Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:13 - ಪರಿಶುದ್ದ ಬೈಬಲ್‌

13 ನಾನು ಭಯಗೊಂಡು ದೇವಾಲಯದೊಳಗೆ ಓಡಿಹೋಗಿ ದೋಷಿಯಾಗುವಂತೆಯೂ ನನ್ನ ಮೇಲೆ ಹಾಗೆ ಅಪರಾಧ ಹೊರಿಸಲು ತಮಗೆ ಕಾರಣ ದೊರೆಯುವಂತೆಯೂ ಅವರು ಶೆಮಾಯನನ್ನು ಉಪಯೋಗಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಅಂಜಿಕೊಂಡು ಇವನ ಮಾತಿನಂತೆ ನಡೆದು ದೋಷಿಯಾಗಿ ತಮ್ಮ ನಿಂದೆಗೂ, ಕೆಟ್ಟ ಹೆಸರಿಗೂ ಒಳಗಾಗಲಿ ಎಂದು ಅವರು ಇವನಿಗೆ ಲಂಚ ಕೊಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನು ಅಂಜಿಕೊಂಡು, ಇವನ ಮಾತಿನಂತೆ ನಡೆದು ದೋಷಿಯಾಗಿ, ತಮ್ಮ ನಿಂದೆಗೂ ಕೆಟ್ಟ ಹೆಸರಿಗೂ ಗುರಿಯಾಗಲಿ ಎಂದು ಅವರು ಈ ಶೆಮಾಯನಿಗೆ ಲಂಚಕೊಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಅಂಜಿಕೊಂಡು ಇವನ ಮಾತಿನಂತೆ ನಡೆದು ದೋಷಿಯಾಗಿ ತಮ್ಮ ನಿಂದೆಗೂ ಕೆಟ್ಟ ಹೆಸರಿಗೂ ಒಳಗಾಗಲಿ ಎಂದು ಅವರು ಇವನಿಗೆ ಲಂಚಕೊಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ಭಯಪಟ್ಟು ಹೀಗೆ ಮಾಡಿ ಪಾಪಮಾಡುವಂತೆಯೂ ಅವರು ನನ್ನನ್ನು ನಿಂದಿಸುವುದಕ್ಕೆ ಅಪಕೀರ್ತಿಯ ಕಾರಣವು ಅವರಿಗೆ ಸಿಕ್ಕುವಂತೆಯೂ ಶೆಮಾಯನಿಗೆ ಲಂಚಕೊಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:13
24 ತಿಳಿವುಗಳ ಹೋಲಿಕೆ  

ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.


ಒಳ್ಳೆಯದನ್ನು ಹೇಗೆ ಮಾಡಬೇಕೆಂದು ತಿಳಿದಿದ್ದರೂ ಒಳ್ಳೆಯದನ್ನು ಮಾಡದಿರುವವನು ಪಾಪವನ್ನು ಮಾಡುವವನಾಗಿದ್ದಾನೆ.


ದೇವರು ನಮಗೆ ಕೊಟ್ಟದ್ದು ನಮ್ಮನ್ನು ಹೇಡಿಗಳನ್ನಾಗಿ ಮಾಡುವ ಆತ್ಮವನ್ನಲ್ಲ. ನಮ್ಮನ್ನು ಬಲದಿಂದ, ಪ್ರೀತಿಯಿಂದ ಮತ್ತು ಸ್ವಶಿಕ್ಷಣದಿಂದ ತುಂಬಿಸುವ ಆತ್ಮವನ್ನು ಆತನು ಕೊಟ್ಟನು.


ಆಗ ಯೆರೆಮೀಯನ ವೈರಿಗಳು ಹೀಗೆಂದರು: “ಬನ್ನಿ, ನಾವು ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಯಾಜಕನಿಂದ ಧರ್ಮೋಪದೇಶವು ತಪ್ಪುವದಿಲ್ಲ, ಇದು ಖಂಡಿತ. ಜ್ಞಾನಿಗಳಿಂದ ಮಂತ್ರಾಲೋಚನೆಯು ಇದ್ದೇ ಇರುತ್ತದೆ. ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದು. ಆದ್ದರಿಂದ ಅವನ ಬಗ್ಗೆ ಸುಳ್ಳು ಹೇಳಿ ನಾಶಮಾಡೋಣ. ಅವನು ಹೇಳುವ ಯಾವುದಕ್ಕೂ ನಾವು ಗಮನಕೊಡಬೇಕಾಗಿಲ್ಲ.”


ನೆರೆಯವನ ಮುಖಸ್ತುತಿ ಮಾಡುವವನು ಅವನ ಕಾಲಿಗೆ ಬಲೆಯನ್ನು ಒಡ್ಡುತ್ತಿದ್ದಾನೆ.


ಅದರಲ್ಲಿ, “ಒಂದು ಸುದ್ದಿಯು ಹರಡುತ್ತಲಿದೆ. ಎಲ್ಲಾ ಕಡೆಗಳಲ್ಲಿ ಜನರು ಅದರ ವಿಷಯವಾಗಿ ಮಾತಾಡುತ್ತಿದ್ದಾರೆ. ಆ ಸುದ್ದಿಯು ಸತ್ಯವೆಂದು ಗೆಷೆಮನು ನನಗೆ ಹೇಳಿದನು. ನೀನು ಮತ್ತು ಯೆಹೂದ್ಯರು ಅರಸನಿಗೆ ವಿರುದ್ಧವಾಗಿ ದಂಗೆ ಏಳಲು ಯೋಚಿಸುತ್ತಿದ್ದೀರೆಂಬ ವದಂತಿ ಇದೆ. ಅದಕ್ಕೋಸ್ಕರವಾಗಿಯೇ ನೀವು ಕೋಟೆಗೋಡೆಯನ್ನು ಕಟ್ಟುತ್ತಿದ್ದೀರಿ. ನೀನು ಯೆಹೂದ್ಯರ ಅರಸನಾಗುವೆ ಎಂದೂ ಜನರಲ್ಲಿ ಸುದ್ದಿ ಹಬ್ಬಿದೆ.


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ನೀನು ಸತ್ಯವನ್ನೇ ಮಾತನಾಡು. ಆಗ ನಿನ್ನನ್ನು ಟೀಕಿಸಲು ಸಾಧ್ಯವಿಲ್ಲದೆ ನಿನ್ನ ವಿರೋಧಿಗಳು ಅಪಮಾನಕ್ಕೆ ಗುರಿಯಾಗುವರು.


ಆದ್ದರಿಂದ ಅವರು ಮದುವೆ ಮಾಡಿಕೊಂಡು ಮಕ್ಕಳನ್ನು ಪಡೆಯಲಿ ಮತ್ತು ತಮ್ಮ ಮನೆಗಳನ್ನು ನೋಡಿಕೊಳ್ಳಲಿ. ಆಗ ಅವರನ್ನು ಟೀಕಿಸಲು ನಮ್ಮ ಶತ್ರುವಿಗೆ ಯಾವ ಕಾರಣವೂ ಇರುವುದಿಲ್ಲ.


ಈಗ ನಾನು ಮಾಡುತ್ತಿರುವುದನ್ನು ಮುಂದುವರೆಸುತ್ತೇನೆ. ಆ ಜನರಿಗೆ ಹೊಗಳಿಕೊಳ್ಳಲು ಯಾವ ಕಾರಣವೂ ಸಿಕ್ಕಬಾರದೆಂದು ಇದನ್ನು ಮುಂದುವರಿಸುತ್ತೇನೆ. ಅವರು ತಮ್ಮ ಕೆಲಸದ ಬಗ್ಗೆ ಜಂಬಪಡುತ್ತಾರೆ. ತಾವು ಮಾಡುವ ಆ ಕೆಲಸವು ನಮ್ಮ ಕೆಲಸದಂತೆಯೇ ಇದೆಯೆಂದು ಹೇಳಿಕೊಳ್ಳಲು ಬಯಸುತ್ತಾರೆ.


ಈ ಯೆಹೂದ್ಯರು ಕೆಲವು ಮಂದಿ ಸುಳ್ಳುಸಾಕ್ಷಿಗಳನ್ನು ಕರೆದುಕೊಂಡು ಬಂದು, “ಈ ಮನುಷ್ಯನು ಈ ಪವಿತ್ರಸ್ಥಳದ (ದೇವಾಲಯದ) ವಿರುದ್ಧವಾಗಿಯೂ ಮೋಶೆಯ ಧರ್ಮಶಾಸ್ತ್ರದ ವಿರುದ್ಧವಾಗಿಯೂ ಕೆಟ್ಟಸಂಗತಿಗಳನ್ನು ಯಾವಾಗಲೂ ಹೇಳುತ್ತಾನೆ.


ಮಹಾಯಾಜಕರು ಮತ್ತು ಯೆಹೂದ್ಯರ ಸಮಿತಿಯವರು ಯೇಸುವಿಗೆ ಮರಣದಂಡನೆ ವಿಧಿಸಲು ಅಗತ್ಯವಾದ ಸುಳ್ಳುಸಾಕ್ಷಿಗಳನ್ನು ಹುಡುಕಿದರು.


ಆಗ ಫರಿಸಾಯರು, ಅಲ್ಲಿಂದ ಹೊರಟುಹೋಗಿ ಯೇಸುವಿನ ಮಾತಿನಲ್ಲಿ ತಪ್ಪು ಕಂಡುಹಿಡಿಯಲು ಉಪಾಯಗಳನ್ನು ಮಾಡಿಕೊಂಡರು.


“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.


“ನರಪುತ್ರನೇ, ಆ ಜನರು ನಿನ್ನನ್ನು ವಿರೋಧಿಸಿದರೂ ನೀನು ಅವರಿಗೆ ಭಯಪಡಬೇಡ ಮತ್ತು ಅವರು ಹೇಳುವ ಮಾತುಗಳಿಗೆ ನೀನು ಹೆದರಬೇಡ. ಮುಳ್ಳುಗಳೂ ಮುಳ್ಳುಪೊದೆಗಳೂ ನಿನಗೆ ಒತ್ತುವಂತೆಯೂ ನೀನು ಚೇಳುಗಳ ಮೇಲೆ ಕುಳಿತುಕೊಂಡಿರುವಂತೆಯೂ ಅದು ಇರುವದು. ಆದರೆ ಅವರಾಡುವ ಮಾತುಗಳಿಗೆ ಭಯಪಡಬೇಡ. ಅವರು ದಂಗೆಕೋರರು.


“ಯೆರೆಮೀಯನೇ, ಸಿದ್ಧನಾಗು! ಎದ್ದುನಿಲ್ಲು! ನಾನು ಹೇಳಿದ್ದೆಲ್ಲವನ್ನು ಜನರಿಗೆ ಹೇಳು. ಅವರಿಗೆ ಹೆದರಬೇಡ. ನೀನು ಅವರಿಗೆ ಹೆದರಿಕೊಂಡರೆ, ನಾನು ನಿನ್ನನ್ನು ಅವರೆದುರಿನಲ್ಲಿ ಹೆದರಿಸುವೆನು.


ನೀವು ನನ್ನನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ. ನನ್ನನ್ನು ಗಮನಕ್ಕೇ ತರಲಿಲ್ಲ. ಹೀಗಿರಲು ನೀವು ಯಾರ ಬಗ್ಗೆ ಚಿಂತಿಸುತ್ತಿದ್ದಿರಿ? ನೀವು ಯಾರಿಗೆ ಭಯಪಡುತ್ತಿದ್ದಿರಿ? ನೀವು ಸುಳ್ಳಾಡಿದ್ದು ಯಾಕೆ? ನೋಡಿ, ನಾನು ಬಹಳ ಸಮಯದಿಂದ ಸುಮ್ಮನಿದ್ದೆನು. ಆದರೆ ನೀವು ನನ್ನನ್ನು ಗೌರವಿಸಲಿಲ್ಲ.


ಒಳ್ಳೆಯತನವನ್ನು ಅರ್ಥಮಾಡಿಕೊಂಡ ನೀವು ನನ್ನ ಮಾತುಗಳನ್ನು ಕೇಳಿರಿ. ನನ್ನ ಬೋಧನೆಯನ್ನು ಅನುಸರಿಸುವ ನೀವು ನನ್ನ ಮಾತಿಗೆ ಕಿವಿಗೊಡಿರಿ. ದುಷ್ಟಜನರಿಗೆ ಭಯಪಡಬೇಡಿರಿ. ಅವರು ನಿಮಗೆ ಹೇಳುವ ಕೆಟ್ಟಮಾತುಗಳಿಗೆ ಭಯಪಡಬೇಡಿ.


ಸುಗಂಧತೈಲಕ್ಕಿಂತಲೂ ಒಳ್ಳೆಯ ಹೆಸರೇ ಉತ್ತಮ. ಜನನ ದಿನಕ್ಕಿಂತಲೂ ಮರಣ ದಿನವೇ ಉತ್ತಮ.


ಬಹು ಧನಕ್ಕಿಂತಲೂ ಒಳ್ಳೆಯ ಹೆಸರೇ ಉತ್ತಮ. ಬೆಳ್ಳಿಬಂಗಾರಗಳಿಗಿಂತಲೂ ಸನ್ಮಾನಿತರಾಗಿರುವುದೇ ಅಮೂಲ್ಯ.


ಶೆಮಾಯನನ್ನು ದೇವರು ಕಳುಹಿಸಿಲ್ಲವೆಂದು ನನಗೆ ಚೆನ್ನಾಗಿ ಗೊತ್ತಿತ್ತು. ಟೋಬೀಯ ಮತ್ತು ಸನ್ಬಲ್ಲಟ್ ಅವನಿಗೆ ಲಂಚಕೊಟ್ಟು ಹಾಗೆ ಹೇಳಿಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು