Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:15 - ಪರಿಶುದ್ದ ಬೈಬಲ್‌

15 ಆ ದಿವಸಗಳಲ್ಲಿ ಯೆಹೂದದ ಜನರು ಸಬ್ಬತ್ ದಿನದಲ್ಲಿ ಕೆಲಸ ಮಾಡುವುದನ್ನು ನೋಡಿದೆನು. ಅವರು ದ್ರಾಕ್ಷಿಯನ್ನು ತುಳಿದು ದ್ರಾಕ್ಷಾರಸ ತಯಾರಿಸುತ್ತಿದ್ದರು. ದವಸಧಾನ್ಯಗಳನ್ನು ಕತ್ತೆಗಳ ಮೇಲೆ ಹೇರಿಸಿಕೊಂಡು ಹೋಗುತ್ತಿದ್ದರು. ಬೆಳೆಯನ್ನು ಮಾರಲು ಜೆರುಸಲೇಮಿಗೆ ಬರುತ್ತಿದ್ದರು. ನಾನು ಅವರನ್ನು ಕಟುವಾಗಿ ಎಚ್ಚರಿಸಿ ಇನ್ನು ಮುಂದೆ ಸಬ್ಬತ್ ದಿನದಲ್ಲಿ ಪಟ್ಟಣದೊಳಗೆ ಏನನ್ನೂ ತರಬಾರದೆಂದು ಆಜ್ಞಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ಕಾಲದಲ್ಲಿ, ಜನರು ಸಬ್ಬತ್‍ದಿನ ಜುದೇಯನಾಡಿನಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನು ಕಂಡೆ; ಅಂತೆಯೇ ಕಣದ ಕಾಳನ್ನು ಕೂಡಿಸಿ ಆ ಕಾಳು, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು, ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಜೆರುಸಲೇಮಿಗೆ ತರುವುದನ್ನು ಗಮನಿಸಿದೆ. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ಅವರನ್ನು ಗದರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಕಾಲದಲ್ಲಿ ಜನರು ಸಬ್ಬತ್‍ದಿವಸ ಯೆಹೂದ ದೇಶದಲ್ಲಿ ತೊಟ್ಟಿಯೊಳಗೆ ದ್ರಾಕ್ಷೆತುಳಿಯುವದನ್ನೂ ಕಣದ ಕಾಳನ್ನು ಕೂಡಿಸಿ ಆ ಕಾಳು ದ್ರಾಕ್ಷಾರಸ ದ್ರಾಕ್ಷೆ ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇವಿುಗೆ ತರುವದನ್ನೂ ಕಂಡು ಅವರು ಆ ಆಹಾರಪದಾರ್ಥಗಳನ್ನು ಮಾರುವದಕ್ಕೆ ಬಂದಾಗ ಅವರನ್ನು ಗದರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆ ದಿನಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ ದಿನಗಳಲ್ಲಿ ಕೆಲವರು ದ್ರಾಕ್ಷಿಯ ಆಲೆಗಳಲ್ಲಿ ಕೆಲಸಮಾಡುವುದನ್ನೂ, ಸಿವುಡುಗಳನ್ನು ತರುವುದನ್ನೂ, ಕತ್ತೆಗಳ ಮೇಲೆ ಹೇರಿಕೊಂಡು ಬರುವುದನ್ನೂ ಮತ್ತು ಸಬ್ಬತ್ ದಿನಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ, ದ್ರಾಕ್ಷಿಹಣ್ಣುಗಳನ್ನೂ, ಅಂಜೂರದ ಹಣ್ಣುಗಳನ್ನೂ, ಎಲ್ಲಾ ಹೊರೆಗಳನ್ನೂ ತರುವುದನ್ನು ನಾನು ಕಂಡೆನು. ಆದ್ದರಿಂದ, ವಿಶ್ರಾಂತಿಯ ದಿನದಲ್ಲಿ ಮಾರುವುದರ ವಿರೋಧವಾಗಿ ನಾನು ಎಚ್ಚರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:15
31 ತಿಳಿವುಗಳ ಹೋಲಿಕೆ  

“ಸಬ್ಬತ್ ದಿನದಲ್ಲಿ ಯಾವ ಕೆಲಸವನ್ನೂ ಮಾಡುವುದಿಲ್ಲವೆಂದು ಪ್ರಮಾಣಮಾಡುತ್ತೇವೆ. ನಮ್ಮ ಸುತ್ತಮುತ್ತಲಿನ ಜನರು ಸಬ್ಬತ್ ದಿನದಲ್ಲಿ ಮಾರಲು ದವಸಧಾನ್ಯವನ್ನಾಗಲಿ ಬೇರೆ ವಸ್ತುಗಳನ್ನಾಗಲಿ ತಂದರೆ ನಾವು ಸಬ್ಬತ್ ದಿನದಲ್ಲಿ ಮತ್ತು ಇತರ ಯಾವುದೇ ಹಬ್ಬದ ದಿನದಲ್ಲಿ ಅವುಗಳನ್ನು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷ ನಾವು ನೆಡುವುದೂ ಇಲ್ಲ. ಹೊಲದಲ್ಲಿ ಕೆಲಸ ಮಾಡುವುದೂ ಇಲ್ಲ. ನಮಗೆ ಬೇರೆಯವರು ಕೊಡಬೇಕಾಗಿರುವ ಸಾಲವನ್ನು ಏಳನೆಯ ವರ್ಷದಲ್ಲಿ ವಜಾ ಮಾಡುತ್ತೇವೆ.


ನಾನು ಆ ವ್ಯಾಪಾರಸ್ತರಿಗೆ, “ನೀವು ಬಾಗಿಲಿಗೆದುರಾಗಿ ನಗರದ ಹೊರಗೆ ರಾತ್ರಿ ಉಳಿದುಕೊಳ್ಳಬಾರದು. ಹಾಗೆ ಮಾಡಿದ್ದಲ್ಲಿ ನಿಮ್ಮನ್ನು ದಸ್ತಗಿರಿ ಮಾಡಬೇಕಾಗುವದು” ಎಂದು ಎಚ್ಚರಿಸಿದೆನು. ಅಂದಿನಿಂದ ಅವರು ಸಬ್ಬತ್ ದಿನದಲ್ಲಿ ನಗರಕ್ಕೆ ವ್ಯಾಪಾರಕ್ಕಾಗಿ ಬರುವುದನ್ನು ನಿಲ್ಲಿಸಿದರು.


“ನೀವು ವಾರದಲ್ಲಿ ಆರುದಿನ ಕೆಲಸ ಮಾಡುವಿರಿ. ಆದರೆ ಏಳನೆಯ ದಿನದಲ್ಲಿ ನೀವು ವಿಶ್ರಮಿಸಿಕೊಳ್ಳಬೇಕು. ನೀವು ಬಿತ್ತುವ ಮತ್ತು ಕೊಯ್ಯುವ ಸಮಯದಲ್ಲಿಯೂ ವಿಶ್ರಮಿಸಿಕೊಳ್ಳಬೇಕು.


ಸಬ್ಬತ್ತಿನ ವಿಷಯವಾಗಿ ಯೆಹೋವನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ನೀವು ಅನುಸರಿಸಿದರೆ ಮತ್ತು ಆ ವಿಶೇಷ ದಿನದಲ್ಲಿ ಸ್ವೇಚ್ಛೆಯಾಗಿ ನಡೆಯದಿದ್ದರೆ ಇದೆಲ್ಲಾ ನಿಮಗೆ ದೊರೆಯುವುದು. ಸಬ್ಬತ್‌ದಿವಸವನ್ನು ನೀವು ಸಂತಸದ ದಿವಸವೆಂದು ಕರೆಯಬೇಕು. ದೇವರ ಆ ವಿಶೇಷ ದಿವಸವನ್ನು ನೀವು ಸನ್ಮಾನಿಸಿ ಆ ದಿವಸದಲ್ಲಿ ನಿಮ್ಮ ಸ್ವಕಾರ್ಯಗಳನ್ನು ಮಾಡಕೂಡದು; ಹರಟೆ ಹೊಡೆಯಕೂಡದು.


“‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.


“‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್‌ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’”


ಆದರೆ ನೀವು ಎಚ್ಚರಿಕೆಯಿಂದ ನನ್ನ ಆಜ್ಞೆಯನ್ನು ಪಾಲಿಸಬೇಕು.’” ಇದು ಯೆಹೋವನ ನುಡಿ. “‘ನೀವು ಸಬ್ಬತ್‌ದಿನದಂದು ಜೆರುಸಲೇಮಿನ ದ್ವಾರಗಳ ಮೂಲಕ ಯಾವ ಭಾರವನ್ನೂ ತರಬಾರದು. ಸಬ್ಬತ್‌ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ಆ ದಿನ ನೀವು ಯಾವ ಕೆಲಸವನ್ನೂ ಮಾಡಬಾರದು.


“ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡಬೇಡಿ. ಅನ್ಯದೇವರುಗಳನ್ನು ಅನುಸರಿಸಬೇಡಿ. ಅವುಗಳನ್ನು ಪೂಜಿಸಬೇಡಿ; ಅವುಗಳ ಸೇವೆ ಮಾಡಬೇಡಿ. ಇಲ್ಲವಾದರೆ ನೀವು ಖಂಡಿತವಾಗಿ ನಾಶವಾಗುವಿರಿ.


“ಕೆಲಸ ಮಾಡುವುದಕ್ಕೆ ಆರು ದಿನಗಳಿವೆ. ಆದರೆ ಏಳನೆಯ ದಿನವು ನಿಮಗೆ ಬಹು ವಿಶೇಷವಾದ ವಿಶ್ರಾಂತಿ ದಿನವಾಗಿರುವುದು. ಆ ವಿಶೇಷ ದಿನದಲ್ಲಿ ವಿಶ್ರಮಿಸುವುದರ ಮೂಲಕ ನೀವು ಯೆಹೋವನನ್ನು ಸನ್ಮಾನಿಸುವಿರಿ. ಏಳನೆಯ ದಿನದಲ್ಲಿ ಕೆಲಸಮಾಡುವ ವ್ಯಕ್ತಿಯು ಸಂಹರಿಸಲ್ಪಡಬೇಕು.


ನೀನು ಅವರನ್ನು ಎಚ್ಚರಿಸಿದೆ. ನನ್ನ ಕಡೆಗೆ ತಿರುಗಿರಿ ಎಂದು ಎಚ್ಚರಿಸಿದೆ. ಆದರೆ ಅವರು ಗರ್ವಿಷ್ಟರಾಗಿ ನಿನ್ನ ಆಜ್ಞೆಗಳನ್ನು ನಿರಾಕರಿಸಿದರು. ನಿನ್ನ ಆಜ್ಞೆಗಳನ್ನು ಅನುಸರಿಸುವ ಜನರು ನಿಜವಾಗಿಯೂ ಬಾಳುವರು. ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಮುರಿದುಹಾಕಿದರು; ಅವರು ಹಠಮಾರಿಗಳಾಗಿ ನಿನಗೆ ವಿಮುಖರಾದರು; ನಿನ್ನ ಮಾತುಗಳನ್ನು ಕೇಳದೆಹೋದರು.


ಈ ವಿಷಯದಲ್ಲಿ ನಿಮ್ಮಲ್ಲಿ ಯಾರೂ ಕ್ರಿಸ್ತನಲ್ಲಿ ಸಹೋದರನಾದವನನ್ನು ವಂಚಿಸಿ ಕೇಡುಮಾಡಬಾರದು. ನಾವು ಈಗಾಗಲೇ ನಿಮಗೆ ಹೇಳಿದಂತೆ ಮತ್ತು ಎಚ್ಚರಿಕೆ ನೀಡಿದಂತೆ ಇವೆಲ್ಲವುಗಳ ವಿಷಯದಲ್ಲಿ ದೇವರು ದಂಡಿಸುತ್ತಾನೆ.


ಪ್ರಭುವಿಗೋಸ್ಕರ ನಾನು ನಿಮಗೆ ಇದನ್ನು ಹೇಳುತ್ತೇನೆ ಮತ್ತು ಎಚ್ಚರಿಸುತ್ತೇನೆ. ಅವಿಶ್ವಾಸಿಗಳಂತೆ ಇನ್ನು ಮೇಲೆ ಜೀವಿಸದಿರಿ. ಅವರ ಆಲೋಚನೆಗಳು ನಿಷ್ಪ್ರಯೋಜಕವಾಗಿವೆ.


ಮತ್ತೆ ನಾನು ಪ್ರತಿಯೊಬ್ಬನನ್ನೂ ಎಚ್ಚರಿಸುತ್ತೇನೆ. ನೀವು ಸುನ್ನತಿ ಮಾಡಿಸಿಕೊಂಡರೆ, ಧರ್ಮಶಾಸ್ತ್ರವನ್ನೆಲ್ಲಾ ಅನುಸರಿಸಬೇಕು.


ನಿಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ನಾನು ಎಲ್ಲಾ ಜನಾಂಗಗಳವರಿಗೆ ಅಂದರೆ ಯೆಹೂದ್ಯರಿಗೂ ಮತ್ತು ಗ್ರೀಕರಿಗೂ ತಿಳಿಸಿದೆನು. ನಮ್ಮ ಪ್ರಭುವಾದ ಯೇಸುವಿನಲ್ಲಿ ನಂಬಿಕೆ ಇಡಬೇಕೆಂದು ನಾನು ಅವರೆಲ್ಲರಿಗೂ ತಿಳಿಸಿದೆನು.


ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, “ಈ ದುಷ್ಟ ಸಂತತಿಯಿಂದ ತಪ್ಪಿಸಿಕೊಳ್ಳಿ” ಎಂದು ಬೇಡಿಕೊಂಡನು.


ಯೆಹೋವನು ಹೇಳುವುದೇನೆಂದರೆ, “ನನ್ನ ಜನರೇ, ನಾನು ಮಾಡಿದ್ದೇನು ತಿಳಿಸಿರಿ. ನಿಮಗೆ ವಿರೋಧವಾಗಿ ನಾನು ಏನಾದರೂ ಮಾಡಿದ್ದೇನೋ? ನಿಮಗೆ ಜೀವಿಸಲು ಕಷ್ಟವಾಗುವಂತೆ ಮಾಡಿದ್ದೇನೋ?


“ಯೆಹೂದ್ಯರಲ್ಲಿ ಅಳಿದುಳಿದವರೇ, ಯೆಹೋವನು ನಿಮಗೆ, ‘ಈಜಿಪ್ಟಿಗೆ ಹೋಗಬೇಡಿರಿ.’ ಎಂದು ಹೇಳಿದ್ದಾನೆ, ನಾನು ಈಗಲೇ ನಿಮಗೆ ಮುನ್ನೆಚ್ಚರಿಕೆಯನ್ನು ಕೊಡುತ್ತೇನೆ.


ದೇವರು ಹೀಗೆನ್ನುತ್ತಾನೆ: “ನನ್ನ ಜನರೇ, ಇಸ್ರೇಲರೇ, ನನಗೆ ಕಿವಿಗೊಡಿರಿ! ನಾನು ನಿಮಗೆ ವಿರುದ್ಧವಾಗಿ ಸಾಕ್ಷಿ ಹೇಳುವೆನು. ದೇವರಾದ ನಾನೇ ನಿಮ್ಮ ದೇವರು!


ಆತನು ಅವರನ್ನು ತನ್ನ ಕಡೆಗೆ ತಿರುಗಿಕೊಳ್ಳುವಂತೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು. ಪ್ರವಾದಿಗಳು ಜನರನ್ನು ಎಚ್ಚರಿಸಿದರೂ ಅವರ ಮಾತುಗಳಿಗೆ ಅವರು ಗಮನಕೊಡಲಿಲ್ಲ.


ಜೆರುಸಲೇಮ್ ನಗರದಲ್ಲಿ ತೂರ್ ದೇಶದ ಕೆಲವರು ವಾಸಿಸುತ್ತಿದ್ದರು. ಅವರು ಸಬ್ಬತ್ ದಿನದಲ್ಲಿ ಮೀನು ಮತ್ತು ಇತರ ವಸ್ತುಗಳನ್ನು ನಗರದೊಳಕ್ಕೆ ತಂದು ಮಾರುತ್ತಿದ್ದರು. ಯೆಹೂದ್ಯರು ಅವರಿಂದ ಕೊಂಡುಕೊಳ್ಳುತ್ತಿದ್ದರು.


ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗದಿದ್ದರೆ ಕೆಡುಕರ ಪರವಾಗಿರುವೆ. ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗಿದ್ದರೆ ಕೆಡುಕರಿಗೆ ವಿರೋಧವಾಗಿರುವೆ.


ವರ್ತಕರಾದ ನೀವು ಹೇಳುವುದೇನೆಂದರೆ, “ಅಮಾವಾಸ್ಯೆ ಯಾವಾಗ ಮುಗಿಯುವುದು? ಆಗ ನಾವು ಧಾನ್ಯವನ್ನು ಮಾರಾಟ ಮಾಡುವೆವು. ಸಬ್ಬತ್ ಯಾವಾಗ ಮುಗಿಯುವುದು? ಆಗ ನಾವು ನಮ್ಮ ಗೋದಿಯನ್ನು ಮಾರಾಟ ಮಾಡಲು ತರುವೆವು. ಅದರ ಬೆಲೆಯನ್ನು ಅಧಿಕಗೊಳಿಸಿ ಅಳತೆಯನ್ನು ಕಡಿಮೆ ಮಾಡುವೆವು. ತ್ರಾಸನ್ನು ಕಡಿಮೆ ಮಾಡಿ ಜನರಿಗೆ ಮೋಸ ಮಾಡುವೆವು.


ತರುವಾಯ ಯೆಹೋವನು ಮೋಶೆಗೆ ಹೀಗೆಂದನು:


ಇಸ್ರೇಲರು ಸಬ್ಬತ್ ದಿನವನ್ನು ಜ್ಞಾಪಿಸಿಕೊಂಡು ಅದನ್ನು ವಿಶೇಷ ದಿನವನ್ನಾಗಿ ಮಾಡಿಕೊಳ್ಳತಕ್ಕದ್ದು. ಅವರು ಇದನ್ನು ಎಂದೆಂದೂ ಮಾಡತಕ್ಕದ್ದು. ಇದು ಎಂದೆಂದಿಗೂ ಮುಂದುವರಿಯುವ ಒಡಂಬಡಿಕೆ.


“ದೇವಾಲಯವನ್ನು ನಡಿಸುವ ಖರ್ಚಿನ ಜವಾಬ್ದಾರಿಕೆಯನ್ನು ನಾವು ಹೊರುತ್ತೇವೆ. ನಾವು ಒಂದು ಬೆಳ್ಳಿನಾಣ್ಯವನ್ನು ಪ್ರತಿವರ್ಷ ನಮ್ಮ ದೇವರಿಗೆ ಕಾಣಿಕೆ ಕೊಡುತ್ತೇವೆ. ಇದು ದೇವಾಲಯದ ಕೆಲಸಕಾರ್ಯಗಳಿಗೆ ಉಪಯೋಗಿಲ್ಪಡಬೇಕು.


ಅದು ನಿನ್ನ ಬೆಳೆಯನ್ನು ಕೂಡಿಸಿ, ನಿನ್ನ ಕಣಕ್ಕೆ ಹೊತ್ತುಕೊಂಡು ಬರುವುದೆಂದು ಭರವಸವಿಡುವಿಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು