Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:11 - ಪರಿಶುದ್ದ ಬೈಬಲ್‌

11 ಕೆಂಪುಸಮುದ್ರವನ್ನು ಅವರ ಕಣ್ಣು ಮುಂದೆಯೇ ಇಬ್ಬಾಗ ಮಾಡಿದೆ. ಅವರು ಆ ಒಣನೆಲದಲ್ಲಿ ನಡೆದರು. ಈಜಿಪ್ಟಿನ ವೈರಿಗಳು ಅವರನ್ನು ಹಿಂಬಾಲಿಸುತ್ತಿದ್ದರು. ಆದರೆ ಆ ವೈರಿಗಳನ್ನು ನೀನು ಸಮುದ್ರದೊಳಗೆ ಬಿಸಾಡಿದೆ; ಅವರು ಗುಂಡುಕಲ್ಲಿನಂತೆ ಸಮುದ್ರದಲ್ಲಿ ಮುಳುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಮ್ಮ ಪೂರ್ವಿಕರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ಹಾದುಹೋಗುವಂತೆ ಅವರ ಮುಂದೆ ಸಮುದ್ರವನ್ನು ಭೇದಿಸಿದ್ದೀ. ಅವರನ್ನು ಹಿಂದಟ್ಟಿದವರನ್ನು ಕಲ್ಲಿನಂತೆ ಮಹಾಜಲರಾಶಿಯ ತಳದಲ್ಲಿ ಮುಳುಗಿಸಿಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕಡಲನು ಸೀಳಿ, ಆ ಪಿತೃಗಳ ನಡೆಸಿದಿರಿ ಒಣನೆಲದಲೋ ಎಂಬಂತೆ ಅವರ ಬೆನ್ನಟ್ಟಿ ಬಂದವರನು ಜಲರಾಶಿಯ ತಳಮುಟ್ಟಿಸಿದಿರಿ ಕಲ್ಲಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಮ್ಮ ಪಿತೃಗಳು ಸಮುದ್ರ ಮಧ್ಯದಲ್ಲಿ ಒಣನೆಲದಲ್ಲೇ ಹಾದುಹೋಗುವಂತೆ ಅವರ ಮುಂದೆ ಸಮುದ್ರವನ್ನು ಭೇದಿಸಿದಿ. ಅವರನ್ನು ಹಿಂದಟ್ಟುವವರನ್ನು ಕಲ್ಲಿನಂತೆ ಮಹಾಜಲರಾಶಿಯ ತಳದಲ್ಲಿ ಮುಳುಗಿಸಿ ಬಿಟ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀವು ಜನರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ, ಅವರು ಸಮುದ್ರದ ನಡುವೆ ಒಣಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನಂತೆ ಮಹಾ ಜಲರಾಶಿಗಳಲ್ಲಿ ಮುಳುಗಿಸಿಬಿಟ್ಟಿರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:11
16 ತಿಳಿವುಗಳ ಹೋಲಿಕೆ  

ದೇವರು ಕೆಂಪು ಸಮುದ್ರವನ್ನು ಇಬ್ಭಾಗಮಾಡಿ ಅವರನ್ನು ದಾಟಿಸಿದನು. ಅವರ ಎರಡು ಕಡೆಗಳಲ್ಲಿ ನೀರು ಬಲವಾದ ಗೋಡೆಯಂತೆ ನಿಂತುಕೊಂಡಿತು.


ಮೋಶೆಯಿಂದ ಮುನ್ನಡೆಸಲ್ಪಟ್ಟ ಜನರು ಕೆಂಪುಸಮುದ್ರವನ್ನು ಒಣಭೂಮಿಯೋ ಎಂಬಂತೆ ದಾಟಿದ್ದು ನಂಬಿಕೆಯಿಂದಲೇ. ಆದರೆ ಈಜಿಪ್ಟ್ ದೇಶದವರು ಕೆಂಪುಸಮುದ್ರವನ್ನು ದಾಟಲು ಪ್ರಯತ್ನಿಸಿ, ಮುಳುಗಿಹೋದರು.


ಆತನು ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು. ಆತನ ಜನರು ಕಾಲುನಡಿಗೆಯಿಂದ ನದಿಯನ್ನು ದಾಟಿದರು. ಅದಕ್ಕಾಗಿ ನಾವು ಆತನಲ್ಲಿ ಉಲ್ಲಾಸಪಡೋಣ.


ನಂತರ ಬಲಿಷ್ಠನಾದ ದೇವದೂತನೊಬ್ಬನು ಒಂದು ದೊಡ್ಡ ಬಂಡೆಯನ್ನು ಎತ್ತಿಕೊಂಡನು. ಆ ಬಂಡೆಯು ಒಂದು ದೊಡ್ಡ ಬೀಸುವ ಕಲ್ಲಿನಂತಿತ್ತು. ದೇವದೂತನು ಆ ಬಂಡೆಯನ್ನು ಸಮುದ್ರದಲ್ಲಿ ಎಸೆದು ಹೀಗೆ ಹೇಳಿದನು: “ಮಹಾನಗರಿಯಾದ ಬಾಬಿಲೋನ್ ಹೀಗೆಯೇ ಕೆಳಕ್ಕೆ ಎಸೆಯಲ್ಪಡುವುದು. ಆ ನಗರಿಯು ಮತ್ತೆಂದಿಗೂ ಕಾಣಿಸುವುದಿಲ್ಲ.


ಸಹೋದರ ಸಹೋದರಿಯರೇ, ಮೋಶೆಯನ್ನು ಅನುಸರಿಸಿದ ನಮ್ಮ ಪಿತೃಗಳಿಗೆ ಏನು ಸಂಭವಿಸಿತೆಂಬುದನ್ನು ನೀವು ತಿಳಿದುಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅವರೆಲ್ಲರೂ ಮೋಡದ ಕೆಳಗಿದ್ದರು; ಸಮುದ್ರದ ಮೂಲಕ ನಡೆದುಕೊಂಡು ಹೋದರು;


ಯೆಹೋವನು ನಿಮಗೋಸ್ಕರ ಯುದ್ಧಮಾಡುವನು. ಆದ್ದರಿಂದ ನೀವು ಸುಮ್ಮನೆ ಇರಿ” ಎಂದು ಹೇಳಿದನು.


ರಥಗಳ ಚಕ್ರಗಳು ನೆಲಕ್ಕೆ ಅಂಟಿಕೊಂಡವು. ರಥಗಳನ್ನು ನಡಿಸುವುದು ಬಹುಕಷ್ಟವಾಗಿತ್ತು. ಈಜಿಪ್ಟಿನವರು “ನಾವು ಇಲ್ಲಿಂದ ಹೋಗೋಣ. ಯೆಹೋವನು ಈಜಿಪ್ಟಿನ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನೆ. ಯೆಹೋವನು ಇಸ್ರೇಲರಿಗಾಗಿ ಯುದ್ಧ ಮಾಡುತ್ತಿದ್ದಾನೆ” ಎಂದು ಕೂಗಿಕೊಂಡರು.


ಆದರೆ ಇಸ್ರೇಲರು ಒಣನೆಲದಲ್ಲಿ ಸಮುದ್ರವನ್ನು ದಾಟಿದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತು.


ಯೆಹೋವನೇ, ನೀನು ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿದೆ. ಇಂದಿನವರೆಗೂ ನೀನು ಅದ್ಭುತಕಾರ್ಯಗಳನ್ನು ಮಾಡಿದೆ. ಇಸ್ರೇಲಿನಲ್ಲಿಯೂ ನೀನು ಅವುಗಳನ್ನು ಮಾಡಿದೆ. ಜನರು ಇರುವಲ್ಲೆಲ್ಲ ನೀನು ಅವುಗಳನ್ನು ಮಾಡಿದೆ. ಇವುಗಳಿಂದ ನೀನು ಸುಪ್ರಸಿದ್ಧನಾಗಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು