Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:15 - ಪರಿಶುದ್ದ ಬೈಬಲ್‌

15 ಮಿಚ್ಪ ಜಿಲ್ಲಾಧಿಕಾರಿಯಾದ ಶಲ್ಲೂನನು ಬುಗ್ಗೆಬಾಗಿಲನ್ನು ರಿಪೇರಿಮಾಡಿದನು. ಶಲ್ಲೂನನು ಕೊಲ್ಹೋಜಿಯನ ಮಗ. ಬಾಗಿಲಿಗೆ ಕದ, ತಿರುಗಣಿ, ಅಗುಳಿಗಳನ್ನಿಟ್ಟು ಭದ್ರಪಡಿಸಿದನು. ನಂತರ ಗೋಡೆಯನ್ನು ರಾಜನ ತೋಟದ ಸಮೀಪದಲ್ಲಿದ್ದ ಸಿಲೋವಕೊಳದ ತನಕ ಮುಂದುವರಿಸಿ ದಾವೀದನಗರಕ್ಕೆ ಪ್ರವೇಶಿಸುವ ಮೆಟ್ಟಿಲುಗಳ ತನಕ ಗೋಡೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬುಗ್ಗೆ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಮಿಚ್ಪದ ಒಡೆಯನೂ, ಕೊಲ್ಹೋಜೆಯ ಮಗನೂ ಆದ ಶಲ್ಲೂನ್. ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿ ದಾವೀದ ನಗರದಿಂದ ಇಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಕೊಳದ ಗೋಡೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಬುಗ್ಗೆಬಾಗಿಲನ್ನು ದುರಸ್ತಿಪಡಿಸಿದವನು ಮಿಚ್ಪದ ನಾಡೊಡೆಯನೂ ಕೊಲ್ಹೋಜೆಯ ಮಗನೂ ಆದ ಶಲ್ಲೂನ್; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ, ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿ ದಾವೀದನಗರದಿಂದಿಳಿದು ಬರುವ ಸೋಪಾನಗಳ ಈಚೆ, ಅರಸನ ತೋಟದ ಬಳಿಯಲ್ಲಿರುವ ಶಿಲೋವ ಕೊಳದ ಗೋಡೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಬುಗ್ಗೆಬಾಗಲನ್ನು ಜೀರ್ಣೋದ್ಧಾರ ಮಾಡಿದವನು ವಿುಚ್ಪದ ನಾಡೊಡೆಯನೂ ಕೊಲ್ಹೋಜೆಯ ಮಗನೂ ಆದ ಶಲ್ಲೂನ್; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ ಕದ ತಿರುಗಣಿ ಅಗುಳಿಗಳನ್ನು ಹಚ್ಚಿ ದಾವೀದನಗರದಿಂದಿಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಕೊಳದ ಗೋಡೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಬುಗ್ಗೆಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಮಿಚ್ಪದ ನಾಡೊಡೆಯನೂ, ಕೊಲ್ಹೋಜೆಯ ಮಗನೂ ಆದ ಶಲ್ಲೂನ್, ಇವನು ಅದರ ಗೋಡೆಯನ್ನು ಕಟ್ಟಿ, ಅದಕ್ಕೆ ಮಾಳಿಗೆಯನ್ನು ಹಾಕಿ, ಕದ ತಿರುಗಣಿ ಅಗುಳಿಗಳನ್ನು ಹಚ್ಚಿ, ದಾವೀದನ ನಗರದಿಂದಿಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಶಿಲೋವ ಕೊಳದ ಗೋಡೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:15
19 ತಿಳಿವುಗಳ ಹೋಲಿಕೆ  

ಯೇಸು ಆ ಮನುಷ್ಯನಿಗೆ, “ಹೋಗಿ ಸಿಲೋವ ಕೊಳದಲ್ಲಿ ತೊಳೆದುಕೊ” ಎಂದು ಹೇಳಿದನು. (ಸಿಲೋವ ಅಂದರೆ “ಕಳುಹಿಸಲ್ಪಟ್ಟವನು.”) ಅಂತೆಯೇ ಅವನು ಹೋಗಿ ತೊಳೆದುಕೊಂಡನು. ಆ ಕೂಡಲೇ ಅವನಿಗೆ ದೃಷ್ಟಿಬಂದಿತು.


ನನ್ನ ಒಡೆಯನು ಹೀಗೆಂದನು: “ಈ ಜನರು ನಿಧಾನವಾಗಿ ಹರಿಯುವ ಸಿಲೋವ ಕೊಳದ ನೀರನ್ನು ಸ್ವೀಕರಿಸುವುದಿಲ್ಲ. ಇವರು ರೆಚೀನ್ ಮತ್ತು ರೆಮಲ್ಯನ ಮಗನೊಂದಿಗೆ ಸಂತೋಷದಲ್ಲಿದ್ದಾರೆ.


ಅವರು ಬುಗ್ಗೆ ಬಾಗಿಲಿನೊಳಗೆ ಪ್ರವೇಶಿಸಿ, ಮೆಟ್ಟಲುಗಳನ್ನು ಹತ್ತಿ ದಾವೀದ ನಗರದ ತನಕ ಹೋದರು. ಈಗ ಅವರು ನಗರದ ಗೋಡೆಯನ್ನು ಹತ್ತಿ ದಾವೀದನ ಮನೆಯ ಮೇಲ್ಗಡೆಯಿಂದ, “ನೀರು” ಎಂಬ ದ್ವಾರದ ಕಡೆಗೆ ಹೋದರು.


ಸಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ, ಸತ್ತುಹೋದ ಹದಿನೆಂಟು ಮಂದಿಯ ಕುರಿತು ನಿಮ್ಮ ಅಭಿಪ್ರಾಯವೇನು? ಜೆರುಸಲೇಮಿನಲ್ಲಿ ವಾಸವಾಗಿದ್ದ ಇತರರೆಲ್ಲರಿಗಿಂತಲೂ ಅವರು ಹೆಚ್ಚು ಪಾಪಿಗಳಾಗಿದ್ದರೆಂದು ಭಾವಿಸುತ್ತೀರೋ?


ಅಲ್ಲಿಂದ ಬುಗ್ಗೆಬಾಗಿಲಿಗೂ ಅರಸನ ಕೊಳಕ್ಕೂ ಬಂದೆನು. ಇಲ್ಲಿಂದ ಮುಂದಕ್ಕೆ ಹೋಗಲು ನನ್ನ ಕುದುರೆಗೆ ಸಾಧ್ಯಾವಾಗಲಿಲ್ಲ;


ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಫಕ್ಕೆ ಹೋದನು. ಯೆರೆಮೀಯನು ಗೆದಲ್ಯನ ಸಂಗಡ ದೇಶದಲ್ಲಿ ಉಳಿದ ಜನರ ಮಧ್ಯೆ ವಾಸಮಾಡಿದನು.


ರೇಕಾಬನ ಮಗನಾದ ಮಲ್ಕೀಯನು ತಿಪ್ಪೆಬಾಗಿಲನ್ನು ರಿಪೇರಿಮಾಡಿಸಿದನು. ಇವನು ಬೇತ್ ಹಕ್ಕೆರಿಮಿನ ರಾಜ್ಯಪಾಲನಾಗಿದ್ದನು. ಅವನು ಬಾಗಿಲಿಗೆ ಕದ, ತಿರುಗಣಿ, ಅಗುಳಿಗಳನ್ನಿಟ್ಟು ಭದ್ರಪಡಿಸಿದನು.


ಹಲ್ಲೊಹೇಷನ ಮಗನಾದ ಶಲ್ಲೂಮನು ಮುಂದಿನ ಭಾಗವನ್ನು ರಿಪೇರಿ ಮಾಡಿದನು. ಅವನ ಹೆಣ್ಣುಮಕ್ಕಳು ಅವನಿಗೆ ಸಹಾಯ ಮಾಡಿದರು. ಶಲ್ಲೂಮನು ಜೆರುಸಲೇಮಿನ ಇನ್ನೊಂದು ಭಾಗದ ರಾಜ್ಯಪಾಲನಾಗಿದ್ದನು.


ಅರ್ಧ ಜೆರುಸಲೇಮಿನ ರಾಜ್ಯಪಾಲನಾಗಿದ್ದ ಹೂರನ ಮಗನಾದ ರೆಫಾಯನು ಮುಂದಿನ ಭಾಗವನ್ನು ಕಟ್ಟಿ ಮುಗಿಸಿದನು.


ಗಿಬ್ಯೋನ್ ಮತ್ತು ಮಿಚ್ಫದ ಜನರು ಅಲ್ಲಿಂದಾಚೆಗೆ ಗೋಡೆಯನ್ನು ಕಟ್ಟಿದರು. ಗಿಬ್ಯೋನಿನ ಮೆಲೆಟ್ಯ ಎಂಬವನು ಮತ್ತು ಮೇರೋನೋತಿನ ಯಾದೋನ್ ಎಂಬವನು ಈ ಕೆಲಸವನ್ನು ಮಾಡಿದರು. ಗಿಬ್ಯೋನ್ ಮತ್ತು ಮೇರೋನೋತ್ ಯೂಫ್ರೇಟೀಸ್ ನದಿಯ ಪಶ್ಚಿಮಪ್ರಾಂತ್ಯದ ರಾಜ್ಯಪಾಲರುಗಳ ಆಡಳಿತಕ್ಕೆ ಒಳಪಟ್ಟಿತ್ತು.


ಹಿಜ್ಕೀಯನು ಗೀಹೋನ್ ಬುಗ್ಗೆಯನ್ನು ತಡೆದು ಆ ನೀರು ಪಶ್ಚಿಮದ ಕಡೆಯಲ್ಲಿದ್ದ ದಾವೀದ ನಗರಕ್ಕೆ ನೇರವಾಗಿ ಇಳಿದು ಬರುವಂತೆ ಮಾಡಿದನು. ಅವನು ಕೈಹಾಕಿದ ಕಾರ್ಯಗಳೆಲ್ಲವೂ ಸಫಲವಾದವು.


ಆಗ ನೆಬೂಕದ್ನೆಚ್ಚರನ ಸೇನೆಯು ನಗರದ ಗೋಡೆಯಲ್ಲಿ ಒಂದು ರಂಧ್ರವನ್ನು ಕೊರೆದರು. ಅಂದಿನ ರಾತ್ರಿ ರಾಜನಾದ ಚಿದ್ಕೀಯ ಮತ್ತು ಅವನ ಸೈನಿಕರೆಲ್ಲರೂ ಓಡಿಹೋದರು. ಅವರು ರಾಜನ ತೋಟದ ಎರಡು ಗೋಡೆಗಳ ಮಧ್ಯಭಾಗದ ರಹಸ್ಯ ಬಾಗಿಲಿನ ಮೂಲಕ ಓಡಿಹೋದರು. ಬಾಬಿಲೋನ್ ಸೇನೆಯು ನಗರವನ್ನು ಸುತ್ತುವರಿದಿತ್ತು. ಆದರೆ ಚಿದ್ಕೀಯ ಮತ್ತು ಅವನ ಸೇನೆಯು ಮರುಭೂಮಿಯ ರಸ್ತೆಯಲ್ಲಿ ತಪ್ಪಿಸಿಕೊಂಡರು.


ಮಿಚ್ಛೆಯಲ್ಲಿ ಎಲ್ಲಾ ಇಸ್ರೇಲರು ಒಟ್ಟುಗೂಡುತ್ತಿದ್ದಾರೆ ಎಂಬ ಸಮಾಚಾರ ಬೆನ್ಯಾಮೀನ್ಯರಿಗೆ ತಿಳಿಯಿತು. ಇಸ್ರೇಲರು, “ಈ ಭಯಾನಕ ಕೃತ್ಯ ಹೇಗೆ ನಡೆಯಿತು. ಎಂಬುದನ್ನು ನಮಗೆ ಹೇಳು” ಎಂದು ಕೇಳಿದರು.


ಇಸ್ರೇಲಿನ ಜನರೆಲ್ಲರೂ ಒಟ್ಟುಗೂಡಿದರು. ಮಿಚ್ಛೆ ನಗರದಲ್ಲಿ ಯೆಹೋವನ ಎದುರಿಗೆ ನಿಲ್ಲುವುದಕ್ಕಾಗಿ ಅವರು ಒಂದು ಕಡೆ ಸೇರಿದ್ದರು. ಇಸ್ರೇಲಿನ ಎಲ್ಲ ಕಡೆಯಿಂದಲೂ ಜನರು ಬಂದರು. ಗಿಲ್ಯಾದಿನಲ್ಲಿದ್ದ ಇಸ್ರೇಲರು ಸಹ ಅಲ್ಲಿ ಬಂದಿದ್ದರು.


ಆಮೇಲೆ ನಾನು ಎಲ್ಲಾ ಜನರಿಗೆ, “ನಮ್ಮ ದುರವಸ್ಥೆಯನ್ನು ನೀವು ನೋಡುತ್ತಿದ್ದೀರಿ. ಜೆರುಸಲೇಮ್ ಒಂದು ಹಾಳು ದಿಬ್ಬವಾಗಿದೆ; ಅದರ ಬಾಗಿಲುಗಳು ಸುಟ್ಟು ಬೂದಿಯಾಗಿವೆ. ಬನ್ನಿರಿ, ನಾವು ಜೆರುಸಲೇಮಿನ ಪೌಳಿಗೋಡೆಗಳನ್ನು ತಿರುಗಿ ಕಟ್ಟೋಣ. ಆಗ ನಾವು ಇನ್ನೆಂದಿಗೂ ನಾಚಿಕೆಗೆ ಗುರಿಯಾಗುವುದಿಲ್ಲ” ಎಂದು ಹೇಳಿದೆನು.


ಮಿಚ್ಪದ ರಾಜ್ಯಪಾಲನಾದ ಏಜೆರನು ಮುಂದಿನ ಭಾಗವನ್ನು ರಿಪೇರಿ ಮಾಡಿದನು. ಏಜೆರನು ಯೇಷೂವನ ಮಗ. ಇವನು ಆಯುಧ ಕೋಣೆಯಿಂದ ಹಿಡಿದು ಗೋಡೆಯ ಮೂಲೆಯ ತನಕ ರಿಪೇರಿಮಾಡಿದನು.


ನೀರಿನ ಕೊಳಗಳನ್ನು ಮಾಡಿಸಿ ಮರಗಳಿಗೆ ನೀರನ್ನು ಹಾಯಿಸಿದೆ.


ದಾವೀದನು ಕೋಟೆಯಲ್ಲಿ ನೆಲೆಸಿದ್ದನು. ಅವನು ಆ ಕೋಟೆಗೆ “ದಾವೀದನ ನಗರ”ವೆಂದು ಕರೆದನು. ದಾವೀದನು ಮಿಲ್ಲೋವನ್ನು ಕಟ್ಟಿಸಿದನು. ಅವನು ನಗರದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು