Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:21 - ಪರಿಶುದ್ದ ಬೈಬಲ್‌

21 ನಲವತ್ತು ವರ್ಷ ಅವರನ್ನು ಸಾಕಿದೆ. ಆ ಮರುಭೂಮಿಯಲ್ಲಿ ಅವರಿಗೆ ಬೇಕಾದದ್ದೇ ದೊರಕಿತು. ಅವರ ಬಟ್ಟೆಗಳು ಹರಿದುಹೋಗಲಿಲ್ಲ. ಅವರ ಪಾದಗಳು ನೋವಿನಿಂದ ಊದಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಲ್ವತ್ತು ವರ್ಷ ಅವರನ್ನು ಅರಣ್ಯದಲ್ಲಿ ಸಾಕುತ್ತಾ ಇದ್ದೆ. ಅವರಿಗೆ ಯಾವ ಕೊರತೆಯೂ ಆಗಲಿಲ್ಲ. ಅವರ ಬಟ್ಟೆಗಳು ಹರಿದುಹೋಗಲಿಲ್ಲ, ಅವರ ಕಾಲುಗಳು ನೋವಿನಿಂದ ಊದಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಈ ಪರಿ ಸಲಹಿದಿರಿ ಮರುಭೂಮಿಯಲಿ ನಾಲ್ವತ್ತು ವರ್ಷ ಅಲ್ಲವರಿಗಿರಲಿಲ್ಲ ಯಾವುದೊಂದು ಸಂಕಷ್ಟ. ಊದಿಹೋಗಲಿಲ್ಲ ಕಾಲು, ಹರಿದುಹೋಗಲಿಲ್ಲ ಅವರ ವಸ್ತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಬಾಯಾರಿದಾಗ ಅವರಿಗೆ ನೀರನ್ನು ಕೊಟ್ಟಿ. ನಾಲ್ವತ್ತು ವರುಷ ಅವರನ್ನು ಅರಣ್ಯದಲ್ಲಿ ಸಾಕುತ್ತಾ ಇದ್ದಿ; ಅವರಿಗೆ ಯಾವ ಕೊರತೆಯೂ ಇರಲಿಲ್ಲ. ಅವರ ಬಟ್ಟೆಗಳು ಜೀರ್ಣವಾಗಲಿಲ್ಲ, ಕಾಲುಗಳು ಬಾತುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹೀಗೆಯೇ ಮರುಭೂಮಿಯಲ್ಲಿ ನಾಲ್ವತ್ತು ವರ್ಷ ಅವರನ್ನು ಪೋಷಿಸುತ್ತಿದ್ದಿರಿ. ಅವರಿಗೆ ಯಾವ ಕೊರತೆಯೂ ಇರಲಿಲ್ಲ. ಅವರ ವಸ್ತ್ರಗಳು ಹಳೆಯದಾಗಲಿಲ್ಲ. ಅವರ ಕಾಲುಗಳು ಬಾತುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:21
9 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ಪ್ರತಿಯೊಂದು ವಿಷಯದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ. ಈ ಮಹಾ ಮರುಭೂಮಿಯ ಮೂಲಕ ನೀವು ನಡೆದುಹೋದದ್ದರ ಬಗ್ಗೆಯೂ ಆತನಿಗೆ ತಿಳಿದಿದೆ. ಕಳೆದ ನಲವತ್ತು ವರ್ಷಗಳಿಂದ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ನಡಿಸಿದ್ದಾನೆ. ನಿಮಗೆ ಬೇಕಾದವುಗಳನ್ನೆಲ್ಲಾ ಒದಗಿಸಿರುತ್ತಾನೆ.’


ಆತನು ನಿಮ್ಮನ್ನು ಕಾಪಾಡಿ ಸಂರಕ್ಷಿಸಿದ್ದರಿಂದ ಈ ನಲವತ್ತು ವರ್ಷ ನಿಮ್ಮ ಬಟ್ಟೆಗಳು ಹರಿದುಹೋಗಲಿಲ್ಲ; ನಿಮ್ಮ ಕಾಲುಗಳು ಊದಿಕೊಳ್ಳಲಿಲ್ಲ.


ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು. ಆದರೆ ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರು ಸುವರಗಳನ್ನು ಹೊಂದಿಕೊಳ್ಳುವರು.


ಮರಳುಗಾಡಿನಲ್ಲಿ ನಲವತ್ತು ವರ್ಷಗಳ ಕಾಲ ಅವರನ್ನು ಸಹಿಸಿಕೊಂಡನು.


ಇಸ್ರೇಲೇ, ನೀನು ನಲವತ್ತು ವರ್ಷ ಮರುಭೂಮಿಯಲ್ಲಿ ನನಗೆ ಯಜ್ಞಹೋಮಗಳನ್ನು ಅರ್ಪಿಸಿದೆ.


ನಲವತ್ತು ವರ್ಷಗಳ ತನಕ ಯೆಹೋವನು ನಿಮ್ಮನ್ನು ಅಡವಿಯಲ್ಲಿ ನಡೆಸಿದನು. ಆದರೆ ನಿಮ್ಮ ಮೈಮೇಲಿದ್ದ ಬಟ್ಟೆಗಳು ಹರಿದುಹೋಗಲಿಲ್ಲ ಮತ್ತು ಕಾಲಿಗೆ ಹಾಕಿದ ಕೆರಗಳು ಸವೆಯಲಿಲ್ಲ.


ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.


ನಲವತ್ತು ವರ್ಷಗಳವರೆಗೆ ಜನರು ಮನ್ನವನ್ನು ತಿಂದರು. ಅವರು ವಿಶ್ರಾಂತಿಯ ದೇಶಕ್ಕೆ ಬರುವ ತನಕ, ಅಂದರೆ ಕಾನಾನಿನ ಗಡಿಗೆ ಬರುವವರೆಗೆ ಮನ್ನವನ್ನು ತಿಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು