Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:15 - ಪರಿಶುದ್ದ ಬೈಬಲ್‌

15 ಅದಕ್ಕೆ ಅವಳು, “ನನಗೊಂದು ದಾನ ಕೊಡಬೇಕು. ನೀನು ನನಗೆ ನೆಗೆವಿನಲ್ಲಿ ನೀರಿಲ್ಲದ ಮರುಭೂಮಿಯನ್ನು ಕೊಟ್ಟಿರುವೆ. ದಯವಿಟ್ಟು ನನಗೆ ಸ್ವಲ್ಪ ನೀರಿನ ಬುಗ್ಗೆಗಳಿರುವ ಭೂಮಿಯನ್ನು ಕೊಡು” ಎಂದಳು. ಅವಳು ಕೇಳಿಕೊಂಡಂತೆಯೇ ಕಾಲೇಬನು ಅವಳಿಗೆ ಮೇಲಿನ ಮತ್ತು ಕೆಳಗಿನ ಬುಗ್ಗೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಕೆಯು, “ನನಗೊಂದು ದಾನಕೊಡಬೇಕು; ನೀನು ನನ್ನನ್ನು ದಕ್ಷಿಣ ಪ್ರಾಂತ್ಯಕ್ಕೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಅಂದಳು. ಆಗ ಅವನು ಆಕೆಗೆ ಮೇಲಣ ಬುಗ್ಗೆ ಮತ್ತು ಕೆಳಗಣ ಪ್ರದೇಶದ ಬುಗ್ಗೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಬುಗ್ಗೆಗಳಿರುವ ಭೂಮಿಯನ್ನು ದಾನವಾಗಿ ಕೊಡಿ,” ಎಂದಳು. ಕಾಲೇಬನು ಆಕೆಗೆ ಮೇಲಿನ ಹಾಗು ಕೆಳಗಿನ ಬುಗ್ಗೆಗಳನ್ನು ದಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಕೆಯು - ನನಗೊಂದು ದಾನಕೊಡಬೇಕು; ನನ್ನನ್ನು ಬೆಗ್ಗಾಡಿಗೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು ಅಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದಕ್ಕೆ ಅವಳು ಅವನಿಗೆ, “ನನಗೆ ಒಂದು ಸಹಾಯಮಾಡಬೇಕು. ಮೊದಲು ದಕ್ಷಿಣ ಹೊಲವನ್ನು ನೀನು ನನಗೆ ಕೊಟ್ಟೆ; ನೀರಿನ ಬುಗ್ಗೆಗಳನ್ನು ಸಹ ನನಗೆ ಕೊಡು,” ಎಂದಳು. ಆಗ ಕಾಲೇಬನು ಅವಳಿಗೆ ಮೇಲಿನ ಹಾಗೂ ಕೆಳಗಿನ ನೀರಿನ ಬುಗ್ಗೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:15
9 ತಿಳಿವುಗಳ ಹೋಲಿಕೆ  

ಅಪಕಾರ ಮಾಡಿದವನಿಗೆ ಅಪಕಾರ ಮಾಡದೆ, ನಿಂದಿಸಿದವನನ್ನು ನಿಂದಿಸದೆ, ಅವನನ್ನು ಆಶೀರ್ವದಿಸುವಂತೆ ದೇವರಲ್ಲಿ ಬೇಡಿಕೊಳ್ಳಿರಿ. ಏಕೆಂದರೆ ಆಶೀರ್ವಾದವನ್ನು ಹೊಂದಿಕೊಳ್ಳಲು ನೀವು ಕರೆಯಲ್ಪಟ್ಟವರಾಗಿದ್ದೀರಿ.


ಆ ಜನರು ತನ್ನ ಮೇಲೆ ಪದೇಪದೇ ಸುರಿಯುವ ಮಳೆಯನ್ನು ಹೀರಿಕೊಳ್ಳುವ ಭೂಮಿಯಂತಿದ್ದಾರೆ. ಅದು ಜನರಿಗೆ ಆಹಾರವನ್ನು ಕೊಡಲೆಂದು ರೈತನು ಅದರಲ್ಲಿ ಸಸಿಯನ್ನು ನೆಟ್ಟು ಬೆಳೆಸುತ್ತಾನೆ. ಅದು ಜನರಿಗೆ ಉಪಯುಕ್ತವಾದ ಬೆಳೆಗಳನ್ನು ಬೆಳೆಸಿದರೆ, ಅದಕ್ಕೆ ದೇವರಿಂದ ಆಶೀರ್ವಾದ ದೊರೆಯುತ್ತದೆ.


ಆದ್ದರಿಂದ ನಾನು ಬರುವುದಕ್ಕಿಂತ ಮೊದಲು ನಿಮ್ಮ ಬಳಿಗೆ ಹೋಗುವಂತೆ ಈ ಸಹೋದರರನ್ನು ಕೇಳಿಕೊಳ್ಳಬೇಕೆಂದು ನಾನು ಆಲೋಚಿಸಿದೆನು. ನೀವು ವಾಗ್ದಾನ ಮಾಡಿದ ಸಹಾಯಧನವನ್ನು ಇವರು ಸಂಗ್ರಹಿಸುವರು. ಆಗ, ನಾವು ಬರುವಷ್ಟರಲ್ಲಿ ನಿಮ್ಮ ಸಹಾಯಧನವು ಸಿದ್ಧವಾಗಿರುವುದು. ಈ ಸಹಾಯಧನವು ನಿಮ್ಮ ಹೃತ್ಪೂರ್ವಕವಾದ ದಾನವೇ ಹೊರತು ಸಂಕಟದಿಂದ ಕೊಟ್ಟ ದಾನವಲ್ಲ.


ಈಗ ನಾನು ನಿನಗಾಗಿ ಈ ಕೊಡುಗೆಗಳನ್ನು ತಂದಿದ್ದೇನೆ. ನಿನ್ನನ್ನು ಹಿಂಬಾಲಿಸುತ್ತಿರುವ ನಿನ್ನ ಸೇವಕರಿಗೆ ದಯವಿಟ್ಟು ಇವುಗಳನ್ನು ಕೊಡು.


ಅಬೀಗೈಲಳು ಇನ್ನೂರು ರೊಟ್ಟಿಗಳನ್ನೂ ಎರಡು ದ್ರಾಕ್ಷಾರಸದ ಚೀಲಗಳನ್ನೂ ಐದು ಕುರಿಗಳ ಬೇಯಿಸಿದ ಮಾಂಸವನ್ನೂ ಹದಿನೇಳು ಕಿಲೋಗ್ರಾಂ ಬೇಯಿಸಿದ ಕಾಳನ್ನೂ ನೂರುಗೊಂಚಲು ಒಣದ್ರಾಕ್ಷಿಯನ್ನೂ ಅಂಜೂರ ಹಣ್ಣಿನ ಇನ್ನೂರು ಉಂಡೆಗಳನ್ನೂ ತ್ವರಿತವಾಗಿ ತೆಗೆದುಕೊಂಡಳು. ಅವಳು ಅವುಗಳನ್ನು ಕತ್ತೆಗಳ ಮೇಲೆ ಹೇರಿದಳು.


ಆದ್ದರಿಂದ ನಾನು ಕೊಡುವ ಈ ಉಡುಗೊರೆಗಳನ್ನು ಸ್ವೀಕರಿಸಿಕೊಳ್ಳಬೇಕೆಂದು ಬೇಡಿಕೊಳ್ಳುತ್ತಿರುವೆ. ದೇವರು ನನಗೆ ತುಂಬ ಒಳ್ಳೆಯವನಾಗಿದ್ದನು. ನನಗೆ ಬೇಕಾದದ್ದಕ್ಕಿಂತಲೂ ಹೆಚ್ಚಾಗಿ ನನ್ನಲ್ಲಿದೆ” ಎಂದು ಹೇಳಿದನು. ಹೀಗೆ ಯಾಕೋಬನು ಉಡುಗೊರೆಗಳನ್ನು ತೆಗೆದುಕೊಳ್ಳುವಂತೆ ಏಸಾವನನ್ನು ಬೇಡಿಕೊಂಡನು. ಆದ್ದರಿಂದ ಏಸಾವನು ಉಡುಗೊರೆಗಳನ್ನು ಸ್ವೀಕರಿಸಿದನು.


ಅದಕ್ಕೆ ಅವಳು “ನನ್ನನ್ನು ಆಶೀರ್ವದಿಸು. ನೀನು ನನಗೆ ನೆಗೆವ್‌ನಲ್ಲಿ ಮರುಭೂಮಿಯನ್ನು ಕೊಟ್ಟಿರುವೆ. ದಯವಿಟ್ಟು ನೀರಿರುವ ಭೂಮಿಯನ್ನು ಸ್ವಲ್ಪಕೊಡು” ಎಂದು ಕೇಳಿಕೊಂಡಳು. ಅವಳ ಕೋರಿಕೆಗನುಸಾರವಾಗಿ ಕಾಲೇಬನು ಮೇಲಿನ ಮತ್ತು ಕೆಳಗಿನ ನೀರಿನ ಬುಗ್ಗೆಗಳನ್ನು ಕೊಟ್ಟನು.


ಅಕ್ಷಾಳು ಒತ್ನೀಯೇಲನ ಜೊತೆ ವಾಸಿಸಲು ಹೋದಳು. ಒತ್ನೀಯೇಲನು ಅಕ್ಷಾಳಿಗೆ, “ನಿನ್ನ ತಂದೆಯಿಂದ ಸ್ವಲ್ಪ ಭೂಮಿಯನ್ನು ಕೇಳು” ಎಂದು ಹೇಳಿದನು. ಅಕ್ಷಾಳು ತನ್ನ ತಂದೆಯ ಹತ್ತಿರ ಹೋದಳು. ಅವಳು ತನ್ನ ಕತ್ತೆಯ ಮೇಲಿಂದ ಇಳಿದಾಗ, “ನಿನಗೇನು ಬೇಕು?” ಎಂದು ಕಾಲೇಬನು ಕೇಳಿದನು.


ಕೇನ್ಯರು (ಕೇನ್ಯರು ಮೋಶೆಯ ಮಾವನ ಗೋತ್ರದವರಾಗಿದ್ದರು.) ಖರ್ಜೂರ ನಗರವನ್ನು (ಜೆರಿಕೊವನ್ನು) ಬಿಟ್ಟು ಯೆಹೂದ್ಯರ ಸಂಗಡ ಹೋದರು. ಅವರು ನೆಗೆವಿನಲ್ಲಿ ಅರಾದ್ ನಗರದ ಹತ್ತಿರವಿದ್ದ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು