Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:19 - ಪರಿಶುದ್ದ ಬೈಬಲ್‌

19 ದೇವರೇ, ನಾನು ಈ ಜನರಿಗಾಗಿ ಮಾಡಿರುವ ಒಳ್ಳೆಯದನ್ನೆಲ್ಲಾ ಜ್ಞಾಪಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಅನುಗ್ರಹಿಸು ಎಂದು ಪ್ರಾರ್ಥಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ‘ನನ್ನ ದೇವರೇ, ನಾನು ಈ ಜನರಿಗೆ ಮಾಡಿದ ಉಪಕಾರವನ್ನು ನೆನೆಸಿಕೊಂಡು ನನಗೆ ಒಳಿತನ್ನು ಅನುಗ್ರಹಿಸಿ!’ ಎಂದು ಪ್ರಾರ್ಥಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನೂ ನನ್ನ ಹಿತಕ್ಕಾಗಿ ನೆನಪು ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ನನ್ನ ದೇವರೇ, ನಾನು ಈ ಜನರಿಗೆ ಮಾಡಿದ ಎಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಮಾಡಿರಿ,” ಎಂದು ಪ್ರಾರ್ಥಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:19
13 ತಿಳಿವುಗಳ ಹೋಲಿಕೆ  

ಜನರು ಕಟ್ಟಿಗೆಯನ್ನೂ ಪ್ರಥಮಫಲಗಳನ್ನೂ ಸರಿಯಾದ ಸಮಯದಲ್ಲಿ ತರುವಂತೆ ನಾನು ಆಜ್ಞಾಪಿಸಿದೆನು. ನನ್ನ ದೇವರೇ, ಈ ಒಳ್ಳೆಯ ಕಾರ್ಯಗಳನ್ನೆಲ್ಲಾ ಮಾಡಿದ ನನ್ನನ್ನು ಮರೆಯಬೇಡ.


ಇದಾದ ಬಳಿಕ ತಮ್ಮನ್ನು ಶುದ್ಧಪಡಿಸಿಕೊಳ್ಳಲು ಲೇವಿಯರಿಗೆ ಆಜ್ಞಾಪಿಸಿದೆನು. ಅವರು ಶುದ್ಧಪಡಿಸಿಕೊಂಡ ಬಳಿಕ ಬಾಗಿಲುಗಳನ್ನು ಕಾಯಲು ಅವರನ್ನು ಕಳುಹಿಸಿದೆನು. ಯಾಕೆಂದರೆ ಸಬ್ಬತ್‌ದಿನವು ಪವಿತ್ರ ದಿನವೆಂದು ಎಲ್ಲರೂ ಆಚರಿಸುವಂತೆ ಹೀಗೆ ಮಾಡಿದೆನು. ದೇವರೇ, ನನ್ನ ಈ ಕಾರ್ಯವನ್ನು ನಿನ್ನ ನೆನಪಿನಲ್ಲಿಟ್ಟುಕೋ. ನನ್ನ ಮೇಲೆ ದಯವಿಟ್ಟು ನಿನ್ನ ಪ್ರೀತಿಯನ್ನು ತೋರಿಸು.


ದೇವರೇ, ನಾನು ಮಾಡಿದ ಈ ಕಾರ್ಯಗಳು ನಿನ್ನ ನೆನಪಿನಲ್ಲಿರಲಿ. ನಿನ್ನ ಆಲಯಕ್ಕೂ ಅದರ ಸೇವೆಗಳಿಗಾಗಿಯೂ ನಾನು ನಂಬಿಗಸ್ತಿಕೆಯಿಂದ ಮಾಡಿರುವ ಸೇವೆಯನ್ನೂ ಮರೆಯದಿರು.


ಯೆಹೋವನೇ, ನಿನ್ನ ಜನರಿಗೆ ದಯೆತೋರುವಾಗ ನನ್ನನ್ನು ಜ್ಞಾಪಿಸಿಕೊಂಡು ದಯೆತೋರು. ನಿನ್ನ ಜನರನ್ನು ರಕ್ಷಿಸುವಾಗ ನನ್ನನ್ನು ನೆನಪು ಮಾಡಿಕೊಂಡು ರಕ್ಷಿಸು.


ನಾನು ನಿಮಗಾಗಿ ಹಾಕಿದ ಯೋಜನೆಗಳು ನನಗೆ ಗೊತ್ತಿರುವುದರಿಂದ ನಾನು ಹೀಗೆ ಹೇಳುತ್ತಿದ್ದೇನೆ.” ಇದು ಯೆಹೋವನ ಸಂದೇಶ. “ನಾನು ನಿಮಗಾಗಿ ಒಳ್ಳೆಯ ಯೋಜನೆಗಳನ್ನು ಹಾಕಿದ್ದೇನೆ. ನಿಮಗೆ ಕೆಟ್ಟದ್ದನ್ನು ಮಾಡುವ ವಿಚಾರ ನನಗಿಲ್ಲ. ನಾನು ನಿಮಗಾಗಿ ಆಶಾದಾಯಕವಾದ ಮತ್ತು ಒಳ್ಳೆಯ ಭವಿಷ್ಯದ ವಿಚಾರಗಳನ್ನಿಟ್ಟುಕೊಂಡಿದ್ದೇನೆ.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಕ್ರಿಸ್ತನವರೆಂದು ಯಾವನಾದರೂ ನಿಮಗೆ ಕುಡಿಯಲು ನೀರು ಕೊಟ್ಟರೂ ಅವನಿಗೆ ಅದರ ಪ್ರತಿಫಲ ಖಂಡಿತವಾಗಿ ಸಿಕ್ಕುವುದು.


ದೀನರಾದ ಇವರಿಗೆ ನನ್ನ ಹಿಂಬಾಲಕರೆಂಬ ನಿಮಿತ್ತ ಸಹಾಯ ಮಾಡುವವನು ಖಂಡಿತವಾಗಿಯೂ ಪ್ರತಿಫಲವನ್ನು ಪಡೆಯುವನು. ನನ್ನ ಹಿಂಬಾಲಕರಿಗೆ ಕೇವಲ ಒಂದು ಬಟ್ಟಲು ತಣ್ಣೀರನ್ನು ಕೊಟ್ಟರೂ ಸಹ ಅದಕ್ಕೆ ಬರತಕ್ಕ ಪ್ರತಿಫಲವು ತಪ್ಪುವುದೇ ಇಲ್ಲ.”


ಒಡೆಯನೇ, ನಾನು ಕೇವಲ ಬಡವನೂ ಅಸಹಾಯಕನೂ ಆಗಿರುವೆ. ನನಗೆ ಸಹಾಯಮಾಡಿ ನನ್ನನ್ನು ರಕ್ಷಿಸು. ನನ್ನ ದೇವರೇ, ತಡಮಾಡಬೇಡ.


ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನ್ನ ವಿಷಯವಾಗಿ ಫರೋಹನಿಗೆ ತಿಳಿಸಿ ನನಗೆ ಸೆರೆಮನೆಯಿಂದ ಬಿಡುಗಡೆಯಾಗುವಂತೆ ಮಾಡು.


“ಯೆಹೋವನೇ, ನಾನು ಪೂರ್ಣಮನಸ್ಸಿನಿಂದ ನಿಜವಾಗಿಯೂ ನಿನ್ನ ಸೇವೆಮಾಡಿದ್ದೇನೆಂಬುದನ್ನು ನೆನಪುಮಾಡಿಕೊ. ನೀನು ಯೋಗ್ಯವೆಂದು ಹೇಳಿದವುಗಳನ್ನು ನಾನು ಮಾಡಿದೆನು” ಎಂದು ಹೇಳಿದನು. ನಂತರ ಹಿಜ್ಕೀಯನು ಬಹಳ ಜೋರಾಗಿ ಗೋಳಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು