Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:39 - ಪರಿಶುದ್ದ ಬೈಬಲ್‌

39 ಆಮೇಲೆ ಅವರು ಎಫ್ರಾಯಿಮನ ದ್ವಾರ, ಹಳೇ ದ್ವಾರ ಮತ್ತು “ಮೀನು” ಎಂಬ ದ್ವಾರ ಇವುಗಳ ಮೇಲೆ ಹಾದುಹೋದರು. ಅವರು ಹನನೇಲ್ ಬುರುಜು ಮತ್ತು “ನೂರು” ಎಂಬ ಬುರುಜುಗಳ ಮೇಲೆ ಹಾದುಹೋಗಿ “ಕುರಿ” ಎಂಬ ದ್ವಾರದವರೆಗೂ ಹೋದರು. ಅವರು “ಕಾವಲು ದ್ವಾರ”ದ ಬಳಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅಲ್ಲಿಂದ ಎಫ್ರಾಯೀಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಗೋಪುರ, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿ ಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅಲ್ಲಿಂದ ಎಫ್ರಯಿಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಬುರುಜು, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅಲ್ಲಿಂದ ಎಫ್ರಾಯೀಮ್ ಬಾಗಲು, ಯೆಷಾನಾ ಬಾಗಲು, ಮೀನು ಬಾಗಲು, ಹನನೇಲ್ ಬುರುಜು, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿಬಾಗಲಿನವರೆಗೂ ಹೋಗಿ ಸೆರೆಮನೆಯ ಬಾಗಲಿನ ಬಳಿಯಲ್ಲಿ ನಿಂತೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಎಫ್ರಾಯೀಮ್ ಬಾಗಿಲ ಮೇಲೆಯೂ, ಯೆಷಾನಾ ಬಾಗಿಲ ಮೇಲೆಯೂ, ಮೀನು ಬಾಗಿಲ ಮೇಲೆಯೂ ಹಾದು, ಹನನೇಲ್ ಗೋಪುರವನ್ನೂ, ಶತ ಗೋಪುರವನ್ನೂ ದಾಟಿ, ಕುರಿ ಬಾಗಿಲವರೆಗೆ ಬಂದು ಸೆರೆಮನೆಯ ಬಾಗಿಲ ಬಳಿಯಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:39
12 ತಿಳಿವುಗಳ ಹೋಲಿಕೆ  

ಎಲ್ಯಾಷೀಬನು ಮಹಾಯಾಜಕನಾಗಿದ್ದನು. ಅವನೂ ಮತ್ತು ಯಾಜಕರುಗಳಾಗಿದ್ದ ಅವನ ಸಹೋದರರೂ ಕುರಿ ಹೆಬ್ಬಾಗಿಲನ್ನು ಕಟ್ಟಿದರು. ನಂತರ ಪ್ರಾರ್ಥಿಸಿ ಯೆಹೋವನಿಗೆ ಅದನ್ನು ಪ್ರತಿಷ್ಠಿಸಿದರು. ಅವರು ಅದಕ್ಕೆ ಬಾಗಿಲುಗಳನ್ನು ಜೋಡಿಸಿದರು. ಆ ಯಾಜಕರು ನೂರುಗೋಪುರ ಮತ್ತು ಹನನೇಲ್ ಗೋಪುರದವರೆಗೂ ಜೆರುಸಲೇಮಿನ ಗೋಡೆಯನ್ನು ಕಟ್ಟಿದ್ದರು. ಅವರು ಪ್ರಾರ್ಥಿಸಿ ಯೆಹೋವನಿಗೆ ಪ್ರತಿಷ್ಠಿಸಿದರು.


ಜನರು ಹೋಗಿ ರೆಂಬೆಗಳನ್ನು ತಂದು ತಮಗಾಗಿ ತಾತ್ಕಾಲಿಕ ಬಿಡಾರಗಳನ್ನು ಮಾಡಿಕೊಂಡರು. ಅವರು ಈ ಬಿಡಾರಗಳನ್ನು ತಮ್ಮ ಮನೆಯ ಮೇಲ್ಛಾವಣಿಗೆಯಲ್ಲೂ ಮನೆಯ ಅಂಗಳಗಳಲ್ಲಿಯೂ, ದೇವಾಲಯದ ಅಂಗಳದಲ್ಲಿಯೂ “ಬುಗ್ಗೆ” ಮತ್ತು “ಎಫ್ರಾಯೀಮ್” ಎಂಬ ದ್ವಾರಗಳ ಸಮೀಪದಲ್ಲಿದ್ದ ಬಯಲುಗಳಲ್ಲಿಯೂ ಹಾಕಿಕೊಂಡರು.


ಯೋಯಾದ ಮತ್ತು ಮೆಷುಲ್ಲಾಮ್ ಹಳೆಬಾಗಿಲನ್ನು ಜೋಡಿಸಿದರು. ಯೋಯಾದನು ಪಾಸೇಹನ ಮಗ; ಮೆಷುಲ್ಲಾಮನು ಬೆಸೋದ್ಯನ ಮಗ. ಅವರು ತೊಲೆಗಳನ್ನು ಇಟ್ಟರು; ಬಾಗಿಲುಗಳನ್ನು, ಕದಗಳನ್ನು, ಅಗುಳಿಗಳನ್ನು ಜೋಡಿಸಿದರು.


ಹಸ್ಸೆನಾಹನ ಗಂಡುಮಕ್ಕಳು ಮೀನುಬಾಗಿಲನ್ನು ಕಟ್ಟಿ ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದಗಳು, ಅಗುಳಿ, ತಿರುಗಣಿಗಳನ್ನಿಟ್ಟು ಭದ್ರಪಡಿಸಿದರು.


ಊಜೈಯ ಮಗನಾದ ಪಾಲಾಲನು ಮೂಲೆಯಿಂದ ಹಿಡಿದು ರಾಜನ ಮೇಲ್ಮನೆಯ ಬುರುಜಿನ ತನಕ ಮುಂದುವರಿಸಿದನು. ಇದು ರಾಜನ ಕಾವಲುಪಡೆಯ ಅಂಗಳದ ಸಮೀಪದಲ್ಲಿತ್ತು. ಪರೋಷನ ಮಗನಾದ ಪೆದಾಯನು ಅಲ್ಲಿಂದಾಚೆಗೆ ಅಂದರೆ ಪಾಲಾಲನು ಕೊನೆಗೊಳಿಸಿದಾಚಿನಿಂದ ಮುಂದುವರಿಸಿದನು.


ಇಸ್ರೇಲಿನ ರಾಜನಾದ ಯೋವಾಷನು ಬೇತ್ಷೆಮೆಷಿನಲ್ಲಿ ಯೆಹೂದದ ರಾಜನಾದ ಅಮಚ್ಯನನ್ನು ಸೆರೆಹಿಡಿದನು. ಅಮಚ್ಯನು ಯೆಹೋವಾಷನ ಮಗನೂ ಅಹಜ್ಯನ ಮೊಮ್ಮಗನೂ ಆಗಿದ್ದನು. ಯೋವಾಷನು ಜೆರುಸಲೇಮಿಗೆ ಬಂದು ಎಫ್ರಾಯೀಮ್ ಬಾಗಿಲಿನಿಂದ ಮೂಲೆಯ ಬಾಗಿಲಿನವರೆಗೆ ಆರುನೂರು ಅಡಿ ಉದ್ದದ ಗೋಡೆಯನ್ನು ಒಡೆದುಹಾಕಿದನು.


ಜೆರುಸಲೇಮಿನಲ್ಲಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಯೆಹೂದ್ಯರ ಭಾಷೆಯಲ್ಲಿ ಅದಕ್ಕೆ “ಬೆತ್ಸಥ” ಎಂದು ಕರೆಯುತ್ತಾರೆ. ಈ ಕೊಳವು “ಕುರಿಬಾಗಿಲು” ಎಂಬ ಸ್ಥಳದ ಸಮೀಪದಲ್ಲಿದೆ.


ಯೆಹೋವನು ಇನ್ನೂ ಹೇಳುವುದೇನೆಂದರೆ, “ಆ ಸಮಯದಲ್ಲಿ ಜೆರುಸಲೇಮಿನ ಮೀನು ಬಾಗಿಲಲ್ಲಿ ಜನರು ಸಹಾಯಕ್ಕಾಗಿ ಮೊರೆಯಿಡುವರು. ನಗರದ ಇತರ ಕಡೆಗಳಿಂದ ಜನರು ರೋಧಿಸುವರು. ನಗರದ ಸುತ್ತಲಿರುವ ಬೆಟ್ಟಗಳಲ್ಲಿ ನಾಶವಾಗುವ ಶಬ್ದವನ್ನು ಜನರು ಕೇಳುವರು.


ಆ ಸಮಯದಲ್ಲಿ ಬಾಬಿಲೋನಿನ ರಾಜನ ಸೈನ್ಯವು ಜೆರುಸಲೇಮನ್ನು ಮುತ್ತಿತ್ತು. ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು. ಈ ಕಾರಾಗೃಹವು ಯೆಹೂದದ ರಾಜನ ಅರಮನೆಗೆ ಸೇರಿತ್ತು.


ಇದು ಯೆಹೋವನ ನುಡಿ: “ಯೆಹೋವನಿಗಾಗಿ ಜೆರುಸಲೇಮ್ ನಗರವನ್ನು ಮತ್ತೆ ಕಟ್ಟುವ ಕಾಲ ಬರುತ್ತಿದೆ. ಹನನೇಲನ ಬುರುಜಿನಿಂದ ಮೂಲೆಯ ಬಾಗಿಲಿನವರೆಗೆ ಇಡೀ ಪಟ್ಟಣವನ್ನು ಮತ್ತೊಮ್ಮೆ ಕಟ್ಟಲಾಗುವುದು.


ಅನಂತರ ಈ ಎರಡು ಗಾಯನ ವೃಂದದವರು ದೇವಾಲಯದಲ್ಲಿ ತಮಗೆ ನೇಮಕವಾದ ಸ್ಥಳದಲ್ಲಿ ನಿಂತರು. ನಾನು ನನ್ನ ಸ್ಥಳದಲ್ಲಿ ನಿಂತೆನು. ಅರ್ಧಭಾಗ ಅಧಿಕಾರಿಗಳು ದೇವಾಲಯದೊಳಗೆ ತಮ್ಮತಮ್ಮ ಸ್ಥಳಗಳಲ್ಲಿ ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು