Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:70 - ಪರಿಶುದ್ದ ಬೈಬಲ್‌

70 ಇವರ ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕ್ಕಾಗಿ ಹಣವನ್ನು ದಾನವಾಗಿ ಕೊಟ್ಟರು. ರಾಜ್ಯಪಾಲನು ಹತ್ತೊಂಭತ್ತು ಪೌಂಡು ಬಂಗಾರವನ್ನು. ಐವತ್ತು ಬೋಗುಣಿಗಳನ್ನು ಮತ್ತು ಐನೂರ ಮೂವತ್ತು ಯಾಜಕರ ವಸ್ತ್ರಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

70 ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕಾರ್ಯಗಳಿಗಾಗಿ ಧನ ಸಹಾಯ ಮಾಡಿದರು. ತಿರ್ಷಾತಾ ಅನ್ನಿಸಿಕೊಳ್ಳುವ ದೇಶಾಧಿಪತಿಯು ಭಂಡಾರಕ್ಕೆ ಕೊಟ್ಟದ್ದು ಸಾವಿರ ಬಂಗಾರದ ನಾಣ್ಯಗಳು, ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

70 ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕ್ಕೆಬೇಕಾದ ದ್ರವ್ಯಸಹಾಯ ನೀಡಿದರು. ತಿರ್ಷಾತಾ ಎನಿಸಿಕೊಳ್ಳುವ ರಾಜ್ಯಪಾಲ ಭಂಡಾರಕ್ಕೆ ಕೊಟ್ಟದ್ದು - ಎಂಟು ಕಿಲೋಗ್ರಾಂ ಬಂಗಾರ. ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

70 ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕ್ಕೋಸ್ಕರ ದ್ರವ್ಯಸಹಾಯಮಾಡಿದರು. ತಿರ್ಷಾತಾ ಅನ್ನಿಸಿಕೊಳ್ಳುವ ದೇಶಾಧಿಪತಿಯು ಭಂಡಾರಕ್ಕೆ ಕೊಟ್ಟದ್ದು - ಸಾವಿರ ಬಂಗಾರದ ಪವನುಗಳು, ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

70 ಕುಟುಂಬಗಳ ಕೆಲವು ಮುಖ್ಯಸ್ಥರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ರಾಜ್ಯಪಾಲನು ಬೊಕ್ಕಸಕ್ಕೆ 8.4 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ, 50 ಪಾತ್ರೆಗಳನ್ನೂ, 530 ಯಾಜಕರ ಅಂಗಿಗಳನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:70
15 ತಿಳಿವುಗಳ ಹೋಲಿಕೆ  

ಆಗ ಜನರೆಲ್ಲಾ ಅಳಲು ಪ್ರಾರಂಭಿಸಿದರು. ಆಗ ರಾಜ್ಯಪಾಲನಾದ ನೆಹೆಮೀಯನೂ ಯಾಜಕನೂ ಮತ್ತು ಉಪದೇಶಕನೂ ಆಗಿದ್ದ ಎಜ್ರನೂ ಲೇವಿಯರೂ ಎದ್ದುನಿಂತು ಜನರಿಗೆ, “ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ವಿಶೇಷ ದಿನವಾಗಿದೆ. ಆದ್ದರಿಂದ ದುಃಖಿಸಬೇಡಿ ಮತ್ತು ಅಳಬೇಡಿರಿ” ಎಂದು ಹೇಳಿದರು.


ರಾಜನ ವಿಶೇಷ ರಕ್ಷಕದಳದ ಅಧಿಪತಿಯು ಬೋಗುಣಿಗಳನ್ನು, ಧೂಪಾರತಿಗಳನ್ನು, ದೊಡ್ಡ ಬಟ್ಟಲುಗಳನ್ನು, ಪಾತ್ರೆಗಳನ್ನು, ದೀಪಸ್ತಂಭಗಳನ್ನು, ತಟ್ಟೆಗಳನ್ನು, ಪಾನನೈವೇದ್ಯಕ್ಕೆ ಉಪಯೋಗಿಸುವ ಬೋಗುಣಿಗಳನ್ನು ತೆಗೆದುಕೊಂಡು ಹೋದನು. ಚಿನ್ನ ಅಥವಾ ಬೆಳ್ಳಿಯ ಪ್ರತಿಯೊಂದು ವಸ್ತುವನ್ನು ಅವನು ತೆಗೆದುಕೊಂಡನು.


ಮುದ್ರೆ ಹಾಕಿದ ಒಡಂಬಡಿಕೆಯಲ್ಲಿದ್ದ ಹೆಸರುಗಳು: ರಾಜ್ಯಪಾಲನಾದ ನೆಹೆಮೀಯ, ಇವನು ಹಕಲ್ಯನ ಮಗನು.


ಒಬ್ಬ ಪ್ರಧಾನ ಯಾಜಕನು ಊರೀಮ್ ತುಮ್ಮೀಮ್ ಧರಿಸಿ ದೇವರಿಂದ ಉತ್ತರವನ್ನು ಹೊಂದುವ ತನಕ ಅವರಲ್ಲಿ ಯಾರೂ ಪವಿತ್ರ ಆಹಾರದಲ್ಲಿ ಯಾವುದನ್ನೂ ತಿನ್ನಬಾರದೆಂದು ರಾಜ್ಯಪಾಲನು ಆಜ್ಞಾಪಿಸಿದನು.


ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮತ್ತು ದೇವಾಲಯದ ಉಪಕರಣಗಳನ್ನೂ ಸೊಲೊಮೋನನು ಹೇಳಿದಂತೆಯೇ ಮಾಡಿ ಮುಗಿಸಿದನು.


ಅವನು ಹತ್ತು ಮೇಜುಗಳನ್ನು ಮಾಡಿಸಿ ಅವುಗಳಲ್ಲಿ ಐದನ್ನು ದೇವಾಲಯದ ಬಲಗಡೆಯಲ್ಲಿಯೂ ಉಳಿದ ಐದನ್ನು ಎಡಗಡೆಯಲ್ಲಿಯೂ ಇರಿಸಿದನು. ಅನಂತರ ಸೊಲೊಮೋನನು ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.


ಮುಳ್ಳುಚಮಚ, ಚಿಮಿಕಿಸುವ ಬೋಗುಣಿ ಮತ್ತು ಹೂಜೆಗಳಿಗೆ ಬೇಕಾಗುವ ಚೊಕ್ಕ ಬಂಗಾರವನ್ನು ದಾವೀದನು ತಿಳಿಸಿದನು; ಅಲ್ಲದೆ ಬೆಳ್ಳಿಬಂಗಾರಗಳಿಂದ ಮಾಡಬೇಕಾದ ಬೋಗುಣಿಗಳಿಗೆ ಎಷ್ಟು ಬೆಳ್ಳಿಬಂಗಾರಗಳು ಬೇಕಾಗುತ್ತದೆ ಎಂಬುದನ್ನು ತಿಳಿಸಿದನು.


ಗುಂಬಗಳು, ಚಿಕ್ಕಸಲಿಕೆಗಳು, ಚಿಕ್ಕಗಂಗಾಳಗಳು ಮತ್ತು ಯೆಹೋವನ ಆಲಯಕ್ಕೆ ಅಗತ್ಯವಾದ ಎಲ್ಲಾ ಪಾತ್ರೆಗಳು. ರಾಜನಾದ ಸೊಲೊಮೋನನು ಅಪೇಕ್ಷಿಸಿದ ವಸ್ತುಗಳನ್ನೆಲ್ಲಾ ಹೀರಾಮನು ಮಾಡಿದನು. ಈ ವಸ್ತುಗಳನ್ನೆಲ್ಲಾ ನಯಗೊಳಿಸಿದ ಹಿತ್ತಾಳೆಯಿಂದ ಮಾಡಿದನು.


ಮೋಶೆಯು ಈ ಪಶುಗಳ ರಕ್ತವನ್ನು ತೆಗೆದುಕೊಂಡು ಅದರಲ್ಲಿ ಅರ್ಧಭಾಗವನ್ನು ಬೋಗುಣಿಗಳಲ್ಲಿ ಹಾಕಿದನು; ಉಳಿದ ಅರ್ಧಭಾಗವನ್ನು ಯಜ್ಞವೇದಿಕೆಯ ಮೇಲೆ ಸುರಿದನು.


ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ರಕ್ತ ತುಂಬಿರುವ ಪಾತ್ರೆಯಲ್ಲಿ ಅದ್ದಿರಿ. ರಕ್ತವನ್ನು ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿರಿ. ಮುಂಜಾನೆಯಾಗುವವರೆಗೆ ಯಾರೂ ತಮ್ಮ ಮನೆಯನ್ನು ಬಿಟ್ಟು ಹೊರಗೆ ಹೋಗಬಾರದು.


ಗೋತ್ರಪ್ರಧಾನರು ಮೂನ್ನೂರ ಎಪ್ಪತ್ತೈದು ಪೌಂಡು ಬಂಗಾರವನ್ನು, ಹದಿಮೂರುವರೆ ಕ್ವಿಂಟಾಲ್ ಬೆಳ್ಳಿಯನ್ನು ದಾನವಾಗಿ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು