Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:1 - ಪರಿಶುದ್ದ ಬೈಬಲ್‌

1 ಗೋಡೆಯ ಕೆಲಸ ಪೂರ್ತಿಯಾದ ಬಳಿಕ ದ್ವಾರಗಳಿಗೆ ಬಾಗಿಲುಗಳನ್ನು ಇಡಲು ಪ್ರಾರಂಭಿಸಿದೆವು; ಬಾಗಿಲುಗಳಿಗೆ ಕಾವಲುಗಾರರನ್ನು ನೇಮಿಸಿದೆವು. ದೇವಾಲಯದಲ್ಲಿ ಬೇಕಾಗಿರುವ ಗಾಯಕರನ್ನು ಮತ್ತು ಯಾಜಕರಿಗೆ ಬೇಕಾದ ಸಹಾಯಕರನ್ನು ಆರಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಗೋಡೆಯನ್ನು ಕಟ್ಟಿ ಮುಗಿಸಿದ ನಂತರ ನಾನು ಬಾಗಿಲುಗಳನ್ನು ಇರಿಸಿದೆನು; ದ್ವಾರಪಾಲಕರನ್ನೂ, ಗಾಯಕರನ್ನೂ, ಲೇವಿಯರನ್ನೂ ನೇಮಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಗೋಡೆಯನ್ನು ಕಟ್ಟಿ ಮುಗಿಸಿದನಂತರ ನಾನು ಕದಗಳನ್ನು ಹಚ್ಚಿಸಿದೆ; ದ್ವಾರಪಾಲಕರನ್ನೂ ಗಾಯಕರನ್ನೂ ಲೇವಿಯರನ್ನೂ ನೇಮಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಗೋಡೆಯನ್ನು ಕಟ್ಟಿ ತೀರಿಸಿದ ನಂತರ ನಾನು ಕದಗಳನ್ನು ಹಚ್ಚಿಸಿದೆನು; ದ್ವಾರಪಾಲಕರೂ ಗಾಯಕರೂ ಲೇವಿಯರೂ ನೇವಿುಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಗೋಡೆಯನ್ನು ಪುನಃ ಕಟ್ಟಿಸಿ, ಬಾಗಿಲುಗಳನ್ನು ನಿಲ್ಲಿಸಿ, ತರುವಾಯ ಬಾಗಿಲು ಕಾಯುವವರನ್ನು, ಹಾಡುಗಾರರನ್ನು, ಲೇವಿಯರನ್ನು ನೇಮಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:1
12 ತಿಳಿವುಗಳ ಹೋಲಿಕೆ  

ಏಲೂಲ್ ತಿಂಗಳ ಇಪ್ಪತ್ತೈದನೆಯ ದಿನದಲ್ಲಿ ಜೆರುಸಲೇಮಿನ ಪೌಳಿಗೋಡೆಗಳ ಕೆಲಸ ಮುಕ್ತಾಯವಾಯಿತು. ಅದಕ್ಕೆ ಒಟ್ಟು ಐವತ್ತೆರಡು ದಿನಗಳು ಬೇಕಾದವು.


ಸನ್ಬಲ್ಲಟನಿಗೆ, ಟೋಬೀಯನಿಗೆ, ಅರಬಿಯವನಾದ ಗೆಷೆಮನಿಗೆ ಮತ್ತು ಇನ್ನಿತರ ವೈರಿಗಳಿಗೆ ನಾವು ಗೋಡೆಯನ್ನು ಕಟ್ಟಿ ಮುಗಿಸಿದ್ದು ಗೊತ್ತಾಯಿತು. ಗೋಡೆಯಲ್ಲಿದ್ದ ಎಲ್ಲಾ ಕಿಂಡಿಗಳನ್ನು ನಾವು ಮುಚ್ಚಿದೆವು. ಆದರೆ ಗೋಡೆಯಲ್ಲಿನ ದ್ವಾರಗಳಿಗೆ ಇನ್ನೂ ಬಾಗಿಲುಗಳನ್ನು ಇಟ್ಟಿರಲಿಲ್ಲ.


ಯಾಜಕರೂ ಲೇವಿಯರೂ ಬೇರೆಬೇರೆ ಗುಂಪುಗಳಾಗಿ ವಿಭಾಗಿಸಲ್ಪಟ್ಟಿದ್ದರು. ಪ್ರತಿಯೊಂದು ಗುಂಪಿನವರಿಗೂ ಪ್ರತ್ಯೇಕವಾದ ಸೇವಾಕಾರ್ಯವು ಕೊಡಲ್ಪಟ್ಟಿತ್ತು. ಅರಸನಾದ ಹಿಜ್ಕೀಯನು ಅವರ ಕೆಲಸಗಳನ್ನು ಮತ್ತೆ ಪ್ರಾರಂಭಿಸಲು ಈ ಗುಂಪಿನವರಿಗೆ ಹೇಳಿದನು. ಹೀಗೆ ಯಾಜಕರೂ ಲೇವಿಯರೂ ಮತ್ತೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುತ್ತಿದ್ದರು. ಅಲ್ಲದೆ ದೇವಾಲಯದೊಳಗೆ ದೇವರಿಗೆ ಸ್ತುತಿಗೀತೆ ಹಾಡುವ ಕೆಲಸವೂ ಅವರದೇ ಆಗಿತ್ತು.


ಲೇವಿಯರಲ್ಲಿ ಇವರು ಮುಖಂಡರು: ಹಷಬ್ಯ, ಶೇರೇಬ್ಯ, ಕದ್ಮೀಯೇಲನ ಮಗನಾದ ಯೇಷೂವ ಮತ್ತು ಅವನ ಸಹೋದರರು. ಇವರು ತಮ್ಮ ಸಹೋದರರ ಎದುರು ನಿಂತು ಸ್ತೋತ್ರಗೀತೆ ಹಾಡುವರು. ಹೀಗೆ ಪರಸ್ಪರ ಹಾಡುವುದು ದೇವರ ಮನುಷ್ಯನಾದ ದಾವೀದನ ಆಜ್ಞೆಯಾಗಿತ್ತು.


ಜೆರುಸಲೇಮಿನಲ್ಲಿ ವಾಸಿಸಿದ ಪ್ರಾಂತ್ಯಾಧಿಕಾರಿಗಳ ಪಟ್ಟಿ, (ಕೆಲವು ಇಸ್ರೇಲ್ ಜನರು, ಯಾಜಕರು, ಲೇವಿಯರು, ಆಲಯದ ಸೇವಕರು ಮತ್ತು ಸೊಲೊಮೋನನ ಸೇವಕರ ಸಂತಾನದವರು ಯೆಹೂದ ಪ್ರಾಂತ್ಯದ ಊರುಗಳಲ್ಲಿ ವಾಸಿಸಿದರು. ಇವರೆಲ್ಲರು ತಮ್ಮ ಊರುಗಳಲ್ಲಿದ್ದ ತಮ್ಮ ಸ್ವಂತ ಸ್ಥಳಗಳಲ್ಲಿ ಜೀವಿಸಿದರು.


ಇಸ್ರೇಲ್ ಜನರು ಮತ್ತು ಲೇವಿಯರು ತಮ್ಮ ಕಾಣಿಕೆಗಳಾದ ದವಸಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ ಇವುಗಳನ್ನು ತಂದು ದೇವಾಲಯದ ಉಗ್ರಾಣಗಳಲ್ಲಿ ಇಡಬೇಕು. ದೇವಾಲಯಕ್ಕೋಸ್ಕರ ಮೀಸಲಾದ ಎಲ್ಲಾ ವಸ್ತುಗಳನ್ನು ಆ ಉಗ್ರಾಣಗಳಲ್ಲಿ ಇಡಬೇಕು. ಕೆಲಸದಲ್ಲಿ ನಿರತರಾಗಿರುವ ಯಾಜಕರು, ಗಾಯಕರು, ದ್ವಾರಪಾಲಕರು ಅಲ್ಲೇ ಇರಬೇಕು. “ನಮ್ಮ ದೇವರ ಆಲಯವನ್ನು ನಾವು ನೋಡಿಕೊಳ್ಳುವುದಾಗಿ ನಾವೆಲ್ಲರೂ ಪ್ರಮಾಣಮಾಡುತ್ತೇವೆ!”


ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೋಚಾದಾಕನ ಮಗನಾದ ಯೇಷೂವನು ಕೆಲಸವನ್ನು ಪ್ರಾರಂಭಿಸಿದರು. ಅವರ ಸಹೋದರರು, ಯಾಜಕರು, ಲೇವಿಯರು ಮತ್ತು ಅವರೊಂದಿಗೆ ಸೆರೆಯಿಂದ ಬಂದವರೆಲ್ಲರೂ ಕೆಲಸ ಮಾಡಿದರು. ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಲೇವಿಯವರನ್ನು ಮೇಲ್ವಿಚಾರಕರನ್ನಾಗಿ ಅವರು ನೇಮಿಸಿದರು.


ಈ ಕುಷ್ಠರೋಗಿಗಳು ನಗರದ ಬಾಗಿಲಿಗೆ ಬಂದು ದ್ವಾರಪಾಲಕರನ್ನು ಕರೆದು, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಆದರೆ ನಾವು ಜನರ ಧ್ವನಿಯನ್ನು ಕೇಳಲೇ ಇಲ್ಲ. ಅಲ್ಲಿ ಜನರ ಸುಳಿವಿಲ್ಲ. ಕುದುರೆಗಳು ಮತ್ತು ಹೇಸರಕತ್ತೆಗಳು ಕಟ್ಟಿಹಾಕಿದಂತೆಯೇ ಇವೆ. ಗುಡಾರಗಳಿನ್ನೂ ಯಥಾಸ್ಥಿತಿಯಲ್ಲಿವೆ. ಆದರೆ ಸೈನಿಕರೆಲ್ಲರೂ ಹೊರಟುಹೋಗಿದ್ದಾರೆ” ಎಂದು ಹೇಳಿದರು.


ಹಿಂದಿನ ಕಾಲದಲ್ಲಿ ಆ ಜನರು ಟೋಬೀಯನಿಗೆ ಒಂದು ವಿಶೇಷ ವಾಗ್ದಾನ ಮಾಡಿದ್ದರು. ಆದ್ದರಿಂದ ಟೋಬೀಯನು ಎಷ್ಟು ಒಳ್ಳೆಯವನೆಂದು ನನ್ನೊಂದಿಗೆ ಹೇಳುತ್ತಿದ್ದರು; ನಾನು ಮಾಡುತ್ತಿರುವ ಕಾರ್ಯಗಳ ಬಗ್ಗೆಯೂ ಅವರು ಟೋಬೀಯನಿಗೆ ವರದಿ ಮಾಡುತ್ತಿದ್ದರು. ಟೋಬೀಯನು ನನ್ನನ್ನು ಬೆದರಿಸುವುದಕ್ಕೋಸ್ಕರ ನನಗೆ ಪದೇಪದೇ ಪತ್ರ ಬರೆಯುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು