Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:14 - ಪರಿಶುದ್ದ ಬೈಬಲ್‌

14 ರೇಕಾಬನ ಮಗನಾದ ಮಲ್ಕೀಯನು ತಿಪ್ಪೆಬಾಗಿಲನ್ನು ರಿಪೇರಿಮಾಡಿಸಿದನು. ಇವನು ಬೇತ್ ಹಕ್ಕೆರಿಮಿನ ರಾಜ್ಯಪಾಲನಾಗಿದ್ದನು. ಅವನು ಬಾಗಿಲಿಗೆ ಕದ, ತಿರುಗಣಿ, ಅಗುಳಿಗಳನ್ನಿಟ್ಟು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತಿಪ್ಪೆಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಬೇತ್ ಹಕ್ಕೆರೆಮಿನ ಅರ್ಧ ಪಟ್ಟಣಗಳ ಒಡೆಯನೂ, ರೇಕಾಬನ ಮಗನೂ ಆದ ಮಲ್ಕೀಯ. ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ತಿಪ್ಪೆಬಾಗಿಲನ್ನು ಸರಿಪಡಿಸಿದವನು ಬೇತಹಕ್ಕೆರೆಮಿನ ನಾಡೊಡೆಯನೂ ರೇಕಾಬನ ಮಗನೂ ಆದ ಮಲ್ಕೀಯನು; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತಿಪ್ಪೆಬಾಗಲನ್ನು ಜೀರ್ಣೋದ್ಧಾರಮಾಡಿದವನು ಬೇತ್‍ಹಕ್ಕೆರೆವಿುನ ನಾಡೊಡೆಯನೂ ರೇಕಾಬನ ಮಗನೂ ಆದ ಮಲ್ಕೀಯನು; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತಿಪ್ಪೆ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಬೇತ್ ಹಕ್ಕೆರೆಮಿನ ನಾಡೊಡೆಯನೂ, ರೇಕಾಬನ ಮಗನೂ ಆದ ಮಲ್ಕೀಯನೂ, ಇವರು ಅದರ ಗೋಡೆಯನ್ನು ಕಟ್ಟಿ, ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:14
9 ತಿಳಿವುಗಳ ಹೋಲಿಕೆ  

ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ.


ಕತ್ತಲೆಯಲ್ಲಿಯೇ ಕಣಿವೆಯ ಬಾಗಿಲಿನ ಮೂಲಕ ಹೊರಟು ಕೆಡವಲ್ಪಟ್ಟಿದ್ದ ಜೆರುಸಲೇಮಿನ ಗೋಡೆಗಳನ್ನು, ಸುಟ್ಟುಹೋಗಿರುವ ಅದರ ಬಾಗಿಲುಗಳನ್ನು ನೋಡುತ್ತಾ ಹೆಬ್ಬಾವು ಬಾವಿಯ ಬಳಿಗೂ ತಿಪ್ಪೆಬಾಗಿಲಿನ ಬಳಿಗೂ ಸವಾರಿಮಾಡಿಕೊಂಡು ಬಂದೆನು.


ಅರ್ಧ ಜೆರುಸಲೇಮಿನ ರಾಜ್ಯಪಾಲನಾಗಿದ್ದ ಹೂರನ ಮಗನಾದ ರೆಫಾಯನು ಮುಂದಿನ ಭಾಗವನ್ನು ಕಟ್ಟಿ ಮುಗಿಸಿದನು.


ನಾನು ಯೆಹೂದದ ನಾಯಕರಿಗೆ ಗೋಡೆಯ ಮೇಲೆ ನಿಂತುಕೊಳ್ಳಲು ಹೇಳಿದೆನು. ಅಲ್ಲದೆ ದೇವರಿಗೆ ಕೃತಜ್ಞತಾಸ್ತುತಿ ಮಾಡಲು ಗಾಯಕರ ಎರಡು ದೊಡ್ಡ ಗುಂಪುಗಳನ್ನು ಆರಿಸಿಕೊಂಡೆನು. ಒಂದು ಗುಂಪಿನವರು ಮೆರವಣಿಗೆಯಿಂದ ಬಲಗಡೆಯಿದ್ದ ತಿಪ್ಪೆಬಾಗಿಲಿನ ಕಡೆಹೋದರು.


ಬಾಣ ಮತ್ತು ರೇಕಾಬ್ ಎಂಬವರು ಸೌಲನ ಮಗನ ಸೈನ್ಯದಲ್ಲಿ, ಸೇನಾಧಿಪತಿಗಳಾಗಿದ್ದರು. ಅವರಿಬ್ಬರೂ ಬೇರೋತಿನವನಾದ ರಿಮ್ಮೋನನ ಮಕ್ಕಳು. ಅವರು ಬೆನ್ಯಾಮೀನ್ ಕುಲದವರಾಗಿದ್ದರು. ಬೇರೋತ್ ಪಟ್ಟಣವು ಬೆನ್ಯಾಮೀನ್ ಕುಲದವರಿಗೆ ಸೇರಿತ್ತು.


ಶಿಮ್ಮನು ಮೀಕಾಯೇಲನ ಮಗ. ಮೀಕಾಯೇಲನು ಬಾಸೇಯನ ಮಗ. ಬಾಸೇಯನು ಮಲ್ಕೀಯನ ಮಗ.


ಯೇಹುವು ಅಲ್ಲಿಂದ ಹೋದ ಮೇಲೆ, ರೇಕಾಬನ ಮಗನಾದ ಯೆಹೋನಾದಾಬನನ್ನು ಸಂಧಿಸಿದನು. ಯೆಹೋನಾದಾಬನು ಯೇಹುವನ್ನು ಸಂಧಿಸಲು ಬರುತ್ತಿದ್ದನು. ಯೇಹು ಯೆಹೋನಾದಾಬನನ್ನು ಅಭಿನಂದಿಸಿ ಅವನಿಗೆ, “ನಾನು ನಿನಗೆ ನಂಬಿಗಸ್ತನಾಗಿರುವಂತೆ ನೀನು ನನಗೆ ನಂಬಿಗಸ್ಥನಾದ ಸ್ನೇಹಿತನಾಗಿರುವಿಯಾ?” ಎಂದು ಕೇಳಿದನು. ಯೆಹೋನಾದಾಬನು, “ಹೌದು, ನಾನು ನಿನಗೆ ನಂಬಿಗಸ್ಥನಾದ ಸ್ನೇಹಿತನು” ಎಂದು ಉತ್ತರಿಸಿದನು. ಯೇಹು, “ನೀನು ನಂಬಿಗಸ್ಥನಾದರೆ, ನಿನ್ನ ಕೈಯನ್ನು ಕೊಡು” ಎಂದನು. ನಂತರ ಯೇಹು ಹೊರಬಂದು, ಯೆಹೋನಾದಾಬನನ್ನು ರಥದೊಳಕ್ಕೆ ಎಳೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು