ನೆಹೆಮೀಯ 8:13 - ಪರಿಶುದ್ದ ಬೈಬಲ್13 ಆ ತಿಂಗಳ ಎರಡನೆಯ ದಿನದಲ್ಲಿ ಗೋತ್ರಪ್ರಧಾನರೂ ಯಾಜಕರೂ ಲೇವಿಯರೂ ಧರ್ಮಶಾಸ್ತ್ರವನ್ನು ಅಭ್ಯಾಸಿಸಲು ಉಪದೇಶಕನಾದ ಎಜ್ರನ ಸುತ್ತಲೂ ಸೇರಿಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮರುದಿನ ಎಲ್ಲಾ ಇಸ್ರಾಯೇಲ್ ಗೋತ್ರಪ್ರಧಾನರೂ, ಯಾಜಕರೂ, ಲೇವಿಯರೂ ಧರ್ಮನಿಯಮಗಳ ಅಧ್ಯಯನಕ್ಕಾಗಿ ಧರ್ಮೋಪದೇಶಕನಾದ ಎಜ್ರನ ಬಳಿಗೆ ಸೇರಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಮರುದಿನ ಎಲ್ಲ ಇಸ್ರಯೇಲ್ ಗೋತ್ರಪ್ರಧಾನರು, ಯಾಜಕರು ಹಾಗು ಲೇವಿಯರು ಧರ್ಮಶಾಸ್ತ್ರದ ಅಧ್ಯಯನಕ್ಕಾಗಿ ಧರ್ಮೋಪದೇಶಕನಾದ ಎಜ್ರನ ಬಳಿಗೆ ಕೂಡಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮರುದಿನ ಎಲ್ಲಾ ಇಸ್ರಾಯೇಲ್ ಗೋತ್ರಪ್ರಧಾನರೂ ಯಾಜಕರೂ ಲೇವಿಯರೂ ಧರ್ಮಶಾಸ್ತ್ರದ ಅಧ್ಯಯನಕ್ಕಾಗಿ ಧರ್ಮೋಪದೇಶಕನಾದ ಎಜ್ರನ ಬಳಿಗೆ ಕೂಡಿಬಂದಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಎರಡನೆಯ ದಿವಸದಲ್ಲಿ ಸಮಸ್ತ ಜನರ ಪಿತೃಗಳಲ್ಲಿರುವ ಮುಖ್ಯವಾದವರೂ ಯಾಜಕರೂ ಲೇವಿಯರೂ ದೇವರ ನಿಯಮದ ಮಾತುಗಳನ್ನು ತಿಳಿದುಕೊಳ್ಳುವ ಹಾಗೆ, ನಿಯಮಶಾಸ್ತ್ರಿಯಾದ ಎಜ್ರನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿ |
ಅವರು ಅಭ್ಯಾಸಿಸಿದಾಗ ಧರ್ಮಶಾಸ್ತ್ರದಲ್ಲಿ ಈ ಆಜ್ಞೆಗಳನ್ನು ಕಂಡುಕೊಂಡರು: ಏಳನೆಯ ತಿಂಗಳಲ್ಲಿ ಯೆಹೋವನ ಆಜ್ಞೆಗನುಸಾರವಾಗಿ ವಿಶೇಷ ಹಬ್ಬವನ್ನು ಆಚರಿಸಲು ಜೆರುಸಲೇಮಿನಲ್ಲಿ ಸೇರಿಬಂದು ತಾತ್ಕಾಲಿಕವಾದ ಬಿಡಾರಗಳಲ್ಲಿ ವಾಸಿಸಬೇಕು. ಅವರು ತಮ್ಮ ಊರುಗಳ ಮತ್ತು ಜೆರುಸಲೇಮಿನ, “ಬೆಟ್ಟಪ್ರದೇಶಗಳಿಗೆ ಹೋಗಿ ಆಲೀವ್, ಖರ್ಜೂರ, ಕಾಡು ಆಲೀವ್, ಸುಗಂಧ ಮುಂತಾದ ಮರಗಳ ರೆಂಬೆಗಳನ್ನು ತೆಗೆದುಕೊಂಡು ಬಂದು ಅವುಗಳಿಂದ ಆ ಬಿಡಾರಗಳನ್ನು ಮಾಡಬೇಕು” ಎಂಬುದಾಗಿ ಯೆಹೋವನು ಮೋಶೆಗೆ ಕೊಟ್ಟಿದ್ದ ಆಜ್ಞೆಗಳೇ ಅವು.