Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:17 - ಪರಿಶುದ್ದ ಬೈಬಲ್‌

17 ಗೋಡೆ ಕಟ್ಟುವವರೂ ಅವರ ಸಹಾಯಕರೂ ಒಂದು ಕೈಯಲ್ಲಿ ಆಯುಧ ಹಿಡಿದುಕೊಂಡು ಇನ್ನೊಂದು ಕೈಯಲ್ಲಿ ಕೆಲಸ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೊರೆ ಹೊರುವವರು ಒಂದು ಕೈಯಿಂದ ಹೊರೆಹೊತ್ತುಕೊಳ್ಳುತ್ತಾ ಇನ್ನೊಂದು ಕೈಯಿಂದ ಈಟಿ ಹಿಡಿದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೊರೆಹೊರುವವರೂ ಒಂದು ಕೈಯಿಂದ ಹೊರೆಹೊತ್ತು ಇನ್ನೊಂದು ಕೈಯಿಂದ ಈಟಿ ಹಿಡಿದುಕೊಳ್ಳುತ್ತ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದೇ ಪ್ರಕಾರ ಪ್ರಭುಗಳೂ ಗೋಡೆಕಟ್ಟುವ ಯೆಹೂದ್ಯರ ಹಿಂದೆ ನಿಂತರು. ಹೊರೆ ಹೊರುವವರು ಒಂದು ಕೈಯಿಂದ ಹೊರೆಹೊತ್ತುಕೊಳ್ಳುತ್ತಾ ಇನ್ನೊಂದು ಕೈಯಿಂದ ಈಟಿ ಹಿಡಿದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹೊರೆ ಹೊರುವವರು ಒಂದು ಕೈಯಿಂದ ಹೊರೆಹೊತ್ತು, ಇನ್ನೊಂದು ಕೈಯಿಂದ ಈಟಿ ಹಿಡಿದುಕೊಳ್ಳುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:17
15 ತಿಳಿವುಗಳ ಹೋಲಿಕೆ  

ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ. ಪಂದ್ಯದಲ್ಲಿ ನನ್ನ ಓಟವನ್ನು ಮುಗಿಸಿದ್ದೇನೆ; ನನ್ನ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.


ನಮಗಿರುವ ತೊಂದರೆಗಳಲ್ಲಿ ನೀನೂ ಪಾಲುಗಾರನಾಗು. ಕ್ರಿಸ್ತ ಯೇಸುವಿನ ನಿಜವಾದ ಸೈನಿಕನಂತೆ ಆ ತೊಂದರೆಗಳನ್ನು ಸ್ವೀಕರಿಸು.


ಸತ್ಯವನ್ನು ಹೇಳುವುದರಿಂದಲೂ ದೇವರ ಶಕ್ತಿಯಿಂದಲೂ ತೋರ್ಪಡಿಸುತ್ತೇವೆ. ಪ್ರತಿಯೊಂದರ ವಿರೋಧವಾಗಿ ನಮ್ಮನ್ನು ಸಂರಕ್ಷಿಸಿಕೊಳ್ಳಲು ನಮ್ಮ ಒಳ್ಳೆಯ ಜೀವಿತವನ್ನೇ ಉಪಯೋಗಿಸುತ್ತೇವೆ.


ಅಲ್ಲದೆ ನಿಮ್ಮನ್ನು ವಿರೋಧಿಸುವ ಜನರಿಗೆ ನೀವು ಹೆದರಿಕೊಳ್ಳುವುದಿಲ್ಲ. ನಿಮ್ಮ ರಕ್ಷಣೆಗೂ ನಿಮ್ಮ ವೈರಿಗಳ ನಾಶಕ್ಕೂ ಇವುಗಳು ದೇವರಿಂದಾದ ಪ್ರಮಾಣಗಳಾಗಿವೆ.


ಜಾಗರೂಕರಾಗಿರಿ, ನಂಬಿಕೆಯಲ್ಲಿ ದೃಢವಾಗಿರಿ. ಧೈರ್ಯದಿಂದಿರಿ ಮತ್ತು ಬಲಿಷ್ಠರಾಗಿರಿ.


ಯಾಕೆಂದರೆ ಮಹತ್ವವಾದ ಮತ್ತು ಫಲಭರಿತವಾದ ಸೇವೆಯನ್ನು ಮಾಡಲು ಇಲ್ಲಿ ನನಗೆ ಒಳ್ಳೆಯ ಅವಕಾಶಗಳಿವೆ. ಆದರೂ ಇಲ್ಲಿ ನನಗೆ ಅನೇಕ ವಿರೋಧಿಗಳಿದ್ದಾರೆ.


ತಮಗೆ ಅಗತ್ಯವಾದುವುಗಳನ್ನು ನಿಮ್ಮಿಂದ ಪಡೆದುಕೊಳ್ಳಲು ಇತರರಿಗೆ ಹಕ್ಕಿದೆ. ಆದ್ದರಿಂದ ಖಂಡಿತವಾಗಿ ನಮಗೂ ಈ ಹಕ್ಕಿದೆ. ಆದರೆ ನಾವು ಈ ಹಕ್ಕನ್ನು ಉಪಯೋಗಿಸುವುದಿಲ್ಲ. ಕ್ರಿಸ್ತನ ಸುವಾರ್ತೆಗೆ ವಿಧೇಯರಾಗಲು ಯಾರಿಗೂ ತೊಂದರೆ ಆಗಕೂಡದೆಂದು ನಾವು ಪ್ರತಿಯೊಂದನ್ನು ಸಹಿಸಿಕೊಳ್ಳುತ್ತೇವೆ.


“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.


ಆದ್ದರಿಂದ ನಮ್ಮ ಜನರಲ್ಲಿ ಕೆಲವರನ್ನು ಕುಟಂಬ ಸಮೇತವಾಗಿ ಖಡ್ಗ, ಬರ್ಜಿ ಮತ್ತು ಬಿಲ್ಲುಗಳೊಡನೆ ಗೋಡೆಯ ಉದ್ದಕ್ಕೂ ಇದ್ದ ತಗ್ಗಾದ ಸ್ಥಳಗಳಲ್ಲಿಯೂ ಗೋಡೆಗಳಲ್ಲಿದ್ದ ಕಿಂಡಿಗಳ ಬಳಿಯಲ್ಲಿಯೂ ಇರಿಸಿದೆನು.


ಆ ದಿವಸದಿಂದ ನನ್ನ ಜನರು ಅರ್ಧಭಾಗ ಗೋಡೆಯ ಕೆಲಸದಲ್ಲಿ ನಿರತರಾದರು; ಉಳಿದ ಅರ್ಧ ಜನರು ಭರ್ಜಿಗಳನ್ನೂ ಗುರಾಣಿಗಳನ್ನೂ ಬಿಲ್ಲುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಕಾವಲಾಗಿದ್ದರು; ಗೋಡೆಯನ್ನು ಕಟ್ಟುತ್ತಿದ್ದ ಯೆಹೂದದ ಜನರ ಹಿಂಭಾಗದಲ್ಲಿ ಸೈನ್ಯಾಧಿಕಾರಿಗಳು ನಿಂತುಕೊಂಡಿದ್ದರು.


ಕೆಲಸಗಾರರು ತಮ್ಮ ಖಡ್ಗಗಳನ್ನು ಸೊಂಟಕ್ಕೆ ಬಿಗಿದುಕೊಂಡೇ ಕೆಲಸ ಮಾಡಿದರು. ಜನರನ್ನು ಎಚ್ಚರಗೊಳಿಸಲು ತುತ್ತೂರಿ ಊದುವವನು ನನ್ನ ಬಳಿಯಲ್ಲಿಯೇ ನಿಂತಿರುತ್ತಿದ್ದನು.


ಜನರು ಆತನಿಗೆ ಗಟ್ಟಿಯಾಗಿ ಸ್ತೋತ್ರಮಾಡುತ್ತಾ ತಮ್ಮ ಇಬ್ಭಾಯಿ ಕತ್ತಿಗಳನ್ನು ಕೈಗಳಲ್ಲಿ ತೆಗೆದುಕೊಳ್ಳಲಿ.


ಯುದ್ಧವೀರರಾದ ಅವರು ಕೈಯಲ್ಲಿ ಕತ್ತಿ ಹಿಡಿದಿದ್ದಾರೆ; ರಾತ್ರಿಯ ಅಪಾಯದ ನಿಮಿತ್ತ ಅವರು ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾರೆ.


ಒಬ್ಬರಮೇಲೊಬ್ಬರು ಬೀಳದೆ ಪ್ರತಿಯೊಬ್ಬ ಸೈನಿಕನು ತನ್ನ ದಾರಿಯಲ್ಲಿಯೇ ಮುಂದುವರಿಯುವನು. ಒಬ್ಬ ಸೈನಿಕನಿಗೆ ಗಾಯವಾಗಿ ಬಿದ್ದರೂ ಉಳಿದವರು ನಿಲ್ಲದೆ ಮುಂದಕ್ಕೆ ನುಗ್ಗುತ್ತಾ ಇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು