Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:2 - ಪರಿಶುದ್ದ ಬೈಬಲ್‌

2 ಸಮಾರ್ಯದಲ್ಲಿರುವ ಅವನ ಸ್ನೇಹಿತರೊಡನೆ ಮತ್ತು ಸಮಾರ್ಯದ ಸೈನ್ಯದವರೊಡನೆ ಮಾತನಾಡಿ, “ಈ ಬಲಹೀನ ಯೆಹೂದ್ಯರು ಮಾಡುತ್ತಿರುವುದೇನು? ನಾವು ಇವರನ್ನು ಹೀಗೇಯೇ ಬಿಟ್ಟುಬಿಡುತ್ತೇವೆಂದು ತಿಳಿದುಕೊಂಡಿದ್ದಾರೆಯೇ? ತಾವು ಯಜ್ಞಗಳನ್ನು ಅರ್ಪಿಸುವುದಾಗಿ ತಿಳಿದುಕೊಂಡಿರುವರೇ? ಒಂದೇ ದಿನದಲ್ಲಿ ಕಟ್ಟಿಮುಗಿಸುವುದಾಗಿ ಅವರು ತಿಳಿದುಕೊಂಡಿರಬಹುದು. ಆ ತಿಪ್ಪೆಗುಂಡಿಯೊಳಗಿನ ಕಲ್ಲುಗಳ ರಾಶಿಗೆ ಜೀವಕೊಡಲು ಅವರಿಗೆ ಸಾಧ್ಯವಿಲ್ಲ. ಅವು ಕೇವಲ ಬೂದಿ ಮತ್ತು ಹೊಲಸುಗಳ ಗುಡ್ಡೆಗಳಾಗಿವೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತನ್ನ ಸಹೋದರರ ಮತ್ತು ಸಮಾರ್ಯದ ಸೈನ್ಯದವರ ಮುಂದೆಯೂ, “ಬಲಹೀನರಾದ ಈ ಯೆಹೂದ್ಯರು ಮಾಡುವುದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮುಗಿಸುವರೇನು? ಸುಟ್ಟುಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸಲೂ ಸಾಧ್ಯವೇ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನನ್ನ ಸಹೋದರರ ಮುಂದೆ ಹಾಗು ಸಮಾರಿಯದ ದಂಡಿನವರ ಮುಂದೆ ಅಶಕ್ತರಾದ ಈ ಯೆಹೂದ್ಯರು ಮಾಡುವುದಾದರೂ ಏನು? ಇವರು ತಮ್ಮನ್ನೇ ಬಲಪಡಿಸಿಕೊಳ್ಳಬೇಕೆಂದು ಇರುವರೋ? ಬಲಿಯರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮಾಡಿಮುಗಿಸುವರೋ? ಸುಟ್ಟುಹೋದ ಪಟ್ಟಣದ ಬೂದಿಯ ರಾಶಿಯೊಳಗೆ ಹುದುಗಿಹೋದ ಕಲ್ಲುಗಳನ್ನು ಬದುಕಿಸುವರೋ?’ ಎಂದು ಹೇಳಿ ಯೆಹೂದ್ಯರನ್ನು ಪರಿಹಾಸ್ಯ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತನ್ನ ಸಹೋದರರ ಮುಂದೆಯೂ ಸಮಾರ್ಯದ ದಂಡಿನವರ ಮುಂದೆಯೂ - ನಿತ್ರಾಣಿಗಳಾದ ಈ ಯೆಹೂದ್ಯರು ಮಾಡುವದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ಈ ಹೊತ್ತೇ ಈ ಕೆಲಸವನ್ನು ತೀರಿಸುವರೇನು? ಸುಟ್ಟು ಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸುವರೇನೋ ಎಂದು ಹೇಳಿ ಯೆಹೂದ್ಯರನ್ನು ಗೇಲಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ತಮ್ಮ ಜೊತೆ ಕೆಲಸ ಮಾಡುವವರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ, “ಈ ಬಲಹೀನರಾದ ಯೆಹೂದ್ಯರು ಮಾಡುವುದೇನು? ಅವರು ತಮ್ಮ ಗೋಡೆಯನ್ನು ಪುನಃ ಕಟ್ಟುತ್ತಾರೆಯೇ? ಬಲಿಯನ್ನು ಅರ್ಪಿಸುವರೋ? ಪಟ್ಟಣವು ಬೆಂಕಿಯಲ್ಲಿ ಸುಟ್ಟುಹೋದಾಗ, ಕಲ್ಲಿನ ತುಂಡುಗಳ ರಾಶಿಯಿಂದ ಕಟ್ಟಡಕ್ಕೆ ಸೂಕ್ತವಾದ ಕಲ್ಲುಗಳನ್ನು ಹೊರತೆಗೆಯಲು ಅವರಿಗೆ ಸಾಧ್ಯವಾಗುತ್ತದೆಯೇ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:2
17 ತಿಳಿವುಗಳ ಹೋಲಿಕೆ  

ಆದರೆ ದೇವರು ಈ ಲೋಕದ ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಮೂಢರನ್ನು ಆರಿಸಿಕೊಂಡಿದ್ದಾನೆ; ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಬಲಹೀನರನ್ನು ಆರಿಸಿಕೊಂಡಿದ್ದಾನೆ.


ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ಯೆಹೋವನು ಕಾಪಾಡುತ್ತಾನೆ. ಬಲಹೀನ ಮನುಷ್ಯನೂ ದಾವೀದನಂತೆ ಶೂರನಾಗುವನು. ದಾವೀದನ ಸಂತತಿಯ ಜನರು ದೇವರುಗಳಂತಿದ್ದು ದೇವರ ಸ್ವಂತ ದೂತರಂತೆ ತಮ್ಮ ಜನರನ್ನು ನಡಿಸುವರು.


ಯೆಹೋವನೇ, ನಾನು ನಿನ್ನ ವಿಚಾರ ಕೇಳಿದೆನು. ಯೆಹೋವನೇ, ನೀನು ಹಿಂದಿನ ಕಾಲದಲ್ಲಿ ಮಾಡಿದ ಮಹತ್ಕಾರ್ಯಗಳು ನನ್ನನ್ನು ಚಕಿತಗೊಳಿಸಿವೆ. ನಮ್ಮ ಕಾಲದಲ್ಲಿಯೂ ಮಹತ್ಕಾರ್ಯಗಳನ್ನು ಮಾಡಬೇಕೆಂದು ಪ್ರಾರ್ಥಿಸುತ್ತೇನೆ. ದಯಮಾಡಿ, ಆ ಘಟನೆಗಳು ನಮ್ಮ ದಿವಸಗಳಲ್ಲೂ ನೆರವೇರುವಂತೆ ಮಾಡು. ಅದರ ಜೊತೆಯಲ್ಲಿ ನಮ್ಮ ಮೇಲೆ ಕರುಣೆ ತೋರಿಸಲು ಮರೆಯಬೇಡ.


ಆ ವಿಶೇಷ ದಿನದಲ್ಲಿ ಯಾಜಕರು ಹೆಚ್ಚಿನ ಸಂಖ್ಯೆಯಲ್ಲಿ ಯಜ್ಞವನ್ನರ್ಪಿಸಿದರು. ಜನರೆಲ್ಲಾ ಸಂತೋಷಪಟ್ಟರು. ದೇವರು ಅವರಿಗೆಲ್ಲಾ ಅತ್ಯಾನಂದವನ್ನು ಉಂಟುಮಾಡಿದನು; ಹೆಂಗಸರೂ ಮಕ್ಕಳೂ ಉತ್ಸಾಹದಿಂದ ಆನಂದಿಸಿದರು; ಜೆರುಸಲೇಮಿನಿಂದ ಹೊರಟ ಅವರ ಹರ್ಷಧ್ವನಿಯು ಬಹುದೂರದವರೆಗೆ ಕೇಳಿಸಿತು.


ಆ ಸಮಯದಲ್ಲಿ ಯೆಹೂದದ ಜನರು, “ಕೆಲಸಗಾರರು ಆಯಾಸಗೊಳ್ಳುತ್ತಿದ್ದಾರೆ; ದಾರಿಯಲ್ಲೆಲ್ಲಾ ತುಂಬಾ ಧೂಳು ಮತ್ತು ಕಸ ಇರುವುದರಿಂದ ನಾವು ಗೋಡೆಕಟ್ಟಡ ಕೆಲಸವನ್ನು ಮುಂದುವರಿಸಲು ಸಾಧ್ಯವಿಲ್ಲ.


ಜನರು ಜೆರುಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸಿದರು. ಅವರು ಎಲ್ಲಾ ಲೇವಿಯರನ್ನು ನಗರಕ್ಕೆ ಕರೆತಂದು ಪ್ರತಿಷ್ಠೆ ಮಾಡಿದರು. ಅವರು ದೇವರಿಗೆ ಸ್ತುತಿಪದಗಳನ್ನು, ತಾಳ, ಸ್ವರಮಂಡಲ, ಕಿನ್ನರಿಗಳನ್ನು ಬಾರಿಸುತ್ತಾ ಹಾಡಿದರು.


ಏಲೂಲ್ ತಿಂಗಳ ಇಪ್ಪತ್ತೈದನೆಯ ದಿನದಲ್ಲಿ ಜೆರುಸಲೇಮಿನ ಪೌಳಿಗೋಡೆಗಳ ಕೆಲಸ ಮುಕ್ತಾಯವಾಯಿತು. ಅದಕ್ಕೆ ಒಟ್ಟು ಐವತ್ತೆರಡು ದಿನಗಳು ಬೇಕಾದವು.


ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’


“ಯೆರೆಮೀಯನೇ, ಜನರು ಏನು ಹೇಳಿದರೆಂಬುದನ್ನು ಕೇಳಲಿಲ್ಲವೇ? ‘ಯೆಹೋವನು ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಎರಡು ಕುಟುಂಬಗಳನ್ನು ಆರಿಸಿಕೊಂಡನು; ಆದರೆ ಈಗ ಅವರನ್ನು ತಿರಸ್ಕರಿಸಿದ್ದಾನೆ.’ ಎಂದು ಅವರು ಹೇಳುತ್ತಿದ್ದಾರೆ. ಅನ್ಯಜನರು ನನ್ನ ಜನರನ್ನು ಎಷ್ಟು ದ್ವೇಷಿಸುತ್ತಾರೆಂದರೆ, ಅವರು ಒಂದು ಜನಾಂಗವಾಗಿ ಮುಂದುವರಿಯುವುದು ಅವರಿಗೆ ಇಷ್ಟವೇ ಇಲ್ಲ.”


ಒಂದು ಸಣ್ಣ ರೀತಿಯ ಪ್ರಾರಂಭಕ್ಕೆ ಜನರು ನಾಚುವುದಿಲ್ಲ. ಜೆರುಬ್ಬಾಬೆಲನು ನೂಲುಗುಂಡು ಹಿಡಿದುಕೊಂಡು ಸಂಪೂರ್ಣವಾದ ಆಲಯವನ್ನು ಅಳತೆ ಮಾಡುವಾಗ ಜನರು ಅತಿಯಾಗಿ ಸಂತೋಷಿಸುವರು. ಈಗ ಆ ಕಲ್ಲಿನ ಏಳು ಬದಿಗಳು ಯೆಹೋವನ ಕಣ್ಣುಗಳು ಎಲ್ಲಾ ದಿಕ್ಕುಗಳನ್ನು ನೋಡುತ್ತಿರುವುದನ್ನು ಸೂಚಿಸುತ್ತವೆ. ಅವು ಭೂಲೋಕದಲ್ಲಿರುವ ಎಲ್ಲಾ ಸಂಗತಿಗಳನ್ನು ನೋಡುತ್ತಿವೆ.”


ಇದನ್ನು ಕೇಳಿ ಅವರಿಗೆ ಸಿಟ್ಟುಬಂತು. ಮತ್ತು ಯೆಹೂದ್ಯರಿಗೆ ಉಪದ್ರವ ಕೊಡಲು ಪ್ರಾರಂಭಿಸಿದರು. ದೇವಾಲಯ ಕಟ್ಟುವ ಕೆಲಸವನ್ನು ನಿಲ್ಲಿಸಲೂ ಕಟ್ಟುವವರನ್ನು ನಿರಾಶೆಪಡಿಸಲೂ ಪ್ರಯತ್ನಿಸಿದರು.


ಅವರು ಹೀಗೆಂದುಕೊಳ್ಳುತ್ತಿದ್ದಾರೆ: “ಬನ್ನಿರಿ, ಅವರನ್ನು ಸಂಪೂರ್ಣವಾಗಿ ನಾಶಮಾಡೋಣ. ಆಗ ‘ಇಸ್ರೇಲ್’ ಎಂಬ ಹೆಸರೇ ಅಳಿದುಹೋಗುವುದು.”


“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು