Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:3 - ಪರಿಶುದ್ದ ಬೈಬಲ್‌

3 ಹನಾನಿಗೆ ಮತ್ತು ಹನನ್ಯನಿಗೆ ನಾನು ಆಜ್ಞಾಪಿಸಿದ್ದೇನೆಂದರೆ: “ಸೂರ್ಯೋದಯವಾಗಿ ಕೆಲವು ತಾಸು ಕಳೆದ ಮೇಲೆಯೇ ನೀವು ಜೆರುಸಲೇಮಿನ ಬಾಗಿಲುಗಳನ್ನು ತೆರೆಯಬೇಕು; ಸೂರ್ಯನು ಮುಳುಗುವ ಮೊದಲೇ ನೀವು ಬಾಗಿಲುಗಳನ್ನು ಮುಚ್ಚಿ ಬೀಗ ಹಾಕಬೇಕು. ಜೆರುಸಲೇಮಿನಲ್ಲಿ ವಾಸವಾಗಿರುವವರನ್ನೇ ಕಾವಲುಗಾರರನ್ನಾಗಿ ಆರಿಸಿಕೊಳ್ಳಿರಿ. ವಿಶೇಷವಾದ ಸ್ಥಳಗಳಲ್ಲಿ ಪಟ್ಟಣವನ್ನು ಕಾಯುವುದಕ್ಕಾಗಿ ಅವರಲ್ಲಿ ಕೆಲವರನ್ನು ನೇಮಿಸಿರಿ; ಉಳಿದವರನ್ನು ಅವರವರ ಮನೆಯ ಸಮೀಪದಲ್ಲಿಯೇ ಕಾಯಲು ನೇಮಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಅವರಿಗೆ, “ಬಿಸಿಲೇರುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ತೆರೆಯಬಾರದು; ಕಾವಲುಗಾರರು ಇನ್ನೂ ಇರುವಾಗಲೇ ಬಾಗಿಲುಗಳನ್ನು ಮುಚ್ಚಿ ಭದ್ರಪಡಿಸಬೇಕು. ಇದಲ್ಲದೆ ಯೆರೂಸಲೇಮಿನ ನಿವಾಸಿಗಳೊಳಗೆ ಕಾವಲುಗಾರರನ್ನು ಗೊತ್ತುಮಾಡಿರಿ, ಅವರಲ್ಲಿ ಕೆಲವರು ತಮ್ಮ ಕಾವಲಿನ ಸ್ಥಳಗಳಲ್ಲಿಯೂ, ಇನ್ನು ಕೆಲವರನ್ನು ಅವರ ಮನೆಯ ಎದುರಿನಲ್ಲಿಯೂ ಕಾವಲಿರುವಂತೆ ನೇಮಿಸಬೇಕು” ಎಂದು ಆಜ್ಞಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರಿಗೆ, “ಬಿಸಿಲೇರುವುದಕ್ಕಿಂತ ಮೊದಲೇ ಜೆರುಸಲೇಮಿನ ಬಾಗಿಲುಗಳನ್ನು ತೆರೆಯಬಾರದು; ಕಾವಲುಗಾರರು ಇನ್ನೂ ಇರುವಲ್ಲೇ ಕದಗಳನ್ನು ಮುಚ್ಚಿ ಭದ್ರಪಡಿಸಬೇಕು. ಇದಲ್ಲದೆ, ಜೆರುಸಲೇಮಿನ ನಿವಾಸಿಗಳಲ್ಲೇ ಕಾವಲುಗಾರರನ್ನು ಗೊತ್ತುಮಾಡಿರಿ. ಪ್ರತಿಯೊಬ್ಬನನ್ನು ಅವನವನ ಮನೆಯ ಎದುರಿನಲ್ಲೇ ಕಾವಲಿರುವಂತೆ ನೇಮಿಸಿರಿ,” ಎಂದು ಆಜ್ಞಾಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರಿಗೆ - ಬಿಸಿಲು ಬಲಿಯುವದಕ್ಕಿಂತ ಮೊದಲು ಯೆರೂಸಲೇವಿುನ ಬಾಗಲುಗಳನ್ನು ತೆರೆಯಬಾರದು; ಕಾವಲುಗಾರರು ಇನ್ನೂ ಇರುವಷ್ಟರಲ್ಲೇ ಕದಗಳನ್ನು ಮುಚ್ಚಿ ಭದ್ರಪಡಿಸಬೇಕು. ಇದಲ್ಲದೆ ಯೆರೂಸಲೇವಿುನ ನಿವಾಸಿಗಳೊಳಗೆ ಕಾವಲುಗಾರರನ್ನು ಗೊತ್ತುಮಾಡಿರಿ. ಅವರಲ್ಲಿ ಪ್ರತಿಯೊಬ್ಬನನ್ನು ಅವನವನ ಮನೆಯ ಎದುರಿನಲ್ಲಿ ಕಾವಲಿರುವಂತೆ ನೇವಿುಸಬೇಕು ಎಂದು ಆಜ್ಞಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ನಾನು ಅವರಿಗೆ, “ಬಿಸಿಲು ಏರುವುದಕ್ಕಿಂತ ಮೊದಲೇ ಯೆರೂಸಲೇಮಿನ ಬಾಗಿಲುಗಳನ್ನು ತೆರೆಯಬಾರದು. ಇದಲ್ಲದೆ ನೀವು ಸಮೀಪದಲ್ಲಿ ನಿಂತಿರುವಾಗ, ಕದಗಳನ್ನು ಮುಚ್ಚಿ ಅಗುಳಿಗಳನ್ನು ಹಾಕಿರಿ. ಯೆರೂಸಲೇಮಿನ ನಿವಾಸಿಗಳಲ್ಲಿ ಪ್ರತಿ ಮನುಷ್ಯನು ತನ್ನ ಮನೆಗೆ ಎದುರಾಗಿ ಕಾವಲಾಗಿರಲು ನೇಮಿಸಿರಿ,” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:3
8 ತಿಳಿವುಗಳ ಹೋಲಿಕೆ  

“ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ.


ಯೆಹೋವನು ಮನೆಯನ್ನು ಕಟ್ಟದಿದ್ದರೆ, ಕಟ್ಟುವವರ ಸಮಯವೆಲ್ಲಾ ವ್ಯರ್ಥ. ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರ ಸಮಯವೆಲ್ಲಾ ವ್ಯರ್ಥ.


ಅಲ್ಲದೆ ಶುಕ್ರವಾರ ಸೂರ್ಯಸ್ತಮಾನಕ್ಕಿಂತ ಮುಂಚೆ ಜೆರುಸಲೇಮಿನ ಬಾಗಿಲ ಕದಗಳನ್ನು ಮುಚ್ಚಲು ಆಜ್ಞೆಯಿತ್ತೆನು. ಸಬ್ಬತ್‌ದಿನ ಮುಗಿದ ಬಳಿಕವೇ ಅವುಗಳನ್ನು ತೆರೆಯಲು ಅಪ್ಪಣೆಕೊಟ್ಟೆನು. ದ್ವಾರಗಳ ಬಳಿ ನನ್ನ ಕೆಲವು ಜನರನ್ನು ನಿಲ್ಲಿಸಿ, ಸಬ್ಬತ್ ದಿನದಲ್ಲಿ ಯಾವ ಮೂಟೆಯನ್ನೂ ನಗರದೊಳಗೆ ತರಲು ಬಿಡಬಾರದು ಎಂದು ಅವರಿಗೆ ಆಜ್ಞಾಪಿಸಿದೆನು.


ಬೆನ್ಯಾಮೀನ್ ಮತ್ತು ಹಷ್ಷೂಬ್ ತಮ್ಮ ತಮ್ಮ ಸ್ವಂತ ಮನೆಗಳ ಮುಂದಿದ್ದ ಭಾಗವನ್ನು ಕಟ್ಟಿದರು, ಹಾಗೆಯೇ ಮಾಸೇಯನ ಮಗನಾದ ಅಜರ್ಯನು ತನ್ನ ಮನೆ ಮುಂದಿದ್ದ ಗೋಡೆಯನ್ನು ಕಟ್ಟಿದನು.


ಇದಾದ ಬಳಿಕ ನನ್ನ ಸಹೋದರ ಹಾನಾನಿಯನನ್ನು ಜೆರುಸಲೇಮಿನ ಆಡಳಿತಗಾರನನ್ನಾಗಿ ನೇಮಿಸಿದೆನು. ಹನನ್ಯನನ್ನು ಜೆರುಸಲೇಮಿನ ಕೋಟೆಗೆ ಅಧಿಪತಿಯನ್ನಾಗಿ ಆರಿಸಿದೆನು. ಹಾನಾನಿಯು ನಂಬಿಗಸ್ತನೂ ದೇವರಿಗೆ ಭಯಪಡುವವನೂ ಆಗಿದ್ದುದರಿಂದ ನಾನು ಅವನನ್ನು ಆರಿಸಿಕೊಂಡೆನು.


ಜೆರುಸಲೇಮ್ ಪಟ್ಟಣವು ವಿಸ್ತಾರವಾಗಿದ್ದರೂ ಅದರಲ್ಲಿ ವಾಸಿಸುವ ಜನರು ಸ್ವಲ್ಪವೇ ಆಗಿದ್ದರು. ಕೆಡವಲ್ಪಟ್ಟಿದ್ದ ಮನೆಗಳು ತಿರುಗಿ ಕಟ್ಟಲ್ಪಡಲಿಲ್ಲ.


ಜೆರುಸಲೇಮೇ, ದೇವರು ನಿನ್ನ ಬಾಗಿಲುಗಳ ಸರಳುಗಳನ್ನು ಬಲಪಡಿಸುವನು; ನಿನ್ನ ನಗರದಲ್ಲಿರುವ ಜನರನ್ನು ಆಶೀರ್ವದಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು