Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:9 - ಪರಿಶುದ್ದ ಬೈಬಲ್‌

9 ನಾನು ಹೇಳುವುದನ್ನು ಮುಂದುವರಿಸುತ್ತಾ, “ನೀವು ತಪ್ಪು ಕೆಲಸ ಮಾಡುತ್ತಿದ್ದೀರಿ. ದೇವರಿಗೆ ಭಯಪಟ್ಟು ಆತನನ್ನು ಗೌರವಿಸಬೇಕೆಂದು ನಿಮಗೆ ಗೊತ್ತಿದೆ. ಇತರ ಜನರು ಮಾಡುವ ನಾಚಿಕೆಕರವಾದ ಕೆಲಸವನ್ನು ನೀವು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆನಂತರ ನಾನು ಅವರಿಗೆ, “ನೀವು ಮಾಡುತ್ತಿರುವುದು ಒಳ್ಳೆಯ ಕಾರ್ಯವಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಮೇಲೆ ನಾನು ಅವರಿಗೆ, “ನೀವು ಮಾಡಿದ್ದು ಸರಿಯಲ್ಲ; ನಾವು ನಮ್ಮ ವಿರೋಧಿಗಳಾದ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಮೇಲೆ ನಾನು ಅವರಿಗೆ - ನೀವು ಮಾಡಿದ್ದು ಒಳ್ಳೇದಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ಅವರಿಗೆ, “ನೀವು ಮಾಡುವುದು ಒಳ್ಳೆಯದಲ್ಲ. ಇತರ ದೇಶದವರಾದ ನಮ್ಮ ಶತ್ರುಗಳ ನಿಂದೆಗೆ ಗುರಿಯಾಗದಂತೆ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:9
21 ತಿಳಿವುಗಳ ಹೋಲಿಕೆ  

ಅವನಿಗೆ ನೀವು ಸಾಲ ಕೊಡುವ ಹಣದ ಮೇಲೆ ಬಡ್ಡಿಯನ್ನು ಹೊರಿಸಬಾರದು. ದೇವರನ್ನು ಗೌರವಿಸಿರಿ. ನಿಮ್ಮ ಸ್ವಂತ ದೇಶದವನು ನಿಮ್ಮ ಸಂಗಡ ವಾಸಿಸಲಿ.


ನಂಬಿಕೆಯಿಲ್ಲದ ಜನರು ನಿಮ್ಮ ಸುತ್ತಮುತ್ತಲೆಲ್ಲಾ ವಾಸಿಸುತ್ತಿದ್ದಾರೆ. ನೀವು ತಪ್ಪು ಮಾಡುತ್ತಿರುವಿರೆಂದು ಅವರು ಹೇಳುವ ಸಾಧ್ಯತೆಯಿದೆ. ಆದ್ದರಿಂದ ಒಳ್ಳೆಯವರಾಗಿ ಬಾಳಿರಿ. ನೀವು ಮಾಡುವ ಒಳ್ಳೆಯ ಕಾರ್ಯಗಳನ್ನು ಅವರು ನೋಡುವರು ಮತ್ತು ದೇವರು ಪ್ರತ್ಯಕ್ಷನಾದ ದಿನದಂದು ಆತನನ್ನು ಕೊಂಡಾಡುವರು.


ನೀನು ನಿನ್ನ ಪಾಪಕೃತ್ಯಗಳಿಂದ ಯೆಹೋವನ ವೈರಿಗಳು ಯೆಹೋವನನ್ನು ಹೆಚ್ಚು ದ್ವೇಷಿಸುವಂತೆ ಮಾಡಿದೆ. ನಿನಗೆ ಹುಟ್ಟಿದ ಗಂಡುಮಗು ಈ ಕಾರಣಕ್ಕಾಗಿ ಸತ್ತುಹೋಗುವುದು” ಎಂದು ಹೇಳಿದನು.


ಜ್ಞಾನವುಳ್ಳವರಾಗಿರಿ, ಪರಿಶುದ್ಧರಾಗಿರಿ, ನಿಮ್ಮ ಮನೆಕೆಲಸವನ್ನು ನೋಡಿಕೊಳ್ಳಿರಿ, ದಯೆಯುಳ್ಳವರಾಗಿರಿ, ನಿಮ್ಮ ಗಂಡಂದಿರಿಗೆ ವಿಧೇಯರಾಗಿರಿ” ಎಂದು ಉಪದೇಶಿಸಬೇಕು. ಆಗ ದೇವರು ನಮಗೆ ದಯಪಾಲಿಸಿದ ಬೋಧನೆಯನ್ನು ಟೀಕಿಸಲು ಯಾರಿಗೂ ಸಾಧ್ಯವಾಗುವುದಿಲ್ಲ.


ಆದ್ದರಿಂದ ಅವರು ಮದುವೆ ಮಾಡಿಕೊಂಡು ಮಕ್ಕಳನ್ನು ಪಡೆಯಲಿ ಮತ್ತು ತಮ್ಮ ಮನೆಗಳನ್ನು ನೋಡಿಕೊಳ್ಳಲಿ. ಆಗ ಅವರನ್ನು ಟೀಕಿಸಲು ನಮ್ಮ ಶತ್ರುವಿಗೆ ಯಾವ ಕಾರಣವೂ ಇರುವುದಿಲ್ಲ.


“ಯೆಹೂದ್ಯರಾದ ನಿಮ್ಮ ದೆಸೆಯಿಂದ ಯೆಹೂದ್ಯರಲ್ಲದ ಜನರು ದೇವರ ಹೆಸರಿಗೆ ವಿರೋಧವಾಗಿ ಮಾತಾಡುತ್ತಾರೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


ಇಂತಿರಲು, ಜುದೇಯ, ಗಲಿಲಾಯ ಮತ್ತು ಸಮಾರ್ಯ ಪ್ರದೇಶಗಳಲ್ಲಿ ಇದ್ದ ಸಭೆಗಳಲ್ಲಿ ಶಾಂತಿ ನೆಲೆಸಿತು. ಪವಿತ್ರಾತ್ಮನ ಸಹಾಯದಿಂದ ಸಭೆಗಳು ಬಲವಾಗತೊಡಗಿದವು. ವಿಶ್ವಾಸಿಗಳು ತಾವು ಪ್ರಭುವನ್ನು ಗೌರವಿಸುವುದಾಗಿ ತಮ್ಮ ಜೀವಿತಗಳ ಮೂಲಕ ತೋರಿಸಿಕೊಟ್ಟರು. ಇದರಿಂದ ವಿಶ್ವಾಸಿಗಳ ಸಭೆಯು ಹೆಚ್ಚುಹೆಚ್ಚು ಬೆಳೆಯತೊಡಗಿತು.


ಆ ದೇಶಗಳಲ್ಲಿರುವಾಗಲೂ ಅವರು ನನ್ನ ಹೆಸರಿಗೆ ಅಪಕೀರ್ತಿ ತಂದರು. ಹೇಗೆ? ‘ಇವರು ಯೆಹೋವನ ಜನರು. ಆತನು ಕೊಟ್ಟ ದೇಶವನ್ನು ಇವರು ತೊರೆದರು.’ ಎಂದು ಆ ದೇಶದ ಜನರು ಅನ್ನುವಂತೆ ಮಾಡಿದರು.


ಇವು ಸಹ ಜ್ಞಾನಿಗಳ ಮಾತುಗಳು: ನ್ಯಾಯಾಧಿಪತಿ ನ್ಯಾಯವಂತನಾಗಿರಬೇಕು. ಅವನು ಕೇವಲ ಪರಿಚಯದ ನಿಮಿತ್ತ ಯಾರಿಗೂ ಸಹಾಯ ಮಾಡಕೂಡದು.


ಯಾವುದೇ ಕಾರ್ಯದಲ್ಲಿ ಉತ್ಸುಕತೆಯೊಂದೇ ಸಾಲದು, ತಿಳುವಳಿಕೆಯೂ ಬೇಕು. ಯಾವುದೇ ಕಾರ್ಯದಲ್ಲಿ ದುಡುಕದಿರಿ; ಇಲ್ಲವಾದರೆ, ತಪ್ಪಾದೀತು!


ಅಪರಾಧಿಗೆ ಪಕ್ಷಪಾತ ಮಾಡುವುದು ಸರಿಯಲ್ಲ; ನಿರಪರಾಧಿಗೆ ಅನ್ಯಾಯ ಮಾಡುವುದು ಸರಿಯಲ್ಲ.


ನಿರಪರಾಧಿಯನ್ನು ಶಿಕ್ಷಿಸುವುದು ತಪ್ಪು. ನ್ಯಾಯವಂತರಾದ ನಾಯಕರಿಗೆ ಹೊಡೆಯುವುದು ತಪ್ಪು.


ಕೆಡುಕನು ತನ್ನ ಸ್ನೇಹಿತರನ್ನೇ ಮೋಸಗೊಳಿಸಿ ನಾಶನಕ್ಕೆ ನಡೆಸುವನು.


ನನಗಿಂತ ಮೊದಲು ರಾಜ್ಯಪಾಲರಾಗಿದ್ದವರು ಜನರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದರು. ಪ್ರತಿಯೊಬ್ಬರು ಒಂದು ಪೌಂಡ್ ಬೆಳ್ಳಿಯನ್ನೂ ಆಹಾರವನ್ನೂ ದ್ರಾಕ್ಷಾರಸವನ್ನೂ ಕೊಡಬೇಕಿತ್ತು. ಆ ರಾಜ್ಯಪಾಲರ ಅಧಿಕಾರಿಗಳು ಸಹ ಜನರ ಮೇಲೆ ದೊರೆತನ ನಡೆಸಿ ಅವರ ಜೀವನವನ್ನು ಮತ್ತಷ್ಟು ಕಠಿಣಗೊಳಿಸಿದರು. ಆದರೆ ದೇವರಲ್ಲಿ ಭಯಭಕ್ತಿ ಇದ್ದುದರಿಂದ ನಾನು ಆ ರೀತಿ ಮಾಡಲಿಲ್ಲ.


ನೆಹೆಮೀಯನು ಯೆಹೋವನಿಗೆ ಪ್ರಾರ್ಥಿಸುತ್ತಾ, “ನಮ್ಮ ದೇವರೇ, ನಮ್ಮ ಪ್ರಾರ್ಥನೆಗೆ ಕಿವಿಗೊಡು. ಆ ಮನಷ್ಯರು ನಮ್ಮನ್ನು ದ್ವೇಷಿಸುತ್ತಾರೆ. ಸನ್ಬಲ್ಲಟನು ಮತ್ತು ಟೋಬೀಯನು ನಮ್ಮನ್ನು ಅವಮಾನ ಮಾಡುತ್ತಿದ್ದಾರೆ. ಆ ಕೇಡುಗಳು ಅವರಿಗೇ ಸಂಭವಿಸಲಿ. ಅವರು ನಾಚಿಕೆಯಿಂದ ತಲೆತಗ್ಗಿಸಲಿ; ಸೆರೆಹಿಡಿಯಲ್ಪಟ್ಟವರಂತೆ ಅವಮಾನ ಹೊಂದಲಿ.


ಮಕ್ಕಳೇ, ಇಂತಹ ದುಷ್ಕೃತ್ಯಗಳನ್ನು ಮಾಡಬೇಡಿ. ಯೆಹೋವನ ಜನರು ನಿಮ್ಮ ಬಗ್ಗೆ ಕೆಟ್ಟ ಸಂಗತಿಗಳನ್ನು ಮಾತಾಡುತ್ತಿದ್ದಾರೆ.


ಮೂರು ದಿನಗಳಾದ ಮೇಲೆ ಯೋಸೇಫನು ಅವರಿಗೆ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು. ನೀವು ಈ ಕಾರ್ಯವೊಂದನ್ನು ಮಾಡಿದರೆ ನಾನು ನಿಮ್ಮನ್ನು ಉಳಿಸುತ್ತೇನೆ;


ಅಬ್ರಹಾಮನು ಅವನಿಗೆ, “ನನಗೆ ಹೆದರಿಕೆಯಾಗಿತ್ತು. ಈ ಸ್ಥಳದವರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದು ನಾನು ಭಾವಿಸಿಕೊಂಡೆ. ಯಾರಾದರೂ ನನ್ನನ್ನು ಕೊಂದು ಸಾರಳನ್ನು ತೆಗೆದುಕೊಳ್ಳಬಹುದೆಂದು ಯೋಚಿಸಿದೆ.


ನನ್ನ ಜನರು, ನನ್ನ ಬಂಧುಗಳು ಮತ್ತು ನಾನು ಹಣವನ್ನು ದವಸಧಾನ್ಯಗಳನ್ನು ಎರವಲಾಗಿ ಕೊಡುತ್ತೇವೆ. ಆದರೆ ಅವರಿಂದ ಬಡ್ಡಿಯನ್ನು ವಸೂಲು ಮಾಡುವುದಿಲ್ಲ. ಸಾಲ ಪಡೆದುಕೊಂಡವರಿಂದ ಬಡ್ಡಿಯನ್ನು ಬಲವಂತದಿಂದ ವಸೂಲು ಮಾಡುವುದನ್ನು ನಾವು ನಿಲ್ಲಿಸಬೇಕು.


ದೇವರೇ, ನಿನ್ನ ಕೋಪದ ಪೂರ್ಣ ಬಲವನ್ನು ಯಾರೂ ತಿಳಿಯರು. ನಿನ್ನಲ್ಲಿ ನಮಗಿರುವ ಭಯಭಕ್ತಿಯು ನಿನ್ನ ಕೋಪದಷ್ಟೇ ದೊಡ್ಡದಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು