7 ಆಮೇಲೆ “ರಾಜನೇ, ನನಗೆ ಸಹಾಯವನ್ನು ಮಾಡಲು ನೀನು ಇಚ್ಫಿಸುವುದಾದರೆ ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರಾಂತ್ಯದ ರಾಜ್ಯಪಾಲರಿಗೆ ಪತ್ರಗಳನ್ನು ಬರೆದುಕೊಟ್ಟರೆ ನಾನು ಯೆಹೂದಕ್ಕೆ ಅವರ ಪ್ರಾಂತ್ಯಗಳ ಮೂಲಕವಾಗಿ ಸುರಕ್ಷಿತವಾಗಿ ಹೋಗಲು ಸಾಧ್ಯವಾಗುವುದು.
ಅರಸನಾದ ಅರ್ತಷಸ್ತನೆಂಬ ನಾನು ಈ ರಾಜಾಜ್ಞೆಯನ್ನು ಹೊರಡಿಸುತ್ತಿದ್ದೇನೆ: ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ರಾಜಧನವನ್ನು ಇಟ್ಟುಕೊಂಡಿರುವ ಎಲ್ಲಾ ಸಂಸ್ಥಾನಾಧಿಕಾರಿಗಳಿಗೆ ನನ್ನ ಆಜ್ಞೆ ಏನೆಂದರೆ, ಎಜ್ರನಿಗೆ ಬೇಕಾದುದನ್ನು ಅವರು ಒದಗಿಸಬೇಕು. ಎಜ್ರನು ಪರಲೋಕದ ದೇವರ ಯಾಜಕನೂ ಆತನ ಕಟ್ಟಳೆಗಳ ಬೋಧಕನೂ ಆಗಿದ್ದಾನೆ. ನನ್ನ ಈ ಆಜ್ಞೆಗೆ ಸಂಪೂರ್ಣವಾಗಿಯೂ ತ್ವರಿತವಾಗಿಯೂ ವಿಧೇಯರಾಗಬೇಕು.
ಯೂಫ್ರೇಟೀಸ್ ನದಿಯ ಪಶ್ಚಿಮದಲ್ಲಿರುವ ರಾಜ್ಯಪಾಲರಿಗೆ ಅರಸನು ಕೊಟ್ಟ ಪತ್ರವನ್ನು ಕೊಟ್ಟೆನು. ರಾಜನು ನನ್ನೊಂದಿಗೆ ಸಿಪಾಯಿಗಳನ್ನೂ ಸೈನ್ಯಾಧಿಪತಿಗಳನ್ನೂ ಅಶ್ವ ಸೈನಿಕರನ್ನೂ ಕಳುಹಿಸಿದ್ದನು.
ಅರಸನಾದ ಅರ್ತಷಸ್ತನು ಕೊಟ್ಟಿದ್ದ ರಾಜಾಜ್ಞೆಯ ಪತ್ರವನ್ನು ಯೂಫ್ರೇಟೀಸ್ ನದಿಯ ಪಶ್ಚಿಮಪ್ರಾಂತ್ಯದ ರಾಜ್ಯಪಾಲರಿಗೂ ಸಂಸ್ಥಾನಾಧಿಕಾರಿಗಳಿಗೂ ಕೊಟ್ಟಾಗ ಅವರು ಇಸ್ರೇಲ್ ಜನರಿಗೂ ಅವರ ದೇವಾಲಯಕ್ಕೂ ಸಂಪೂರ್ಣ ಸಹಕಾರವನ್ನೂ ಬೆಂಬಲವನ್ನೂ ಕೊಟ್ಟರು.
ಹೀಗಿರುವದರಿಂದ, ದಾರ್ಯಾವೇಷನಾದ ನಾನು, ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಕ್ಕೆ ರಾಜ್ಯಪಾಲನಾಗಿರುವ ತತ್ತೆನೈ ಎಂಬ ನಿನಗೂ ಶೆತರ್ಬೋಜೆನೈ ಮತ್ತು ಆ ಪ್ರಾಂತ್ಯದ ಎಲ್ಲಾ ಅಧಿಕಾರಿಗಳಿಗೂ ಆಜ್ಞೆ ಕೊಡುವದೇನೆಂದರೆ, ಜೆರುಸಲೇಮಿನಿಂದ ನೀವು ದೂರವಾಗಿರಿ.
ನಾವು ಪ್ರಯಾಣ ಮಾಡುವಾಗ ದಾರಿಯಲ್ಲಿ ಶತ್ರುಗಳಿದ್ದುದರಿಂದ ನಮ್ಮ ಸಂರಕ್ಷಣೆಗಾಗಿ ಸಿಪಾಯಿಗಳನ್ನು ಮತ್ತು ರಾಹುತರನ್ನು ಅರಸನಿಂದ ಕೇಳಲು ನನಗೆ ಸಂಕೋಚವಾಯಿತು. ಯಾಕೆಂದರೆ, “ನಮ್ಮ ದೇವರು ತನ್ನನ್ನು ನಂಬಿದವರೊಂದಿಗಿದ್ದಾನೆ; ಆತನಿಂದ ದೂರಹೋಗುವವರ ಮೇಲೆ ಆತನು ಕೋಪವುಳ್ಳವನಾಗಿದ್ದಾನೆ” ಎಂದು ರಾಜನಾದ ಅರ್ತಷಸ್ತನಿಗೆ ನಾವು ಹೇಳಿದ್ದೆವು.
ಗಿಬ್ಯೋನ್ ಮತ್ತು ಮಿಚ್ಫದ ಜನರು ಅಲ್ಲಿಂದಾಚೆಗೆ ಗೋಡೆಯನ್ನು ಕಟ್ಟಿದರು. ಗಿಬ್ಯೋನಿನ ಮೆಲೆಟ್ಯ ಎಂಬವನು ಮತ್ತು ಮೇರೋನೋತಿನ ಯಾದೋನ್ ಎಂಬವನು ಈ ಕೆಲಸವನ್ನು ಮಾಡಿದರು. ಗಿಬ್ಯೋನ್ ಮತ್ತು ಮೇರೋನೋತ್ ಯೂಫ್ರೇಟೀಸ್ ನದಿಯ ಪಶ್ಚಿಮಪ್ರಾಂತ್ಯದ ರಾಜ್ಯಪಾಲರುಗಳ ಆಡಳಿತಕ್ಕೆ ಒಳಪಟ್ಟಿತ್ತು.