Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:17 - ಪರಿಶುದ್ದ ಬೈಬಲ್‌

17 ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು. “ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ. ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಬೇಗನೆ ಮರೆತು, ನಿನ್ನ ಮಾತಿಗೆ ಕಿವಿಗೊಡದೆ ಹಠಹಿಡಿದು, ತಮಗೊಬ್ಬ ನಾಯಕನನ್ನು ನೇಮಿಸಿಕೊಂಡು, ಮೊದಲಿನಂತೆ ದಾಸರಾಗಿರುವುದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ಆದರೆ ನೀನಾದರೋ ಪಾಪಗಳನ್ನು ಕ್ಷಮಿಸುವವನೂ, ಕನಿಕರ ದಯೆಗಳುಳ್ಳವನೂ, ದೀರ್ಘಶಾಂತನೂ, ಕೃಪಾಳುವೂ ಆಗಿರುವ ದೇವರಾಗಿರುವುದರಿಂದ ನೀನು ಅವರ ಕೈಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮರೆತುಬಿಟ್ಟರು ನೀವೆಸಗಿದ ಮಹಾತ್ಕಾರ್ಯಗಳನು ಹಟಹಿಡಿದರು ತಮಗೊಬ್ಬ ನಾಯಕನ ನೇಮಿಸಿಕೊಳ್ಳಲು; ಈಜಿಪ್ಟಿಗೆ ತೆರಳಲಿದ್ದರು ಮರಳಿ ಗುಲಾಮರಾಗಲು. ನೀವಾದರೋ ಪಾಪಿಗಳನು ಕ್ಷಮಿಸುವವರು ದಯಾಪೂರಿತರು, ದೀರ್ಘಶಾಂತರು, ಕೃಪಾಳು ದೇವರು, ಅವರನು ಕೈಬಿಡದೆ ಕಾಪಾಡಿ ನಡೆಸಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಮರೆತು ಮಾತುಕೇಳದೆ ಹಟಹಿಡಿದು ತಮಗೊಬ್ಬ ನಾಯಕನನ್ನು ನೇವಿುಸಿಕೊಂಡು ಮುಂಚಿನಂತೆ ದಾಸರಾಗಿರುವದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ನೀನಾದರೋ ಪಾಪಗಳನ್ನು ಕ್ಷವಿುಸುವವನೂ ಕನಿಕರದಯೆಗಳುಳ್ಳವನೂ ದೀರ್ಘಶಾಂತನೂ ಕೃಪಾಳುವೂ ಆಗಿರುವ ದೇವರು; ನೀನು ಅವರನ್ನು ಕೈಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:17
43 ತಿಳಿವುಗಳ ಹೋಲಿಕೆ  

ಯೆಹೋವನೇ, ನೀನು ಒಳ್ಳೆಯವನೂ ಕರುಣಾಮಯನೂ ಆಗಿರುವೆ. ನಿನ್ನ ಜನರು ಸಹಾಯಕ್ಕಾಗಿ ನಿನಗೆ ಮೊರೆಯಿಡುವರು. ನೀನು ಅವರನ್ನು ನಿಜವಾಗಿಯೂ ಪ್ರೀತಿಸುವಿ.


ನಿಮ್ಮ ಬಟ್ಟೆಗಳನ್ನಲ್ಲ, ಹೃದಯವನ್ನು ಹರಿಯಿರಿ.” ನಿಮ್ಮ ದೇವರಾದ ಯೆಹೋವನ ಬಳಿಗೆ ಬನ್ನಿರಿ. ಆತನು ದಯಾಪರನೂ ಕನಿಕರವುಳ್ಳವನೂ ಆಗಿದ್ದಾನೆ. ಆತನು ಬೇಗನೆ ಕೋಪಿಸುವುದಿಲ್ಲ. ಆತನಲ್ಲಿ ಆಳವಾದ ಪ್ರೀತಿ ಇದೆ. ಆತನು ಯೋಚಿಸಿದ ಶಿಕ್ಷೆಯನ್ನು ಒಂದುವೇಳೆ ನಿಮಗೆ ಕೊಡದೆ ತನ್ನ ಮನಸ್ಸನ್ನು ಬದಲಾಯಿಸಬಹುದು.


ಯೆಹೋವನೇ, ಕನಿಕರವೂ ದಯೆಯೂ ಉಳ್ಳ ದೇವರು ನೀನೇ. ನೀನು ತಾಳ್ಮೆಯುಳ್ಳವನೂ ನಂಬಿಗಸ್ತನೂ ಪ್ರೀತಿಪೂರ್ಣನೂ ಆಗಿರುವೆ.


ದೇವರು ಮೋಶೆಗೆ, “ನಾನು ಯಾರಿಗೆ ಕರುಣೆ ತೋರಬಯಸುತ್ತೇನೋ ಅವನಿಗೆ ಕರುಣೆ ತೋರುವೆನು. ನಾನು ಯಾರಿಗೆ ಕನಿಕರ ತೋರಬಯಸುತ್ತೇನೋ ಅವರಿಗೆ ಕನಿಕರ ತೋರುವೆನು” ಎಂದು ಹೇಳಿದ್ದಾನೆ.


ಆದರೆ ಆತನು ಅವರಿಗೆ ಕರುಣೆತೋರಿ ಅವರ ಪಾಪಗಳನ್ನು ಕ್ಷಮಿಸಿದನು. ಆತನು ಅವರನ್ನು ನಾಶಮಾಡಲಿಲ್ಲ. ಅನೇಕ ಸಲ ಆತನು ತನ್ನ ಕೋಪವನ್ನು ತಡೆಯುತ್ತಾ ಬಂದನು; ತಾನು ಬಹು ಕೋಪಗೊಳ್ಳದಂತೆ ನೋಡಿಕೊಂಡನು.


ನೀನು ನಿರ್ಮಿಸುತ್ತಿರುವ ಈ ದೇವಾಲಯದಲ್ಲಿ ನಾನು ಇಸ್ರೇಲರೊಂದಿಗೆ ವಾಸಿಸುತ್ತೇನೆ. ನಾನು ಅವರನ್ನು ಎಂದೆಂದಿಗೂ ಬಿಟ್ಟುಹೋಗುವುದಿಲ್ಲ” ಎಂದು ಹೇಳಿದನು.


ನೀನು ಈಜಿಪ್ಟಿನಲ್ಲಿ ಮಾಡಿದ ಮಹತ್ಕಾರ್ಯಗಳಿಂದ ನಮ್ಮ ಪೂರ್ವಿಕರು ಏನೂ ಕಲಿತುಕೊಳ್ಳಲಿಲ್ಲ. ಕೆಂಪು ಸಮುದ್ರದ ಬಳಿಯಲ್ಲಿ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ತಿರುಗಿದರು.


ದೇವರ ಮಹತ್ಕಾರ್ಯಗಳನ್ನೂ ಆತನು ಅವರಿಗೆ ತೋರಿಸಿದ ಸೂಚಕಕಾರ್ಯಗಳನ್ನೂ ಎಫ್ರಾಯಿಮಿನ ಜನರು ಮರೆತುಬಿಟ್ಟರು.


ನಮ್ಮ ದೇವರಾದ ಯೆಹೋವನು ನಮ್ಮೊಂದಿಗಿರಲೆಂದು ನಾನು ಮೊರೆಯಿಡುತ್ತೇನೆ. ಆತನು ನಮ್ಮ ಪೂರ್ವಿಕರ ಜೊತೆಯಲ್ಲಿದ್ದಂತೆ ನಮ್ಮ ಜೊತೆಯಲ್ಲಿಯೂ ಇರಲೆಂದು ನಾನು ಮೊರೆಯಿಡುತ್ತೇನೆ. ಆತನು ನಮ್ಮನ್ನು ಎಂದಿಗೂ ಬಿಟ್ಟುಹೋಗಕೂಡದೆಂದು ನಾನು ಪ್ರಾರ್ಥಿಸುತ್ತೇನೆ.


ಆದರೆ ಆತನ ಕಾರ್ಯಗಳನ್ನು ಅವರು ಬೇಗನೆ ಮರೆತುಬಿಟ್ಟರು; ಆತನ ಉಪದೇಶಗಳಿಗೆ ಕಿವಿಗೊಡಲಿಲ್ಲ.


ಯೆಹೋವನೇ, ನಿನ್ನ ಜನರನ್ನು ಕ್ಷಮಿಸು. ಆಗ, ನಿನ್ನನ್ನು ಆರಾಧಿಸುವುದಕ್ಕೆ ಜನರಿರುವರು.


ದೇವರು ಮಾತನಾಡುವಾಗ ಆಲಿಸದೆ ಇರಬೇಡಿ. ಆತನು ಇಸ್ರೇಲರಿಗೆ ಈ ಲೋಕದಲ್ಲಿ ಎಚ್ಚರಿಕೆ ನೀಡಿದಾಗ, ಅವರು ಆತನ ಮಾತನ್ನು ಕೇಳಲಿಲ್ಲ. ಆದರೆ ಅವರು ತಪ್ಪಿಸಿಕೊಳ್ಳಲಾಗಲಿಲ್ಲ. ಈಗ ದೇವರು ಪರಲೋಕದಿಂದ ಮಾತಾಡುತ್ತಿದ್ದಾನೆ. ಆತನ ಮಾತನ್ನು ಆಲಿಸದ ಜನರು ಹೇಗೆ ತಪ್ಪಿಸಿಕೊಳ್ಳಲಾದೀತು?


“ಆದರೆ ಮೋಶೆಗೆ ವಿಧೇಯರಾಗಲು ನಮ್ಮ ಪಿತೃಗಳಿಗೆ ಇಷ್ಟವಿರಲಿಲ್ಲ. ಅವರು ಅವನನ್ನು ತಿರಸ್ಕರಿಸಿ, ಈಜಿಪ್ಟಿಗೆ ಹಿಂತಿರುಗಬೇಕೆಂದಿದ್ದರು.


“ಆದರೆ ನೀವು ನನಗೆ ಗಮನಕೊಡಲಿಲ್ಲ. ನಾನು ಸಹಾಯಮಾಡಲು ಪ್ರಯತ್ನಿಸಿದೆ. ನಾನು ಕೈಚಾಚಿದೆ; ಆದರೆ ನೀವು ನನ್ನ ಸಹಾಯವನ್ನು ತೆಗೆದುಕೊಳ್ಳದೆ ತಿರಸ್ಕರಿಸಿದಿರಿ.


ನಾವು ನಿನ್ನನ್ನು ಯಾಕೆ ಹಿಂಬಾಲಿಸಬೇಕು? ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ಕರೆದುಕೊಂಡು ಬರಲಿಲ್ಲ. ನೀನು ನಮ್ಮ ಸ್ವಂತಕ್ಕೆ ಹೊಲಗಳನ್ನಾಗಲಿ ದ್ರಾಕ್ಷೇತೋಟಗಳನ್ನಾಗಲಿ ಕೊಡಲಿಲ್ಲ! ನೀನು ಈ ಜನರಿಗೆ ಇದೇ ರೀತಿ ಮೋಸಮಾಡಬೇಕೆಂದಿರುವೆಯೋ? ನಾವು ಬರುವುದಿಲ್ಲ” ಎಂದು ಹೇಳಿದರು.


ಆದರೆ ಮೋಶೆ ಅವರಿಗೆ, “ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ? ನೀವು ಯಶಸ್ವಿಯಾಗುವುದಿಲ್ಲ.


“ಈ ಜನರು ಇನ್ನೆಷ್ಟು ಕಾಲದವರೆಗೆ ನನ್ನನ್ನು ತಿರಸ್ಕರಿಸುವರು? ನಾನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನೆಷ್ಟು ಕಾಲದವರೆಗೆ ನನ್ನನ್ನು ನಂಬದೆ ಇರುವರು?


“ಆದರೂ ನೀನು ದಯಾವಂತನು, ಅವರನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ. ಅವರನ್ನು ತೊರೆಯಲಿಲ್ಲ. ನೀನು ಅಂಥಾ ದಯಾಪರನಾದ ದೇವರು.


“ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ‘ನಾನು ಜೆರುಸಲೇಮಿಗೂ ಅದರ ಸುತ್ತಲಿನ ಹಳ್ಳಿಗಳಿಗೂ ಅನೇಕ ವಿಪತ್ತುಗಳನ್ನು ಬರಮಾಡುವುದಾಗಿ ಹೇಳಿದೆನು. ಅವುಗಳನ್ನು ಬೇಗನೆ ಬರಮಾಡುತ್ತೇನೆ. ಏಕೆಂದರೆ ಜನರು ಬಹಳ ಮೊಂಡರಾಗಿದ್ದಾರೆ. ನಾನು ಹೇಳಿದ್ದನ್ನು ಅವರು ಕೇಳುವುದೂ ಇಲ್ಲ, ಅನುಸರಿಸುವುದೂ ಇಲ್ಲ.’”


ಜೆರುಸಲೇಮಿನ ನಿವಾಸಿಗಳು ನನ್ನ ಆಜ್ಞೆಗಳಿಗೆ ದಂಗೆ ಎದ್ದಿದ್ದಾರೆ. ಅವರು ಇತರ ಜನಾಂಗಗಳಿಗಿಂತ ಕೆಟ್ಟವರು. ಅವರು ತಮ್ಮ ಸುತ್ತಲಿರುವ ಬೇರೆ ದೇಶಗಳಿಗಿಂತ ಹೆಚ್ಚಾಗಿ ನನ್ನ ಕಟ್ಟಳೆಗಳನ್ನು ಉಲ್ಲಂಬಿಸಿದ್ದಾರೆ. ಅವರು ನನ್ನ ಆಜ್ಞೆಗಳನ್ನು ತಿರಸ್ಕರಿಸಿದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ.”


“ಆದರೆ ನಮ್ಮ ದೇವರಾದ ಯೆಹೋವನೇ, ನೀನು ಕರುಣಾಳು, ದುಷ್ಕೃತ್ಯಗಳನ್ನು ಮಾಡಿದ ಜನರನ್ನು ನೀನು ಕ್ಷಮಿಸುವೆ. ನಾವು ನಿಜವಾಗಿಯೂ ನಿನಗೆ ತಿರುಗಿಬಿದ್ದೆವು.


ಯೆಹೋವನು ತಾಳ್ಮೆಯುಳ್ಳ ದೇವರು ಮತ್ತು ಬಲಿಷ್ಠನಾದ ದೇವರಾಗಿದ್ದಾನೆ! ಪಾಪಿಗಳನ್ನು ಆತನು ಶಿಕ್ಷಿಸುವನು. ಆತನಿಂದ ಅವರು ತಪ್ಪಿಸಿಕೊಳ್ಳಲಾರರು. ದುಷ್ಟಜನರನ್ನು ಶಿಕ್ಷಿಸಲು ಯೆಹೋವನು ಬರುವನು. ಆತನು ತನ್ನ ಸಾಮರ್ಥ್ಯವನ್ನು ಬಿರುಗಾಳಿಯಲ್ಲಿಯೂ ಸುಂಟರಗಾಳಿಯಲ್ಲಿಯೂ ತೋರ್ಪಡಿಸುವನು. ಮನುಷ್ಯನು ನೆಲದ ಧೂಳಿನ ಮೇಲೆ ನಡೆಯುತ್ತಾರೆ, ಯೆಹೋವನಾದರೋ ಮೋಡಗಳ ಮೇಲೆ ನಡೆಯುತ್ತಾನೆ.


ಯೆಹೋವನು ಮೋಶೆಗೆ, “ನಾನು ಈ ಜನರನ್ನು ನೋಡಿದ್ದೇನೆ. ಅವರು ಬಹಳ ಮೊಂಡರೆಂದು ನಾನು ಬಲ್ಲೆನು. ಅವರು ಯಾವಾಗಲೂ ನಿನಗೆ ವಿರೋಧವಾಗಿ ದಂಗೆ ಏಳುವರು.


ಅವರು ನಿಜವಾಗಿ ಪಾಪಮಾಡಿದ್ದರೂ ಸಹಾಯಕ್ಕಾಗಿ ಅವರು ನನ್ನ ಬಳಿಗೆ ಬಂದರೆ ನಾನು ಅವರಿಗೆ ವಿಮುಖನಾಗುವುದಿಲ್ಲ. ಅವರು ತಮ್ಮ ಶತ್ರುಗಳ ದೇಶದಲ್ಲಿದ್ದರೂ ನಾನು ಅವರಿಗೆ ಕಿವಿಗೊಡುವೆನು. ಅವರನ್ನು ಸಂಪೂರ್ಣವಾಗಿ ನಾಶಮಾಡುವುದಿಲ್ಲ. ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ. ಯಾಕೆಂದರೆ ನಾನೇ ಅವರ ದೇವರಾದ ಯೆಹೋವನು!


“ಆದರೆ ಯೆಹೋವನು ತನ್ನ ಜನರನ್ನು ಕೈಬಿಡುವುದಿಲ್ಲ. ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನರನ್ನಾಗಿ ಮಾಡಿಕೊಳ್ಳಲು ಇಷ್ಟಪಟ್ಟನು. ಆದ್ದರಿಂದ ಆತನು ತನ್ನ ಮಹಾ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ತ್ಯಜಿಸುವುದಿಲ್ಲ.


ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.


ಹೌದು, ನಾವು ಗುಲಾಮರಾಗಿದ್ದೆವು. ಆದರೆ ಸದಾಕಾಲ ಗುಲಾಮರಾಗಲು ನೀನು ನಮ್ಮನ್ನು ಬಿಡಲಿಲ್ಲ. ನಮ್ಮ ಮೇಲೆ ನೀನು ದಯೆ ತೋರಿಸಿರುವೆ. ಪರ್ಶಿಯ ರಾಜರು ನಮಗೆ ಕರುಣೆತೋರುವಂತೆ ಮಾಡಿದೆ. ನಿನ್ನ ಆಲಯವು ಹಾಳಾಗಿತ್ತು. ನಿನ್ನ ಆ ಆಲಯವನ್ನು ಮತ್ತೆ ಹೊಸದಾಗಿ ಕಟ್ಟಲು ನೀನು ನಮಗೆ ಹೊಸ ಜೀವವನ್ನು ಕೊಟ್ಟಿರುವೆ. ದೇವರೇ, ಯೆಹೂದ ಮತ್ತು ಜೆರುಸಲೇಮ್‌ಗಳ ಸಂರಕ್ಷಣೆಗಾಗಿ ಗೋಡೆಯನ್ನು ಕಟ್ಟಲು ನೀನು ನಮಗೆ ಸಹಾಯಮಾಡಿದೆ.


ದೇವರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಅವರು ಪಾಲಿಸಲಿಲ್ಲ. ಅವರು ಆತನ ಉಪದೇಶಗಳಿಗೆ ವಿಧೇಯರಾಗಲಿಲ್ಲ.


ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಅತಿ ಮೊಂಡರಾಗಿದ್ದು ಅವರ ತಂದೆಗಳಿಗಿಂತ ಹೆಚ್ಚಿನ ದುಷ್ಕೃತ್ಯಗಳನ್ನು ಮಾಡಿದರು.


ಆದರೆ ನನ್ನ ಜನರು ನನ್ನನ್ನು ಮರೆತಿದ್ದಾರೆ. ಅವರು ನಿಷ್ಪ್ರಯೋಜಕವಾದ ವಿಗ್ರಹಗಳಿಗೆ ನೈವೇದ್ಯ ಮಾಡುತ್ತಾರೆ. ನನ್ನ ಜನರು ತಾವು ಮಾಡುವ ಕೆಲಸಗಳಲ್ಲಿ ಮುಗ್ಗರಿಸುತ್ತಾರೆ. ಅವರು ತಮ್ಮ ಪೂರ್ವಿಕರ ಹಳೆಯ ಹಾದಿಯಲ್ಲಿಯೇ ಮುಗ್ಗರಿಸುತ್ತಾರೆ. ನನ್ನ ಜನರು ಒಳ್ಳೆಯ ರಾಜಬೀದಿಯ ಮೇಲೆ ನನ್ನನ್ನು ಹಿಂಬಾಲಿಸುವದನ್ನು ತೊರೆದು ಹಾಳಾದ ಹಾದಿಯನ್ನು ಹಿಡಿಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು