Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:14 - ಪರಿಶುದ್ದ ಬೈಬಲ್‌

14 ದೇವರೇ, ಟೋಬೀಯ ಮತ್ತ ಸನ್ಬಲ್ಲಟನ ವಿಚಾರವಾಗಿ ನಿನ್ನ ಜ್ಞಾಪಕದಲ್ಲಿರಿಸು. ಅವರು ಮಾಡಿದ ಕೆಟ್ಟಕಾರ್ಯಗಳನ್ನು ನೆನಪಿನಲ್ಲಿಡು. ಅದೇ ಸಮಯದಲ್ಲಿ ಪ್ರವಾದಿನಿಯಾದ ನೋವದ್ಯಳನ್ನು, ಇತರ ಪ್ರವಾದಿಗಳನ್ನು, ನನ್ನನ್ನು ಹೆದರಿಸುವವರನ್ನು ನೆನಪು ಮಾಡಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನನ್ನ ದೇವರೇ, ಟೋಬೀಯ, ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿನ್ನ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮತ್ತು ಇತರ ಪ್ರವಾದಿಗಳನ್ನು ನೆನಪಿನಲ್ಲಿಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಓ ದೇವರೇ, ಟೋಬೀಯ-ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿಮ್ಮ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನು ಮರೆಯಬೇಡಿ,” ಎಂದು ನಾನು ಪ್ರಾರ್ಥಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನನ್ನ ದೇವರೇ, ಟೋಬೀಯ ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿನ್ನ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನು ಮರೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನ ದೇವರೇ, ನೀವು ಅವರ ಈ ಕಾರ್ಯಗಳ ಪ್ರಕಾರ ಟೋಬೀಯನನ್ನೂ, ಸನ್ಬಲ್ಲಟನನ್ನೂ, ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:14
26 ತಿಳಿವುಗಳ ಹೋಲಿಕೆ  

ನನ್ನ ದೇವರೇ, ಆ ಮನುಷ್ಯರನ್ನು ಶಿಕ್ಷಿಸು. ಅವರು ಯಾಜಕತ್ವವನ್ನು ಹೊಲಸು ಮಾಡಿದ್ದಾರೆ. ಅದನ್ನು ಅವರು ಸಾಮಾನ್ಯವೆಂದೆಣಿಸಿದ್ದಾರೆ. ಯಾಜಕರೊಂದಿಗೆ ಮತ್ತು ಲೇವಿಯರೊಂದಿಗೆ ನೀನು ಮಾಡಿದ ಒಡಂಬಡಿಕೆಯನ್ನು ಅವರು ತಿರಸ್ಕರಿಸಿದ್ದಾರೆ.


ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.


ಯನ್ನ ಮತ್ತು ಯಂಬ್ರರನ್ನು ನೆನಪುಮಾಡಿಕೊ. ಅವರು ಮೋಶೆಯನ್ನು ವಿರೋಧಿಸಿದರು. ಈ ಜನರೂ ಅವರಂತೆಯೇ. ಅವರು ಸತ್ಯವನ್ನು ವಿರೋಧಿಸುತ್ತಾರೆ. ಆ ಜನರ ಆಲೋಚನೆಗಳೆಲ್ಲ ಗಲಿಬಿಲಿಗೊಂಡಿವೆ. ಅವರು ನಂಬಿಕೆಯನ್ನು ಅನುಸರಿಸುವ ತಮ್ಮ ಪ್ರಯತ್ನದಲ್ಲಿ ಸೋತುಹೋಗಿದ್ದಾರೆ.


ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ದೇವರು ಆರಿಸಿಕೊಂಡಿರುವ ಜನರನ್ನು ಮೋಸಗೊಳಿಸುವುದಕ್ಕಾಗಿ ಮಹತ್ಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವರು.


ಅನೇಕ ಸುಳ್ಳುಪ್ರವಾದಿಗಳು ಬಂದು ಎಷ್ಟೋ ಜನರನ್ನು ವಂಚಿಸುವರು.


“ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ.


ತರುವಾಯ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೀಗೆ ಹೇಳಿದನು: “ಹನನ್ಯನೇ, ಕೇಳು. ಯೆಹೋವನು ನಿನ್ನನ್ನು ಕಳುಹಿಸಲಿಲ್ಲ. ಆದರೆ ಯೆಹೂದದ ಜನರಿಗೆ ಸುಳ್ಳನ್ನು ನಂಬುವಂತೆ ನೀನು ಮಾಡಿರುವೆ.


ಯೆರೆಮೀಯನು ತನ್ನ ಹೆಗಲಿನ ಮೇಲೆ ನೊಗವನ್ನು ಹೊತ್ತುಕೊಂಡಿದ್ದನು. ಪ್ರವಾದಿಯಾದ ಹನನ್ಯನು ಯೆರೆಮೀಯನ ಹೆಗಲಿನಿಂದ ಆ ನೊಗವನ್ನು ತೆಗೆದುಕೊಂಡು ಆ ನೊಗವನ್ನು ಮುರಿದುಹಾಕಿದನು.


ಯೆಹೂದದಲ್ಲಿ ಚಿದ್ಕೀಯನ ಆಳ್ವಿಕೆಯ ನಾಲ್ಕನೇ ವರ್ಷದ ಐದನೇ ತಿಂಗಳಲ್ಲಿ ಹನನ್ಯನೆಂಬ ಪ್ರವಾದಿಯು ನನ್ನೊಂದಿಗೆ ಮಾತನಾಡಿದನು. ಹನನ್ಯನು ಅಜ್ಜೂರನ ಮಗ, ಹನನ್ಯನು ಗಿಬ್ಯೋನ್ ಊರಿನವನು. ನನ್ನೊಂದಿಗೆ ಮಾತನಾಡಿದಾಗ ಅವನು ಯೆಹೋವನ ಆಲಯದಲ್ಲಿದ್ದನು. ಯಾಜಕರು ಮತ್ತು ಸಮಸ್ತ ಜನರು ಅಲ್ಲಿದ್ದರು. ಹನನ್ಯನು ಹೀಗೆ ಹೇಳಿದನು:


ನಾನು ನಗರಗಳ ಹೊರಗಡೆ ಹೋದರೆ ಖಡ್ಗಗಳಿಗೆ ಆಹುತಿಯಾಗಿ ಸತ್ತವರು ನನ್ನ ಕಣ್ಣಿಗೆ ಬೀಳುತ್ತಾರೆ. ನಾನು ನಗರಗಳಿಗೆ ಹೋದರೆ ಕ್ಷಾಮದಿಂದ ಬಳಲುವ ಜನರು ನನ್ನ ಕಣ್ಣಿಗೆ ಬೀಳುತ್ತಾರೆ. ಅವರಿಗೆ ತಿನ್ನಲು ಅನ್ನವಿಲ್ಲ. ಯಾಜಕರನ್ನು ಮತ್ತು ಪ್ರವಾದಿಗಳನ್ನು ಪರದೇಶಕ್ಕೆ ತೆಗೆದುಕೊಂಡು ಹೋಗಲಾಗಿದೆ.’”


ನನ್ನ ಹೆಸರಿನಲ್ಲಿ ಬೋಧನೆ ಮಾಡುತ್ತಿರುವ ಈ ಪ್ರವಾದಿಗಳ ಬಗ್ಗೆ ನಾನು ಹೇಳುವದು ಇಷ್ಟೇ. ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಆ ಪ್ರವಾದಿಗಳು ‘ಶತ್ರುಗಳು ಖಡ್ಗಧಾರಿಗಳಾಗಿ ಎಂದಿಗೂ ಈ ದೇಶದ ಮೇಲೆ ಧಾಳಿ ಮಾಡುವದಿಲ್ಲ. ಈ ದೇಶದಲ್ಲಿ ಎಂದೂ ಕ್ಷಾಮ ಕಾಣಿಸಿಕೊಳ್ಳುವದಿಲ್ಲ’ ಎಂದು ಹೇಳಿದ್ದಾರೆ. ಆದರೆ ಆ ಪ್ರವಾದಿಗಳು ಹಸಿವಿನ ತಾಪದಿಂದ ಸಾಯುತ್ತಾರೆ ಮತ್ತು ಶತ್ರುವಿನ ಖಡ್ಗ ಅವರನ್ನು ಕೊಲ್ಲುತ್ತದೆ.


ದೇವರೇ, ನೀನೇ ನನ್ನ ದೇವರು. ನಿನಗಾಗಿ ಕುತೂಹಲದಿಂದ ಎದುರು ನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂಮಿಯಂತೆ ನನ್ನ ಆತ್ಮವು ನಿನಗಾಗಿ ಬಾಯಾರಿದೆ; ನನ್ನ ದೇಹವು ನಿನಗಾಗಿ ಬಯಸಿದೆ.


ನನ್ನ ದೇವರೇ, ನನ್ನ ದೇವರೇ! ಯಾಕೆ ನನ್ನನ್ನು ತೊರೆದಿರುವೆ? ನನ್ನನ್ನು ರಕ್ಷಿಸದೆ ಯಾಕೆ ಬಹುದೂರವಾಗಿರುವೆ! ಸಹಾಯಕ್ಕಾಗಿ ನಾನು ಗೋಳಾಡುತ್ತಿದ್ದರೂ ಕೇಳದೆ ಯಾಕೆ ಬಹದೂರವಾಗಿರುವೆ?


ದೇವರೇ, ನಾನು ಈ ಜನರಿಗಾಗಿ ಮಾಡಿರುವ ಒಳ್ಳೆಯದನ್ನೆಲ್ಲಾ ಜ್ಞಾಪಿಸಿಕೊ.


ಆರೋನನ ಅಕ್ಕ ಮಿರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಮಿರ್ಯಾಮಳು ಮತ್ತು ಸ್ತ್ರೀಯರು ಹಾಡುವುದಕ್ಕೂ ಕುಣಿಯುವುದಕ್ಕೂ ಪ್ರಾರಂಭಿಸಿದರು.


ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು. ಯಾಕೆಂದರೆ ಜೆರುಸಲೇಮ್ ಸೆರೆಹಿಡಿಯಲ್ಪಟ್ಟಾಗ ಅವರು, “ಅದರ ಕಟ್ಟಡಗಳನ್ನು ಕೆಡವಿಹಾಕಿ. ಅವುಗಳನ್ನು ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಆರ್ಭಟಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು