Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:23 - ಪರಿಶುದ್ದ ಬೈಬಲ್‌

23 ಅವರ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡಿದೆ. ಅವರ ಪೂರ್ವಿಕರಿಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ತಂದೆ. ಅವರು ಒಳಹೊಕ್ಕು ದೇಶವನ್ನು ಆಕ್ರಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸಿ, ನೀವು ಈ ದೇಶದೊಳಕ್ಕೆ‍ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವಿರಿ ಎಂದು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ದೇಶಕ್ಕೆ ಅವರನ್ನು ಬರಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹೆಚ್ಚಿಸಿದಿರಿ ಅವರ ಮಕ್ಕಳನು ಆಗಸದ ನಕ್ಷತ್ರಗಳಷ್ಟೆ; ಬರಮಾಡಿದಿರಿ ಆ ಮಕ್ಕಳನು ವಾಗ್ದತ್ತ ನಾಡಿಗೆ ‘ಅದ ಸೇರಿ, ವಶಮಾಡಿಕೊಳ್ಳಿ’ ಎಂದು ಹೇಳಿದಿರಾ ಪಿತೃಗಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳಷ್ಟು ಹೆಚ್ಚಿಸಿ - ನೀವು ಈ ದೇಶದೊಳಕ್ಕೆ ಪ್ರವೇಶಿಸಿ ಸ್ವಾಧೀನ ಮಾಡಿಕೊಳ್ಳುವಿರಿ ಎಂದು ಅವರ ಪಿತೃಗಳಿಗೆ ವಾಗ್ದಾನಮಾಡಿದ್ದ ದೇಶಕ್ಕೆ ಅವರನ್ನು ಬರಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿದಿರಿ. ಅವರು ಸ್ವಾಧೀನಮಾಡಿಕೊಳ್ಳುವರು ಎಂದು ನೀವು ಅವರ ಪಿತೃಗಳಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಬರಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:23
12 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ಖಂಡಿತವಾಗಿಯೂ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಖಂಡಿತವಾಗಿಯೂ ಹೆಚ್ಚಿಸುವೆನು; ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಮರಳಿನಂತೆಯೂ ಅಸಂಖ್ಯಾತರನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ನಂತರ ದೇವರು ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು ಅವನಿಗೆ, “ಆಕಾಶದ ಕಡೆಗೆ ಕಣ್ಣೆತ್ತಿ ನಕ್ಷತ್ರಗಳನ್ನು ನೋಡು. ನೀನು ಲೆಕ್ಕ ಮಾಡಲಾರದಷ್ಟು ನಕ್ಷತ್ರಗಳಿವೆ. ಮುಂದಿನ ಕಾಲದಲ್ಲಿ ನಿನ್ನ ಕುಟುಂಬವು ಅದೇ ರೀತಿಯಲ್ಲಿರುವುದು” ಎಂದು ಹೇಳಿದನು.


ದೇವರು ಇಸ್ರೇಲರನ್ನು ಆಕಾಶದ ನಕ್ಷತ್ರದಷ್ಟು ಹೆಚ್ಚಿಸುವೆನೆಂದು ವಾಗ್ದಾನ ಮಾಡಿದ್ದ ಪ್ರಕಾರ ಇಸ್ರೇಲರ ಸಂಖ್ಯೆ ಅಪರಿಮಿತವಾಗಿತ್ತು. ಆದ್ದರಿಂದ ದಾವೀದನು ಇಪ್ಪತ್ತು ವರ್ಷ ಪ್ರಾಯದ ಮೇಲ್ಪಟ್ಟ ಗಂಡಸರನ್ನು ಮಾತ್ರ ಲೆಕ್ಕಿಸುವ ಆಲೋಚನೆ ಮಾಡಿದನು.


ನಾನು ನಿನ್ನ ಸಂಗಡವಿದ್ದು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಕುಟುಂಬಕ್ಕೂ ಈ ಪ್ರದೇಶಗಳನ್ನೆಲ್ಲ ಕೊಡುವೆನು. ನಾನು ನಿನ್ನ ತಂದೆಯಾದ ಅಬ್ರಹಾಮನಿಗೆ ಪ್ರಮಾಣ ಮಾಡಿದ್ದನ್ನು ನೆರವೇರಿಸುವೆನು.


ನೀನು ಪ್ರಯಾಣ ಮಾಡುತ್ತಿರುವ ಈ ಕಾನಾನ್ ದೇಶವನ್ನೆಲ್ಲ ನಿನಗೂ ನಿನ್ನ ಸಂತತಿಯವರಿಗೂ ಶಾಶ್ವತವಾಗಿ ಕೊಡುವೆನು. ನಾನೇ ನಿಮ್ಮ ದೇವರಾಗಿರುವೆನು” ಎಂದು ಹೇಳಿದನು.


ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.


ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.


ನೀವು ಆಕಾಶದ ನಕ್ಷತ್ರದಷ್ಟು ಅಸಂಖ್ಯಾತರಾಗಿದ್ದರೂ ನಿಮ್ಮಲ್ಲಿ ಕೆಲವರೇ ಉಳಿದುಕೊಳ್ಳುವರು. ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಕಿವಿಗೊಡಲಿಲ್ಲ.


ಆದರೆ ಇಸ್ರೇಲರಿಗೆ ಅನೇಕ ಮಕ್ಕಳಿದ್ದರು; ಅವರ ಸಂಖ್ಯೆಯು ಹೆಚ್ಚಾಗತೊಡಗಿತು. ಇಸ್ರೇಲರು ಬಲಗೊಂಡರು; ಈಜಿಪ್ಟಿನಲ್ಲೆಲ್ಲಾ ತುಂಬಿಕೊಂಡರು.


ಈಜಿಪ್ಟಿನವರು ಇಸ್ರೇಲರಿಂದ ಪ್ರಯಾಸಕರವಾದ ಕೆಲಸಗಳನ್ನು ಬಲವಂತವಾಗಿ ಮಾಡಿಸಿದಷ್ಟೂ ಇಸ್ರೇಲರು ಹೆಚ್ಚು ಹರಡಿಕೊಂಡದ್ದರಿಂದ ಈಜಿಪ್ಟಿನ ಜನರು ಇಸ್ರೇಲರಿಗೆ ಹೆಚ್ಚೆಚ್ಚಾಗಿ ಭಯಪಟ್ಚರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು