧ ಮಾಡಿಕೊಂಡು ಜನರನ್ನೂ, ಬಾಗಿಲುಗಳನ್ನೂ, ಗೋಡೆಯನ್ನೂ ಶುದ್ಧ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:30
14 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.


ಸೆರೆಯಿಂದ ಹಿಂತಿರುಗಿ ಬಂದಿದ್ದ ಇಸ್ರೇಲರೆಲ್ಲರೂ ಪಸ್ಕದ ಊಟವನ್ನು ಮಾಡಿದರು. ಉಳಿದವರು ಅನ್ಯರ ಜೊತೆಯಲ್ಲಿ ವಾಸಿಸುವುದರಿಂದ ತಮ್ಮನ್ನು ಶುದ್ಧಪಡಿಸಿಕೊಂಡವರೆಲ್ಲರೂ ಪಸ್ಕದ ಊಟದಲ್ಲಿ ಪಾಲು ತೆಗೆದುಕೊಂಡರು. ಇಸ್ರೇಲರ ದೇವರಾದ ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಲು ಸಾಧ್ಯವಾಗುವಂತೆ ಅವರು ಹೀಗೆ ಮಾಡಿದರು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ಈ ದಿನ ಮತ್ತು ನಾಳೆ ನೀನು ಜನರನ್ನು ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧಪಡಿಸಬೇಕು. ಜನರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು


ತಾನೂ ಬಲಹೀನನಾಗಿರುವುದರಿಂದ ಅವನು ಮನುಷ್ಯರ ಪಾಪಗಳಿಗಾಗಿಯೂ ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಗಳನ್ನು ಅರ್ಪಿಸುತ್ತಾನೆ.


ಪ್ರತಿಯೊಬ್ಬ ಯೆಹೂದ್ಯ ಪ್ರಧಾನಯಾಜಕನೂ ಮನುಷ್ಯರೊಳಗಿಂದ ಆರಿಸಲ್ಪಟ್ಟು ದೇವರಿಗೆ ಸಂಬಂಧಿಸಿದ ಕಾರ್ಯಗಳನ್ನು ಮನುಷ್ಯರಿಗೋಸ್ಕರ ಮಾಡಲು ನೇಮಿಸಲ್ಪಡುತ್ತಾನೆ. ಆ ಯಾಜಕನು ಪಾಪಗಳಿಗಾಗಿ ದೇವರಿಗೆ ಕಾಣಿಕೆಗಳನ್ನೂ ಯಜ್ಞಗಳನ್ನೂ ಅರ್ಪಿಸಬೇಕು.


ನಾನು ಯಾಜಕರನ್ನೂ ಲೇವಿಯರನ್ನೂ ಶುದ್ಧರನ್ನಾಗಿ ಮಾಡಿಕೊಳ್ಳುವಂತೆ ಆಜ್ಞಾಪಿಸಿದೆನು. ಅವರಲ್ಲಿದ್ದ ಅನ್ಯರನ್ನು, ಪರರ ಬೋಧನೆಗಳನ್ನು ನಾನು ಅವರಿಂದ ತೆಗೆದುಹಾಕಿದೆನು. ಲೇವಿಯರಿಗೂ ಯಾಜಕರಿಗೂ ಅವರವರ ಕರ್ತವ್ಯಗಳನ್ನೂ ಜವಾಬ್ದಾರಿಕೆಗಳನ್ನೂ ತಿಳಿಸಿದೆನು.


ಇದಾದ ಬಳಿಕ ತಮ್ಮನ್ನು ಶುದ್ಧಪಡಿಸಿಕೊಳ್ಳಲು ಲೇವಿಯರಿಗೆ ಆಜ್ಞಾಪಿಸಿದೆನು. ಅವರು ಶುದ್ಧಪಡಿಸಿಕೊಂಡ ಬಳಿಕ ಬಾಗಿಲುಗಳನ್ನು ಕಾಯಲು ಅವರನ್ನು ಕಳುಹಿಸಿದೆನು. ಯಾಕೆಂದರೆ ಸಬ್ಬತ್‌ದಿನವು ಪವಿತ್ರ ದಿನವೆಂದು ಎಲ್ಲರೂ ಆಚರಿಸುವಂತೆ ಹೀಗೆ ಮಾಡಿದೆನು. ದೇವರೇ, ನನ್ನ ಈ ಕಾರ್ಯವನ್ನು ನಿನ್ನ ನೆನಪಿನಲ್ಲಿಟ್ಟುಕೋ. ನನ್ನ ಮೇಲೆ ದಯವಿಟ್ಟು ನಿನ್ನ ಪ್ರೀತಿಯನ್ನು ತೋರಿಸು.


ಅಲ್ಲಿ ಪಶುಗಳನ್ನು ವಧಿಸಿ ಅದರ ಚರ್ಮಸುಲಿದು ಯಜ್ಞಕ್ಕಾಗಿ ಸಿದ್ಧಪಡಿಸಲು ಸಾಕಷ್ಟು ಯಾಜಕರು ಇರಲಿಲ್ಲ. ಆಗ ಅವರ ಬಂಧುಗಳಾದ ಲೇವಿಯರು ಬಂದು ಆ ಕೆಲಸ ಮುಗಿಯುವ ತನಕ ಅವರಿಗೆ ಸಹಾಯಮಾಡಿದರು. ಯೆಹೋವನ ಸೇವೆಗೆ ತಮ್ಮನ್ನು ಸಿದ್ಧಪಡಿಸಿಕೊಳ್ಳಲು ಲೇವಿಯರು ಯಾಜಕರಿಗಿಂತ ಹೆಚ್ಚು ಉತ್ಸುಕತೆಯಲ್ಲಿದ್ದರು.


ಆಗ ಮೋಶೆ ಜನರಿಗೆ, “ಮೂರನೆಯ ದಿನದಲ್ಲಿ ಯೆಹೋವನೊಡನೆ ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧರಾಗಿರಿ. ಅಲ್ಲಿಯವರೆಗೆ, ಪುರುಷರು ಸ್ತ್ರೀಯರ ಸಂಗ ಮಾಡಬಾರದು” ಎಂದು ಹೇಳಿದನು.


ಆದ್ದರಿಂದ ಯಾಕೋಬನು ತನ್ನ ಕುಟುಂಬದವರಿಗೂ ತನ್ನ ಎಲ್ಲಾ ಸೇವಕರಿಗೂ, “ನಿಮ್ಮಲ್ಲಿರುವ ಮರದ ಮತ್ತು ಲೋಹದ ಎಲ್ಲಾ ಅನ್ಯದೇವರುಗಳನ್ನು ನಾಶಮಾಡಿರಿ. ನಿಮ್ಮನ್ನು ಶುದ್ಧಿ ಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಧರಿಸಿಕೊಳ್ಳಿರಿ.


ಆಗ ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಮಾಡಿಕೊಂಡರು. ಇಸ್ರೇಲರ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ತರಲು ತಮ್ಮನ್ನು ಸಿದ್ಧಪಡಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು