Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:19 - ಪರಿಶುದ್ದ ಬೈಬಲ್‌

19 ನೀನು ತುಂಬಾ ಕನಿಕರವುಳ್ಳ ದೇವರು. ಆದ್ದರಿಂದ ಅವರನ್ನು ಮರುಭೂಮಿಯಲ್ಲಿಯೇ ಬಿಡಲಿಲ್ಲ. ಹಗಲಿನಲ್ಲಿ ಅವರಿಂದ ಎತ್ತರವಾದ ಮೋಡವನ್ನು ತೆಗೆದುಬಿಡಲಿಲ್ಲ. ನೀನು ಅವರನ್ನು ಮುನ್ನಡೆಸಿಕೊಂಡೇ ಹೋದೆ. ರಾತ್ರಿಯಲ್ಲಿ ಅವರಿಂದ ಅಗ್ನಿಸ್ತಂಭವನ್ನು ತೆಗೆದುಬಿಡಲಿಲ್ಲ. ಅವರ ದಾರಿಗೆ ಬೆಳಕನ್ನು ನೀಡುತ್ತಾ ಅವರು ಹೋಗತಕ್ಕ ದಾರಿಯಲ್ಲಿ ಮುನ್ನಡೆಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕರುಣಾನಿಧಿಯಾದ ನೀನು ಅವರನ್ನು ಅರಣ್ಯದಲ್ಲಿ ಕೈಬಿಡಲಿಲ್ಲ, ಹಗಲಿನಲ್ಲಿ ಅವರಿಗೆ ದಾರಿ ತೋರಿಸುತ್ತಿದ್ದ ಮೇಘಸ್ತಂಭವೂ, ರಾತ್ರಿವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕುಕೊಡುತ್ತಿದ್ದ ಅಗ್ನಿಸ್ತಂಭವೂ, ಅವರನ್ನು ಬಿಟ್ಟುಹೋಗದಂತೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೀಗಿದ್ದರು ನೀವಾದಿರಿ ಅವರಿಗೆ ಕರುಣಾನಿಧಿ ತೊರೆದುಬಿಡಲಿಲ್ಲ ನೀವವರನು ಮರುಭೂಮಿಯಲಿ. ಬಿಟ್ಟುಹೋಗಲಿಲ್ಲ ದಾರಿತೋರಿದಾ ಮೇಘಸ್ತಂಭ ಹಗಲಲಿ ಮುನ್ನಡೆಯಿತು ಬೆಳಕನೀಯುತಾ ಅಗ್ನಿಸ್ತಂಭ ಇರುಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕರುಣಾನಿಧಿಯಾದ ನೀನು ಅವರನ್ನು ಅರಣ್ಯದಲ್ಲಿ ಕೈಬಿಡಲಿಲ್ಲ, ಹಗಲಿನಲ್ಲಿ ಅವರಿಗೆ ದಾರಿ ತೋರಿಸುತ್ತಿದ್ದ ಮೇಘ ಸ್ತಂಭವೂ ರಾತ್ರಿವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕು ಕೊಡುತ್ತಿದ್ದ ಅಗ್ನಿಸ್ತಂಭವೂ ಅವರನ್ನು ಬಿಟ್ಟುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಆದರೆ ನೀವು ನಿಮ್ಮ ಬಹು ಕರುಣೆಯಿಂದ ಮರುಭೂಮಿಯಲ್ಲಿ ಅವರನ್ನು ಕೈಬಿಡಲಿಲ್ಲ. ಹಗಲಿನಲ್ಲಿ ಅವರಿಗೆ ಮೇಘಸ್ತಂಭವು ದಾರಿ ತೋರಿಸದೆ ಇರಲಿಲ್ಲ. ರಾತ್ರಿಯಲ್ಲಿ ಅವರಿಗೆ ಬೆಳಕನ್ನೂ, ಅವರು ನಡೆಯತಕ್ಕ ಮಾರ್ಗವನ್ನೂ ತೋರಿಸುವ ಅಗ್ನಿ ಸ್ತಂಭವು ಅವರನ್ನು ಬಿಟ್ಟುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:19
23 ತಿಳಿವುಗಳ ಹೋಲಿಕೆ  

ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಂಡನು. ತನ್ನ ಮಹಾಪ್ರೀತಿಯಿಂದ ಅವರನ್ನು ಸಂತೈಸಿದನು.


ಆದ್ದರಿಂದ ಅವರ ಶತ್ರುಗಳು ಅವರನ್ನು ಸದೆಬಡಿಯುವಂತೆ ಮಾಡಿದೆ. ವೈರಿಗಳು ಅವರಿಗೆ ತುಂಬಾ ಕಷ್ಟಕೊಟ್ಟರು. ಕಷ್ಟಬಂದಾಗ ನಮ್ಮ ಪೂರ್ವಿಕರು ನಿನಗೆ ಮೊರೆಯಿಟ್ಟರು. ಪರಲೋಕದಿಂದ ನೀನು ಅವರನ್ನು ಆಲೈಸಿದೆ. ನಿನ್ನ ಮಹಾಕರುಣೆಗನುಸಾರವಾಗಿ ನೀನು ಅವರ ಬಳಿಗೆ ಜನರನ್ನು ಕಳುಹಿಸಿ ಅವರನ್ನು ಅವರ ವೈರಿಗಳ ಕೈಗಳಿಂದ ರಕ್ಷಿಸಿದೆ.


“ನಾನು ದೇವರಾದ ಯೆಹೋವನು. ನಾನು ಬದಲಾಗದ ದೇವರು. ನೀವು ಯಾಕೋಬನ ಮಕ್ಕಳು. ನೀವು ಸಂಪೂರ್ಣವಾಗಿ ನಾಶ ಹೊಂದಲಿಲ್ಲ.


ಹಗಲಿನಲ್ಲಿ ಅವರನ್ನು ನಡೆಸಲು ಮೇಘಸ್ತಂಭವನ್ನು ಉಪಯೋಗಿಸಿದೆ. ರಾತ್ರಿವೇಳೆಯಲ್ಲಿ ಅಗ್ನಿಸ್ತಂಭವನ್ನು ಉಪಯೋಗಿಸಿದೆ. ಹೀಗೆ ಅವರ ಮಾರ್ಗವನ್ನು ಬೆಳಕಿನಿಂದ ಹೊದಿಸಿದೆ. ಎಲ್ಲಿಗೆ ಹೋಗಬೇಕೆಂದು ಅವರಿಗೆ ತೋರಿಸಿದಿ.


ನನ್ನ ದೇವರೆ, ನನ್ನ ಪ್ರಾರ್ಥನೆಯನ್ನು ಕೇಳು. ನಿನ್ನ ಕಣ್ಣುಗಳನ್ನು ತೆರೆದು ನಮಗಾದ ಎಲ್ಲ ಕೇಡನ್ನು ನೋಡು. ನಿನ್ನ ಹೆಸರುಳ್ಳ ಪಟ್ಟಣದ ಗತಿ ಏನಾಗಿದೆ ನೋಡು. ನಾವು ಒಳ್ಳೆಯ ಜನರೆಂದು ನಾನು ಹೇಳುತ್ತಿಲ್ಲ. ನಾವು ಒಳ್ಳೆಯ ಜನರೆಂದು ಇದೆಲ್ಲವನ್ನು ಕೇಳುತ್ತಿಲ್ಲ. ನೀನು ಕರುಣಾಮಯನಾಗಿರುವುದರಿಂದಲೇ ಇದನ್ನೆಲ್ಲ ಕೇಳುತ್ತಿದ್ದೇನೆ.


“ಆದರೆ ನಮ್ಮ ದೇವರಾದ ಯೆಹೋವನೇ, ನೀನು ಕರುಣಾಳು, ದುಷ್ಕೃತ್ಯಗಳನ್ನು ಮಾಡಿದ ಜನರನ್ನು ನೀನು ಕ್ಷಮಿಸುವೆ. ನಾವು ನಿಜವಾಗಿಯೂ ನಿನಗೆ ತಿರುಗಿಬಿದ್ದೆವು.


ಅದಲ್ಲದೆ, ಈ ದೇಶದವರು ನೀನು ಇಸ್ರೇಲರ ಮಧ್ಯದಲ್ಲಿರುವ ಸಂಗತಿಯನ್ನು ಕೇಳಿದ್ದಾರೆ. ನೀನು ಇಸ್ರೇಲರಿಗೆ ಪ್ರತ್ಯಕ್ಷನಾಗಿ ಕಾಣಿಸಿಕೊಂಡದ್ದು ಅವರಿಗೆ ತಿಳಿದಿದೆ. ನಿನ್ನ ಮೇಘವು ಇಸ್ರೇಲರ ಮೇಲಿರುವುದು ಅವರಿಗೆ ಗೊತ್ತಿದೆ. ನೀನು ಇಸ್ರೇಲರನ್ನು ಹಗಲಲ್ಲಿ ಮೇಘಸ್ತಂಭದ ಮೂಲಕವಾಗಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದ ಮೂಲಕವಾಗಿಯೂ ಮುನ್ನಡೆಸುತ್ತಿರುವುದು ಅವರಿಗೆ ತಿಳಿದಿದೆ.


ಆದರೆ ನಾನು ನನ್ನನ್ನು ಹಾಗೆ ಮಾಡದಂತೆ ತಡೆದೆನು. ಇಸ್ರೇಲರನ್ನು ಈಜಿಪ್ಟಿನಿಂದ ಹೊರತರುವದನ್ನು ಬೇರೆ ಜನಾಂಗದವರು ನೋಡಿರುತ್ತಾರೆ. ಆದ್ದರಿಂದ ನಾನು ಅವರನ್ನು ನಾಶಮಾಡಲಿಲ್ಲ. ನನ್ನ ಹೆಸರಿನ ಘನತೆಯನ್ನು ಉಳಿಸಿಕೊಂಡೆನು.


ಆದರೆ ನಾನು ಅವರನ್ನು ನಾಶಮಾಡಲಿಲ್ಲ. ಬೇರೆ ದೇಶದವರು ನಾನು ಅವರನ್ನು ಈಜಿಪ್ಟಿನಿಂದ ಬಿಡಿಸಿ ತರುವುದನ್ನು ನೋಡಿದರು. ನನ್ನ ಒಳ್ಳೆಯ ಹೆಸರನ್ನು ಅವರೆದುರಿನಲ್ಲಿ ಅವಮಾನಪಡಿಸುವದಕ್ಕೆ ನನಗೆ ಇಷ್ಟವಿರಲಿಲ್ಲ. ಆದ್ದರಿಂದ ಅವರ ಮುಂದೆ ಇಸ್ರೇಲನ್ನು ನಾಶಮಾಡಲಿಲ್ಲ.


ಯೆಹೋವನ ಪ್ರೀತಿಗೂ ಕರುಣೆಗೂ ಕೊನೆಯೇ ಇಲ್ಲ. ಆತನ ದಯೆಗೆ ಅಂತ್ಯವೇ ಇಲ್ಲ.


“ಯಾಕೋಬೇ, ಈ ವಿಷಯಗಳನ್ನು ನೆನಪಿನಲ್ಲಿಟ್ಟುಕೊ! ಇಸ್ರೇಲೇ, ನೀನು ನನ್ನ ಸೇವಕನೆಂಬುದನ್ನು ನೆನಪಿನಲ್ಲಿಟ್ಟುಕೊ! ನಾನೇ ನಿನ್ನನ್ನು ನಿರ್ಮಿಸಿದೆನು; ನೀನೇ ನನ್ನ ಸೇವಕನು. ಆದ್ದರಿಂದ ಇಸ್ರೇಲೇ, ನನ್ನನ್ನು ಮರೆತುಬಿಡಬೇಡ.


“ಆದರೂ ನೀನು ದಯಾವಂತನು, ಅವರನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ. ಅವರನ್ನು ತೊರೆಯಲಿಲ್ಲ. ನೀನು ಅಂಥಾ ದಯಾಪರನಾದ ದೇವರು.


ಹೀಗೆ ಯೆಹೋವನ ಮೋಡವು ಹಗಲಿನಲ್ಲಿ ಪವಿತ್ರಗುಡಾರದ ಮೇಲೆ ನಿಂತಿತು. ರಾತ್ರಿಯಲ್ಲಿ ಮೋಡದಲ್ಲಿ ಅಗ್ನಿಯು ಪ್ರಕಾಶಿಸುತ್ತಿತ್ತು. ಆದ್ದರಿಂದ ಇಸ್ರೇಲ್ ಜನರೆಲ್ಲರೂ ತಾವು ಪ್ರಯಾಣ ಮಾಡುವಾಗ, ಮೋಡವನ್ನು ನೋಡಬಹುದಾಗಿತ್ತು.


“ಆದರೆ ಯೆಹೋವನು ತನ್ನ ಜನರನ್ನು ಕೈಬಿಡುವುದಿಲ್ಲ. ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನರನ್ನಾಗಿ ಮಾಡಿಕೊಳ್ಳಲು ಇಷ್ಟಪಟ್ಟನು. ಆದ್ದರಿಂದ ಆತನು ತನ್ನ ಮಹಾ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ತ್ಯಜಿಸುವುದಿಲ್ಲ.


ಜನರು ಯಾವಾಗ ಚಲಿಸಬೇಕೆಂದು ಮೋಡವು ತೋರಿಸುತ್ತಿತ್ತು. ಮೋಡವು ಪವಿತ್ರಗುಡಾರವನ್ನು ಬಿಟ್ಟು ಮೇಲೆದ್ದಾಗ, ಜನರು ಪ್ರಯಾಣ ಮಾಡತೊಡಗುತ್ತಿದ್ದರು.


ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.


ಆತನು ತನ್ನ ಜನರನ್ನು ಅರಣ್ಯದೊಳಗೆ ನಡೆಸಿದನು. ಆತನ ಪ್ರೀತಿ ಶಾಶ್ವತವಾದದ್ದು.


ಆದರೆ ನಾನು ಅವರಿಗಾಗಿ ದುಃಖಗೊಂಡೆನು. ಆದ್ದರಿಂದ ಅವರನ್ನು ನಾನು ನಾಶಮಾಡಲಿಲ್ಲ. ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು