Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:17 - ಪರಿಶುದ್ದ ಬೈಬಲ್‌

17 ನಾನು ಯೆಹೂದ ಪ್ರಾಂತದ ಗೌರವಸ್ಥ ಜನರಿಗೆ, “ಇದು ತಪ್ಪು, ನೀವು ತಪ್ಪು ಕೆಲಸ ಮಾಡುತ್ತಿದ್ದೀರಿ. ನೀವು ಸಬ್ಬತ್ ದಿನವನ್ನು ಅಶುದ್ಧವನ್ನಾಗಿ ಮಾಡುತ್ತಿದ್ದೀರಿ. ಅದನ್ನು ಸಾಮಾನ್ಯ ದಿನದಂತೆ ಮಾಡುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ನಾನು ಯೆಹೂದದ ಶ್ರೀಮಂತರಿಗೆ, “ನೀವು ಮಾಡುವುದು ಎಂಥ ದುಷ್ಕೃತ್ಯ, ನೀವು ಸಬ್ಬತ್ ದಿನವನ್ನು ಅಶುದ್ಧ ಮಾಡುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಗ ನಾನು ಯೆಹೂದ ಶ್ರೀಮಂತರಿಗೆ, “ನೀವು ಮಾಡುವುದು ಎಂಥ ದುಷ್ಕೃತ್ಯ! ನೀವು ಸಬ್ಬತ್‍ದಿನವನ್ನು ಅಶುದ್ಧಮಾಡುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ನಾನು ಯೆಹೂದ ಶ್ರೀಮಂತರಿಗೆ - ನೀವು ಮಾಡುವದು ಎಂಥ ದುಷ್ಕೃತ್ಯ! ನೀವು ಸಬ್ಬತ್‍ದಿನವನ್ನು ಅಶುದ್ಧಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ ಅವರಿಗೆ, “ಸಬ್ಬತ್ ದಿನವನ್ನು ನೀವು ಅಪವಿತ್ರ ಮಾಡುವ ಈ ಕೆಟ್ಟ ಕಾರ್ಯವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:17
14 ತಿಳಿವುಗಳ ಹೋಲಿಕೆ  

ಆಗ ನಾನು ಅಧಿಕಾರಿಗಳಿಗೆ, “ನೀವು ದೇವರ ಆಲಯವನ್ನು ನಿರ್ಲಕ್ಷಿಸಿದ್ದೇನು?” ಎಂದು ಪ್ರಶ್ನಿಸಿದೆನು. ಅನಂತರ ನಾನು ಲೇವಿಯರನ್ನು ಒಟ್ಟಾಗಿ ಸೇರಿಸಿ ತಮ್ಮತಮ್ಮ ಸ್ಥಳಗಳಿಗೆ ಹೋಗಿ ತಮಗೆ ನೇಮಕವಾದ ಕರ್ತವ್ಯ ಪಾಲಿಸುವಂತೆ ಹೇಳಿದೆನು.


“ನೀವು ತಪ್ಪು ಕೆಲಸಮಾಡಿದಿರಿ” ಎಂದು ಅವರನ್ನು ಶಪಿಸಿದೆನು. ಕೆಲವರಿಗೆ ಹೊಡೆದೆನು; ಕೆಲವರ ಕೂದಲು ಎಳೆದು ಕಿತ್ತುಬಿಟ್ಟೆನು. ದೇವರ ಹೆಸರಿನಲ್ಲಿ ಪ್ರತಿಜ್ಞೆ ಮಾಡಲು ಅವರನ್ನು ಒತ್ತಾಯಪಡಿಸಿ, “ನೀವು ಆ ಜನರ ಹೆಣ್ಣುಮಕ್ಕಳನ್ನು ಮದುವೆಯಾಗಬಾರದು. ಅನ್ಯರ ಹೆಣ್ಣುಮಕ್ಕಳು ನಿಮ್ಮ ಗಂಡುಮಕ್ಕಳನ್ನು ಮದುವೆಯಾಗದಂತೆ ನೋಡಿಕೊಳ್ಳಿರಿ.


ಯಾಕೋಬಿನ ನಾಯಕರೇ, ಇಸ್ರೇಲಿನ ಪ್ರಧಾನರೇ, ನನಗೆ ಕಿವಿಗೊಡಿರಿ! ಸರಿಯಾದ ಜೀವಿತವನ್ನು ನೀವು ದ್ವೇಷಿಸುತ್ತೀರಿ. ನೆಟ್ಟಗಿರುವದನ್ನು ಡೊಂಕಾಗಿ ನೀವು ಮಾಡುವಿರಿ.


ಆಗ ನಾನು ಹೇಳಿದ್ದೇನೆಂದರೆ, “ಯಾಕೋಬಿನ ನಾಯಕರೇ, ಇಸ್ರೇಲಿನ ಅಧಿಪತಿಗಳೇ, ನನ್ನ ಮಾತನ್ನು ಕೇಳಿರಿ. ನ್ಯಾಯ ಏನು ಎಂದು ನಿಮಗೆ ತಿಳಿದಿರಬೇಕು.


ಈ ಸಂಗತಿಗಳನ್ನು ರಾಜನಿಗೂ ರಾಣಿಗೂ ಹೇಳಿರಿ: “ನಿಮ್ಮ ಸಿಂಹಾಸನಗಳಿಂದ ಕೆಳಗಿಳಿದು ಬನ್ನಿ. ನಿಮ್ಮ ಸುಂದರವಾದ ಕಿರೀಟಗಳು ನಿಮ್ಮ ತಲೆಯಿಂದ ಉರುಳಿ ಕೆಳಗೆ ಬಿದ್ದಿವೆ” ಎಂದು ಹೇಳಿರಿ.


ನಾನು ಯೆಹೂದದ ಜನನಾಯಕರ ಹತ್ತಿರ ಹೋಗಿ ಅವರೊಂದಿಗೆ ಮಾತನಾಡುವೆನು. ಜನನಾಯಕರು ಯೆಹೋವನ ಮಾರ್ಗಗಳನ್ನು ನಿಶ್ಚಯವಾಗಿ ತಿಳಿದುಕೊಂಡಿರುವರು. ಅವರು ತಮ್ಮ ಯೆಹೋವನ ನ್ಯಾಯವಿಧಿಗಳನ್ನು ಅರಿತುಕೊಂಡಿರುತ್ತಾರೆ” ಅಂದುಕೊಂಡೆನು. ಆದರೆ ಈ ಜನನಾಯಕರುಗಳೆಲ್ಲಾ ದೇವರ ಸೇವೆಯನ್ನು ತೊರೆದುಬಿಟ್ಟಿದ್ದರು. ಅವರು ದೇವರಿಗೆ ವಿರೋಧಿಗಳಾದರು.


ಸೊದೋಮಿನ ಅಧಿಪತಿಗಳೇ, ಯೆಹೋವನ ಸಂದೇಶವನ್ನು ಕೇಳಿರಿ. ಗೊಮೋರದ ಜನರೇ, ಆತನ ಉಪದೇಶವನ್ನು ಕೇಳಿರಿ.


ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗದಿದ್ದರೆ ಕೆಡುಕರ ಪರವಾಗಿರುವೆ. ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗಿದ್ದರೆ ಕೆಡುಕರಿಗೆ ವಿರೋಧವಾಗಿರುವೆ.


ನನ್ನ ಕೋಪವು ಶಾಂತವಾದ ಬಳಿಕ ಧನಿಕರ ಮತ್ತು ಅಧಿಕಾರಿಗಳ ಬಳಿಗೆ ಹೋಗಿ, “ನೀವು ನಿಮ್ಮ ಸ್ವಂತ ಜನರಿಗೆ ಕೊಟ್ಟಿರುವ ಸಾಲಕ್ಕೆ ಬಡ್ಡಿಯನ್ನು ಕೊಡಲು ಬಲವಂತ ಮಾಡುತ್ತಿದ್ದೀರಿ. ನೀವು ಕೂಡಲೇ ಅದನ್ನು ನಿಲ್ಲಿಸಬೇಕು” ಎಂದೆನು. ಅನಂತರ ನಾನು ಎಲ್ಲಾ ಜನರನ್ನು ಒಟ್ಟುಗೂಡಿಸಿ,


ಜೆರುಸಲೇಮ್ ನಗರದಲ್ಲಿ ತೂರ್ ದೇಶದ ಕೆಲವರು ವಾಸಿಸುತ್ತಿದ್ದರು. ಅವರು ಸಬ್ಬತ್ ದಿನದಲ್ಲಿ ಮೀನು ಮತ್ತು ಇತರ ವಸ್ತುಗಳನ್ನು ನಗರದೊಳಕ್ಕೆ ತಂದು ಮಾರುತ್ತಿದ್ದರು. ಯೆಹೂದ್ಯರು ಅವರಿಂದ ಕೊಂಡುಕೊಳ್ಳುತ್ತಿದ್ದರು.


“ನೀವು ನಿಮ್ಮ ಸಹೋದರನನ್ನು ಮನಸ್ಸಿನಲ್ಲಿ ದ್ವೇಷಿಸಬಾರದು. ನಿಮ್ಮ ಸಹೋದರನು ಏನಾದರೂ ತಪ್ಪುಮಾಡಿದರೆ, ಅವನೊಡನೆ ಅದರ ಕುರಿತು ಮಾತಾಡು. ಅವನ ಅಪರಾಧದಲ್ಲಿ ನೀವು ಪಾಲುಹೊಂದದಂತೆ ನೇರವಾಗಿ ಗದರಿಸಿ. ಆಗ ನೀವು ಅವನನ್ನು ಕ್ಷಮಿಸಬಹುದು.


“‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು