Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:23 - ಪರಿಶುದ್ದ ಬೈಬಲ್‌

23 ಇದರಿಂದಾಗಿ ಯಾರೂ ತಮ್ಮ ವಸ್ತ್ರಗಳನ್ನು ಬದಲಾಯಿಸಲಿಲ್ಲ. ನಾನಾಗಲಿ ನನ್ನ ಬಂಧುಗಳಾಗಲಿ ನನ್ನ ಜನರಾಗಲಿ ಪಹರೆಯವರಾಗಲಿ ವಸ್ತ್ರಗಳನ್ನು ಬದಲಾಯಿಸದೆ ಆಯುಧಗಳನ್ನು ಧರಿಸಿಕೊಂಡೇ ಇದ್ದೆವು. ನೀರು ಕುಡಿಯುವಾಗಲೂ ಆಯುಧ ಸನ್ನದ್ಧರಾಗಿರುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾನೂ ನನ್ನ ಸಹೋದರರೂ, ಸೇವಕರೂ, ಮೈಗಾವಲಿನವರೂ ನಮ್ಮ ಬಟ್ಟೆಗಳನ್ನು ಬದಲಾಯಿಸಿರಲಿಲ್ಲ. ಪ್ರತಿಯೊಬ್ಬನು ನೀರನ್ನು ಮತ್ತು ಆಯುಧಗಳನ್ನು ಹಿಡಿದುಕೊಂಡಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಾನು, ನನ್ನ ಸಹೋದರರು, ಸೇವಕರು ಹಾಗು ಮೈಗಾವಲಿನವರು ಸ್ನಾನ ಸಮಯದಲ್ಲಿ ಹೊರತು, ಬೇರೆ ಸಮಯದಲ್ಲಿ ನಮ್ಮ ಬಟ್ಟೆಗಳನ್ನು ತೆಗೆದುಹಾಕುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾನೂ ನನ್ನ ಸಹೋದರರೂ ಸೇವಕರೂ ಮೈಗಾವಲಿನವರೂ ಸ್ನಾನಸಮಯದಲ್ಲಿ ಹೊರತು ಬೇರೆ ಸಮಯದಲ್ಲಿ ನಮ್ಮ ವಸ್ತ್ರಗಳನ್ನು ತೆಗೆದುಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಾನೂ, ನನ್ನ ಸಹೋದರರೂ, ಸೇವಕರೂ, ಮೈಗಾವಲಿನವರೂ ಸ್ನಾನದ ಸಮಯದಲ್ಲಿ ಹೊರತು, ಬೇರೆ ಸಮಯದಲ್ಲಿ ನಮ್ಮ ವಸ್ತ್ರಗಳನ್ನು ತೆಗೆದುಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:23
8 ತಿಳಿವುಗಳ ಹೋಲಿಕೆ  

ಆದರೆ, ದೇವರ ಕೃಪೆಯಿಂದ ನಾನು ಅಪೊಸ್ತಲನಾಗಿದ್ದೇನೆ. ಆತನು ನನಗೆ ತೋರಿದ ಕೃಪೆಯು ನಿಷ್ಛಲವಾಗಲಿಲ್ಲ. ಉಳಿದೆಲ್ಲ ಅಪೊಸ್ತಲರಿಗಿಂತ ನಾನು ಹೆಚ್ಚು ಕಷ್ಟಪಟ್ಟು ಸೇವೆ ಮಾಡಿದ್ದೇನೆ. (ಆದರೆ ಸೇವೆ ಮಾಡುತ್ತಿದ್ದವನು ನಿಜವಾಗಿಯೂ ನಾನಲ್ಲ ದೇವರ ಕೃಪೆಯೇ ನನ್ನೊಂದಿಗಿತ್ತು.)


ಇದಾದ ಬಳಿಕ ನನ್ನ ಸಹೋದರ ಹಾನಾನಿಯನನ್ನು ಜೆರುಸಲೇಮಿನ ಆಡಳಿತಗಾರನನ್ನಾಗಿ ನೇಮಿಸಿದೆನು. ಹನನ್ಯನನ್ನು ಜೆರುಸಲೇಮಿನ ಕೋಟೆಗೆ ಅಧಿಪತಿಯನ್ನಾಗಿ ಆರಿಸಿದೆನು. ಹಾನಾನಿಯು ನಂಬಿಗಸ್ತನೂ ದೇವರಿಗೆ ಭಯಪಡುವವನೂ ಆಗಿದ್ದುದರಿಂದ ನಾನು ಅವನನ್ನು ಆರಿಸಿಕೊಂಡೆನು.


ಜೆರುಸಲೇಮಿನ ಗೋಡೆ ಕಟ್ಟುವ ಕೆಲಸದಲ್ಲಿ ನಾನು ತುಂಬಾ ಪ್ರಯಾಸಪಟ್ಟೆನು. ಗೋಡೆಯ ನಿರ್ಮಾಣ ಕೆಲಸಕ್ಕಾಗಿ ನನ್ನ ಜನರೆಲ್ಲರೂ ಒಟ್ಟಾಗಿ ಸೇರಿದರು. ನಾವು ಯಾರಿಂದಲೂ ಭೂಮಿಯನ್ನು ಕಿತ್ತುಕೊಳ್ಳಲಿಲ್ಲ.


ಆದ್ದರಿಂದ ಅಬೀಮೆಲೆಕ ಮತ್ತು ಅವನ ಜನರು ಚಲ್ಮೋನ್ ಬೆಟ್ಟವನ್ನು ಹತ್ತಿಹೋದರು. ಅಬೀಮೆಲೆಕನು ಒಂದು ಕೊಡಲಿಯನ್ನು ತೆಗೆದುಕೊಂಡು ಕೆಲವು ಕೊಂಬೆಗಳನ್ನು ಕಡಿದನು. ಅವನು ಆ ಕೊಂಬೆಗಳನ್ನು ಹೊತ್ತುಕೊಂಡು ಹೊರಟನು. ಅಬೀಮೆಲೆಕನು ತನ್ನ ಸಂಗಡಿಗರಿಗೆ, “ನಾನು ಮಾಡಿದಂತೆಯೇ ನೀವು ಬೇಗನೆ ಮಾಡಿರಿ” ಎಂದನು.


ತಾಳ ಝಲ್ಲರಿಗಳ ಧ್ವನಿಯನ್ನು ಕೇಳಿರಿ; ಬಾವಿಗಳ ಹತ್ತಿರ ನೆರೆದ ಜನಸಮೂಹದ ಧ್ವನಿಯನ್ನು ಕೇಳಿರಿ; ಅಲ್ಲಿ ಅವು ಯೆಹೋವನ ವಿಜಯದ ಬಗ್ಗೆ ಹೇಳುತ್ತವೆ. ಯೆಹೋವನ ಜನರು ಪಟ್ಟಣ ದ್ವಾರದಲ್ಲಿ ಯುದ್ಧಕ್ಕೆ ಹೋದಾಗ ಇಸ್ರೇಲಿನಲ್ಲಿ ಅವರ ವಿಜಯದ ಬಗ್ಗೆ ಹೇಳುತ್ತವೆ.


“ಪ್ರತಿಯೊಬ್ಬ ಕೆಲಸಗಾರನೂ ಅವನ ಸಹಾಯಕನೂ ಜೆರುಸಲೇಮಿನೊಳಗೇ ರಾತ್ರಿಯನ್ನು ಕಳೆಯಬೇಕು. ರಾತ್ರಿ ಕಾಲದಲ್ಲಿ ಅವರು ಪಹರೆಯವರಾಗಿಯೂ ಹಗಲಲ್ಲಿ ಗೋಡೆ ಕಟ್ಟುವವರಾಗಿಯೂ ಇರಬೇಕು” ಎಂದು ನಾನು ಜನರಿಗೆ ಹೇಳಿದೆನು.


ಯೆಹೂದ್ಯರಲ್ಲಿ ಎಷ್ಟೋ ಬಡಜನರು ತಮ್ಮ ಬಂಧುಗಳ ವಿಷಯದಲ್ಲಿ ದೂರು ಹೇಳಲಾರಂಭಿಸಿದರು.


ಒಬ್ಬರಮೇಲೊಬ್ಬರು ಬೀಳದೆ ಪ್ರತಿಯೊಬ್ಬ ಸೈನಿಕನು ತನ್ನ ದಾರಿಯಲ್ಲಿಯೇ ಮುಂದುವರಿಯುವನು. ಒಬ್ಬ ಸೈನಿಕನಿಗೆ ಗಾಯವಾಗಿ ಬಿದ್ದರೂ ಉಳಿದವರು ನಿಲ್ಲದೆ ಮುಂದಕ್ಕೆ ನುಗ್ಗುತ್ತಾ ಇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು