Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:12 - ಪರಿಶುದ್ದ ಬೈಬಲ್‌

12 ಆಗ ಯೆಹೂದ ಪ್ರಾಂತ್ಯದ ಪ್ರತಿಯೊಬ್ಬರೂ ತಮ್ಮ ದಶಮಾಂಶ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಮುಂತಾದವುಗಳನ್ನು ತಂದುಕೊಟ್ಟರು. ಅವುಗಳನ್ನು ಉಗ್ರಾಣಗಳಲ್ಲಿ ಶೇಖರಿಸಿಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ ದ್ರಾಕ್ಷಾರಸ ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ ಎಣ್ಣೆ ಇವುಗಳಲ್ಲಿ ಹತ್ತರಲ್ಲೊಂದು ಪಾಲನ್ನು ಕೊಠಡಿಗಳಲ್ಲಿ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:12
9 ತಿಳಿವುಗಳ ಹೋಲಿಕೆ  

ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.


ಉಗ್ರಾಣಕ್ಕೆ ಮುಖ್ಯಸ್ತರನ್ನು ಆ ದಿನ ಆರಿಸಿದರು. ಜನರು ತಮ್ಮ ಪ್ರಥಮಫಲಗಳನ್ನು, ಪೈರಿನ ಹತ್ತನೆಯ ಒಂದಂಶವನ್ನು ತಂದರು. ಉಗ್ರಾಣದ ಮುಖ್ಯಸ್ತರು ಅವುಗಳನ್ನು ಕೋಣೆಯೊಳಗೆ ಶೇಖರಿಸಿಟ್ಟರು. ಎಲ್ಲರೂ ಅಚ್ಚುಕಟ್ಟಾಗಿ ತಮ್ಮತಮ್ಮ ಕೆಲಸಕಾರ್ಯಗಳನ್ನು ಮಾಡುವುದನ್ನು ನೋಡಿ ಜನರು ಸಂತೋಷಪಟ್ಟರು; ಹೆಚ್ಚಾದ ವಸ್ತುಗಳನ್ನು ಉಗ್ರಾಣದೊಳಕ್ಕೆ ತಂದರು.


“ಪ್ರತಿ ವರ್ಷ ನಿಮ್ಮ ಹೊಲದ ಬೆಳೆಯಲ್ಲಿ ಹತ್ತನೆಯ ಒಂದು ಅಂಶವನ್ನು ಪ್ರತ್ಯೇಕಿಸಿಡಿರಿ.


“ಎಲ್ಲಾ ಬೆಳೆಗಳಲ್ಲಿ ಹತ್ತರಲ್ಲಿ ಒಂದಂಶವು ಯೆಹೋವನದ್ದಾಗಿರುತ್ತದೆ. ಹೊಲಗಳ ಬೆಳೆಗಳಾಗಲಿ ಮರಗಳ ಫಲಗಳಾಗಲಿ ಅದರಲ್ಲಿ ಹತ್ತರಲ್ಲಿ ಒಂದಂಶ ಯೆಹೋವನದ್ದಾಗಿರುತ್ತದೆ.


ದೇಶದ ಜನರೆಲ್ಲಾ ಅರಸನ ಈ ಆಜ್ಞೆಯನ್ನು ಕೇಳಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನುತುಪ್ಪ ಮುಂತಾದ ಎಲ್ಲವುಗಳಲ್ಲಿ ಮತ್ತು ಪ್ರಥಮ ಫಲಗಳಲ್ಲಿ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಕೊಟ್ಟರು.


ದೇವರಿಂದ ಕದ್ದುಕೊಳ್ಳುವದನ್ನು ನಿಲ್ಲಿಸಿರಿ. ಮನುಷ್ಯನು ದೇವರಿಂದ ಕದ್ದುಕೊಳ್ಳಬಾರದು. ಆದರೆ ನೀವು ನನ್ನಿಂದ ಕದ್ದುಕೊಂಡಿದ್ದೀರಿ. “ನಿನ್ನಿಂದ ಏನು ಕದ್ದುಕೊಂಡಿದ್ದೇವೆ” ಎಂದು ಕೇಳುತ್ತೀರಾ? “ನಿಮ್ಮ ದಶಮ ಭಾಗವನ್ನು ನೀವು ನನಗೆ ಅರ್ಪಿಸಬೇಕಿತ್ತು. ವಿಶೇಷ ಕಾಣಿಕೆಗಳನ್ನು ನೀವು ನನಗೆ ಕೊಡಬೇಕಾಗಿತ್ತು. ಆದರೆ ನೀವು ಹಾಗೆ ಮಾಡಲಿಲ್ಲ.


ದೇಶದ ಜನರು ಯಾಜಕರಿಗೂ ಲೇವಿಯರಿಗೂ ತಮ್ಮ ಬೆಳೆಯ ಒಂದು ಪಾಲನ್ನು ಕೊಡಬೇಕಾಗಿತ್ತು. ಹಿಜ್ಕೀಯನು ಯಾಜಕರಿಗೂ ಲೇವಿಯರಿಗೂ ಅವರು ಕೊಡಬೇಕಾಗಿದ್ದ ಪಾಲನ್ನು ಕೊಡಬೇಕೆಂದು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಜನರಿಗೆ ಆಜ್ಞಾಪಿಸಿದನು. ಹೀಗಿರುವಾಗ ಯಾಜಕರೂ ಲೇವಿಯರೂ ತಮ್ಮ ಸಮಯವನ್ನೆಲ್ಲಾ ದೇವರ ಸೇವೆಯಲ್ಲಿ ಕಳೆಯಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು