ನೆಹೆಮೀಯ 2:10 - ಪರಿಶುದ್ದ ಬೈಬಲ್10 ನಾನು ಏನು ಮಾಡುತ್ತಿದ್ದೇನೆಂದು ಸನ್ಬಲ್ಲಟ್ ಮತ್ತು ಟೋಬೀಯ ಎಂಬವರಿಬ್ಬರು ಕೇಳಿಸಿಕೊಂಡರು. ಇಸ್ರೇಲ್ ಜನರಿಗೆ ಸಹಾಯ ಮಾಡಲು ಬರುತ್ತಿದ್ದಾರೆಂಬ ವಿಷಯವು ಅವರನ್ನು ತಳಮಳಗೊಳಿಸಿತು ಮತ್ತು ಅವರಿಗೆ ಸಿಟ್ಟೂ ಬಂದಿತು. ಸನ್ಬಲ್ಲಟನು ಹೋರೋನಿನವನು ಮತ್ತು ಟೋಬೀಯನು ಅಮ್ಮೋನಿಯ ಅಧಿಕಾರಿಯಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇಸ್ರಾಯೇಲರ ಹಿತಚಿಂತಕನೊಬ್ಬನು ಬಂದಿದ್ದಾನೆಂಬ ವರ್ತಮಾನವು ಹೋರೋನ್ ಪಟ್ಟಣದವನಾದ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನಿಗೂ ತಲುಪಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇಸ್ರಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ ಅಮ್ಮೋನ್ ದೇಶದವನಾದ ತೊಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬ ಹೊಟ್ಟೆಕಿಚ್ಚುಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇಸ್ರಾಯೇಲ್ಯರ ಹಿತಚಿಂತಕನೊಬ್ಬನು ಬಂದನೆಂಬ ವರ್ತಮಾನವು ಹೋರೋನಿನ ಸನ್ಬಲ್ಲಟನಿಗೂ ಅಮ್ಮೋನ್ದೇಶದವನಾದ ಟೋಬೀಯ ಎಂಬ ದಾಸನಿಗೂ ಮುಟ್ಟಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇಸ್ರಾಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬಾ ವಿಚಲಿತರಾದರು. ಅಧ್ಯಾಯವನ್ನು ನೋಡಿ |
ಆದರೆ ಅದಕ್ಕಿಂತ ಮೊದಲು ಎಲ್ಯಾಷೀಬನು ದೇವಾಲಯದ ಒಂದು ಕೋಣೆಯನ್ನು ಟೋಬೀಯನಿಗೆ ಕೊಟ್ಟಿದ್ದನು. ಎಲ್ಯಾಷೀಬನು ದೇವಾಲಯದ ಉಗ್ರಾಣದ ಮುಖ್ಯಸ್ಥನಾಗಿದ್ದನು ಮತ್ತು ಟೋಬೀಯನ ಪ್ರಾಣಸ್ನೇಹಿತನಾಗಿದ್ದನು. ಆ ಕೋಣೆಯಲ್ಲಿ ಧಾನ್ಯಸಮರ್ಪಣೆಯ ಉಳಿದ ಭಾಗ, ಧೂಪ, ದೇವಾಲಯದ ಪಾತ್ರೆಗಳು, ದಶಮಾಂಶ, ದವಸಧಾನ್ಯಗಳು, ಹೊಸ ದ್ರಾಕ್ಷಾರಸ, ಎಣ್ಣೆ ಇವುಗಳನ್ನೆಲ್ಲಾ ಗಾಯಕರಿಗೂ ಲೇವಿಯರಿಗೂ ಮತ್ತು ದ್ವಾರಪಾಲಕರಿಗೂ ಕೊಡುವುದಕ್ಕಾಗಿ ಅಲ್ಲಿಟ್ಟಿದ್ದರು. ಅಲ್ಲಿ ಯಾಜಕರಿಗೆ ಉಡುಗೊರೆಗಳನ್ನು ಸಹ ಇಟ್ಟಿದ್ದರು. ಅದೇ ಕೋಣೆಯನ್ನು ಎಲ್ಯಾಷೀಬನು ಟೋಬೀಯನಿಗೆ ಕೊಟ್ಟಿದ್ದನು.
ಅರಸನ ನಂತರ ರಾಜ್ಯದಲ್ಲಿ ಯೆಹೂದಿಯಾದ ಮೊರ್ದೆಕೈಯೇ ಮುಖ್ಯ ವ್ಯಕ್ತಿಯಾಗಿದ್ದನು. ರಾಜ್ಯದಲ್ಲಿ ಅವನಿಗೆ ಎರಡನೇ ಸ್ಥಾನವಿತ್ತು. ಯೆಹೂದ್ಯರೊಳಗೆ ಅವನು ಪ್ರಮುಖ ವ್ಯಕ್ತಿಯಾಗಿದ್ದನು. ಯೆಹೂದ್ಯರೆಲ್ಲರೂ ಅವನನ್ನು ಬಹಳವಾಗಿ ಗೌರವಿಸುತ್ತಿದ್ದರು. ತನ್ನ ಜನರ ಒಳಿತಿಗಾಗಿ (ಜನರಿಗೋಸ್ಕರವಾಗಿ) ಮೊರ್ದೆಕೈ ಬಹಳವಾಗಿ ಪ್ರಯಾಸಪಟ್ಟಿದ್ದರಿಂದ ಜನರು ಅವನನ್ನು ಸನ್ಮಾನಿಸಿದರು; ಮೊರ್ದೆಕೈ ಯೆಹೂದ್ಯರೆಲ್ಲರಿಗೆ ಸಮಾಧಾನವನ್ನು ತಂದನು.
ಮಿಚ್ಫ ನಗರದಲ್ಲಿ ಉಳಿದೆಲ್ಲ ಜನರನ್ನು ಇಷ್ಮಾಯೇಲನು ವಶಪಡಿಸಿಕೊಂಡನು. ಅವರಲ್ಲಿ ರಾಜನ ಹೆಣ್ಣಮಕ್ಕಳು ಮತ್ತು ಅಲ್ಲಿದ್ದ ಬೇರೆ ಜನರೂ ಸೇರಿದ್ದರು. ಆ ಜನರನ್ನು ನೋಡಿಕೊಳ್ಳಲೆಂದು ನೆಬೂಜರದಾನನು ಗೆದಲ್ಯನನ್ನು ನೇಮಿಸಿದ್ದನು. ನೆಬೂಜರದಾನನು ಬಾಬೆಲಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಇಷ್ಮಾಯೇಲನು ಆ ಜನರನ್ನು ಸೆರೆಹಿಡಿದು ಅವರನ್ನು ತೆಗೆದುಕೊಂಡು ಅಮ್ಮೋನ್ಯರ ಸೀಮೆಗೆ ಹೊರಟನು.