Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:6 - ಪರಿಶುದ್ದ ಬೈಬಲ್‌

6 ರಾಣಿಯು ರಾಜನ ಪಕ್ಕದಲ್ಲಿ ಕುಳಿತಿದ್ದಳು. ರಾಜನೂ ರಾಣಿಯೂ, “ನಿನಗೆ ಹೋಗಿ ಬರಲು ಎಷ್ಟು ಸಮಯ ಬೇಕಾಗುವುದು? ನೀನು ಹಿಂದಕ್ಕೆ ಯಾವಾಗ ಬರುವಿ?” ಎಂದು ವಿಚಾರಿಸಿದರು. ನನ್ನನ್ನು ಕಳುಹಿಸಲು ರಾಜನಿಗೆ ಸಂತೋಷವಿದ್ದುದರಿಂದ ನಾನೊಂದು ಸಮಯವನ್ನು ಸೂಚಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ರಾಣಿಯು ಅರಸನ ಹತ್ತಿರದಲ್ಲೇ ಕುಳಿತುಕೊಂಡಿದ್ದಳು. ಅರಸನು ನನಗೆ, “ಪ್ರಯಾಣಕ್ಕೆ ನಿನಗೆಷ್ಟು ಕಾಲ ಬೇಕು? ಯಾವಾಗ ಹಿಂದಿರುಗುವಿ” ಎಂದು ವಿಚಾರಿಸಿದಾಗ ನಾನು ಕಾಲವನ್ನು ಸೂಚಿಸಲು ಅರಸನು ಒಪ್ಪಿಕೊಂಡು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ರಾಜರ ಹತ್ತಿರದಲ್ಲೇ ಕುಳಿತುಕೊಂಡಿದ್ದಳು ರಾಣಿ. ರಾಜ, “ಪ್ರಯಾಣಕ್ಕೆ ನಿನಗೆ ಎಷ್ಟುಕಾಲಬೇಕು? ಯಾವಾಗ ಹಿಂದಿರುಗುವೆ,” ಎಂದು ವಿಚಾರಿಸಿದ. ನಾನು ಕಾಲವನ್ನು ಸೂಚಿಸಿದೆ. ಅವನು ಒಪ್ಪಿಕೊಂಡು ಹೋಗಿಬರಲು ಅಪ್ಪಣೆಕೊಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ರಾಣಿಯು ಅರಸನ ಹತ್ತಿರದಲ್ಲೇ ಕೂತುಕೊಂಡಿದ್ದಳು. ಅರಸನು - ಪ್ರಯಾಣಕ್ಕೆ ನಿನಗೆಷ್ಟು ಕಾಲಬೇಕು? ಯಾವಾಗ ಹಿಂದಿರುಗುವಿ ಎಂದು ವಿಚಾರಿಸಿದಾಗ ನಾನು ಕಾಲವನ್ನು ಸೂಚಿಸಲು ಅವನು ಒಪ್ಪಿಕೊಂಡು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ರಾಣಿಯು ಅವನ ಬಳಿಯಲ್ಲಿ ಕುಳಿತಿರುವಾಗ ಅರಸನು ನನಗೆ, “ನಿನ್ನ ಪ್ರಯಾಣ ಎಷ್ಟು ದಿವಸ? ನೀನು ತಿರುಗಿ ಯಾವಾಗ ಬರುತ್ತೀ?” ಎಂದನು. ನಾನು ಅರಸನಿಗೆ ಸಮಯ ಗೊತ್ತು ಮಾಡಿದೆನು. ಆಗ ಅರಸನು ನನ್ನನ್ನು ಕಳುಹಿಸಲು ಸಮ್ಮತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:6
9 ತಿಳಿವುಗಳ ಹೋಲಿಕೆ  

ಇದೆಲ್ಲಾ ನಡೆಯುತ್ತಿರುವಾಗ ನಾನು ಜೆರುಸಲೇಮಿನಲ್ಲಿರಲಿಲ್ಲ. ನಾನು ಬಾಬಿಲೋನಿನ ಅರಸನ ಬಳಿಗೆ ಹಿಂತಿರುಗಿದ್ದೆನು. ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ನಾನು ಅವನ ಬಳಿಗೆ ಹೋದೆನು. ಸ್ವಲ್ಪಕಾಲವಾದ ಬಳಿಕ ಅರಸನ ಅಪ್ಪಣೆಯೊಂದಿಗೆ ನಾನು ಹಿಂತಿರುಗಿ ಜೆರುಸಲೇಮಿಗೆ ಬಂದೆನು.


ಅವರು ಕೇಳುವ ಮೊದಲೇ ಅವರಿಗೆ ಏನುಬೇಕು ಎಂಬುದನ್ನು ಅರಿತುಕೊಳ್ಳುವೆನು. ಅವರ ಪ್ರಾರ್ಥನೆ ಮುಗಿಯುವ ಮೊದಲೇ ಅವರಿಗೆ ಸಹಾಯ ಮಾಡುವೆನು.


ಯೆಹೂದ ಪ್ರಾಂತ್ಯಕ್ಕೆ ನನ್ನನ್ನು ರಾಜ್ಯಪಾಲನಾಗಿ ನೇಮಿಸಿದಂದಿನಿಂದ, ನಾನಾಗಲಿ ನನ್ನ ಸಹೋದರರಾಗಲಿ ರಾಜ್ಯಪಾಲರಿಗಾಗಿ ಪ್ರತ್ಯೇಕಿಸಿದ ಆಹಾರವನ್ನು ತಿನ್ನಲಿಲ್ಲ; ನನಗಾಗಿ ಆಹಾರವನ್ನು ಕೊಂಡುಕೊಳ್ಳಲು ಜನರಿಂದ ತೆರಿಗೆ ವಸೂಲಿಮಾಡಲಿಲ್ಲ. ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆ ವರ್ಷದ ತನಕ ನಾನು ರಾಜ್ಯಪಾಲನಾಗಿದ್ದೆನು. ಹೀಗೆ ಹನ್ನೆರಡು ವರ್ಷ ಯೆಹೂದದ ರಾಜ್ಯಪಾಲನಾಗಿದ್ದೆನು.


ಬಹಳ ವರ್ಷಗಳಿಂದ ನಿಮ್ಮ ಪಟ್ಟಣಗಳು ಹಾಳಾಗಿ ಬಿದ್ದಿವೆ. ಆದರೆ ಹೊಸ ಪಟ್ಟಣಗಳು ಏಳುವವು. ಅವುಗಳ ಅಸ್ತಿವಾರಗಳು ಬಹಳ ವರ್ಷ ಬಾಳುವವು. ನೀವು “ಬೇಲಿ ಸರಿಮಾಡುವವರು” ಎಂದು ಕರೆಯಲ್ಪಡುವಿರಿ; “ಮನೆಗಳನ್ನು, ರಸ್ತೆಗಳನ್ನು ನಿರ್ಮಿಸುವವರು” ಎಂದು ನೀವು ಕರೆಯಲ್ಪಡುವಿರಿ.


ಆಗ ಅರಸನು, “ನಾನು ನಿನಗೆ ಏನುಮಾಡಬೇಕೆಂದು ಅಪೇಕ್ಷಿಸುವೆ?” ಎಂದು ಕೇಳಿದಾಗ ಅವನಿಗೆ ಉತ್ತರಿಸುವ ಮೊದಲು ನಾನು ಪರಲೋಕದ ದೇವರಿಗೆ ಪ್ರಾರ್ಥಿಸಿದೆನು.


ಆ ಸಮಯದಲ್ಲಿ ಹಾಳುಬಿದ್ದ ಹಳೇ ಪಟ್ಟಣಗಳು ಮತ್ತೆ ಕಟ್ಟಲ್ಪಡುವವು. ಅವುಗಳು ಮುಂಚೆ ಹೇಗಿದ್ದವೋ ಹಾಗೆಯೇ ಹೊಸದಾಗಿ ಕಾಣಿಸುವವು. ಹಲವು ವರ್ಷಗಳ ಕಾಲ ಕೆಡವಲ್ಪಟ್ಟು ಹಾಳುಬಿದ್ದ ಪಟ್ಟಣಗಳು ಹೊಸದಾಗಿ ಕಾಣಿಸುವವು.


ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”


ಅನಂತರ ಅರಸನಿಗೆ, “ನಾನು ನಿನಗೆ ಮೆಚ್ಚಿಕೆಯಾಗಿದ್ದಲ್ಲಿ ಮತ್ತು ನಿನಗೆ ಈ ವಿಷಯ ಸರಿಕಂಡಲ್ಲಿ ದಯಮಾಡಿ ಯೆಹೂದ ಪ್ರಾಂತ್ಯದಲ್ಲಿ ನನ್ನ ಪೂರ್ವಿಕರ ಸಮಾಧಿಗಳಿರುವ ಜೆರುಸಲೇಮಿಗೆ ನನ್ನನ್ನು ಕಳುಹಿಸು. ನಾನು ಅಲ್ಲಿಗೆ ಹೋಗಿ ಜೆರುಸಲೇಮನ್ನು ಮತ್ತೆ ಕಟ್ಟಬೇಕು” ಎಂದೆನು.


“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು