Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:13 - ಪರಿಶುದ್ದ ಬೈಬಲ್‌

13 ನಂತರ ನಾನು ನನ್ನ ಉಡುಪಿನ ನೆರಿಗೆಯನ್ನು ಝಾಡಿಸಿ, “ತಾನು ಮಾಡಿದ ಪ್ರತಿಜ್ಞೆಯಂತೆ ನಡೆಯದವನನ್ನು ದೇವರು ಅವನ ಮನೆಯಿಂದ ಝಾಡಿಸಿಬಿಡಲಿ; ಅವನು ತಾನು ಗಳಿಸಿದ್ದೆಲ್ಲವನ್ನು ಕಳೆದುಕೊಳ್ಳಲಿ” ಎಂದು ಹೇಳಿದಾಗ ಜನರೆಲ್ಲರೂ “ಆಮೆನ್” ಅಂದರು; ಯೆಹೋವನನ್ನು ಸ್ತುತಿಸಿದರು. ತಾವು ಮಾಡಿದ ಪ್ರತಿಜ್ಞೆಯಂತೆ ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ ನನ್ನ ನಡು ಪಟ್ಟಿಯನ್ನು ಝಾಡಿಸಿ ಅವರಿಗೆ, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಸ್ವತ್ತಿನಿಂದಲೂ ಈ ಪ್ರಕಾರವೇ ಝಾಡಿಸಿ ಬಿಡಲಿ; ಅವನು ಝಾಡಿಸಲ್ಪಟ್ಟ ನಡುಪಟ್ಟಿಯಂತೆಯೇ ಬರಿದಾಗಲಿ” ಅಂದೆನು. ಕೂಡಲೆ ಸಭೆಯವರೆಲ್ಲಾ, “ಹಾಗೆಯೇ ಆಗಲಿ” ಎಂದು ಹೇಳಿ ಯೆಹೋವನನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ, ನನ್ನ ನಡುಪಟ್ಟಿಯನ್ನು ಝಾಡಿಸಿಬಿಟ್ಟು, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆ ಇಂದಲೂ ಆಸ್ತಿಪಾಸ್ತಿಯಿಂದಲೂ ಈ ಪ್ರಕಾರವೇ ಝಾಡಿಸಿಬಿಡಲಿ; ಅವನು ನಡುಪಟ್ಟಿಯಂತೆಯೇ ಝಾಡಿಸಲ್ಪಟ್ಟು ಬರಿದಾಗಲಿ,” ಎಂದೆ. ಕೂಡಲೆ ಸಭೆಯವರೆಲ್ಲರು ‘ಹಾಗೆಯೇ ಆಗಲಿ’ ಎಂದು ಹೇಳಿ ಸರ್ವೇಶ್ವರನನ್ನು ಕೊಂಡಾಡಿ ಕೊಟ್ಟಮಾತನ್ನು ಕೈಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಲ್ಲದೆ ನನ್ನ ಉಡಿಲನ್ನು ಝಾಡಿಸಿ ಅವರಿಗೆ - ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ ಸ್ವಾಸ್ತ್ಯದಿಂದಲೂ ಈ ಪ್ರಕಾರವೇ ಝಾಡಿಸಿ ಬಿಡಲಿ; ಅವನು ಉಡಿಲಿನಂತೆಯೇ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಕೂಡಲೆ ಸಭೆಯವರೆಲ್ಲಾ ಹಾಗೆಯೇ ಆಗಲಿ ಎಂದು ಹೇಳಿ ಯೆಹೋವನನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ನನ್ನ ಬಟ್ಟೆಯನ್ನು ಝಾಡಿಸಿ, “ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಅವನ ಆಸ್ತಿಪಾಸ್ತಿಯಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಿ, ಬರಿದಾಗಲಿ,” ಎಂದೆನು. ಅದಕ್ಕೆ ಸಭೆಯವರೆಲ್ಲರೂ, “ಆಮೆನ್” ಎಂದು ಹೇಳಿ ಯೆಹೋವ ದೇವರನ್ನು ಸ್ತುತಿಸಿದರು. ಜನರು ತಾವು ಕೊಟ್ಟ ಮಾತಿನ ಪ್ರಕಾರ ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:13
17 ತಿಳಿವುಗಳ ಹೋಲಿಕೆ  

ಆದರೆ ಯೆಹೂದ್ಯರು ಪೌಲನ ಉಪದೇಶವನ್ನು ತಿರಸ್ಕರಿಸಿ ದೂಷಣೆ ಮಾಡಿದರು. ಆದ್ದರಿಂದ ಪೌಲನು ತನ್ನ ಬಟ್ಟೆಗಳ ಧೂಳನ್ನು ಝಾಡಿಸಿ ಯೆಹೂದ್ಯರಿಗೆ, “ನೀವು ರಕ್ಷಣೆ ಹೊಂದದಿದ್ದರೆ, ಅದು ನಿಮ್ಮ ಸ್ವಂತ ತಪ್ಪು. ನನ್ನಿಂದ ಸಾಧ್ಯವಾದದ್ದನ್ನೆಲ್ಲ ನಾನು ಮಾಡಿದ್ದೇನೆ. ಇನ್ನು ಮೇಲೆ ನಾನು ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇನೆ!” ಎಂದು ಹೇಳಿದನು.


ಒಂದು ಮನೆಯವರು ಅಥವಾ ಒಂದು ಊರಿನವರು ನಿಮ್ಮನ್ನು ಸ್ವಾಗತಿಸದಿದ್ದರೆ ಇಲ್ಲವೇ ನಿಮ್ಮ ಮಾತನ್ನು ಕೇಳದಿದ್ದರೆ ನೀವು ಆ ಸ್ಥಳವನ್ನು ಬಿಟ್ಟುಹೋಗುವಾಗ, ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.


ಇಸ್ರೇಲರ ದೇವರಾದ ಯೆಹೋವನು ಸದಾಕಾಲವೂ ಘನಹೊಂದಲಿ; ನಿರಂತರವೂ ಕೊಂಡಾಡಲ್ಪಡಲಿ! ಇಸ್ರೇಲರೆಲ್ಲರೂ ಯೆಹೋವನನ್ನು ಸ್ತುತಿಸಿ “ಆಮೆನ್” ಅಂದರು.


ಆದ್ದರಿಂದ ಪೌಲ ಬಾರ್ನಬರು ಅವರ ವಿರೋಧವಾಗಿ ತಮ್ಮ ಕಾಲಿನ ಧೂಳನ್ನು ಝಾಡಿಸಿ, ಇಕೋನಿಯಾ ಪಟ್ಟಣಕ್ಕೆ ಹೋದರು.


ಹರಕೆ ಮಾಡಿ ಸಲ್ಲಿಸದಿರುವುದಕ್ಕಿಂತ ಹರಕೆ ಮಾಡದಿರುವುದೇ ಉತ್ತಮ.


ನಿನ್ನ ವಿಧಿನಿಯಮಗಳು ಒಳ್ಳೆಯವೇ. ಅವುಗಳಿಗೆ ವಿಧೇಯನಾಗಿರುವುದಾಗಿ ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.


ದೇವರಾದ ಯೆಹೋವನಿಗೆ ಹರಕೆಗಳನ್ನು ಮಾಡಿದವರೇ, ನಿಮ್ಮ ಹರಕೆಗಳನ್ನು ಸಲ್ಲಿಸಿರಿ. ಸರ್ವಭೂನಿವಾಸಿಗಳೇ, ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ.


ಕೃತಜ್ಞತಾಯಜ್ಞಗಳನ್ನು ದೇವರಿಗೆ ಅರ್ಪಿಸಿರಿ. ನೀವು ಮಾಡಿಕೊಂಡ ಹರಕೆಗಳನ್ನು ಮಹೋನ್ನತನಿಗೆ ಸಲ್ಲಿಸಿರಿ.


ಎಜ್ರನು ಮಹೋನ್ನತ ದೇವರಾದ ಯೆಹೋವನನ್ನು ಸ್ತುತಿಸಿದನು. ಆಗ ಜನರೆಲ್ಲರೂ ಕೈಗಳನ್ನೆತ್ತಿ, “ಆಮೆನ್! ಆಮೆನ್!” ಎಂದು ಹೇಳಿದರು; ತಲೆಬಾಗಿ ಯೆಹೋವನನ್ನು ಆರಾಧಿಸಿದರು.


ರಾಜನು ಸ್ತಂಭದ ಬಳಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞೆಗಳಿಗೆ, ಒಡಂಬಡಿಕೆಗೆ ಮತ್ತು ಆತನ ನಿಯಮಗಳಿಗೆ ಪೂರ್ಣಹೃದಯದಿಂದಲೂ ಪೂರ್ಣಆತ್ಮದಿಂದಲೂ ವಿಧೇಯನಾಗಿರುವುದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ರಾಜನ ಪ್ರಮಾಣಕ್ಕೆ ಬೆಂಬಲ ನೀಡಲು ಜನರೆಲ್ಲರೂ ಎದ್ದುನಿಂತರು.


ಆಗ ಸಮುವೇಲನು ಸೌಲನಿಗೆ, “ನೀನು ನನ್ನ ಮೇಲಂಗಿಯನ್ನು ಹರಿದುಹಾಕಿದೆ. ಇದೇರೀತಿ ಯೆಹೋವನು ಈ ದಿನ ನಿನ್ನಿಂದ ಇಸ್ರೇಲ್ ರಾಜ್ಯವನ್ನು ಹರಿದುಹಾಕಿದನು. ನಿನ್ನ ಸ್ನೇಹಿತರಲ್ಲಿ ಒಬ್ಬನಿಗೆ ಯೆಹೋವನು ರಾಜ್ಯಾಧಿಕಾರವನ್ನು ಕೊಟ್ಟಿದ್ದಾನೆ. ಅವನು ನಿನಗಿಂತ ಉತ್ತಮ ವ್ಯಕ್ತಿ.


ಯಾಜಕನು, ‘ಹಾನಿಯನ್ನು ಉಂಟುಮಾಡುವ ಈ ನೀರನ್ನು ನೀನು ಕುಡಿಯಬೇಕು. ನೀನು ಪಾಪ ಮಾಡಿದ್ದರೆ ನಿನಗೆ ಮಕ್ಕಳಾಗುವುದಿಲ್ಲ ಮತ್ತು ನೀನು ಪಡೆಯುವ ಮಗು ಹುಟ್ಟುವ ಮೊದಲೇ ಸಾಯುವುದು’ ಎಂದು ಹೇಳಬೇಕು. ಅದಕ್ಕೆ ಸ್ತ್ರೀಯು, ‘ಹಾಗೆಯೇ ಆಗಲಿ’ ಎಂದು ಹೇಳಬೇಕು.


ನೀನು ನಿನ್ನ ಜೀವಾತ್ಮದಿಂದ ಸುತ್ತಿಸಬಹದು. ಆದರೆ ಅಲ್ಲಿರುವ ಒಬ್ಬನು ನಿನ್ನ ಕೃತಜ್ಞತಾಸ್ತುತಿಯನ್ನು ಅರ್ಥಮಾಡಿಕೊಳ್ಳದ ಹೊರತು “ಆಮೆನ್‌” ಎಂದು ಹೇಳಲಾರನು. ಏಕೆಂದರೆ ನೀನು ಹೇಳುತ್ತಿರುವುದು ಅವನಿಗೆ ತಿಳಿಯುವುದಿಲ್ಲ.


ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗದಿದ್ದರೆ ಕೆಡುಕರ ಪರವಾಗಿರುವೆ. ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗಿದ್ದರೆ ಕೆಡುಕರಿಗೆ ವಿರೋಧವಾಗಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು