Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:31 - ಪರಿಶುದ್ದ ಬೈಬಲ್‌

31 ನಾನು ಯೆಹೂದದ ನಾಯಕರಿಗೆ ಗೋಡೆಯ ಮೇಲೆ ನಿಂತುಕೊಳ್ಳಲು ಹೇಳಿದೆನು. ಅಲ್ಲದೆ ದೇವರಿಗೆ ಕೃತಜ್ಞತಾಸ್ತುತಿ ಮಾಡಲು ಗಾಯಕರ ಎರಡು ದೊಡ್ಡ ಗುಂಪುಗಳನ್ನು ಆರಿಸಿಕೊಂಡೆನು. ಒಂದು ಗುಂಪಿನವರು ಮೆರವಣಿಗೆಯಿಂದ ಬಲಗಡೆಯಿದ್ದ ತಿಪ್ಪೆಬಾಗಿಲಿನ ಕಡೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆನಂತರ ನಾನು ಯೆಹೂದ ಪ್ರಮುಖರನ್ನು ಗೋಡೆಯ ಮೇಲೆ ಕರೆದುಕೊಂಡು ಬಂದು, ಆರಾಧನೆ ಮಂಡಳಿಯವರಿಗೆ ಎರಡು ದೊಡ್ಡ ಗುಂಪುಗಳಾಗಿ ಆಲ್ಲಿ ನಿಲ್ಲಬೇಕೆಂದು ಅಪ್ಪಣೆಮಾಡಿದನು. ಒಂದು ಗುಂಪಿನವರು ಮೆರವಣಿಗೆಯಿಂದ ಗೋಡೆಯ ಮೇಲೆ ತಿಪ್ಪೆಬಾಗಿಲಿನಿಂದ ಬಲಗಡೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆಮೇಲೆ ನಾನು ಯೆಹೂದ ಪ್ರಮುಖರನ್ನು ಗೋಡೆಯ ಮೇಲೆ ಕರೆದುಕೊಂಡು ಬಂದೆ; ಭಜನೆ ಮಂಡಲಿಯವರಿಗೆ, “ಎರಡು ದೊಡ್ಡ ಗುಂಪುಗಳಾಗಿ ಇಲ್ಲಿ ನಿಲ್ಲಿ,” ಎಂದು ಅಪ್ಪಣೆಮಾಡಿದೆ. ಒಂದು ಗುಂಪಿನವರು ಮೆರವಣಿಗೆಯಿಂದ ಗೋಡೆಯ ಮೇಲೆ ತಿಪ್ಪೆಬಾಗಿಲಿನಿಂದ ಬಲಗಡೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಮೇಲೆ ನಾನು ಯೆಹೂದ ಪ್ರಭುಗಳನ್ನು ಗೋಡೆಯ ಮೇಲೆ ಕರಕೊಂಡು ಬಂದು ಭಜನ ಮಂಡಲಿಯವರಿಗೆ - ಎರಡು ದೊಡ್ಡ ಗುಂಪುಗಳಾಗಿ ಇಲ್ಲಿ ನಿಲ್ಲಬೇಕೆಂದು ಅಪ್ಪಣೆಮಾಡಿದೆನು. ಒಂದು ಗುಂಪಿನವರು ಮೆರವಣಿಗೆಯಿಂದ ಗೋಡೆಯ ಮೇಲೆ ತಿಪ್ಪೆಬಾಗಲಿನಿಂದ ಬಲಗಡೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಗ ನಾನು ಯೆಹೂದದ ಪ್ರಧಾನರನ್ನು ಗೋಡೆಯ ಮೇಲೆ ಬರಮಾಡಿ, ಸ್ತುತಿಸಲು ಎರಡು ಗುಂಪುಗಳನ್ನು ನೇಮಿಸಿದೆನು. ಒಂದು ಗುಂಪಿನವರು ಗೋಡೆಯ ಮೇಲೆ ಬಲಗಡೆಯಿಂದ ತಿಪ್ಪೆ ಬಾಗಿಲ ಕಡೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:31
8 ತಿಳಿವುಗಳ ಹೋಲಿಕೆ  

ಕತ್ತಲೆಯಲ್ಲಿಯೇ ಕಣಿವೆಯ ಬಾಗಿಲಿನ ಮೂಲಕ ಹೊರಟು ಕೆಡವಲ್ಪಟ್ಟಿದ್ದ ಜೆರುಸಲೇಮಿನ ಗೋಡೆಗಳನ್ನು, ಸುಟ್ಟುಹೋಗಿರುವ ಅದರ ಬಾಗಿಲುಗಳನ್ನು ನೋಡುತ್ತಾ ಹೆಬ್ಬಾವು ಬಾವಿಯ ಬಳಿಗೂ ತಿಪ್ಪೆಬಾಗಿಲಿನ ಬಳಿಗೂ ಸವಾರಿಮಾಡಿಕೊಂಡು ಬಂದೆನು.


ಗಾಯಕರ ಇನ್ನೊಂದು ಗುಂಪು ಮೊದಲಿನವರನ್ನು ಎದುರುಗೊಳ್ಳುವಂತೆ ಎಡಗಡೆಗೆ ತಿರುಗಿದರು. ನಾನು ಅವರನ್ನು ಹಿಂಬಾಲಿಸುತ್ತಾ ಗೋಡೆಯ ಮೇಲೆ ಬಂದೆನು. ಅರ್ಧಜನರು ಅವರನ್ನು ಹಿಂಬಾಲಿಸಿ ಕುಲುಮೆಯ ಬುರುಜು ದಾಟಿ ಅಗಲದ ಗೋಡೆಗೆ ಬಂದರು.


ಅನಂತರ ಈ ಎರಡು ಗಾಯನ ವೃಂದದವರು ದೇವಾಲಯದಲ್ಲಿ ತಮಗೆ ನೇಮಕವಾದ ಸ್ಥಳದಲ್ಲಿ ನಿಂತರು. ನಾನು ನನ್ನ ಸ್ಥಳದಲ್ಲಿ ನಿಂತೆನು. ಅರ್ಧಭಾಗ ಅಧಿಕಾರಿಗಳು ದೇವಾಲಯದೊಳಗೆ ತಮ್ಮತಮ್ಮ ಸ್ಥಳಗಳಲ್ಲಿ ನಿಂತರು.


ದಾವೀದನಗರದಲ್ಲಿದ್ದ ಅಂದರೆ ಚೀಯೋನಿನಲ್ಲಿದ್ದ ಒಡಂಬಡಿಕೆಯ ಪೆಟ್ಟಿಗೆಯನ್ನು ತರುವದಕ್ಕಾಗಿ ಸೊಲೊಮೋನನು ಇಸ್ರೇಲರ ಎಲ್ಲಾ ಹಿರಿಯರನ್ನು ಮತ್ತು ಕುಲಾಧಿಪತಿಗಳನ್ನು ಜೆರುಸಲೇಮಿಗೆ ಒಟ್ಟಾಗಿ ಕರೆಸಿದನು.


ದಾವೀದನು ತನ್ನ ರಾಜ್ಯದಲ್ಲಿದ್ದ ಎಲ್ಲಾ ನಾಯಕರನ್ನು ಅಂದರೆ ಕುಲಪ್ರಧಾನರನ್ನು, ಪ್ರಧಾನಸೇನಾಧಿಪತಿಗಳನ್ನು, ಮಹಾಸೇನಾಧಿಪತಿಗಳನ್ನು ಮತ್ತು ಸೇನಾಧಿಪತಿಗಳನ್ನು, ರಾಜನಿಗೂ ಅವನ ಗಂಡುಮಕ್ಕಳಿಗೂ ಸೇರಿದ ಆಸ್ತಿಯನ್ನು ಮತ್ತು ಪಶುಗಳನ್ನು ನೋಡಿಕೊಳ್ಳುತ್ತಿದ್ದ ಅಧಿಕಾರಿಗಳನ್ನು; ರಾಜನ ಪ್ರಮುಖ ಅಧಿಕಾರಿಗಳನ್ನು; ಬಲಿಷ್ಠ ಯುದ್ಧವೀರರನ್ನು ಮತ್ತು ಧೈರ್ಯವಂತರಾದ ಸೈನಿಕರನ್ನು ಜೆರುಸಲೇಮಿಗೆ ಕರೆಸಿ ಸಭೆಸೇರಿಸಿದನು.


ದಾವೀದನು ತನ್ನ ಎಲ್ಲಾ ಸೇನಾಧಿಪತಿಗಳೊಂದಿಗೆ ಮಾತನಾಡಿದನು. ಅವನು ಸಹಸ್ರಾಧಿಪತಿಗಳೊಂದಿಗೆ, ಶತಾಧಿಪತಿಗಳೊಂದಿಗೆ ಮತ್ತು ಪ್ರತಿಯೊಬ್ಬ ನಾಯಕನೊಂದಿಗೆ ಚರ್ಚಿಸಿದನು.


ಹೋಷಾಯ ಮತ್ತು ಯೆಹೂದ್ಯರ ನಾಯಕರಲ್ಲಿ ಅರ್ಧ ಮಂದಿ ಗಾಯಕರನ್ನು ಹಿಂಬಾಲಿಸುತ್ತಾ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು