Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:14 - ಪರಿಶುದ್ದ ಬೈಬಲ್‌

14 ಯೆಹೂದ ಪ್ರಾಂತ್ಯಕ್ಕೆ ನನ್ನನ್ನು ರಾಜ್ಯಪಾಲನಾಗಿ ನೇಮಿಸಿದಂದಿನಿಂದ, ನಾನಾಗಲಿ ನನ್ನ ಸಹೋದರರಾಗಲಿ ರಾಜ್ಯಪಾಲರಿಗಾಗಿ ಪ್ರತ್ಯೇಕಿಸಿದ ಆಹಾರವನ್ನು ತಿನ್ನಲಿಲ್ಲ; ನನಗಾಗಿ ಆಹಾರವನ್ನು ಕೊಂಡುಕೊಳ್ಳಲು ಜನರಿಂದ ತೆರಿಗೆ ವಸೂಲಿಮಾಡಲಿಲ್ಲ. ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆ ವರ್ಷದ ತನಕ ನಾನು ರಾಜ್ಯಪಾಲನಾಗಿದ್ದೆನು. ಹೀಗೆ ಹನ್ನೆರಡು ವರ್ಷ ಯೆಹೂದದ ರಾಜ್ಯಪಾಲನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅರಸನಾದ ಅರ್ತಷಸ್ತನು ನನ್ನನ್ನು ಯೆಹೂದ ದೇಶದ ಅಧಿಪತಿಯನ್ನಾಗಿ ನೇಮಿಸಿದಂದಿನಿಂದ ಹನ್ನೆರಡು ವರ್ಷಗಳ ವರೆಗೆ ಅಂದರೆ ಅವನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆಯ ವರ್ಷದವರೆಗೆ ನಾನಾಗಲಿ ನನ್ನ ಸಹೋದರರಾಗಲಿ ದೇಶಾಧಿಪತಿಗೆ ಸಲ್ಲತಕ್ಕ ಭತ್ಯದಿಂದ ಜೀವನಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅರಸ ಅರ್ತಷಸ್ತನು ನನ್ನನ್ನು ಜುದೇಯ ನಾಡಿನ ರಾಜ್ಯಪಾಲನನ್ನಾಗಿ ನೇಮಿಸಿದಂದಿನಿಂದ ಹನ್ನೆರಡು ವರ್ಷಗಳವರೆಗೆ ಅಂದರೆ, ಅವನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆಯ ವರ್ಷದವರೆಗೆ, ನಾನಾಗಲಿ, ನನ್ನ ಸಹೋದರರಾಗಲಿ ರಾಜ್ಯಪಾಲನೆಗೆ ಸಲ್ಲ ತಕ್ಕ ಭತ್ಯದಿಂದ ಜೀವನ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅರಸನಾದ ಅರ್ತಷಸ್ತನು ನನ್ನನ್ನು ಯೆಹೂದ ದೇಶದ ಅಧಿಪತಿಯನ್ನಾಗಿ ನೇವಿುಸಿದಂದಿನಿಂದ ಹನ್ನೆರಡು ವರುಷಗಳವರೆಗೆ ಅಂದರೆ ಅವನ ಆಳಿಕೆಯ ಇಪ್ಪತ್ತನೆಯ ವರುಷದಿಂದ ಮೂವತ್ತೆರಡನೆಯ ವರುಷದವರೆಗೆ ನಾನಾಗಲಿ ನನ್ನ ಸಹೋದರರಾಗಲಿ ದೇಶಾಧಿಪತಿಗೆ ಸಲ್ಲತಕ್ಕ ಆಯದಿಂದ ಜೀವನಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ನಾನು ಯೆಹೂದ ದೇಶದಲ್ಲಿ ಅವರ ರಾಜ್ಯಪಾಲನಾದ ಕಾಲ ಮೊದಲ್ಗೊಂಡು ಅರಸನಾದ ಅರ್ತಷಸ್ತನ ಇಪ್ಪತ್ತನೆಯ ವರ್ಷ ಮೊದಲ್ಗೊಂಡು ಮೂವತ್ತೆರಡನೆಯ ವರ್ಷದವರೆಗೆ ಹನ್ನೆರಡು ವರ್ಷವಾಗಿ ನಾನೂ, ನನ್ನ ಸಹೋದರರೂ ರಾಜ್ಯಪಾಲನಿಗೆ ಸಲ್ಲತಕ್ಕ ಆಹಾರವನ್ನು ತಿನ್ನಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:14
9 ತಿಳಿವುಗಳ ಹೋಲಿಕೆ  

ಇದೆಲ್ಲಾ ನಡೆಯುತ್ತಿರುವಾಗ ನಾನು ಜೆರುಸಲೇಮಿನಲ್ಲಿರಲಿಲ್ಲ. ನಾನು ಬಾಬಿಲೋನಿನ ಅರಸನ ಬಳಿಗೆ ಹಿಂತಿರುಗಿದ್ದೆನು. ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ನಾನು ಅವನ ಬಳಿಗೆ ಹೋದೆನು. ಸ್ವಲ್ಪಕಾಲವಾದ ಬಳಿಕ ಅರಸನ ಅಪ್ಪಣೆಯೊಂದಿಗೆ ನಾನು ಹಿಂತಿರುಗಿ ಜೆರುಸಲೇಮಿಗೆ ಬಂದೆನು.


ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ನಿಸ್ಸಾನ್ ತಿಂಗಳಲ್ಲಿ ರಾಜನಿಗೆ ದ್ರಾಕ್ಷಾರಸವನ್ನು ನಾನು ಕೊಟ್ಟೆನು. ನಾನೆಂದೂ ರಾಜನ ಮುಂದೆ ದುಃಖಿತನಾಗಿರಲಿಲ್ಲ. ಆದರೆ ಈ ಸಮಯದಲ್ಲಿ ನನ್ನ ಮುಖವು ಕಳೆಗುಂದಿದ್ದರಿಂದ,


ಹೀಗಿರಲು, ನನಗೆ ಯಾವ ಬಹುಮಾನ ಸಿಕ್ಕುವುದು? ಸುವಾರ್ತೆಯನ್ನು ಉಚಿತವಾಗಿ ಬೋಧಿಸುವುದೊಂದೇ ನನಗೆ ದೊರೆಯುವ ಬಹುಮಾನವಾಗಿದೆ. ಆದ್ದರಿಂದ ಸುವಾರ್ತೆಯನ್ನು ಸಾರುವಾಗ ಅದರಿಂದ ಜೀವನೋಪಾಯಕ್ಕಾಗಿ ನನಗಿರುವ ಹಕ್ಕನ್ನು ಬಳಸಿಕೊಳ್ಳುವುದಿಲ್ಲ.


ಇವು ನೆಹೆಮೀಯನ ಮಾತುಗಳು; ನೆಹೆಮೀಯನು ಹಕಲ್ಯನ ಮಗ. ಕಿಸ್ಲೇವ್ ತಿಂಗಳಿನಲ್ಲಿ ರಾಜಧಾನಿಯಾದ ಶೂಷನ್‌ನಲ್ಲಿ ನಾನು ಇದ್ದೆನು. ಅದು ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷವಾಗಿತ್ತು.


ಐದು ತಲಾಂತು ತೆಗೆದುಕೊಂಡ ಸೇವಕನು ತಕ್ಷಣವೇ ಹೋಗಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಸಂಪಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು