Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:16 - ಪರಿಶುದ್ದ ಬೈಬಲ್‌

16 ನಮ್ಮ ವೈರಿಗಳೆಲ್ಲಾ ಕೆಲಸ ಸಂಪೂರ್ಣವಾದದ್ದನ್ನು ಕೇಳಿದರು. ನಮ್ಮ ಸುತ್ತಮುತ್ತಲಿನ ಪ್ರಾಂತ್ಯಗಳವರಿಗೂ ದೇಶಗಳವರಿಗೂ ಈ ಸುದ್ದಿಮುಟ್ಟಿತು. ಆಗ ಅವರ ಧೈರ್ಯವು ಕುಗ್ಗಿತು. ಯಾಕೆಂದರೆ ಈ ಮಹಾಕಾರ್ಯವನ್ನು ನಮ್ಮ ದೇವರ ಸಹಾಯದಿಂದಲೇ ನಾವು ಮಾಡಿದ್ದೇವೆಂದು ಅವರಿಗೆ ಅರ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈ ಸುದ್ದಿಯು ನಮ್ಮ ವಿರೋಧಿಗಳಾದ ಸುತ್ತಣ ಎಲ್ಲಾ ಜನಾಂಗದವರಿಗೆ ತಲುಪಿದಾಗ ಅವರು ಭಯವುಳ್ಳವರಾಗಿ ಸೊಕ್ಕನ್ನು ಬಿಟ್ಟು ಬಹಳ ಮನಗುಂದಿ ತಗ್ಗಿ ಹೋದರು. ಈ ಕಾರ್ಯವು ದೇವರ ಸಹಾಯದಿಂದಲೇ ಪೂರ್ಣಗೊಂಡಿತು ಎಂಬುದು ಅವರಿಗೆ ತಿಳಿದುಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈ ಸುದ್ದಿ ಸುತ್ತ-ಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈ ಸುದ್ದಿಯು ನಮ್ಮ ವಿರೋಧಿಗಳಾದ ಸುತ್ತಣ ಎಲ್ಲಾ ಜನಾಂಗಗಳವರಿಗೆ ಮುಟ್ಟಿದಾಗ ಅವರು ಭಯವುಳ್ಳವರಾಗಿ ಸೊಕ್ಕನ್ನು ಬಿಟ್ಟು ಬಹಳ ಮನಗುಂದಿದವರಾದರು. ಈ ಕಾರ್ಯವು ನಮ್ಮ ದೇವರಿಂದಲೇ ಪೂರೈಸಿತು ಎಂದು ಅವರಿಗೆ ಮಂದಟ್ಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಈ ಸುದ್ದಿ ಸುತ್ತಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:16
16 ತಿಳಿವುಗಳ ಹೋಲಿಕೆ  

ಇಸ್ರೇಲರು ಜೋರ್ಡನ್ ನದಿಯನ್ನು ದಾಟುವವರೆಗೆ ಯೆಹೋವನು ಆ ನದಿಯನ್ನು ಬತ್ತಿಸಿದನು. ಜೋರ್ಡನ್ ನದಿಯ ಪಶ್ಚಿಮ ದಿಕ್ಕಿನಲ್ಲಿರುವ ಅಮೋರಿಯರ ಅರಸರು ಮತ್ತು ಭೂಮಧ್ಯ ಸಾಗರದ ಹತ್ತಿರವಿರುವ ಕಾನಾನ್ಯರ ಅರಸರು ಈ ಸಂಗತಿಯನ್ನು ಕೇಳಿ ಭಯಗ್ರಸ್ತರಾದರು; ಇಸ್ರೇಲರ ವಿರುದ್ಧವಾಗಿ ಹೋರಾಡುವಷ್ಟು ಧೈರ್ಯವಿಲ್ಲದವರಾದರು.


ನಾವು ನಗುತ್ತಿದ್ದೆವು; ಹರ್ಷಗೀತೆಗಳನ್ನು ಹಾಡುತ್ತಿದ್ದೆವು. “ಯೆಹೋವನು ಇಸ್ರೇಲರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ಅನ್ಯ ಜನಾಂಗಗಳು ಮಾತಾಡಿಕೊಂಡರು.


ಸನ್ಬಲ್ಲಟನು, ಟೋಬೀಯನು, ಅರಬಿಯರು, ಅಮ್ಮೋನಿಯರು ಮತ್ತು ಅಷ್ಡೋದಿನವರು ತುಂಬಾ ಕೋಪಗೊಂಡಿದ್ದರು. ಯಾಕೆಂದರೆ ಜೆರುಸಲೇಮಿನ ಗೋಡೆಯ ಕೆಲಸ ಮುಂದುವರಿಯುತ್ತಿದೆಯೆಂದೂ ಮತ್ತು ಗೋಡೆಗಳ ಕಿಂಡಿಗಳನ್ನು ರಿಪೇರಿ ಮಾಡಲಾಗುತ್ತಿದೆಯೆಂದೂ ಅವರು ಕೇಳಿದ್ದರು.


ನಾವು ಜೆರುಸಲೇಮಿನ ಗೋಡೆ ಕಟ್ಟುತ್ತಿದ್ದೇವೆ ಎಂಬುದನ್ನು ಕೇಳಿದ ಸನ್ಬಲ್ಲಟನು ಹೊಟ್ಟೆಕಿಚ್ಚಿನಿಂದ ಕೋಪಗೊಂಡನು. ಅವನು ಯೆಹೂದ್ಯರನ್ನು ಹಾಸ್ಯ ಮಾಡಿದನು.


ನಾನು ಏನು ಮಾಡುತ್ತಿದ್ದೇನೆಂದು ಸನ್ಬಲ್ಲಟ್ ಮತ್ತು ಟೋಬೀಯ ಎಂಬವರಿಬ್ಬರು ಕೇಳಿಸಿಕೊಂಡರು. ಇಸ್ರೇಲ್ ಜನರಿಗೆ ಸಹಾಯ ಮಾಡಲು ಬರುತ್ತಿದ್ದಾರೆಂಬ ವಿಷಯವು ಅವರನ್ನು ತಳಮಳಗೊಳಿಸಿತು ಮತ್ತು ಅವರಿಗೆ ಸಿಟ್ಟೂ ಬಂದಿತು. ಸನ್ಬಲ್ಲಟನು ಹೋರೋನಿನವನು ಮತ್ತು ಟೋಬೀಯನು ಅಮ್ಮೋನಿಯ ಅಧಿಕಾರಿಯಾಗಿದ್ದನು.


ಆದ್ದರಿಂದ ಈಗ ನಾನು ನಿಮಗೆ ಹೇಳುವುದೇನೆಂದರೆ, ಈ ಜನರಿಂದ ದೂರವಾಗಿರಿ. ಅವರನ್ನು ಅವರಷ್ಟಕ್ಕೇ ಬಿಟ್ಟುಬಿಡಿರಿ. ಅವರ ಯೋಜನೆಯು ಮನುಷ್ಯರಿಂದ ಬಂದದ್ದಾಗಿದ್ದರೆ, ಅದು ಉರುಳಿಹೋಗುವುದು.


ನಿಜವಾಗಿಯೂ ಯಾಕೋಬನ ಜನರ ಮಧ್ಯದಲ್ಲಿ ಶಕುನ ನೋಡುವವರು ಇಲ್ಲ. ಇಸ್ರೇಲಿನಲ್ಲಿ ಕಣಿ ಹೇಳುವವರು ಇಲ್ಲ. ಜನರು, ಯಾಕೋಬನ ಮತ್ತು ಇಸ್ರೇಲರ ಬಗ್ಗೆ ಹೀಗೆ ಹೇಳುವರು: ‘ದೇವರು ಮಾಡಿದ ಮಹಾಕಾರ್ಯಗಳನ್ನು ನೋಡಿರಿ!’


ರಥಗಳ ಚಕ್ರಗಳು ನೆಲಕ್ಕೆ ಅಂಟಿಕೊಂಡವು. ರಥಗಳನ್ನು ನಡಿಸುವುದು ಬಹುಕಷ್ಟವಾಗಿತ್ತು. ಈಜಿಪ್ಟಿನವರು “ನಾವು ಇಲ್ಲಿಂದ ಹೋಗೋಣ. ಯೆಹೋವನು ಈಜಿಪ್ಟಿನ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನೆ. ಯೆಹೋವನು ಇಸ್ರೇಲರಿಗಾಗಿ ಯುದ್ಧ ಮಾಡುತ್ತಿದ್ದಾನೆ” ಎಂದು ಕೂಗಿಕೊಂಡರು.


ಅದೇ ಸಮಯದಲ್ಲಿ ಗೋಡೆಯ ಕೆಲಸ ಮುಗಿದ ಬಳಿಕ ಯೆಹೂದ ಪ್ರಾಂತ್ಯದ ಧನಿಕರು ಟೋಬೀಯನಿಗೆ ಆಗಾಗ್ಗೆ ಅನೇಕ ಪತ್ರ ಬರೆಯುತ್ತಿದ್ದರು.


ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಬಗ್ಗೆ ಕೇಳಿದಾಗ ಬೇರೆ ಜನಾಂಗಗಳ ಜನರು ಅದನ್ನು ಹೊಗಳುವರು; ವಿಸ್ಮಯಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.’


“ಯೆಹೋವನು ಈ ದೇಶವನ್ನು ನಿಮ್ಮ ಜನರಿಗೆ ಕೊಟ್ಟಿದ್ದಾನೆಂದು ನಾನು ಬಲ್ಲೆ. ನಿಮ್ಮ ವಿಷಯ ಕೇಳಿ ನಮಗೆ ಭಯ ಉಂಟಾಗಿದೆ. ಈ ದೇಶದಲ್ಲಿರುವ ಎಲ್ಲಾ ಜನರು ನಿಮ್ಮಿಂದ ಭಯಭೀತರಾಗಿದ್ದಾರೆ.


ಇವೆಲ್ಲವುಗಳ ಬಗ್ಗೆ ಕೇಳಿ ನಮಗೆ ಅತೀವ ಭಯವಾಗಿದೆ; ನಮ್ಮಲ್ಲಿ ಯಾರಿಗೂ ನಿಮ್ಮೊಂದಿಗೆ ಯುದ್ಧ ಮಾಡಲು ಧೈರ್ಯವಿಲ್ಲ. ಏಕೆಂದರೆ ನಿಮ್ಮ ದೇವರಾದ ಯೆಹೋವನು, ಭೂಪರಲೋಕಗಳನ್ನು ಆಳುವವನಾಗಿದ್ದಾನೆ.


ಯೆಹೋವನೇ, ಆಗ ಅವರು ಅದು ನಿನ್ನ ಕೈಕೆಲಸವೆಂದೂ ಅದನ್ನು ಮಾಡಿದ್ದು ನೀನೇ ಎಂದೂ ತಿಳಿದುಕೊಳ್ಳುವರು.


ಚೀಯೋನನ್ನು ದ್ವೇಷಿಸಿದ ಜನರು ಸೋತುಹೋದರು. ಅವರು ಹೋರಾಟವನ್ನು ನಿಲ್ಲಿಸಿ ಓಡಿಹೋದರು.


ಯೆಹೋವನು ಜೆರುಸಲೇಮನ್ನು ಕಟ್ಟಿದನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದ ಇಸ್ರೇಲರನ್ನು ಆತನು ಹಿಂದಕ್ಕೆ ಕರೆತಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು