Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:13 - ಪರಿಶುದ್ದ ಬೈಬಲ್‌

13 ಯಾಜಕನಾದ ಶೆಲೆಮ್ಯನನ್ನೂ ಬೋಧಕನಾದ ಚಾದೋಕನನ್ನೂ ಪೆದಾಯ ಎಂಬ ಲೇವಿಯನನ್ನೂ ಉಗ್ರಾಣಗಳಿಗೆ ಮುಖ್ಯಸ್ತರನ್ನಾಗಿ ಮಾಡಿದೆನು. ಮತ್ತನ್ಯನ ಮೊಮ್ಮಗನೂ ಜಕ್ಕೂರನ ಮಗನೂ ಆಗಿರುವ ಹಾನಾನನನ್ನು ಅವರಿಗೆ ಸಹಾಯಕನನ್ನಾಗಿ ನೇಮಿಸಿದೆನು. ಇವರು ನಂಬಿಗಸ್ತರಾಗಿದ್ದರು. ತಮ್ಮ ಜನರಿಗೆ ಬೇಕಾದ ದವಸವನ್ನು, ಆಹಾರಸಾಮಾಗ್ರಿಗಳನ್ನು ಒದಗಿಸುವ ಕಾರ್ಯಕ್ಕೆ ಅವರು ಜವಾಬ್ದಾರರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಂತರ ಉಗ್ರಾಣಗಳ ಮೇಲ್ವಿಚಾರಣೆಗಾಗಿ ನೋಡುವುದಕ್ಕೋಸ್ಕರ ಯಾಜಕನಾದ ಶೆಲೆಮ್ಯ, ಲೇಖಕನಾದ ಚಾದೋಕ್, ಲೇವಿಯ ಕುಲದವನಾದ ಪೆದಾಯ ಇವರನ್ನೂ, ಇವರ ಸಹಾಯಕ್ಕಾಗಿ ಜಕ್ಕೂರನ ಮಗನೂ, ಮತ್ತನ್ಯನ ಮೊಮ್ಮಗನೂ ಆದ ಹಾನಾನನನ್ನೂ ನೇಮಿಸಿದೆನು. ಇವರೆಲ್ಲರೂ ನಂಬಿಗಸ್ತರೆಂದು ಹೆಸರುಗೊಂಡವರಾಗಿದ್ದರು. ತಮ್ಮ ಸಹೋದರರಿಗೆ ಸಿಕ್ಕತಕ್ಕದ್ದನ್ನು ಹಂಚಿಕೊಡುವುದು ಇವರ ಕರ್ತವ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಮೇಲೆ ಉಗ್ರಾಣಗಳನ್ನು ನೋಡಿಕೊಳ್ಳುವುದಕ್ಕೆ ಯಾಜಕನಾದ ಶೆಲೆಮ್ಯ, ಲೇಖಕನಾದ ಚಾದೋಕ್, ಲೇವಿಕುಲದವನಾದ ಪೆದಾಯ ಇವರನ್ನೂ ಇವರ ಸಹಾಯಕ್ಕಾಗಿ ಜಕ್ಕೂರನ ಮಗನೂ ಮತ್ತನ್ಯನ ಮೊಮ್ಮಗನೂ ಆದ ಹಾನಾನನನ್ನೂ ನೇಮಿಸಿದೆ. ಇವರೆಲ್ಲರೂ ನಂಬಿಕಸ್ತರೆಂದು ಹೆಸರುಗೊಂಡವರು. ತಮ್ಮ ಸಹೋದರರಿಗೆ ತಕ್ಕದ್ದನ್ನು ಹಂಚಿಕೊಡುವುದು ಇವರ ಕರ್ತವ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಮೇಲೆ ಉಗ್ರಾಣಗಳನ್ನು ನೋಡುವದಕ್ಕೋಸ್ಕರ ಯಾಜಕನಾದ ಶೆಲೆಮ್ಯ, ಲೇಖಕನಾದ ಚಾದೋಕ್, ಲೇವಿಕುಲದವನಾದ ಪೆದಾಯ ಇವರನ್ನೂ ಇವರ ಸಹಾಯಕ್ಕಾಗಿ ಜಕ್ಕೂರನ ಮಗನೂ ಮತ್ತನ್ಯನ ಮೊಮ್ಮಗನೂ ಆದ ಹಾನಾನನನ್ನೂ ನೇವಿುಸಿದೆನು; ಇವರೆಲ್ಲರೂ ನಂಬಿಗಸ್ತರೆಂದು ಹೆಸರುಗೊಂಡವರು. ತಮ್ಮ ಸಹೋದರರಿಗೆ ಸಿಕ್ಕತಕ್ಕದ್ದನ್ನು ಹಂಚಿಕೊಡುವದು ಇವರ ಕರ್ತವ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ನಾನು ಯಾಜಕನಾದ ಶೆಲೆಮ್ಯನನ್ನೂ, ಲೇಖಕನಾದ ಚಾದೋಕನನ್ನೂ, ಲೇವಿಯರಲ್ಲಿರುವ ಪೆದಾಯನನ್ನೂ ಅವರಿಗೆ ಸಹಾಯವಾಗಿ ಮತ್ತನ್ಯನ ಮಗನಾದ ಜಕ್ಕೂರನ ಮಗ ಹಾನಾನನನ್ನೂ ಬೊಕ್ಕಸಗಳ ಮೇಲೆ ನೇಮಿಸಿದೆನು. ಅವರು ನಂಬಿಗಸ್ತರೆಂದು ಹೆಸರುಗೊಂಡವರು. ತಮ್ಮ ಸಹೋದರರಿಗೆ ಹಂಚಿ ಕೊಡುವುದು ಅವರ ಕೆಲಸವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:13
20 ತಿಳಿವುಗಳ ಹೋಲಿಕೆ  

ಇದಾದ ಬಳಿಕ ನನ್ನ ಸಹೋದರ ಹಾನಾನಿಯನನ್ನು ಜೆರುಸಲೇಮಿನ ಆಡಳಿತಗಾರನನ್ನಾಗಿ ನೇಮಿಸಿದೆನು. ಹನನ್ಯನನ್ನು ಜೆರುಸಲೇಮಿನ ಕೋಟೆಗೆ ಅಧಿಪತಿಯನ್ನಾಗಿ ಆರಿಸಿದೆನು. ಹಾನಾನಿಯು ನಂಬಿಗಸ್ತನೂ ದೇವರಿಗೆ ಭಯಪಡುವವನೂ ಆಗಿದ್ದುದರಿಂದ ನಾನು ಅವನನ್ನು ಆರಿಸಿಕೊಂಡೆನು.


ನೀವು ಕೆಲಸಗಾರರಿಗೆ ಕೊಡುವ ಹಣವನ್ನು ಲೆಕ್ಕಹಾಕಬೇಡಿ. ಯಾಕೆಂದರೆ ಆ ಕೆಲಸಗಾರರು ನಂಬಿಗಸ್ತರಾಗಿದ್ದಾರೆ” ಎಂದು ಹೇಳಿದನು.


ಹೀಗಿರಲು, ಜವಾಬ್ದಾರಿಕೆಯನ್ನು ವಹಿಸಿಕೊಂಡವರು ತಾವು ತಮ್ಮ ಕೆಲಸದಲ್ಲಿ ನಂಬಿಗಸ್ತರೆಂಬುದನ್ನು ತೋರಿಸಬೇಕು.


ಆದ್ದರಿಂದ, ಸಹೋದರರೇ, ನಿಮ್ಮ ಜನರಲ್ಲಿ ಏಳು ಮಂದಿಯನ್ನು ಆರಿಸಿಕೊಳ್ಳಿರಿ. ಅವರು ಜನರಿಂದ ಒಳ್ಳೆಯವರು ಎನಿಸಿಕೊಂಡವರಾಗಿರಬೇಕು; ಜ್ಞಾನಪೂರ್ಣರಾಗಿರಬೇಕು ಮತ್ತು ಪವಿತ್ರಾತ್ಮಭರಿತರಾಗಿರಬೇಕು. ನಾವು ಅವರಿಗೆ ಈ ಕೆಲಸವನ್ನು ಒಪ್ಪಿಸಿಕೊಡುತ್ತೇವೆ.


ಯೇಸುವಿನ ಶಿಷ್ಯರ ಸಂಖ್ಯೆಯು ಹೆಚ್ಚುಹೆಚ್ಚಾಗುತ್ತಿತ್ತು. ಆದರೆ ಈ ಸಮಯದಲ್ಲಿ ಗ್ರೀಕ್ ಮಾತಾಡುವ ಶಿಷ್ಯರು ಯೆಹೂದ್ಯ ಶಿಷ್ಯರಿಗೆ ದೂರು ಹೇಳಿದರು. ಪ್ರತಿದಿನ ಶಿಷ್ಯರಿಗೆ ಕೊಡುವಂಥವುಗಳಲ್ಲಿ ತಮ್ಮ ವಿಧವೆಯರಿಗೆ ಅವರ ಪಾಲು ದೊರೆಯುತ್ತಿಲ್ಲವೆಂದು ಅವರು ಆಪಾದಿಸಿದರು.


ಉಗ್ರಾಣಕ್ಕೆ ಮುಖ್ಯಸ್ತರನ್ನು ಆ ದಿನ ಆರಿಸಿದರು. ಜನರು ತಮ್ಮ ಪ್ರಥಮಫಲಗಳನ್ನು, ಪೈರಿನ ಹತ್ತನೆಯ ಒಂದಂಶವನ್ನು ತಂದರು. ಉಗ್ರಾಣದ ಮುಖ್ಯಸ್ತರು ಅವುಗಳನ್ನು ಕೋಣೆಯೊಳಗೆ ಶೇಖರಿಸಿಟ್ಟರು. ಎಲ್ಲರೂ ಅಚ್ಚುಕಟ್ಟಾಗಿ ತಮ್ಮತಮ್ಮ ಕೆಲಸಕಾರ್ಯಗಳನ್ನು ಮಾಡುವುದನ್ನು ನೋಡಿ ಜನರು ಸಂತೋಷಪಟ್ಟರು; ಹೆಚ್ಚಾದ ವಸ್ತುಗಳನ್ನು ಉಗ್ರಾಣದೊಳಕ್ಕೆ ತಂದರು.


ಯಾರೂ ಆ ಹಣವನ್ನು ಲೆಕ್ಕಹಾಕಲಿಲ್ಲ. ಇಲ್ಲವೆ ಆ ಹಣವೇನಾಯಿತೆಂದು ಯಾವ ಕೆಲಸಗಾರನನ್ನೂ ಒತ್ತಾಯಿಸಿ ಕೇಳಲಿಲ್ಲ. ಏಕೆಂದರೆ ಆ ಕೆಲಸಗಾರರು ನಂಬಿಗಸ್ತರಾಗಿದ್ದರು!


ಅವರನ್ನು ನೀನು ಮೊದಲು ಪರೀಕ್ಷಿಸು. ಅವರು ಕಳಂಕರಹಿತರಾಗಿದ್ದರೆ, ಸೇವಕರಾಗಿ ಸೇವೆ ಮಾಡಬಹುದು.


ನಮ್ಮ ಪ್ರಭುವಾದ ಕ್ರಿಸ್ತ ಯೇಸು ನನ್ನ ಮೇಲಿನ ನಂಬಿಕೆಯಿಂದ, ಆತನ ಸೇವೆ ಮಾಡುವ ಈ ಕಾರ್ಯವನ್ನು ನನಗೆ ದಯಪಾಲಿಸಿದ್ದರಿಂದ ನಾನು ಆತನಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಆತನು ನನ್ನನ್ನು ಬಲಪಡಿಸುತ್ತಾನೆ.


ಬಂದ ಹಣವನ್ನು ಅಪೊಸ್ತಲರ ಪಾದಗಳ ಬಳಿ ಇಡುತ್ತಿದ್ದರು. ಬಳಿಕ ಅದನ್ನು ಪ್ರತಿಯೊಬ್ಬರಿಗೂ ಅವರವರ ಅಗತ್ಯತೆಗಳಿಗನುಸಾರವಾಗಿ ಹಂಚಲಾಗುತ್ತಿತ್ತು.


ಪ್ರಭುವು ಹೀಗೆಂದನು: “ವಿವೇಕಿಯೂ ನಂಬಿಗಸ್ತನೂ ಆದ ಆಳು ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಿಸಲ್ಪಟ್ಟವನೇ.


ತುತ್ತೂರಿಗಳನ್ನು ಹಿಡಿದುಕೊಂಡಿದ್ದ ಕೆಲವು ಯಾಜಕರೂ ಅವರನ್ನು ಹಿಂಬಾಲಿಸುತ್ತಾ ಗೋಡೆಯ ತನಕ ಬಂದರು. ಜೆಕರ್ಯನೂ ಅವರನ್ನು ಹಿಂಬಾಲಿಸಿದನು. (ಜೆಕರ್ಯನು ಯೋನಾತಾನನ ಮಗ; ಯೋನಾತನನು ಶೆಮಾಯನ ಮಗ; ಶೆಮಾಯನು ಮತ್ತನ್ಯನ ಮಗ; ಮತ್ತನ್ಯನು ಮೀಕಾಯನ ಮಗ; ಮೀಕಾಯನು ಜಕ್ಕೂರನ ಮಗ; ಜಕ್ಕೂರನು ಆಸಾಫನ ಮಗ.)


ಮೀಕ ವಂಶಕ್ಕೆ ಸೇರಿದ ಉಜ್ಜೀಯು ಜೆರುಸಲೇಮಿನಲ್ಲಿ ಲೇವಿಯರಿಗೆಲ್ಲಾ ಮುಖ್ಯಸ್ಥನಾಗಿದ್ದನು. ಉಜ್ಜೀಯು ಬಾನೀಯ ಮಗ. (ಬಾನೀಯು ಹಷಬ್ಯನ ಮಗ; ಹಷಬ್ಯನು ಮತ್ತನ್ಯನ ಮಗ; ಮತ್ತನ್ಯನು ಮೀಕನ ಮಗ.) ಉಜ್ಜೀಯು ಆಸಾಫನ ಸಂತಾನಕ್ಕೆ ಸೇರಿದವನಾಗಿದ್ದನು.


ಆ ಸಮಯಕ್ಕೋಸ್ಕರವೇ ಕಟ್ಟಿದ ಮರದ ವೇದಿಕೆಯ ಮೇಲೆ ಎಜ್ರನು ನಿಂತಿದ್ದನು. ಅವನ ಬಲಬದಿಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ ಮತ್ತು ಮಾಸೇಯ; ಎಡಬದಿಯಲ್ಲಿ ಪೆದಾಯ, ಮಿಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ ಮತ್ತು ಮೆಷುಲ್ಲಾಮ್ ನಿಂತಿದ್ದರು.


ಶೆಲೆಮ್ಯನ ಮಗನಾದ ಹನನ್ಯನೂ ಮತ್ತು ಚಾಲಾಫನ ಆರನೆಯ ಮಗನಾದ ಹಾನೂನನೂ ಉಳಿದ ಭಾಗವನ್ನು ಮುಗಿಸಿದರು. ಬೆರೆಕ್ಯನ ಮಗನಾದ ಮೆಷುಲ್ಲಾಮ್ ತನ್ನ ಮನೆಯ ಮುಂದಿದ್ದ ಭಾಗವನ್ನು ಕಟ್ಟಿದನು.


ನಮ್ಮಿಂದ ಆ ಕಾಣಿಕೆಗಳನ್ನು ಅವರು ಸ್ವೀಕರಿಸುವಾಗ ಆರೋನನ ವಂಶದವರಾದ ಯಾಜಕನೊಬ್ಬನು ಅವರ ಜೊತೆಯಲ್ಲಿ ಇರಬೇಕು. ಲೇವಿಯರು ಆ ಕಾಣಿಕೆಗಳನ್ನು ದೇವಾಲಯಕ್ಕೆ ತಂದು ಅದರ ಉಗ್ರಾಣಗಳಲ್ಲಿ ಶೇಖರಿಸಿಡಬೇಕು.


ಜನರು ತಮ್ಮ ಅಪರಾಧ ಪ್ರಾಯಶ್ಚಿತ್ತ ಮತ್ತು ದೋಷಪರಿಹಾರದ ಸಮಯದಲ್ಲಿ ಹಣವನ್ನು ಕೊಟ್ಟರು. ಆದರೆ ಅಂತಹ ಹಣವನ್ನು ಕೆಲಸಗಾರರ ವೇತನಕ್ಕೆ ಉಪಯೋಗಿಸಲಿಲ್ಲ. ಆ ಹಣವು ಯಾಜಕರಿಗೆ ಸೇರಿದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು