Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:25 - ಪರಿಶುದ್ದ ಬೈಬಲ್‌

25 ಬಲಾಢ್ಯ ನಗರಗಳನ್ನು ಸ್ವಾಧೀನಪಡಿಸಿಕೊಂಡರು. ಉತ್ತಮವಾದ ಭೂಮಿಯನ್ನು ವಶಪಡಿಸಿಕೊಂಡರು. ಒಳ್ಳೆಯ ವಸ್ತುಗಳಿಂದ ತುಂಬಿದ್ದ ಮನೆಗಳನ್ನು ಅವರು ವಶಪಡಿಸಿಕೊಂಡರು. ಅಗೆದು ತಯಾರಾಗಿದ್ದ ಬಾವಿಗಳನ್ನು ಅವರಿಗೆ ನೀನು ಕೊಟ್ಟೆ, ದ್ರಾಕ್ಷಿತೋಟವನ್ನು, ಎಣ್ಣೆಮರಗಳ ತೋಪನ್ನು, ಬೇಕಾದಷ್ಟು ಹಣ್ಣಿನ ಮರಗಳನ್ನು ನೀನು ಅವರಿಗೆ ಕೊಟ್ಟೆ. ಅವರ ಹೊಟ್ಟೆ ತುಂಬಿ ಕೊಬ್ಬೇರುವಷ್ಟು ಅವರಿಗೆ ಕೊಟ್ಟೆ. ನೀನು ಕೊಟ್ಟ ಉತ್ತಮವಾದ ವಸ್ತುಗಳಲ್ಲಿ ಅವರು ಆನಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ಸಾರವುಳ್ಳ ಭೂಮಿಯನ್ನೂ, ಸಮಸ್ತ ವಿಧವಾದ ಉತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನೂ, ತೋಡಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಎಣ್ಣೇಮರಗಳ ತೋಪುಗಳನ್ನೂ, ಹೆಚ್ಚಾದ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಚೆನ್ನಾಗಿ ತಿಂದು, ಕುಡಿದು ತೃಪ್ತರಾಗಿ ಕೊಬ್ಬಿ, ನೀನು ಕೊಟ್ಟ ಸಮೃದ್ಧಿಯಲ್ಲಿ ಆನಂದಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ವಶಮಾಡಿಕೊಂಡರು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನು ಸಾರವತ್ತಾದ ಹೊಲಗಳನು, ಧಾನ್ಯ ತುಂಬಿದ ಮನೆಗಳನು, ತೋಡಿದ ಬಾವಿಗಳನು ದ್ರಾಕ್ಷೀತೋಟಗಳನು, ಎಣ್ಣೇಮರ ತೋಪುಗಳನು, ನಾನಾಫಲವೃಕ್ಷಗಳನು. ತಿಂದು ತೃಪ್ತರಾದರು, ಕೊಬ್ಬಿದರು, ನೀವಿತ್ತ ಸಮೃದ್ಧಿಯಲಿ ನಲಿದಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸಾರವುಳ್ಳ ಭೂವಿುಯನ್ನೂ ಸಮಸ್ತ ವಿಧವಾದ ಉತ್ತಮವಸ್ತುಗಳಿಂದ ತುಂಬಿದ ಮನೆಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇತೋಟ, ಎಣ್ಣೇಮರಗಳ ತೋಪು, ಎಷ್ಟೋ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಚೆನ್ನಾಗಿ ತಿಂದು ತೃಪ್ತರಾಗಿ ಕೊಬ್ಬಿ ನೀನು ಕೊಟ್ಟ ಸಮೃದ್ಧಿಯಲ್ಲಿ ಆನಂದಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವರು ಕೋಟೆ ಪಟ್ಟಣಗಳನ್ನೂ, ರಸವತ್ತಾದ ಭೂಮಿಯನ್ನೂ ವಶಪಡಿಸಿಕೊಂಡರು. ಉತ್ತಮವಾದವುಗಳಿಂದ ತುಂಬಿದ ಮನೆಗಳನ್ನೂ, ಅಗಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಓಲಿವ್ ತೋಪುಗಳನ್ನೂ, ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು, ಪುಷ್ಟಿಯಾಗಿ ನಿಮ್ಮ ಮಹಾ ಉಪಕಾರದಲ್ಲಿ ಆನಂದಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:25
25 ತಿಳಿವುಗಳ ಹೋಲಿಕೆ  

“ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;


ನಮ್ಮ ಪೂರ್ವಿಕರು ನಿನ್ನ ಸೇವೆಮಾಡಲಿಲ್ಲ. ತಮ್ಮ ಸ್ವಂತ ದೇಶದಲ್ಲಿ ವಾಸಿಸುವಾಗಲೂ ನಿನ್ನ ಸೇವೆಮಾಡಲಿಲ್ಲ; ಕೆಟ್ಟತನವನ್ನು ನಿಲ್ಲಿಸಲಿಲ್ಲ. ನೀನು ಕೊಟ್ಟ ಉತ್ತಮ ವಸ್ತುಗಳಲ್ಲಿಯೂ ಉತ್ತಮ ಭೂಮಿಯಲ್ಲಿಯೂ ಆನಂದಿಸಿದರು. ಅವರಿಗೆ ಬೇಕಾದಷ್ಟು ಜಮೀನಿತ್ತು. ಆದರೂ ಅವರು ತಮ್ಮ ದುಷ್ಟತನವನ್ನು ನಿಲ್ಲಿಸಲಿಲ್ಲ.


ಆ ಪಟ್ಟಣಗಳೆಲ್ಲಾ ಬಹಳ ಪ್ರಬಲವಾಗಿದ್ದವು. ಅವುಗಳಿಗೆ ಎತ್ತರವಾದ ಪೌಳಿಗೋಡೆಗಳಿದ್ದು ಕದಗಳಿಂದಲೂ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟಿದ್ದವು. ಇನ್ನೂ ಅನೇಕ ಪಟ್ಟಣಗಳಿಗೆ ಕೋಟೆಗಳಿರಲಿಲ್ಲ.


ಹೀಗೆ ಇದ್ದ ಬಳಿಕ ಇಸ್ರೇಲರು ಹಿಂತಿರುಗಿ ಬರುವರು. ಆಗ ಅವರು ತಮ್ಮ ದೇವರಾದ ಯೆಹೋವನನ್ನೂ ಅವರ ಅರಸನಾದ ದಾವೀದನನ್ನೂ ಹುಡುಕುವರು. ಕೊನೆಯ ದಿವಸಗಳಲ್ಲಿ ತಮ್ಮ ದೇವರಾದ ಯೆಹೋವನನ್ನೂ ಆತನ ಒಳ್ಳೆಯತನವನ್ನೂ ಗೌರವಿಸಲು ಬರುವರು.


ಅವರನ್ನು ಈಜಿಪ್ಟಿನಿಂದ ಹೊರಗೆ ತಂದು, ನಾನು ಅವರಿಗಾಗಿ ಹುಡುಕಿಟ್ಟಿರುವ ದೇಶಕ್ಕೆ ಕರೆದುಕೊಂಡು ಹೋಗುವುದಾಗಿ ವಾಗ್ದಾನ ಮಾಡಿದೆನು. ಅದು ಹಾಲೂ ಜೇನೂ ಹರಿಯುವ ದೇಶವಾಗಿತ್ತು. ಅದು ಎಲ್ಲಾ ದೇಶಗಳಿಗಿಂತಲೂ ಸುಂದರವಾದ ದೇಶ.


ಮಾರನೆಯ ದಿನ ಸೊಲೊಮೋನನು ಜನರಿಗೆ ಮನೆಗೆ ಹೋಗುವಂತೆ ಹೇಳಿದನು. ಜನರೆಲ್ಲರು ರಾಜನನ್ನು ಅಭಿನಂದಿಸಿ ತಮ್ಮ ತಮ್ಮ ಮನೆಗಳಿಗೆ ಹೋದರು. ಯೆಹೋವನು ತನ್ನ ಸೇವಕನಾದ ದಾವೀದನಿಗೆ ಮತ್ತು ಇಸ್ರೇಲಿನ ಜನರಿಗೆ ಒಳ್ಳೆಯವುಗಳನ್ನು ಮಾಡಿದ್ದರಿಂದ ಅವರು ಸಂತೋಷವಾಗಿದ್ದರು.


ಬೆಟ್ಟಗುಡ್ಡಗಳ ಪ್ರಾಂತ್ಯವನ್ನು ವಶಪಡಿಸಲು ಇಸ್ರೇಲನ್ನು ನಡೆಸಿದನು. ಹೊಲದ ಬೆಳೆಯನ್ನು ಇಸ್ರೇಲ್ ಕೊಯಿಲು ಮಾಡಿದನು. ಬಂಡೆಯಿಂದ ಜೇನನ್ನು ಯೆಹೋವನು ಇಸ್ರೇಲಿಗೆ ಕೊಟ್ಟನು. ಗಟ್ಟಿಯಾದ ಬಂಡೆಯಿಂದ ಎಣ್ಣೆಯು ಹೊರಡುವಂತೆ ಮಾಡಿದನು.


ದೇವರು ನಿಮ್ಮ ವಿಷಯದಲ್ಲಿ ಬಹು ಕನಿಕರ ಉಳ್ಳವನಾಗಿದ್ದಾನೆ; ತಾಳ್ಮೆ ಉಳ್ಳವನಾಗಿದ್ದಾನೆ. ನೀವು ಮಾರ್ಪಾಟಾಗಬೇಕೆಂದು ದೇವರು ನಿಮಗಾಗಿ ಕಾದುಕೊಂಡಿದ್ದಾನೆ. ಆದರೆ ನೀವು ಆತನ ಕರುಣೆಯ ಬಗ್ಗೆ ಆಲೋಚಿಸುವುದೇ ಇಲ್ಲ. ನೀವು ನಿಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳಬೇಕಾಗುತ್ತದೆಯೆಂದು ದೇವರ ಕನಿಕರವನ್ನು ಅರ್ಥಮಾಡಿಕೊಳ್ಳದೆ ಇದ್ದೀರಿ.


ನಾನು ಇಸ್ರೇಲರಿಗೆ ಆಹಾರ ಒದಗಿಸಿದೆನು. ಅವರು ಆ ಆಹಾರವನ್ನು ಉಂಡು ತಿಂದು ತೃಪ್ತರಾಗಿ ಕೊಬ್ಬೇರಿದ್ದರಿಂದ ನನ್ನನ್ನು ಮರೆತರು.


ಯಾಜಕರು ತಮಗೆ ಬೇಕಾಗುವದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೈವೇದ್ಯಗಳನ್ನು ಪಡೆಯುವರು. ನಾನು ಅವರಿಗೆ ಕೊಡುವ ಉತ್ತಮ ವಸ್ತುಗಳನ್ನು ಮನದಣಿಯುವ ಹಾಗೆ ಅನುಭವಿಸಿ ನನ್ನ ಜನರು ತೃಪ್ತಿಪಡುವರು.” ಇದು ಯೆಹೋವನ ನುಡಿ.


ಜನರಲ್ಲಿ ಗಲಿಬಿಲಿಯನ್ನು ಉಂಟುಮಾಡು. ಜನರು ತಾವು ನೋಡಿದ್ದನ್ನು, ಕೇಳಿದ್ದನ್ನು ಅರ್ಥಮಾಡಿಕೊಳ್ಳದ ಹಾಗೆ ಮಾಡು. ನೀನು ಹೀಗೆ ಮಾಡದಿದ್ದಲ್ಲಿ ಜನರು ತಾವು ಕೇಳಿದ್ದನ್ನು ಅರ್ಥಮಾಡಿಕೊಳ್ಳುವರು; ಜನರು ತಮ್ಮ ಮನಸ್ಸಿನಲ್ಲಿ ಅರ್ಥಮಾಡಿಕೊಳ್ಳುವರು. ಅವರು ಹಾಗೆ ಮಾಡಿದ್ದಲ್ಲಿ, ಅವರು ನನ್ನ ಬಳಿಗೆ ಹಿಂದಿರುಗಿ ಬಂದು ಗುಣಹೊಂದುವರು” ಎಂದು ಹೇಳಿದನು.


ಹೊಸ ವರ್ಷವನ್ನು ಸಮೃದ್ಧಿಕರವಾದ ಸುಗ್ಗಿಯೊಂದಿಗೆ ಆರಂಭಿಸುವಾತನು ನೀನೇ. ಅನೇಕ ಬೆಳೆಗಳಿಂದ ಬಂಡಿಗಳನ್ನು ತುಂಬಿಸುವಾತನು ನೀನೇ.


ನನಗೆ ಹೆಚ್ಚಾಗಿದ್ದರೆ, ನಿನ್ನನ್ನೇ ತಿರಸ್ಕರಿಸಿ, “ನನಗೆ ಯೆಹೋವನ ಅಗತ್ಯವಿಲ್ಲ” ಎಂದು ಹೇಳುವೆನು. ನಾನು ಬಡವನಾಗಿದ್ದರೆ, ಕಳವುಮಾಡಿ ನಿನ್ನ ಹೆಸರಿಗೆ ಅವಮಾನ ಮಾಡುವೆನು.


ಯೆಹೋವನು ಕರುಣಾಶೀಲನೆಂಬುದನ್ನು ನೆನಪು ಮಾಡಿಕೊಳ್ಳುವೆನು. ಆತನನ್ನು ಸ್ತುತಿಸಲು ನೆನಪುಮಾಡಿಕೊಳ್ಳುವೆನು. ಇಸ್ರೇಲ್ ಕುಟುಂಬಕ್ಕೆ ಯೆಹೋವನು ಎಷ್ಟೋ ಮೇಲನ್ನು ಮಾಡಿದ್ದಾನೆ. ನಮ್ಮ ಮೇಲೆ ಯೆಹೋವನು ತನ್ನ ದಯೆಯನ್ನು ಸುರಿಸಿದ್ದಾನೆ. ನಮಗೆ ಕರುಣೆಯನ್ನು ತೋರಿಸಿದ್ದಾನೆ.


“ಶ್ರೀಮಂತ ದೇಶಗಳು ನೆಮ್ಮದಿಯಿಂದಿರುವಾಗ ಈ ಕ್ರೂರಿಯು ಪೂರ್ವ ಸೂಚನೆಯಿಲ್ಲದೆ ಅವುಗಳ ಮೇಲೆ ದಾಳಿ ಮಾಡುವನು. ಅವನು ಸರಿಯಾದ ಸಮಯಕ್ಕೆ ದಾಳಿಮಾಡುವನು; ಅವನ ಪೂರ್ವಿಕರು ವಿಫಲರಾದ ದೇಶಗಳಲ್ಲಿ ಜಯ ಸಂಪಾದಿಸುವನು. ಅವನು ಸೋಲಿಸಿದ ದೇಶಗಳನ್ನು ಕೊಳ್ಳೆಹೊಡೆದು ದೊರೆತ ಸಂಪತ್ತನ್ನು ತನ್ನ ಅನುಯಾಯಿಗಳಲ್ಲಿ ಹಂಚುವನು. ಅವನು ಭದ್ರವಾದ ನಗರಗಳನ್ನು ಹಿಡಿದುಕೊಳ್ಳಲು ಮತ್ತು ನಾಶಮಾಡಲು ಯೋಜನೆಗಳನ್ನು ಮಾಡುವನು. ಅವನಿಗೆ ಜಯಸಿಕ್ಕಿದರೂ ಅದು ಸ್ವಲ್ಪ ಕಾಲದವರೆಗೆ ಮಾತ್ರ ಇರುತ್ತದೆ.


ಯೆಹೋವನು ಇಸ್ರೇಲಿಗೆ ಹಿಂಡಿನಿಂದ ಬೆಣ್ಣೆಯನ್ನೂ ಹಾಲನ್ನೂ ಕೊಟ್ಟನು. ಆತನು ಕೊಬ್ಬಿದ ಕುರಿಮರಿಗಳನ್ನೂ ಆಡುಗಳನ್ನೂ ಬಾಷಾನಿನ ಅತ್ಯುತ್ತಮವಾದ ಟಗರುಗಳನ್ನೂ ಕೊಟ್ಟನು. ಜೊತೆಗೆ ಉತ್ತಮವಾದ ಗೋಧಿಯನ್ನೂ ಕೊಟ್ಟನು. ಇಸ್ರೇಲಿನ ಜನರು ಕೆಂಪು ದ್ರಾಕ್ಷಿಯಿಂದ ಮಾಡಿದ ಉತ್ತಮ ದ್ರಾಕ್ಷಾರಸವನ್ನು ಕುಡಿದರು.


ಆದರೆ ನೀನು ಅನೇಕ ಪಾಪಗಳನ್ನು ಮಾಡಿರುವೆ. ನಿನಗಿಂತಲೂ ಮೊದಲು ಆಳಿದವರ ಪಾಪಗಳಿಗಿಂತ ನಿನ್ನ ಪಾಪಗಳು ಹೆಚ್ಚು ಭಯಂಕರವಾಗಿವೆ. ನೀನು ನನ್ನನ್ನು ಅನುಸರಿಸುವುದನ್ನು ಬಿಟ್ಟುಬಿಟ್ಟೆ. ನೀನು ವಿಗ್ರಹಗಳನ್ನು ಮತ್ತು ಅನ್ಯದೇವರುಗಳನ್ನು ನಿರ್ಮಿಸಿದೆ. ಇದು ನನ್ನಲ್ಲಿ ಹೆಚ್ಚು ಕೋಪವುಂಟುಮಾಡಿತು.


ಅನ್ಯಜನರು ವಾಸವಾಗಿದ್ದ ದೇಶವನ್ನು ದೇವರು ತನ್ನ ಜನರಿಗೆ ಕೊಟ್ಟನು. ಅನ್ಯಜನರು ದುಡಿದು ಸಂಪಾದಿಸಿದ್ದವುಗಳನ್ನು ದೇವಜನರು ಪಡೆದುಕೊಂಡರು.


“ನಾನು ನಿಮ್ಮನ್ನು ಅನೇಕ ಅಮೂಲ್ಯವಸ್ತುಗಳಿಂದ ಕೂಡಿದ ಫಲವತ್ತಾದ ಭೂಮಿಗೆ ಕರೆದುತಂದೆ. ಅಲ್ಲಿ ಬೆಳೆಯುವ ಫಲಗಳನ್ನು ತಿನ್ನಲಿ ಎಂಬ ಉದ್ದೇಶದಿಂದ ನಾನು ಕರೆದುತಂದೆ. ಆದರೆ ನೀವು ಬಂದು ನನ್ನ ಭೂಮಿಯನ್ನು ಹೊಲಸು ಮಾಡಿದಿರಿ. ನಾನು ಆ ಭೂಮಿಯನ್ನು ನಿಮಗೆ ಕೊಟ್ಟೆ, ಆದರೆ ನೀವು ಅದನ್ನು ಕೆಟ್ಟ ಸ್ಥಳವನ್ನಾಗಿ ಮಾಡಿದಿರಿ.


ಇಸ್ರೇಲಿನ ಜನರು ಈ ಪ್ರದೇಶಕ್ಕೆ ಬಂದು ಅದನ್ನು ತಮ್ಮದನ್ನಾಗಿ ಮಾಡಿಕೊಂಡರು. ಆದರೆ ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ; ನಿನ್ನ ಉಪದೇಶಗಳನ್ನು ಅನುಸರಿಸಲಿಲ್ಲ; ನಿನ್ನ ಆಜ್ಞೆಯಂತೆ ಮಾಡಲಿಲ್ಲ. ಆದ್ದರಿಂದ ನೀನು ಇಸ್ರೇಲರಿಗೆ ಇಂಥಾ ದುರ್ಗತಿ ಬರುವಂತೆ ಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು