Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:19 - ಪರಿಶುದ್ದ ಬೈಬಲ್‌

19 ಹಿಂದಿನ ಕಾಲದಲ್ಲಿ ಆ ಜನರು ಟೋಬೀಯನಿಗೆ ಒಂದು ವಿಶೇಷ ವಾಗ್ದಾನ ಮಾಡಿದ್ದರು. ಆದ್ದರಿಂದ ಟೋಬೀಯನು ಎಷ್ಟು ಒಳ್ಳೆಯವನೆಂದು ನನ್ನೊಂದಿಗೆ ಹೇಳುತ್ತಿದ್ದರು; ನಾನು ಮಾಡುತ್ತಿರುವ ಕಾರ್ಯಗಳ ಬಗ್ಗೆಯೂ ಅವರು ಟೋಬೀಯನಿಗೆ ವರದಿ ಮಾಡುತ್ತಿದ್ದರು. ಟೋಬೀಯನು ನನ್ನನ್ನು ಬೆದರಿಸುವುದಕ್ಕೋಸ್ಕರ ನನಗೆ ಪದೇಪದೇ ಪತ್ರ ಬರೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ಅವನ ಒಳ್ಳೆತನವನ್ನೇ ನನ್ನ ಮುಂದೆ ವರ್ಣಿಸುತ್ತಾ ನನ್ನ ಮಾತುಗಳನ್ನು ಅವನಿಗೆ ತಿಳಿಸುತ್ತಾ ಇದ್ದರು. ಟೋಬೀಯನೂ ನನ್ನಲ್ಲಿ ಭಯಹುಟ್ಟಿಸುವುದಕ್ಕೋಸ್ಕರ ನನಗೆ ಪತ್ರಗಳನ್ನು ಕಳುಹಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವರು ಅವನ ಒಳ್ಳೆತನವನ್ನೇ ನನ್ನ ಮುಂದೆ ವರ್ಣಿಸುತ್ತಾ ನನ್ನ ಮಾತುಗಳನ್ನು ಅವನಿಗೆ ತಿಳಿಸುತ್ತಾ ಇದ್ದರು. ಟೋಬೀಯನೂ ನನ್ನಲ್ಲಿ ಭಯಹುಟ್ಟಿಸುವುದಕ್ಕಾಗಿ ನನಗೆ ಪತ್ರಗಳನ್ನು ಕಳುಹಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ಅವನ ಒಳ್ಳೆತನವನ್ನೇ ನನ್ನ ಮುಂದೆ ವರ್ಣಿಸುತ್ತಾ ನನ್ನ ಮಾತುಗಳನ್ನು ಅವನಿಗೆ ತಿಳಿಸುತ್ತಾ ಇದ್ದರು. ಟೋಬೀಯನೂ ನನ್ನಲ್ಲಿ ಭಯಹುಟ್ಟಿಸುವದಕ್ಕೋಸ್ಕರ ನನಗೆ ಪತ್ರಗಳನ್ನು ಕಳುಹಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ, ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀಯನೂ ನನ್ನನ್ನು ಭಯಪಡಿಸುವುದಕ್ಕೆ ಪತ್ರಗಳನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:19
10 ತಿಳಿವುಗಳ ಹೋಲಿಕೆ  

ಆ ಜನರು (ಸುಳ್ಳುಬೋಧಕರು) ಈ ಲೋಕಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಅವರು ಹೇಳುವುದೆಲ್ಲವೂ ಈ ಲೋಕಕ್ಕೆ ಸೇರಿವೆ. ಅವರು ಏನೇ ಹೇಳಿದರೂ ಲೋಕವು ಕೇಳುತ್ತದೆ.


ನೀವು ಈ ಲೋಕಕ್ಕೆ ಸೇರಿದವರಾಗಿದ್ದರೆ, ಈ ಲೋಕವು ತನ್ನ ಸ್ವಂತ ಜನರನ್ನು ಪ್ರೀತಿಸುವಂತೆ ನಿಮ್ಮನ್ನೂ ಪ್ರೀತಿಸುತ್ತಿತ್ತು. ಆದರೆ ನಾನು ನಿಮ್ಮನ್ನು ಈ ಲೋಕದೊಳಗಿಂದ ಆರಿಸಿಕೊಂಡಿದ್ದೇನೆ. ಆದ್ದರಿಂದ ನೀವು ಈ ಲೋಕಕ್ಕೆ ಸೇರಿದವರಲ್ಲ. ಆದಕಾರಣ ಈ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.


ಈ ಲೋಕವು ನಿಮ್ಮನ್ನು ದ್ವೇಷಿಸಲಾರದು. ಆದರೆ ಈ ಲೋಕವು ನನ್ನನ್ನು ದ್ವೇಷಿಸುತ್ತದೆ. ಏಕೆಂದರೆ ನಾನು ಈ ಲೋಕದ ಜನರಿಗೆ, ಅವರು ಮಾಡುತ್ತಿರುವುದು ಕೆಟ್ಟಕಾರ್ಯಗಳೆಂದು ಹೇಳುವೆನು.


ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗದಿದ್ದರೆ ಕೆಡುಕರ ಪರವಾಗಿರುವೆ. ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗಿದ್ದರೆ ಕೆಡುಕರಿಗೆ ವಿರೋಧವಾಗಿರುವೆ.


ನಾನು ಭಯಗೊಂಡು ದೇವಾಲಯದೊಳಗೆ ಓಡಿಹೋಗಿ ದೋಷಿಯಾಗುವಂತೆಯೂ ನನ್ನ ಮೇಲೆ ಹಾಗೆ ಅಪರಾಧ ಹೊರಿಸಲು ತಮಗೆ ಕಾರಣ ದೊರೆಯುವಂತೆಯೂ ಅವರು ಶೆಮಾಯನನ್ನು ಉಪಯೋಗಿಸಿಕೊಂಡರು.


ನಾವು ಹೆದರಿಹೋಗಬೇಕೆಂದು ನಮ್ಮ ವೈರಿಗಳ ಕುತಂತ್ರವಿದೆ. “ಯೆಹೂದ್ಯರು ಭಯಗೊಂಡು ಬಲಹೀನರಾಗುವುದರಿಂದ ಅವರ ಕೆಲಸವನ್ನು ಮುಂದುವರಿಸಲು ಆಗುವುದಿಲ್ಲ, ಗೋಡೆಯೂ ಪೂರ್ಣಗೊಳ್ಳುವುದಿಲ್ಲ” ಎಂದು ಅವರು ಯೋಚಿಸಿಕೊಂಡಿದ್ದಾರೆ. ಆದರೆ ನಾನು, “ದೇವರೇ, ನನ್ನನ್ನು ಬಲಗೊಳಿಸು” ಎಂದು ಪ್ರಾರ್ಥಿಸಿದೆನು.


ಟೋಬೀಯನೂ ಅವರಿಗೆ ಉತ್ತರಿಸುತ್ತಿದ್ದನು. ಅವರು ಆ ಪತ್ರಗಳನ್ನು ಕಳುಹಿಸಲು ಕಾರಣವೇನೆಂದರೆ ಯೆಹೂದ್ಯರಲ್ಲಿ ಅನೇಕ ಜನರು ಅವನಿಗೆ ನಂಬಿಗಸ್ತರಾಗಿರುವುದಾಗಿ ವಾಗ್ದಾನ ಮಾಡಿದ್ದರು. ಟೋಬೀಯನು ಆರಹನ ಮಗನಾದ ಶೆಕನ್ಯನ ಅಳಿಯನಾಗಿದ್ದುದೇ ಇದಕ್ಕೆ ಕಾರಣ. ಟೋಬೀಯನ ಮಗನಾದ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳೊಂದಿಗೆ ಲಗ್ನವಾಗಿದ್ದನು.


ಗೋಡೆಯ ಕೆಲಸ ಪೂರ್ತಿಯಾದ ಬಳಿಕ ದ್ವಾರಗಳಿಗೆ ಬಾಗಿಲುಗಳನ್ನು ಇಡಲು ಪ್ರಾರಂಭಿಸಿದೆವು; ಬಾಗಿಲುಗಳಿಗೆ ಕಾವಲುಗಾರರನ್ನು ನೇಮಿಸಿದೆವು. ದೇವಾಲಯದಲ್ಲಿ ಬೇಕಾಗಿರುವ ಗಾಯಕರನ್ನು ಮತ್ತು ಯಾಜಕರಿಗೆ ಬೇಕಾದ ಸಹಾಯಕರನ್ನು ಆರಿಸಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು