ನೆಹೆಮೀಯ 4:6 - ಪರಿಶುದ್ದ ಬೈಬಲ್6 ಜೆರುಸಲೇಮಿನ ಗೋಡೆಯನ್ನು ನಾವು ಕಟ್ಟಿ ಮುಗಿಸಿದೆವು. ಪಟ್ಟಣದ ಸುತ್ತಲೂ ಪೌಳಿಗೋಡೆಯನ್ನು ಕಟ್ಟಿದೆವು. ಆದರೆ ಅದರ ಎತ್ತರ ಇರಬೇಕಾದಷ್ಟು ಇರದೆ ಅರ್ಧದ ತನಕ ಇದ್ದವು. ನಮ್ಮ ಜನರು ತಮ್ಮ ಹೃದಯ ಪೂರ್ವಕವಾಗಿ ಕೆಲಸ ಮಾಡಿದ್ದುದರಿಂದ ನಮಗೆ ಅಷ್ಟಾದರೂ ಮಾಡುವುದಕ್ಕೆ ಆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೂ ನಾವು ಕಟ್ಟುವ ಕೆಲಸವನ್ನು ಮುಂದುವರಿಸಿದೆವು. ಜನರು ಅದಕ್ಕೆ ಮನಸ್ಸು ಕೊಟ್ಟಿದ್ದರಿಂದ ಗೋಡೆಯೆಲ್ಲಾ ಅರ್ಧ ಎತ್ತರದವರೆಗೂ ಸಮನಾಗಿ ಕಟ್ಟಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದಾದ ಮೇಲೆ ನಾವು ಕಟ್ಟುವ ಕೆಲಸವನ್ನು ಮುಂದುವರಿಸಿದೆವು. ಜನರು ಮನಸ್ಸುಮಾಡಿ ಅರ್ಧಗೋಡೆಯನ್ನು ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೂ ನಾವು ಕಟ್ಟುವ ಕೆಲಸವನ್ನು ಮುಂದರಿಸಿದೆವು. ಜನರು ಅದಕ್ಕೆ ಮನಸ್ಸು ಕೊಟ್ಟದ್ದರಿಂದ ಗೋಡೆಯೆಲ್ಲಾ ಅರ್ಧ ಎತ್ತರದವರೆಗೂ ಜೋಡನೆಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹೀಗೆ ನಾವು ಪುನಃ ಗೋಡೆ ಕಟ್ಟುವುದನ್ನು ಮುಂದುವರಿಸಿದೆವು. ಗೋಡೆ ಅರ್ಧ ಎತ್ತರದವರೆಗೂ ಆಯಿತು. ಏಕೆಂದರೆ ಜನರು ಕೆಲಸ ಮಾಡುವುದಕ್ಕೆ ಮನಸ್ಸುಳ್ಳವರಾಗಿದ್ದರು. ಅಧ್ಯಾಯವನ್ನು ನೋಡಿ |
ಬಳಿಕ ದೇವರಾದ ಯೆಹೋವನು ಆಲಯವನ್ನು ಕಟ್ಟುವಂತೆ ಜನರನ್ನು ಪ್ರೇರೇಪಿಸಿದನು. ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು. ಯೆಹೋಚಾದಾಕನ ಮಗನಾದ ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು ಅಲ್ಲದೆ ಯೆಹೋವನು ಆಲಯವನ್ನು ಕಟ್ಟಲು ಎಲ್ಲಾ ಜನರನ್ನು ಪ್ರೋತ್ಸಾಹಿಸಿದನು. ಆದ್ದರಿಂದ ಅವರೆಲ್ಲರೂ ತಮ್ಮ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟಲು ಪ್ರಾರಂಭಿಸಿದರು.