Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:6 - ಪರಿಶುದ್ದ ಬೈಬಲ್‌

6 ಜೆರುಸಲೇಮಿನ ಗೋಡೆಯನ್ನು ನಾವು ಕಟ್ಟಿ ಮುಗಿಸಿದೆವು. ಪಟ್ಟಣದ ಸುತ್ತಲೂ ಪೌಳಿಗೋಡೆಯನ್ನು ಕಟ್ಟಿದೆವು. ಆದರೆ ಅದರ ಎತ್ತರ ಇರಬೇಕಾದಷ್ಟು ಇರದೆ ಅರ್ಧದ ತನಕ ಇದ್ದವು. ನಮ್ಮ ಜನರು ತಮ್ಮ ಹೃದಯ ಪೂರ್ವಕವಾಗಿ ಕೆಲಸ ಮಾಡಿದ್ದುದರಿಂದ ನಮಗೆ ಅಷ್ಟಾದರೂ ಮಾಡುವುದಕ್ಕೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೂ ನಾವು ಕಟ್ಟುವ ಕೆಲಸವನ್ನು ಮುಂದುವರಿಸಿದೆವು. ಜನರು ಅದಕ್ಕೆ ಮನಸ್ಸು ಕೊಟ್ಟಿದ್ದರಿಂದ ಗೋಡೆಯೆಲ್ಲಾ ಅರ್ಧ ಎತ್ತರದವರೆಗೂ ಸಮನಾಗಿ ಕಟ್ಟಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದಾದ ಮೇಲೆ ನಾವು ಕಟ್ಟುವ ಕೆಲಸವನ್ನು ಮುಂದುವರಿಸಿದೆವು. ಜನರು ಮನಸ್ಸುಮಾಡಿ ಅರ್ಧಗೋಡೆಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೂ ನಾವು ಕಟ್ಟುವ ಕೆಲಸವನ್ನು ಮುಂದರಿಸಿದೆವು. ಜನರು ಅದಕ್ಕೆ ಮನಸ್ಸು ಕೊಟ್ಟದ್ದರಿಂದ ಗೋಡೆಯೆಲ್ಲಾ ಅರ್ಧ ಎತ್ತರದವರೆಗೂ ಜೋಡನೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹೀಗೆ ನಾವು ಪುನಃ ಗೋಡೆ ಕಟ್ಟುವುದನ್ನು ಮುಂದುವರಿಸಿದೆವು. ಗೋಡೆ ಅರ್ಧ ಎತ್ತರದವರೆಗೂ ಆಯಿತು. ಏಕೆಂದರೆ ಜನರು ಕೆಲಸ ಮಾಡುವುದಕ್ಕೆ ಮನಸ್ಸುಳ್ಳವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:6
13 ತಿಳಿವುಗಳ ಹೋಲಿಕೆ  

ಹೌದು, ಆತನಿಗೆ ಮೆಚ್ಚಿಕೆಕರವಾದ ಕಾರ್ಯಗಳನ್ನು ಮಾಡಬೇಕೆಂಬ ಅಪೇಕ್ಷೆಯನ್ನು ಆತನೇ ನಿಮ್ಮಲ್ಲಿ ಹುಟ್ಟಿಸುತ್ತಾನೆ ಅಲ್ಲದೆ ಅವುಗಳನ್ನು ಮಾಡಲು ಆತನೇ ನಿಮಗೆ ಶಕ್ತಿಯನ್ನು ಕೊಡುತ್ತಾನೆ.


ಏಲೂಲ್ ತಿಂಗಳ ಇಪ್ಪತ್ತೈದನೆಯ ದಿನದಲ್ಲಿ ಜೆರುಸಲೇಮಿನ ಪೌಳಿಗೋಡೆಗಳ ಕೆಲಸ ಮುಕ್ತಾಯವಾಯಿತು. ಅದಕ್ಕೆ ಒಟ್ಟು ಐವತ್ತೆರಡು ದಿನಗಳು ಬೇಕಾದವು.


ನಾವು ಕಾಣಿಕೆಯಾಗಿ ಕೊಟ್ಟಿರುವ ವಸ್ತುಗಳು ನನ್ನಿಂದಾಗಲಿ ಮತ್ತು ನನ್ನ ಜನರಿಂದಾಗಲಿ ಬರಲಿಲ್ಲ. ಇವೆಲ್ಲವೂ ನಿನ್ನಿಂದಲೇ ಬಂದವುಗಳು. ನಿನ್ನಿಂದ ನಾವು ಹೊಂದಿದವುಗಳನ್ನೇ ನಿನಗೆ ಕೊಟ್ಟಿದ್ದೇವೆ.


ಅಲ್ಲದೆ ದೇವಾಲಯಕ್ಕೆ ಬೇಕಾದ ಬೆಳ್ಳಿಬಂಗಾರಗಳ ಸಾಮಾನುಗಳನ್ನು ನಾನು ಕಾಣಿಕೆಯಾಗಿ ಕೊಟ್ಟಿರುತ್ತೇನೆ. ಯಾಕೆಂದರೆ ನನ್ನ ದೇವರ ಪರಿಶುದ್ಧಾಲಯವು ಕಟ್ಟಲ್ಪಡಬೇಕೆಂಬುದು ನಿಜವಾಗಿಯೂ ನನ್ನ ಬಯಕೆಯಾಗಿದೆ. ಈ ಪವಿತ್ರ ದೇವಾಲಯವನ್ನು ಕಟ್ಟಲು ನಾನು ಈ ವಸ್ತುಗಳನ್ನೆಲ್ಲಾ ಕೊಡುತ್ತಿದ್ದೇನೆ.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ಜನರು ತಾವಾಗಿಯೇ ನಿನ್ನ ಸೈನ್ಯವನ್ನು ಸೇರಿಕೊಳ್ಳುವರು. ಅವರು ಸಮವಸ್ತ್ರಗಳನ್ನು ಧರಿಸಿಕೊಂಡು ಪ್ರತಿ ಮುಂಜಾನೆ ಸೇರಿಬರುವರು. ಆ ಯುವಕರು ನಿನಗೆ ಉದಯಕಾಲದ ಇಬ್ಬನಿಯಂತಿರುವರು.


ದೇವರು ಅವುಗಳನ್ನು ತನ್ನ ಜನರಿಗಾಗಿ ಸಿದ್ಧಪಡಿಸಿದ್ದಕ್ಕಾಗಿಯೂ ಅದನ್ನು ಅಲ್ಪಕಾಲಾವಧಿಯಲ್ಲಿ ಮಾಡಿದ್ದಕ್ಕಾಗಿಯೂ ಹಿಜ್ಕೀಯನು ಮತ್ತು ಯೆಹೂದದ ಜನರು ಸಂತೋಷಪಟ್ಟರು.


ಅವರು ನಿನ್ನ ದೃಷ್ಟಿಯಲ್ಲಿ ಮಾಡಿದ ಪಾಪಗಳನ್ನು ಮನ್ನಿಸಬೇಡ. ಅವರು ಗೋಡೆಯನ್ನು ಕಟ್ಟುವ ನಿನ್ನ ದಾಸರನ್ನು ನಿಂದಿಸಿ ಅವರನ್ನು ನಿರುತ್ಸಾಹಗೊಳಿಸಿದ್ದಾರೆ.”


ಸನ್ಬಲ್ಲಟನು, ಟೋಬೀಯನು, ಅರಬಿಯರು, ಅಮ್ಮೋನಿಯರು ಮತ್ತು ಅಷ್ಡೋದಿನವರು ತುಂಬಾ ಕೋಪಗೊಂಡಿದ್ದರು. ಯಾಕೆಂದರೆ ಜೆರುಸಲೇಮಿನ ಗೋಡೆಯ ಕೆಲಸ ಮುಂದುವರಿಯುತ್ತಿದೆಯೆಂದೂ ಮತ್ತು ಗೋಡೆಗಳ ಕಿಂಡಿಗಳನ್ನು ರಿಪೇರಿ ಮಾಡಲಾಗುತ್ತಿದೆಯೆಂದೂ ಅವರು ಕೇಳಿದ್ದರು.


ಇದು ಹೊಸ ಜೆರುಸಲೇಮ್! ಈ ಪಟ್ಟಣವು ಏಕೀಕರಣಗೊಂಡ ನಗರದಂತೆ ಮತ್ತೆ ಕಟ್ಟಲ್ಪಟ್ಟಿದೆ.


ಬಳಿಕ ದೇವರಾದ ಯೆಹೋವನು ಆಲಯವನ್ನು ಕಟ್ಟುವಂತೆ ಜನರನ್ನು ಪ್ರೇರೇಪಿಸಿದನು. ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು. ಯೆಹೋಚಾದಾಕನ ಮಗನಾದ ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು ಅಲ್ಲದೆ ಯೆಹೋವನು ಆಲಯವನ್ನು ಕಟ್ಟಲು ಎಲ್ಲಾ ಜನರನ್ನು ಪ್ರೋತ್ಸಾಹಿಸಿದನು. ಆದ್ದರಿಂದ ಅವರೆಲ್ಲರೂ ತಮ್ಮ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟಲು ಪ್ರಾರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು