Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:15 - ಪರಿಶುದ್ದ ಬೈಬಲ್‌

15 ನನಗಿಂತ ಮೊದಲು ರಾಜ್ಯಪಾಲರಾಗಿದ್ದವರು ಜನರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದರು. ಪ್ರತಿಯೊಬ್ಬರು ಒಂದು ಪೌಂಡ್ ಬೆಳ್ಳಿಯನ್ನೂ ಆಹಾರವನ್ನೂ ದ್ರಾಕ್ಷಾರಸವನ್ನೂ ಕೊಡಬೇಕಿತ್ತು. ಆ ರಾಜ್ಯಪಾಲರ ಅಧಿಕಾರಿಗಳು ಸಹ ಜನರ ಮೇಲೆ ದೊರೆತನ ನಡೆಸಿ ಅವರ ಜೀವನವನ್ನು ಮತ್ತಷ್ಟು ಕಠಿಣಗೊಳಿಸಿದರು. ಆದರೆ ದೇವರಲ್ಲಿ ಭಯಭಕ್ತಿ ಇದ್ದುದರಿಂದ ನಾನು ಆ ರೀತಿ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನನಗಿಂತ ಮುಂಚೆಯಿದ್ದ ರಾಜ್ಯಪಾಲರು ಜನರ ಮೇಲೆ ಬಹಳ ತೆರಿಗೆ ಹೊರಿಸಿ, ಅವರಿಂದ ದಿನಕ್ಕೆ ನಾಲ್ವತ್ತು ಬೆಳ್ಳಿ ನಾಣ್ಯದ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು; ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸುತ್ತ ಇದ್ದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಹಾಗೆ ಮಾಡದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನಗಿಂತ ಮುಂಚೆಯಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ [ದಿನಕ್ಕೆ] ನಾಲ್ವತ್ತು ರೂಪಾಯಿಯ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡಿಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವದರಿಂದ ಹಾಗೆ ಮಾಡದೆ ಆ ಗೋಡೆ ಕಟ್ಟುವದರಲ್ಲಿ ನಿರತನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು, ನಾಲ್ವತ್ತು ಬೆಳ್ಳಿನಾಣ್ಯ ಮೌಲ್ಯದ ರೊಟ್ಟಿಯನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು. ಅವರ ಸೇವಕರು ಸಹ ಜನರ ಮೇಲೆ ದೊರೆತನ ನಡೆಸುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹಾಗೆ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:15
19 ತಿಳಿವುಗಳ ಹೋಲಿಕೆ  

ನಾನು ಹೇಳುವುದನ್ನು ಮುಂದುವರಿಸುತ್ತಾ, “ನೀವು ತಪ್ಪು ಕೆಲಸ ಮಾಡುತ್ತಿದ್ದೀರಿ. ದೇವರಿಗೆ ಭಯಪಟ್ಟು ಆತನನ್ನು ಗೌರವಿಸಬೇಕೆಂದು ನಿಮಗೆ ಗೊತ್ತಿದೆ. ಇತರ ಜನರು ಮಾಡುವ ನಾಚಿಕೆಕರವಾದ ಕೆಲಸವನ್ನು ನೀವು ಮಾಡಬಾರದು.


ಯೆಹೋವನನ್ನು ಗೌರವಿಸುವ ಜನರು ಆತನ ಸೇವಕನ ಮಾತನ್ನು ಕೇಳುವರು. ಆ ಸೇವಕನು ಮುಂದೆ ಸಂಭವಿಸುವುದರ ಬಗ್ಗೆ ಚಿಂತೆ ಇಲ್ಲದೆ ಸಂಪೂರ್ಣವಾಗಿ ದೇವರ ಮೇಲೆ ನಂಬಿಕೆ ಇಡುವನು. ಅವನು ಪರಿಪೂರ್ಣವಾಗಿ ಯೆಹೋವನ ಹೆಸರಿನಲ್ಲಿ ನಂಬಿಕೆ ಇಟ್ಟು ತನ್ನ ದೇವರ ಮೇಲೆ ಅವಲಂಬಿಸಿಕೊಳ್ಳುವನು.


ಪ್ರೀತಿ ಮತ್ತು ನಂಬಿಗಸ್ತಿಕೆಗಳು ದೋಷಕ್ಕೆ ಪ್ರಾಯಶ್ಚಿತ್ತವಾಗಿವೆ. ಯೆಹೋವನಲ್ಲಿ ಭಯಭಕ್ತಿಯಿಂದಿರಿ, ಆಗ ನೀವು ದುಷ್ಟತನದಿಂದ ದೂರವಾಗುವಿರಿ.


ನಾನು ನಿಮ್ಮಲ್ಲಿದ್ದಾಗ ನನ್ನ ಯಾವ ಕೊರತೆಯಲ್ಲಿಯೂ ನಿಮಗೆ ತೊಂದರೆ ಕೊಡಲಿಲ್ಲ. ಮಕೆದೋನಿಯದಿಂದ ಬಂದಿದ್ದ ಸಹೋದರರು ನನಗೆ ಬೇಕಾಗಿದ್ದದ್ದನ್ನೆಲ್ಲ ಕೊಟ್ಟರು. ನಾನು ನಿಮಗೆ ಯಾವ ರೀತಿಯಲ್ಲಿಯೂ ಭಾರವಾಗದಂತೆ ನೋಡಿಕೊಂಡೆನು. ಇನ್ನು ಮುಂದೆಯೂ ನಾನು ನಿಮಗೆ ಭಾರವಾಗಿರುವುದಿಲ್ಲ.


ನೀವು ನಿಮ್ಮ ಸ್ನೇಹಿತರಿಗೆ ಮಾತ್ರ ಒಳ್ಳೆಯವರಾಗಿದ್ದರೆ, ನೀವು ಬೇರೆಯವರಿಗಿಂತ ಉತ್ತಮರೇನೂ ಅಲ್ಲ. ದೇವರನ್ನರಿಯದ ಜನರು ಸಹ ತಮ್ಮ ಸ್ನೇಹಿತರಿಗೆ ಒಳ್ಳೆಯವರಾಗಿರುತ್ತಾರೆ.


ನಾನು ಆ ಕೆಟ್ಟಕಾರ್ಯಗಳಲ್ಲಿ ಯಾವುದನ್ನೂ ಮಾಡಲಿಲ್ಲ. ಯಾಕೆಂದರೆ ನಾನು ದೇವರ ಶಿಕ್ಷೆಗೆ ಹೆದರಿಕೊಂಡಿದ್ದೆ. ಆತನ ವೈಭವದ ಎದುರಿನಲ್ಲಿ ನಿಂತುಕೊಳ್ಳಲು ನನಗಾಗಲಿಲ್ಲ.


ನಾನು ಈ ಕಾರ್ಯಗಳನ್ನು ಬಹು ತಾಳ್ಮೆಯಿಂದ ಮಾಡಿದೆನು. ಆದ್ದರಿಂದ ಇತರ ಸಭೆಗಳಿಗೆ ದೊರೆತವುಗಳೆಲ್ಲ ನಿಮಗೂ ದೊರೆತವು. ಒಂದೇ ಒಂದು ವ್ಯತ್ಯಾಸವೇನೆಂದರೆ, ನಾನು ನಿಮಗೆ ಭಾರವಾಗಿರಲಿಲ್ಲ. ಈ ವಿಷಯದಲ್ಲಿ ನನ್ನನ್ನು ಕ್ಷಮಿಸಿರಿ.


ಅಧಿಪತಿಯು ಸುಳ್ಳುಮಾತುಗಳಿಗೆ ಕಿವಿಗೊಟ್ಟರೆ, ಅವನ ಅಧೀನದಲ್ಲಿರುವ ಅಧಿಕಾರಿಗಳೆಲ್ಲರು ಕೆಡುಕರಾಗುವರು.


ಯೆಹೋವನು ತನ್ನನ್ನು ಆರಾಧಿಸುವ ಜನರಲ್ಲೇ ಸಂತೋಷಪಡುವನು. ಆತನು ತನ್ನ ಶಾಶ್ವತ ಪ್ರೀತಿಯಲ್ಲಿ ಭರವಸವಿಟ್ಟಿರುವವರನ್ನು ಮೆಚ್ಚಿಕೊಳ್ಳುವನು.


ಯೆಹೋವನಿಗೆ ಸ್ತೋತ್ರವಾಗಲಿ! ಯಾವನು ಆತನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಆಜ್ಞೆಗಳನ್ನು ಪ್ರೀತಿಸುವನೋ ಅವನೇ ಧನ್ಯನು.


ನೀವು ಬೆಳೆದ ಧಾನ್ಯಗಳಲ್ಲಿ ಮತ್ತು ದ್ರಾಕ್ಷಿಗಳಲ್ಲಿ ಅವನು ಹತ್ತನೆ ಒಂದು ಭಾಗವನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುತ್ತಾನೆ.


ಅಬ್ರಹಾಮನು ಅವನಿಗೆ, “ನನಗೆ ಹೆದರಿಕೆಯಾಗಿತ್ತು. ಈ ಸ್ಥಳದವರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದು ನಾನು ಭಾವಿಸಿಕೊಂಡೆ. ಯಾರಾದರೂ ನನ್ನನ್ನು ಕೊಂದು ಸಾರಳನ್ನು ತೆಗೆದುಕೊಳ್ಳಬಹುದೆಂದು ಯೋಚಿಸಿದೆ.


ಮೂರು ದಿನಗಳಾದ ಮೇಲೆ ಯೋಸೇಫನು ಅವರಿಗೆ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು. ನೀವು ಈ ಕಾರ್ಯವೊಂದನ್ನು ಮಾಡಿದರೆ ನಾನು ನಿಮ್ಮನ್ನು ಉಳಿಸುತ್ತೇನೆ;


ಜೆರುಸಲೇಮಿನ ಗೋಡೆ ಕಟ್ಟುವ ಕೆಲಸದಲ್ಲಿ ನಾನು ತುಂಬಾ ಪ್ರಯಾಸಪಟ್ಟೆನು. ಗೋಡೆಯ ನಿರ್ಮಾಣ ಕೆಲಸಕ್ಕಾಗಿ ನನ್ನ ಜನರೆಲ್ಲರೂ ಒಟ್ಟಾಗಿ ಸೇರಿದರು. ನಾವು ಯಾರಿಂದಲೂ ಭೂಮಿಯನ್ನು ಕಿತ್ತುಕೊಳ್ಳಲಿಲ್ಲ.


ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ಕೊಂಡು ಅದರ ಕ್ರಯವಾಗಿ ಹದಿನೇಳು ಶೆಕೆಲ್‌ ಬೆಳ್ಳಿಯನ್ನು ತೂಕಹಾಕಿದೆನು.


ಗುಲಾಮರು ನಮ್ಮ ಅಧಿಪತಿಗಳಾಗಿದ್ದಾರೆ. ನಮ್ಮನ್ನು ಯಾರೂ ಅವರಿಂದ ರಕ್ಷಿಸಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು