Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:7 - ಪರಿಶುದ್ದ ಬೈಬಲ್‌

7 ಸಲ್ಲೂ, ಅಮೋಕ್, ಹಿಲ್ಕೀಯ ಮತ್ತು ಯೆದಾಯ. ಇವರೆಲ್ಲಾ ಯಾಜಕರ ನಾಯಕರು. ಇವರು ಯೇಷೂವನ ಕಾಲದಲ್ಲಿದ್ದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸಲ್ಲೂ, ಆಮೋಕ್, ಹಿಲ್ಕೀಯ, ಯೆದಾಯ ಇವರು ಯೇಷೂವನ ಕಾಲದಲ್ಲಿ ಯಾಜಕರ ಮತ್ತು ಅವರ ಬಂಧುಗಳ ಪ್ರಧಾನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೋಯಾರೀಬ್, ಯೆದಾಯ, ಸಲ್ಲೂ, ಆಮೋಕ್, ಹಿಲ್ಕೀಯ, ಯೆದಾಯ. ಇವರು ಯೇಷೂವನ ಕಾಲದಲ್ಲಿ ಯಾಜಕರ ಮತ್ತು ಅವರ ಬಂಧುಗಳ ಮುಖಂಡರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೋಯಾರೀಬ್, ಯೆದಾಯ, ಸಲ್ಲೂ, ಆಮೋಕ್, ಹಿಲ್ಕೀಯ, ಯೆದಾಯ ಇವರು ಯೇಷೂವನ ಕಾಲದಲ್ಲಿ ಯಾಜಕರ ಮತ್ತು ಅವರ ಬಂಧುಗಳ ಪ್ರಧಾನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸಲ್ಲೂ, ಆಮೋಕ್, ಹಿಲ್ಕೀಯ, ಯೆದಾಯ. ಇವರು ಯೇಷೂವನ ದಿವಸಗಳಲ್ಲಿ ಯಾಜಕರಲ್ಲಿಯೂ, ಅವರ ಸಂಗಡಿಗರಲ್ಲಿಯೂ ಮುಖ್ಯಸ್ಥರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:7
8 ತಿಳಿವುಗಳ ಹೋಲಿಕೆ  

ದೇವದೂತನು ನನಗೆ ಪ್ರಧಾನ ಯಾಜಕನಾದ ಯೆಹೋಶುವನನ್ನು ತೋರಿಸಿದನು. ಅವನು ಯೆಹೋವನ ದೂತನ ಮುಂದೆ ನಿಂತಿದ್ದನು. ಸೈತಾನನು ಯೆಹೋಶುವನ ಬಲಗಡೆಯಲ್ಲಿ ನಿಂತಿದ್ದನು. ಯೆಹೋಶುವನು ಕೆಟ್ಟಕೃತ್ಯಗಳನ್ನು ಮಾಡಿದ್ದಾನೆಂದು ದೂರು ಹೇಳುವದಕ್ಕಾಗಿ ಸೈತಾನನು ಅಲ್ಲಿ ನಿಂತಿದ್ದನು.


ಪರ್ಶಿಯಾದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಹಗ್ಗಾಯನಿಗೆ ಯೆಹೋವನಿಂದ ಸಂದೇಶವು ಬಂದಿತು. ಈ ಸಂದೇಶವು ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೋಸ್ಕರ, ಯೆಹೋಚಾದಾಕನ ಮಗನಾದ ಯೆಹೋಶುವನಿಗೋಸ್ಕರ ಬಂದಿತು. ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು; ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಸಂದೇಶವು ಇದೇ:


ಯೆಹೂದ ಪ್ರಾಂತಕ್ಕೆ ಹಿಂತಿರುಗಿದ ಯಾಜಕರ ಮತ್ತು ಲೇವಿಯರ ಪಟ್ಟಿ: ಅವರು ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೇಷೂವನೊಡನೆ ಹಿಂದಿರುಗಿದರು. ಅವರು ಯಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,


ಆಗ ಯೋಚಾದಾಕನ ಮಗನಾದ ಯೇಷೂವನೂ ಅವನೊಂದಿಗೆ ಇದ್ದ ಯಾಜಕರೂ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಅವನೊಂದಿಗಿದ್ದ ಜನರೊಂದಿಗೆ ಇಸ್ರೇಲ್ ದೇವರಿಗೆ ಯಜ್ಞವೇದಿಕೆಯನ್ನು ಕಟ್ಟಿದರು. ದೇವರ ಸೇವಕನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ದೇವರಿಗೆ ಯಜ್ಞವನ್ನು ಸಮರ್ಪಿಸಲು ಇವರು ವೇದಿಕೆಯನ್ನು ಕಟ್ಟಿದರು.


ಇಪ್ಪತ್ತಮೂರನೆಯ ವರ್ಗ ದೆಲಾಯನದು. ಇಪ್ಪತ್ತನಾಲ್ಕನೆಯ ವರ್ಗ ಮಾಜ್ಯನದು.


ಈ ಜನರು ರಾಜನನ್ನು ಕರೆದರು. ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಅವರನ್ನು ಭೇಟಿಮಾಡಲು ಹೊರಗೆ ಬಂದರು.


ಶೆಮಾಯ, ಯೋಯಾರೀಬ್, ಯೆದಾಯ,


ಲೇವಿಯವರು ಯಾರೆಂದರೆ: ಯೇಷೂವ, ಬಿನ್ನೂಯ, ಕದ್ಮೀಯೇಲ್, ಶೆರೇಬ್ಯ, ಯೆಹೂದ ಮತ್ತು ಮತ್ತನ್ಯ. ಇವರು ಮತ್ತನ್ಯನಿಗೆ ಸಂಬಂಧಿಕರೂ ಗಾಯಕರಿಗೆ ಮುಖ್ಯಸ್ತರೂ ಆಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು