Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:47 - ಪರಿಶುದ್ದ ಬೈಬಲ್‌

47 ಜೆರುಬ್ಬಾಬೆಲ್ ಮತ್ತು ನೆಹೆಮೀಯನ ಕಾಲದಲ್ಲಿ ಇಸ್ರೇಲರೆಲ್ಲರೂ ಗಾಯಕರಿಗೆ ಮತ್ತು ದ್ವಾರಪಾಲಕರಿಗೆ ಅನುದಿನ ಅಗತ್ಯವಾದವುಗಳನ್ನು ಒದಗಿಸಿಕೊಟ್ಟರು. ಇತರ ಲೇವಿಯರಿಗೋಸ್ಕರವಾಗಿಯೂ ಜನರು ಹಣವನ್ನು ಪ್ರತ್ಯೇಕವಾಗಿಟ್ಟರು. ಲೇವಿಯರೂ ಸಹ ಆರೋನನ ವಂಶದ ಯಾಜಕರಿಗಾಗಿ ಹಣವನ್ನು ಪ್ರತ್ಯೇಕವಾಗಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಜೆರುಬ್ಬಾಬೆಲ್ ಮತ್ತು ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಾಯೇಲರು ಗಾಯಕರಿಗೂ ದ್ವಾರಪಾಲಕರಿಗೂ ಪ್ರತಿದಿನ ಜೀವನಾಂಶವನ್ನು ಕೊಡುತ್ತಿದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಮತ್ತು ಲೇವಿಯರು ತಮ್ಮದರಲ್ಲಿಯ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಜೆರುಬ್ಬಾಬೆಲ್, ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಯೇಲರು ಗಾಯಕರಿಗೂ ದ್ವಾರಪಾಲಕರಿಗೂ ದಿನದಿನಕ್ಕೆ ಸಿಕ್ಕತಕ್ಕ ಪಾಲುಗಳನ್ನು ಕೊಡುತ್ತ ಇದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಲೇವಿಯರು ತಮ್ಮದರಲ್ಲಿ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಜೆರುಬ್ಬಾಬೆಲ್, ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಾಯೇಲ್ಯರು ಗಾಯಕರಿಗೂ ದ್ವಾರಪಾಲಕರಿಗೂ ದಿನದಿನಕ್ಕೆ ಸಿಕ್ಕತಕ್ಕ ಭಾಗಗಳನ್ನು ಕೊಡುತ್ತಿದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಲೇವಿಯರು ತಮ್ಮದರಲ್ಲಿ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಆದ್ದರಿಂದ ಜೆರುಬ್ಬಾಬೆಲನ ದಿವಸಗಳಲ್ಲಿಯೂ, ನೆಹೆಮೀಯನ ದಿವಸಗಳಲ್ಲಿಯೂ ಇಸ್ರಾಯೇಲರೆಲ್ಲರು ಹಾಡುಗಾರರಿಗೂ, ದ್ವಾರಪಾಲಕರಿಗೂ, ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಇತರ ಲೇವಿಯರಿಗೆ ಭಾಗವನ್ನು ಪ್ರತ್ಯೇಕವಾಗಿಟ್ಟರು ಮತ್ತು ಲೇವಿಯರು ಆರೋನನ ವಂಶಸ್ಥರಿಗೆ ಭಾಗವನ್ನು ಪ್ರತ್ಯೇಕವಾಗಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:47
14 ತಿಳಿವುಗಳ ಹೋಲಿಕೆ  

ದೇವರ ವಾಕ್ಯವನ್ನು ಕಲಿತುಕೊಳ್ಳುವವನು, (ತನಗೆ) ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಒಳ್ಳೆತನಗಳಲ್ಲಿ ಪಾಲು ಕೊಡತಕ್ಕದ್ದು.


ಈ ದ್ವಾರಪಾಲಕರು ಯೋಯಾಕೀಮನ ಕಾಲದಲ್ಲಿ ಸೇವೆ ಮಾಡಿದರು. ಯೋಯಾಕೀಮನು ಯೇಷೂವನ ಮಗ. ಯೇಷೂವನು ಯೋಚಾದಾಕನ ಮಗ. ನೆಹೆಮೀಯನು ರಾಜ್ಯಪಾಲನಾಗಿದ್ದ ದಿನಗಳಲ್ಲಿ ಮತ್ತು ಎಜ್ರನು ಯಾಜಕನೂ ಉಪದೇಶಕನೂ ಆಗಿದ್ದ ದಿನಗಳಲ್ಲಿ ಸಹ ಈ ದ್ವಾರಪಾಲಕರು ಸೇವೆ ಸಲ್ಲಿಸಿದರು.


ಯೋಯಾಕೀಮನ ಕಾಲದಲ್ಲಿ ಇವರು ಯಾಜಕರ ಕುಟುಂಬಗಳ ನಾಯಕರಾಗಿದ್ದರು. ಸೆರಾಯ ಕುಟುಂಬದ ನಾಯಕ ಮೆರಾಯ, ಯೆರೆಮೀಯನ ಕುಟುಂಬದ ನಾಯಕ ಹನನ್ಯ.


ಯೆಹೂದ ಪ್ರಾಂತಕ್ಕೆ ಹಿಂತಿರುಗಿದ ಯಾಜಕರ ಮತ್ತು ಲೇವಿಯರ ಪಟ್ಟಿ: ಅವರು ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೇಷೂವನೊಡನೆ ಹಿಂದಿರುಗಿದರು. ಅವರು ಯಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,


ಗಾಯಕರಾಗಿದ್ದ ಇವರು ದೇವಾಲಯದ ಸೇವಾಕಾರ್ಯಗಳಲ್ಲಿ ಹಾಡುತ್ತಿದ್ದರು. ಇವರ ಅನುದಿನದ ಕರ್ತವ್ಯವನ್ನು ರಾಜನೇ ತಿಳಿಸುತ್ತಿದ್ದನು. ಇವರು ಅದಕ್ಕೆ ವಿಧೇಯರಾಗುತ್ತಿದ್ದರು.


ಈ ಕುಷ್ಠರೋಗಿಗಳು ನಗರದ ಬಾಗಿಲಿಗೆ ಬಂದು ದ್ವಾರಪಾಲಕರನ್ನು ಕರೆದು, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಆದರೆ ನಾವು ಜನರ ಧ್ವನಿಯನ್ನು ಕೇಳಲೇ ಇಲ್ಲ. ಅಲ್ಲಿ ಜನರ ಸುಳಿವಿಲ್ಲ. ಕುದುರೆಗಳು ಮತ್ತು ಹೇಸರಕತ್ತೆಗಳು ಕಟ್ಟಿಹಾಕಿದಂತೆಯೇ ಇವೆ. ಗುಡಾರಗಳಿನ್ನೂ ಯಥಾಸ್ಥಿತಿಯಲ್ಲಿವೆ. ಆದರೆ ಸೈನಿಕರೆಲ್ಲರೂ ಹೊರಟುಹೋಗಿದ್ದಾರೆ” ಎಂದು ಹೇಳಿದರು.


ಹೀಗೆ ರಾಜನಾದ ಎವೀಲ್ಮೆರೋದಕನ ಪಂಕ್ತಿಯಲ್ಲಿ ಯೆಹೋಯಾಖೀನನು ತನ್ನ ಉಳಿದ ಜೀವಿತದಲ್ಲಿ ಊಟಮಾಡಿದನು.


ಆ ಲೇವಿಯನು ಇತರ ಲೇವಿಯರೊಂದಿಗೆ ಸಮಾನ ಪಾಲನ್ನು ಹೊಂದುವನು. ಇದಲ್ಲದೆ ಅವನ ಕುಟುಂಬದವರು ಯಥಾಪ್ರಕಾರ ತಮಗೆ ಬರತಕ್ಕ ಪಾಲನ್ನೂ ಹೊಂದುವರು.


ಜೆರುಬ್ಬಾಬೆಲನೊಂದಿಗೆ ಹಿಂತಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ. ಇಸ್ರೇಲರಲ್ಲಿ ಹಿಂತಿರುಗಿ ಬಂದವರ ಹೆಸರು ಮತ್ತು ಸಂಖ್ಯೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು