Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:16 - ಪರಿಶುದ್ದ ಬೈಬಲ್‌

16 ಅಜ್ಬೂಕನ ಮಗನಾದ ನೆಹೆಮೀಯನು ಗೋಡೆಯ ಮುಂದಿನ ಭಾಗವನ್ನು ಕಟ್ಟಿದನು. ಇವನು ಬೇತ್ಚೂರ್ ಜಿಲ್ಲೆಯ ಅರ್ಧಭಾಗಕ್ಕೆ ಅಧಿಕಾರಿಯಾಗಿದ್ದನು. ದಾವೀದನ ಸಮಾಧಿಯ ತನಕ ಗೋಡೆಯನ್ನು ಮುಂದುವರಿಸಿ ವೀರರ ಮನೆಗಳ ತನಕ ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇವನ ನಂತರ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವರು ಬೇತ್ಚೂರಿನ ಒಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇವನ ಆಚೆ ಅಂದರೆ, ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ, ಇವುಗಳವರೆಗೂ ದುರಸ್ತುಮಾಡಿದವನು ಬೇತ್ಚೂರಿನ ಅರೆನಾಡೊಡೆಯನೂ ಅಜ್ಬೂಕನ ಮಗನೂ ಆದ ನೆಹೆಮೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇವನ ಆಚೆ ಅಂದರೆ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯರ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವನು ಬೇತ್ಚೂರಿನ ಅರೆನಾಡೊಡೆಯನೂ ಅಜ್ಬೂಕನ ಮಗನೂ ಆದ ನೆಹೆಮೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇವನ ಆಚೆ ಎಂದರೆ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯರ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವನು ಬೇತ್ ಚೂರಿನ ಅರೆನಾಡೊಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:16
18 ತಿಳಿವುಗಳ ಹೋಲಿಕೆ  

“ನನ್ನ ಸಹೋದರರೇ, ನಮ್ಮ ಪಿತೃವಾದ ದಾವೀದನ ಬಗ್ಗೆ ನಾನು ನಿಮಗೆ ನಿಜವಾಗಿಯೂ ಹೇಳಬಲ್ಲೆನು. ಅವನು ಸತ್ತುಹೋದನು ಮತ್ತು ಅವನಿಗೆ ಸಮಾಧಿಯಾಯಿತು. ಅವನ ಸಮಾಧಿಯು ನಮ್ಮ ಮಧ್ಯದಲ್ಲಿ ಇಂದಿನವರೆಗೂ ಇದೆ.


ಹಲ್ಲೊಹೇಷನ ಮಗನಾದ ಶಲ್ಲೂಮನು ಮುಂದಿನ ಭಾಗವನ್ನು ರಿಪೇರಿ ಮಾಡಿದನು. ಅವನ ಹೆಣ್ಣುಮಕ್ಕಳು ಅವನಿಗೆ ಸಹಾಯ ಮಾಡಿದರು. ಶಲ್ಲೂಮನು ಜೆರುಸಲೇಮಿನ ಇನ್ನೊಂದು ಭಾಗದ ರಾಜ್ಯಪಾಲನಾಗಿದ್ದನು.


ಅರ್ಧ ಜೆರುಸಲೇಮಿನ ರಾಜ್ಯಪಾಲನಾಗಿದ್ದ ಹೂರನ ಮಗನಾದ ರೆಫಾಯನು ಮುಂದಿನ ಭಾಗವನ್ನು ಕಟ್ಟಿ ಮುಗಿಸಿದನು.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಹಿಜ್ಕೀಯನು ಮಾಡಿದ ಇತರ ಎಲ್ಲಾ ಮಹಾಕಾರ್ಯಗಳನ್ನೂ ಅವನು ನಗರಕ್ಕೆ ಕೆರೆಯಿಂದ ಕೊಳವೆಗಳ ಮೂಲಕ ನೀರಿನ ವ್ಯವಸ್ಥೆಮಾಡಿದ್ದನ್ನೂ ಬರೆಯಲಾಗಿದೆ.


ಆಗ ಯೆಹೋವನು ಯೆಶಾಯನಿಗೆ, “ನೀನೂ ನಿನ್ನ ಮಗನಾದ ಶೆಯಾರ್ ಯಾಶೂಬನೂ ಆಹಾಜನ ಬಳಿಗೆ ಹೋಗಿ ಮಾತನಾಡಬೇಕು. ನೀರು ಮೇಲಿನ ಕೊಳಕ್ಕೆ ಸೇರುವ ಸ್ಥಳಕ್ಕೆ ಹೋಗು. ಇದು ಅಗಸನ ಹೊಲಕ್ಕೆ ಹೋಗುವ ಮಾರ್ಗದಲ್ಲಿದೆ.


ರೇಕಾಬನ ಮಗನಾದ ಮಲ್ಕೀಯನು ತಿಪ್ಪೆಬಾಗಿಲನ್ನು ರಿಪೇರಿಮಾಡಿಸಿದನು. ಇವನು ಬೇತ್ ಹಕ್ಕೆರಿಮಿನ ರಾಜ್ಯಪಾಲನಾಗಿದ್ದನು. ಅವನು ಬಾಗಿಲಿಗೆ ಕದ, ತಿರುಗಣಿ, ಅಗುಳಿಗಳನ್ನಿಟ್ಟು ಭದ್ರಪಡಿಸಿದನು.


ಯೆಹೂದದ ಜನರಿಗೆ ಈ ಊರುಗಳನ್ನೂ ಕೊಡಲಾಯಿತು: ಹಲ್ಹೂಲ್, ಬೇತ್‌ಚೂರ್, ಗೆದೋರ್,


ನೋಡಿ, ಅದು ಸೊಲೊಮೋನನ ಪಲ್ಲಕ್ಕಿ. ಅದರ ಸುತ್ತಲೂ ಅರವತ್ತು ಮಂದಿ ಸೈನಿಕರಿದ್ದಾರೆ. ಅವರು ಇಸ್ರೇಲಿನ ಸೈನಿಕರು!


ಅವನು ತನಗಾಗಿ ದಾವೀದನಗರದಲ್ಲಿ ಮಾಡಿಸಿದ್ದ ಸಮಾಧಿಯಲ್ಲಿಯೇ ಅವನಿಗೆ ಸಮಾಧಿಮಾಡಿದರು. ನಾನಾತರದ ಪರಿಮಳದ್ರವ್ಯಗಳಿಂದ ತುಂಬಿದ್ದ ಹಾಸಿಗೆಯ ಮೇಲೆ ಮಲಗಿಸಿದ್ದರು. ಆಮೇಲೆ ಅವನ ಗೌರವಾರ್ಥವಾಗಿ ಒಂದು ದೊಡ್ಡ ಬೆಂಕಿಕೊಂಡವನ್ನು ಮಾಡಿ ಪರಿಮಳಧೂಪವನ್ನು ಸುಟ್ಟರು.


ಶಮ್ಮೈಯನ ಮಗ ಮಾವೋನ್, ಇವನ ಮಗನು ಬೇತ್ಸೂರ್.


ಮುಂದಿನ ಭಾಗವನ್ನು ಲೇವಿಯರು ಕಟ್ಟಿದರು. ಅವರ ಮುಖ್ಯಸ್ತನು ಬಾನಿಯ ಮಗನಾದ ರೆಹೂಮನು. ಕೆಯೀಲ ಎಂಬ ಅರ್ಧ ಜಿಲ್ಲೆಗೆ ರಾಜ್ಯಪಾಲನಾಗಿದ್ದ ಹಷಬ್ಯನು ಇದರ ಮುಂದಿನ ಭಾಗದ ಗೋಡೆಯನ್ನು ಕಟ್ಟಿದನು. ಇವನು ತನ್ನ ಜಿಲ್ಲೆಯಲ್ಲಿ ಮಾತ್ರ ರಿಪೇರಿ ಮಾಡಿದನು.


ನೀರಿನ ಕೊಳಗಳನ್ನು ಮಾಡಿಸಿ ಮರಗಳಿಗೆ ನೀರನ್ನು ಹಾಯಿಸಿದೆ.


ದಾವೀದ ನಗರದ ಕೋಟೆಗೋಡೆಗಳಲ್ಲಿ ಬಿರುಕುಗಳು ಉಂಟಾಗುವವು. ಆ ಬಿರುಕುಗಳನ್ನು ನೀವು ಸ್ಪಷ್ಟವಾಗಿ ಕಾಣಬಹುದು. ಅದರೊಳಗಿರುವ ಮನೆಗಳನ್ನು ಲೆಕ್ಕ ಮಾಡಬಹುದು. ಆ ಮನೆಗಳ ಕಲ್ಲುಗಳನ್ನು ತೆಗೆದು ಬಿರುಕು ಮುಚ್ಚಲಾಗುವದು. ಎರಡು ಸಾಲು ಕೋಟೆಗೋಡೆಗಳ ಮಧ್ಯದಲ್ಲಿ ಹಳೆಯ ಕಾಲುವೆಯ ಮೂಲಕ ನೀರನ್ನು ತರಿಸಿ ಆ ನೀರನ್ನು ಉಳಿತಾಯ ಮಾಡುವಿರಿ. ಇವೆಲ್ಲವನ್ನು ನೀವು ನಿಮ್ಮನ್ನು ಸಂರಕ್ಷಿಸಿಕೊಳ್ಳುವದಕ್ಕೋಸ್ಕರ ಮಾಡುವಿರಿ. ಆದರೆ ಇವೆಲ್ಲವನ್ನು ನಿರ್ಮಿಸಿದ ದೇವರ ಮೇಲೆ ನೀವು ನಂಬಿಕೆ ಇಡುವದಿಲ್ಲ. ಇದನ್ನು ಬಹಳ ಕಾಲದ ಹಿಂದೆ ನಿರ್ಮಿಸಿದ ದೇವರನ್ನು ನೀವು ನೋಡುವದಿಲ್ಲ.


ಅಲ್ಲಿಂದ ಬುಗ್ಗೆಬಾಗಿಲಿಗೂ ಅರಸನ ಕೊಳಕ್ಕೂ ಬಂದೆನು. ಇಲ್ಲಿಂದ ಮುಂದಕ್ಕೆ ಹೋಗಲು ನನ್ನ ಕುದುರೆಗೆ ಸಾಧ್ಯಾವಾಗಲಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು