Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:4 - ಪರಿಶುದ್ದ ಬೈಬಲ್‌

4 ಇನ್ನೂ ಕೆಲವರು, “ನಮ್ಮ ಹೊಲಗದ್ದೆಗಳ ಮೇಲೆ ಅರಸನಿಗೆ ತೆರಿಗೆ ಕೊಡಬೇಕಾಗಿದೆ. ಆದರೆ ಕೊಡಲು ನಮ್ಮಲ್ಲಿ ಏನೂ ಇಲ್ಲ. ಬೇರೆಯವರಿಂದ ಎರವಲು ಪಡೆದುಕೊಂಡು ಕೊಡಬೇಕಾಗಿದೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮತ್ತು ಕೆಲವರು, “ಅರಸನ ಸರ್ಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಾವು ನಮ್ಮ ಹೊಲ ದ್ರಾಕ್ಷಿತೋಟಗಳ ಮೇಲೆ ಹಣವನ್ನು ಸಾಲವಾಗಿ ತೆಗೆದುಕೊಳ್ಳಬೇಕಾಯಿತು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮತ್ತೆ ಕೆಲವರು “ಸರಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಮ್ಮ ಹೊಲ, ತೋಟಗಳ ಮೇಲೆ ಸಾಲ ತೆಗೆದುಕೊಳ್ಳಬೇಕಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮತ್ತು ಕೆಲವರು - ಸರಕಾರಕ್ಕೆ ಕಂದಾಯಕೊಡುವದಕ್ಕಾಗಿ ನಾವು ನಮ್ಮ ಹೊಲ ತೋಟಗಳ ಮೇಲೆ ಸಾಲ ತೆಗೆದುಕೊಳ್ಳಬೇಕಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇನ್ನು ಕೆಲವರು, “ಅರಸನಿಗೆ ತೆರಿಗೆಯನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ, ನಮ್ಮ ದ್ರಾಕ್ಷಿತೋಟಗಳ ಮೇಲೆಯೂ ಸಾಲವನ್ನು ತೆಗೆದುಕೊಳ್ಳಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:4
9 ತಿಳಿವುಗಳ ಹೋಲಿಕೆ  

ಅದೇ ಸಮಯದಲ್ಲಿ ರಾಜರೇ, ನೀವು ತಿಳಿಯಬೇಕಾದ ವಿಷಯವೇನೆಂದರೆ, ಜೆರುಸಲೇಮ್ ಮತ್ತು ಅದರ ಪೌಳಿಗೋಡೆಗಳು ಕಟ್ಟಲ್ಪಟ್ಟಲ್ಲಿ ಅಲ್ಲಿಯ ಪ್ರಜೆಗಳು ತೆರಿಗೆ ಕೊಡುವುದನ್ನು ನಿಲ್ಲಿಸುವರು. ನಿನಗೆ ಕಪ್ಪಕಾಣಿಕೆ ಸಲ್ಲಿಸುವುದನ್ನೂ ಇತರ ತೆರಿಗೆಗಳನ್ನು ಕೊಡುವುದನ್ನೂ ನಿಲ್ಲಿಸುವರು. ಇದರಿಂದಾಗಿ ರಾಜರಿಗೆ ದೊಡ್ಡ ನಷ್ಟವಾಗಲಿದೆ.


ಬಲಿಷ್ಠರಾಜರು ಜೆರುಸಲೇಮನ್ನು ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯವನ್ನೆಲ್ಲಾ ಆಳಿದರು. ಅವರಿಗೆ ಕಪ್ಪಕಾಣಿಕೆ, ಸುಂಕ, ತೆರಿಗೆಗಳನ್ನು ಸಲ್ಲಿಸಲಾಗುತ್ತಿತ್ತು.


ಫಸಲು ಇಲ್ಲಿ ಉತ್ತಮವಾಗಿದೆ. ನಾವು ಪಾಪಮಾಡಿದ್ದರಿಂದ ನಮ್ಮ ಸುಗ್ಗಿಯು ನಮ್ಮನ್ನಾಳುವ ರಾಜರಿಗೆ ಹೋಗಿಬಿಡುತ್ತದೆ. ಆ ರಾಜರುಗಳು ನಮ್ಮನ್ನೂ ನಮ್ಮ ದನಕರುಗಳನ್ನೂ ತಮ್ಮ ಹತೋಟಿಯೊಳಗೆ ಇಟ್ಟಿರುತ್ತಾರೆ. ನಮ್ಮನ್ನು ತಮಗೆ ಇಷ್ಟಬಂದಂತೆ ನಡಿಸುತ್ತಾರೆ. ಆದ್ದರಿಂದ ನಾವು ಬಹಳ ಸಂಕಟದಲ್ಲಿ ಸಿಕ್ಕಿಕೊಂಡಿದ್ದೇವೆ.”


ನಾನು ನಿಮಗೆ ತಿಳಿಯಪಡಿಸುವುದೇನೆಂದರೆ: ಯಾಜಕರಿಂದ, ಲೇವಿಯರಿಂದ, ಗಾಯಕರಿಂದ, ದ್ವಾರಪಾಲಕರಿಂದ ಮತ್ತು ದೇವಾಲಯದ ಸೇವಕರಿಂದ ತೆರಿಗೆವಸೂಲಿ ಮಾಡುವುದು ನ್ಯಾಯಬಾಹಿರವಾದದ್ದು. ಅವರು ಯಾವ ರೀತಿಯ ತೆರಿಗೆಯನ್ನಾಗಲಿ ಸುಂಕವನ್ನಾಗಲಿ ಕಪ್ಪಕಾಣಿಕೆಯನ್ನಾಗಲಿ ಅರಸನಿಗೆ ಸಲ್ಲಿಸಬೇಕಿಲ್ಲ.


ಇಸ್ರೇಲರು ಈ ಜನರನ್ನು ನಾಶಪಡಿಸಲು ಸಮರ್ಥರಾಗಿರಲಿಲ್ಲ. ಆದರೆ ಸೊಲೊಮೋನನು ಅವರನ್ನು ತನ್ನ ಕೆಲಸ ಮಾಡಲು ಗುಲಾಮರನ್ನಾಗಿ ಇಟ್ಟುಕೊಂಡನು; ಅವರು ಇಂದಿಗೂ ಗುಲಾಮರಾಗಿದ್ದಾರೆ.


ಆದರೆ ಎಫ್ರಾಯೀಮಿನ ಜನರಿಗೆ ಗೆಜೆರಿನಲ್ಲಿದ್ದ ಕಾನಾನ್ಯರನ್ನು ಅಲ್ಲಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿಗೂ ಕಾನಾನ್ಯರು ಎಫ್ರಾಯೀಮ್ ಜನರೊಂದಿಗೆ ಇರುತ್ತಾರೆ. ಆದರೆ ಕಾನಾನ್ಯರು ಎಫ್ರಾಯೀಮ್ ಜನರ ದಾಸರಾಗಿದ್ದಾರೆ.


ಇನ್ನು ಕೆಲವರು, “ನಮಗೀಗ ಬರಗಾಲ ಪ್ರಾಪ್ತಿಯಾಗಿದೆ. ನಮಗೆ ದವಸಧಾನ್ಯ ಕೊಂಡುಕೊಳ್ಳಲು ನಮ್ಮ ಹೊಲಗದ್ದೆಗಳನ್ನು ಮಾರಬೇಕಾಗುತ್ತದೆ” ಅಂದರು.


ಬಡವನು ಐಶ್ವರ್ಯವಂತನಿಗೆ ಗುಲಾಮನಾಗಿದ್ದಾನೆ. ಸಾಲ ತೆಗೆದುಕೊಳ್ಳುವವನು ಸಾಲಕೊಡುವವನಿಗೆ ಸೇವಕನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು