Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:31 - ಪರಿಶುದ್ದ ಬೈಬಲ್‌

31 “ಆದರೂ ನೀನು ದಯಾವಂತನು, ಅವರನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ. ಅವರನ್ನು ತೊರೆಯಲಿಲ್ಲ. ನೀನು ಅಂಥಾ ದಯಾಪರನಾದ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದರೆ ನೀನು ದಯೆಯೂ ಕನಿಕರವೂ ಉಳ್ಳ ದೇವರಾಗಿರುವುರಿಂದ ನಿನ್ನ ಮಹಾಕೃಪಾನುಸಾರವಾಗಿ ಅವರನ್ನು ನಾಶಮಾಡಲಿಲ್ಲ, ಕೈಬಿಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆದರೆ, ನೀವು ದಯಾಪೂರಿತರು, ಕರುಣಾಮಯ ದೇವರು! ನಿಮ್ಮ ಮಹಾಕೃಪಾನುಸಾರ, ಕೈಬಿಡಲಿಲ್ಲ, ನಾಶಮಾಡಲಿಲ್ಲ ಅವರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದರೆ ನೀನು ದಯೆಯೂ ಕನಿಕರವೂ ಉಳ್ಳ ದೇವರಾಗಿರುವದರಿಂದ ನಿನ್ನ ಮಹಾ ಕೃಪಾನುಸಾರವಾಗಿ ಅವರನ್ನು ನಾಶಮಾಡಿಬಿಡಲಿಲ್ಲ, ಕೈಬಿಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದರೂ ನೀವು ನಿಮ್ಮ ಮಹಾ ಕರುಣೆಯಲ್ಲಿ ಅವರನ್ನು ನಾಶಮಾಡಲಿಲ್ಲ. ಅವರನ್ನು ಕೈಬಿಡಲೂ ಇಲ್ಲ. ಏಕೆಂದರೆ ನೀವು ಕೃಪೆಯೂ, ಕರುಣೆಯೂ ಉಳ್ಳ ದೇವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:31
15 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆ ಹೇಳುತ್ತಾನೆ: “ಇಡೀ ದೇಶವು ಹಾಳಾಗುವುದು. ಆದರೆ ನಾನು ಭೂಮಿಯನ್ನು ಸಂಪೂರ್ಣವಾಗಿ ನಾಶಮಾಡುವದಿಲ್ಲ.


ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು. “ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ. ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ.


ಯೆಹೋವನ ಪ್ರೀತಿಗೂ ಕರುಣೆಗೂ ಕೊನೆಯೇ ಇಲ್ಲ. ಆತನ ದಯೆಗೆ ಅಂತ್ಯವೇ ಇಲ್ಲ.


“ಯೆಹೂದವೇ, ಆ ಭಯಂಕರ ದಿನಗಳು ಬಂದಾಗ ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುವದಿಲ್ಲ, ಎಂದು ಯೆಹೋವನು ಹೇಳಿದನು.


“ಯೆಹೂದದ ದ್ರಾಕ್ಷಿಯ ಸಾಲುಬಳ್ಳಿಗಳ ಬಳಿಗೆ ಹೋಗಿರಿ, ಆ ಬಳ್ಳಿಗಳನ್ನು ಕತ್ತರಿಸಿರಿ. ಆದರೆ ಅವುಗಳನ್ನು ಸಂಪೂರ್ಣವಾಗಿ ನಾಶಮಾಡಬೇಡಿರಿ. ಅವುಗಳ ಎಲ್ಲಾ ಕೊಂಬೆಗಳನ್ನು ಕತ್ತರಿಸಿಬಿಡಿ. ಏಕೆಂದರೆ, ಈ ಕೊಂಬೆಗಳು ಯೆಹೋವನಿಗೆ ಸಂಬಂಧಿಸಿಲ್ಲ.


“ಆದರೆ ನಮ್ಮ ದೇವರಾದ ಯೆಹೋವನೇ, ನೀನು ಕರುಣಾಳು, ದುಷ್ಕೃತ್ಯಗಳನ್ನು ಮಾಡಿದ ಜನರನ್ನು ನೀನು ಕ್ಷಮಿಸುವೆ. ನಾವು ನಿಜವಾಗಿಯೂ ನಿನಗೆ ತಿರುಗಿಬಿದ್ದೆವು.


ನೀವು ಯೆಹೋವನಿಗೆ ವಿಧೇಯರಾದರೆ ನಿಮ್ಮ ಮಕ್ಕಳೂ ಬಂಧುಗಳೂ ತಮ್ಮನ್ನು ಸೆರೆಹಿಡಿದವರಿಂದ ಕರುಣೆಯನ್ನು ಹೊಂದಿ ಮತ್ತೆ ಈ ದೇಶಕ್ಕೆ ಬರುವರು. ದೇವರಾದ ಯೆಹೋವನು ದಯೆಯೂ ಕರುಣೆಯೂ ಉಳ್ಳವನಾಗಿದ್ದಾನೆ. ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮನ್ನು ತಳ್ಳಿಬಿಡುವುದಿಲ್ಲ.”


ಆದರೆ ಯೆಹೋವನು ಇಸ್ರೇಲರಿಗೆ ದಯಾಪರನಾಗಿದ್ದನು. ಯೆಹೋವನು ಕರುಣೆಯಿಂದ ಇಸ್ರೇಲರಿಗೆ ಅಭಿಮುಖನಾದನು. ಏಕೆಂದರೆ ಆತನು ಅಬ್ರಹಾಮನೊಂದಿಗೆ ಇಸಾಕನೊಂದಿಗೆ ಮತ್ತು ಯಾಕೋಬನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದನು. ಯೆಹೋವನು ಇಸ್ರೇಲರನ್ನು ನಾಶಗೊಳಿಸಲಿಲ್ಲ. ಅವರನ್ನು ಇನ್ನೂ ತಳ್ಳಿಬಿಟ್ಟಿರಲಿಲ್ಲ.


ನಿಮ್ಮ ದೇವರಾದ ಯೆಹೋವನು ಕರುಣೆಯುಳ್ಳ ದೇವರಾಗಿದ್ದಾನೆ. ನಿಮ್ಮನ್ನು ಅಲ್ಲಿಯೇ ಇರಗೊಡಿಸುವುದಿಲ್ಲ; ನಿಮ್ಮನ್ನು ಸಂಪೂರ್ಣವಾಗಿ ನಾಶಪಡಿಸುವುದಿಲ್ಲ; ನಿಮ್ಮ ಪೂರ್ವಿಕರೊಂದಿಗೆ ಮಾಡಿದ ಒಡಂಬಡಿಕೆಯನ್ನು ಆತನು ಮರೆತುಬಿಡುವವನಲ್ಲ.


ನೀನು ತುಂಬಾ ಕನಿಕರವುಳ್ಳ ದೇವರು. ಆದ್ದರಿಂದ ಅವರನ್ನು ಮರುಭೂಮಿಯಲ್ಲಿಯೇ ಬಿಡಲಿಲ್ಲ. ಹಗಲಿನಲ್ಲಿ ಅವರಿಂದ ಎತ್ತರವಾದ ಮೋಡವನ್ನು ತೆಗೆದುಬಿಡಲಿಲ್ಲ. ನೀನು ಅವರನ್ನು ಮುನ್ನಡೆಸಿಕೊಂಡೇ ಹೋದೆ. ರಾತ್ರಿಯಲ್ಲಿ ಅವರಿಂದ ಅಗ್ನಿಸ್ತಂಭವನ್ನು ತೆಗೆದುಬಿಡಲಿಲ್ಲ. ಅವರ ದಾರಿಗೆ ಬೆಳಕನ್ನು ನೀಡುತ್ತಾ ಅವರು ಹೋಗತಕ್ಕ ದಾರಿಯಲ್ಲಿ ಮುನ್ನಡೆಸಿದೆ.


“ಆದರೆ ನಾನು ತಾಳ್ಮೆಯಿಂದಿರುವೆನು. ನಾನು ಇದನ್ನು ನನ್ನ ಹೆಸರಿನ ನಿಮಿತ್ತ ಮಾಡುವೆನು. ನಾನು ನಿಮ್ಮ ಮೇಲೆ ಕೋಪಗೊಂಡು ನಾನು ನಾಶಮಾಡದೆ ಇದ್ದುದಕ್ಕಾಗಿ ಜನರು ನನ್ನನ್ನು ಸ್ತುತಿಸುವರು. ನನ್ನ ತಾಳ್ಮೆಗಾಗಿ ನೀವು ನನ್ನನ್ನು ಕೊಂಡಾಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು