Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:2 - ಪರಿಶುದ್ದ ಬೈಬಲ್‌

2 ಕೆಲವರು ಹೀಗಂದರು: “ನಮ್ಮ ಮನೆಯಲ್ಲಿ ಬಹಳ ಮಕ್ಕಳಿದ್ದಾರೆ. ನಮಗೆ ಊಟಮಾಡಲು ಸಾಕಷ್ಟು ದವಸಧಾನ್ಯವಿಲ್ಲ; ಹೀಗಿರಲು ನಾವು ಜೀವಂತವಾಗಿ ಉಳಿಯುವ ಸಾಧ್ಯತೆಯಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರಲ್ಲಿ ಕೆಲವರು, “ನಾವೂ ನಮ್ಮ ಗಂಡು ಹೆಣ್ಣು ಮಕ್ಕಳೂ ಬಹು ಮಂದಿ ಇದ್ದೇವೆ; ನಮ್ಮ ಜೀವನಕ್ಕಾಗಿ ಧಾನ್ಯವು ಬೇಕಾಗಿದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕೆಲವರು, “ನಮಗೆ ಗಂಡುಹೆಣ್ಣು ಮಕ್ಕಳು ಬಹುಮಂದಿ ಇದ್ದಾರೆ; ನಮ್ಮ ಜೀವನಕ್ಕಾಗಿ ಕಾಳುಕಡ್ಡಿಗಳನ್ನು ಹೇಗಾದರೂ ಸಂಪಾದಿಸಿಕೊಳ್ಳಬೇಕಾಗಿ ಇದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕೆಲವರು - ನಾವೂ ನಮ್ಮ ಗಂಡುಹೆಣ್ಣು ಮಕ್ಕಳೂ ಬಹುಮಂದಿ ಇದ್ದೇವೆ; ನಮ್ಮ ಜೀವನಕ್ಕಾಗಿ ಕಾಳುಕಡ್ಡಿಗಳನ್ನು ಹೇಗಾದರೂ ಸಂಪಾದಿಸಿಕೊಳ್ಳೋಣ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರಲ್ಲಿ ಕೆಲವರು, “ನಾವೂ, ನಮ್ಮ ಪುತ್ರರೂ, ನಮ್ಮ ಪುತ್ರಿಯರೂ ಅನೇಕರಾದುದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತೆಗೆದುಕೊಳ್ಳೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:2
11 ತಿಳಿವುಗಳ ಹೋಲಿಕೆ  

ನನ್ನ ನಾಮವನ್ನು ಘನಪಡಿಸದೆ ಹೋದರೆ ಕೆಟ್ಟ ವಿಷಯಗಳು ನಿಮಗೆ ಪ್ರಾಪ್ತಿಯಾಗುವವು. ನೀವು ಆಶೀರ್ವದಿಸುವಿರಿ. ಆದರೆ ಅದು ಶಾಪವಾಗುವದು. ಕೆಟ್ಟ ವಿಷಯಗಳು ನೆರವೇರುವಂತೆ ನಾನು ಮಾಡುವೆನು. ಯಾಕೆಂದರೆ ನೀವು ನನ್ನ ಹೆಸರನ್ನು ಘನಪಡಿಸುವದಿಲ್ಲ.” ಇದನ್ನು ಸರ್ವಶಕ್ತನಾದ ಯೆಹೋವನು ನುಡಿದಿದ್ದಾನೆ.


ಆಮೇಲೆ ಯೆಹೂದನು ತನ್ನ ತಂದೆಯಾದ ಇಸ್ರೇಲನಿಗೆ, “ನನ್ನೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡು. ನಾನು ಅವನನ್ನು ನೋಡಿಕೊಳ್ಳುವೆನು. ನಾವು ಈಜಿಪ್ಟಿಗೆ ಹೋಗಿ ಆಹಾರವನ್ನು ತರಬೇಕು. ಇಲ್ಲವಾದರೆ ನಾವೂ ಸಾಯುವೆವು, ನಮ್ಮ ಮಕ್ಕಳೂ ಸಾಯುವರು.


ಈಜಿಪ್ಟಿನಲ್ಲಿ ದವಸಧಾನ್ಯಗಳಿರುವುದಾಗಿ ನಾನು ಕೇಳಿದ್ದೇನೆ. ಆದ್ದರಿಂದ ನಾವು ಅಲ್ಲಿಗೆ ಹೋಗಿ ನಮ್ಮ ಆಹಾರವನ್ನು ಕೊಂಡುಕೊಳ್ಳೋಣ. ಆಗ ನಾವು ಸಾಯದೆ ಬದುಕಿಕೊಳ್ಳುವೆವು” ಎಂದು ಹೇಳಿದನು.


ಭೂಲೋಕದಲ್ಲೆಲ್ಲಾ ಕ್ಷಾಮವು ಭಯಂಕರವಾಗಿದ್ದುದರಿಂದ ಎಲ್ಲಾ ದೇಶಗಳವರು ಯೋಸೇಫನಿಂದ ಆಹಾರವನ್ನು ಪಡೆದುಕೊಳ್ಳುವುದಕ್ಕಾಗಿ ಈಜಿಪ್ಟಿಗೆ ಬಂದರು.


“ನೀವು ಇನ್ನೊಬ್ಬ ಇಸ್ರೇಲಿಗೆ ಸಾಲಕೊಟ್ಟರೆ ಅದಕ್ಕೆ ಬಡ್ಡಿ ವಸೂಲು ಮಾಡಬಾರದು.


ಒಂದು ದಿನ ಪ್ರವಾದಿಮಂಡಲಿಯವರಲ್ಲೊಬ್ಬನ ಪತ್ನಿಯು ಗೋಳಾಡುತ್ತಾ ಎಲೀಷನಲ್ಲಿಗೆ ಹೋಗಿ, “ನನ್ನ ಗಂಡನು ನಿನಗೆ ಸೇವಕನಂತಿದ್ದನು. ಈಗ ನನ್ನ ಗಂಡ ಸತ್ತಿದ್ದಾನೆ! ಅವನು ಯೆಹೋವನಲ್ಲಿ ಭಯಭಕ್ತಿ ಉಳ್ಳವನಾಗಿದ್ದದು ನಿನಗೆ ತಿಳಿದಿದೆ. ಆದರೆ ಅವನು ಒಬ್ಬ ಮನುಷ್ಯನಿಗೆ ಹಣವನ್ನು ಕೊಡಬೇಕಾಗಿದೆ. ಈಗ ಆ ಮನುಷ್ಯನು ನನ್ನ ಎರಡು ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಗುಲಾಮರನ್ನಾಗಿ ಮಾಡಿಕೊಳ್ಳಲು ಬರುತ್ತಿದ್ದಾನೆ!” ಎಂದು ಹೇಳಿದಳು.


ಇನ್ನು ಕೆಲವರು, “ನಮಗೀಗ ಬರಗಾಲ ಪ್ರಾಪ್ತಿಯಾಗಿದೆ. ನಮಗೆ ದವಸಧಾನ್ಯ ಕೊಂಡುಕೊಳ್ಳಲು ನಮ್ಮ ಹೊಲಗದ್ದೆಗಳನ್ನು ಮಾರಬೇಕಾಗುತ್ತದೆ” ಅಂದರು.


ನೀವು ಬಹಳ ಬೀಜವನ್ನು ಭೂಮಿಯಲ್ಲಿ ಬಿತ್ತಿದ್ದರೂ ಸ್ವಲ್ಪವೇ ಪೈರನ್ನು ಕೊಯ್ದಿದ್ದೀರಿ. ನಿಮಗೆ ಊಟಮಾಡಲು ಆಹಾರವಿದ್ದರೂ ತೃಪ್ತಿಯಾಗುವಷ್ಟಿಲ್ಲ. ನಿಮ್ಮಲ್ಲಿ ಕುಡಿಯಲು ಸ್ವಲ್ಪ ಪಾನೀಯವಿದ್ದರೂ ಕುಡಿದು ಅಮಲೇರುವಷ್ಟು ಇಲ್ಲ. ನಿಮ್ಮಲ್ಲಿ ತೊಟ್ಟುಕೊಳ್ಳಲು ಸ್ವಲ್ಪ ಬಟ್ಟೆಯಿದ್ದರೂ ನಿಮ್ಮನ್ನು ಬೆಚ್ಚಗಿಟ್ಟುಕೊಳ್ಳುವಷ್ಟು ಇಲ್ಲ. ನೀವು ಸ್ವಲ್ಪ ಹಣ ಸಂಪಾದನೆ ಮಾಡಿದರೂ ಅದು ಹೇಗೆ ಖರ್ಚಾಗುತ್ತದೋ ನಿಮಗೆ ತಿಳಿಯುವುದಿಲ್ಲ. ನಿಮ್ಮ ಜೇಬಿಗೆ ರಂಧ್ರ ಇದೆಯೋ ಎಂಬಂತೆ ಅದು ಖರ್ಚಾಗುತ್ತದೆ.’”


ನಿನ್ನ ಕಣ್ಣೆದುರಿನಲ್ಲಿಯೇ ನಾವು ಖಂಡಿತವಾಗಿ ಸಾಯುತ್ತೇವೆ. ಆದರೆ ನೀನು ನಮಗೆ ಆಹಾರವನ್ನು ಕೊಟ್ಟರೆ, ನಾವು ಫರೋಹನಿಗೆ ನಮ್ಮ ಭೂಮಿಯನ್ನು ಕೊಟ್ಟು ಅವನ ಗುಲಾಮರಾಗಿರುತ್ತೇವೆ. ಬಿತ್ತನೆ ಮಾಡಲು ನಮಗೆ ಬೀಜವನ್ನು ಕೊಡು. ಆಗ ನಾವು ಬದುಕುತ್ತೇವೆ, ಸಾಯುವುದಿಲ್ಲ. ಮತ್ತು ಭೂಮಿಯೂ ಬೆಳೆಗಳನ್ನು ಫಲಿಸುತ್ತದೆ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು