ನೆಹೆಮೀಯ 7:2 - ಪರಿಶುದ್ದ ಬೈಬಲ್2 ಇದಾದ ಬಳಿಕ ನನ್ನ ಸಹೋದರ ಹಾನಾನಿಯನನ್ನು ಜೆರುಸಲೇಮಿನ ಆಡಳಿತಗಾರನನ್ನಾಗಿ ನೇಮಿಸಿದೆನು. ಹನನ್ಯನನ್ನು ಜೆರುಸಲೇಮಿನ ಕೋಟೆಗೆ ಅಧಿಪತಿಯನ್ನಾಗಿ ಆರಿಸಿದೆನು. ಹಾನಾನಿಯು ನಂಬಿಗಸ್ತನೂ ದೇವರಿಗೆ ಭಯಪಡುವವನೂ ಆಗಿದ್ದುದರಿಂದ ನಾನು ಅವನನ್ನು ಆರಿಸಿಕೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆನಂತರ ನನ್ನ ತಮ್ಮನಾದ ಹನಾನಿಗೂ, ಬಹಳ ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ, ಕೋಟೆಯ ಅಧಿಕಾರಿಯೂ ಆದ ಹನನ್ಯನಿಗೂ ಯೆರೂಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಮೇಲೆ ನನ್ನ ತಮ್ಮ ಹನಾನಿಗೆ ಹಾಗು ಬಹಳ ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ ದುರ್ಗಾ ಅಧಿಕಾರಿಯೂ ಆಗಿದ್ದ ಹನನ್ಯನಿಗೆ ಜೆರುಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಮೇಲೆ ನನ್ನ ತಮ್ಮನಾದ ಹನಾನಿಗೂ ಬಲು ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ ದುರ್ಗಾಧಿಕಾರಿಯೂ ಆದ ಹನನ್ಯನಿಗೂ ಯೆರೂಸಲೇವಿುನ ಮೇಲ್ವಿಚಾರಣೆಯನ್ನು ಒಪ್ಪಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಮೇಲೆ ನಾನು ನನ್ನ ಸಹೋದರನಾದ ಹನಾನೀ ಮತ್ತು ಅರಮನೆಯ ಅಧಿಪತಿಯಾದ ಹನನ್ಯ ಇವರಿಗೆ ಯೆರೂಸಲೇಮಿನ ಜವಾಬ್ದಾರಿಕೆಯನ್ನು ಒಪ್ಪಿಸಿದೆನು. ಏಕೆಂದರೆ ಇವನು ಸತ್ಯವಂತನಾಗಿಯೂ, ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು. ಅಧ್ಯಾಯವನ್ನು ನೋಡಿ |
ಆದರೆ ಬೇರೆ ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಈ ಸಮಾಚಾರವನ್ನು ತಿಳಿದು ಹೊಟ್ಟೆಕಿಚ್ಚುಪಟ್ಟರು. ಅವರು ದಾನಿಯೇಲನ ಮೇಲೆ ದೋಷಾರೋಪಣೆ ಮಾಡಲು ಕಾರಣಗಳನ್ನು ಹುಡುಕಲಾರಂಭಿಸಿದರು. ದಾನಿಯೇಲನು ಮಾಡುವ ರಾಜ್ಯದ ಎಲ್ಲ ಕೆಲಸಗಳ ಮೇಲೆ ಅವರು ಕಣ್ಣಿಟ್ಟರು. ಆದರೆ ದಾನಿಯೇಲನಲ್ಲಿ ಯಾವ ತಪ್ಪೂ ಅವರಿಗೆ ಸಿಕ್ಕಲಿಲ್ಲ. ಆದ್ದರಿಂದ ಅವರು ಅವನ ಮೇಲೆ ಯಾವ ದೋಷಾರೋಪಣೆಯನ್ನೂ ಮಾಡಲಾಗಲಿಲ್ಲ. ದಾನಿಯೇಲನು ಪ್ರಾಮಾಣಿಕನೂ ವಿಶ್ವಾಸಪಾತ್ರನೂ ಆಗಿದ್ದನು. ಅವನು ಬಹಳ ಕಷ್ಟಪಟ್ಟು ಕೆಲಸ ಮಾಡುತ್ತಿದ್ದನು; ಅರಸನಿಗೆ ಯಾವ ರೀತಿಯಲ್ಲೂ ವಂಚನೆ ಮಾಡುತ್ತಿರಲಿಲ್ಲ.
ಹನಾನಿಗೆ ಮತ್ತು ಹನನ್ಯನಿಗೆ ನಾನು ಆಜ್ಞಾಪಿಸಿದ್ದೇನೆಂದರೆ: “ಸೂರ್ಯೋದಯವಾಗಿ ಕೆಲವು ತಾಸು ಕಳೆದ ಮೇಲೆಯೇ ನೀವು ಜೆರುಸಲೇಮಿನ ಬಾಗಿಲುಗಳನ್ನು ತೆರೆಯಬೇಕು; ಸೂರ್ಯನು ಮುಳುಗುವ ಮೊದಲೇ ನೀವು ಬಾಗಿಲುಗಳನ್ನು ಮುಚ್ಚಿ ಬೀಗ ಹಾಕಬೇಕು. ಜೆರುಸಲೇಮಿನಲ್ಲಿ ವಾಸವಾಗಿರುವವರನ್ನೇ ಕಾವಲುಗಾರರನ್ನಾಗಿ ಆರಿಸಿಕೊಳ್ಳಿರಿ. ವಿಶೇಷವಾದ ಸ್ಥಳಗಳಲ್ಲಿ ಪಟ್ಟಣವನ್ನು ಕಾಯುವುದಕ್ಕಾಗಿ ಅವರಲ್ಲಿ ಕೆಲವರನ್ನು ನೇಮಿಸಿರಿ; ಉಳಿದವರನ್ನು ಅವರವರ ಮನೆಯ ಸಮೀಪದಲ್ಲಿಯೇ ಕಾಯಲು ನೇಮಿಸಿರಿ.”