Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:16 - ಪರಿಶುದ್ದ ಬೈಬಲ್‌

16 ಕೇನ್ಯರು (ಕೇನ್ಯರು ಮೋಶೆಯ ಮಾವನ ಗೋತ್ರದವರಾಗಿದ್ದರು.) ಖರ್ಜೂರ ನಗರವನ್ನು (ಜೆರಿಕೊವನ್ನು) ಬಿಟ್ಟು ಯೆಹೂದ್ಯರ ಸಂಗಡ ಹೋದರು. ಅವರು ನೆಗೆವಿನಲ್ಲಿ ಅರಾದ್ ನಗರದ ಹತ್ತಿರವಿದ್ದ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೋಶೆಯ ಮಾವನಾದ ಕೇನ್ಯನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅಡವಿಗೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕೇನ್ಯನೂ ಮೋಶೆಯ ಮಾವನೂ ಆದ ಹೋಬಾಬನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ ಕುಲದವರ ಜೊತೆಯಲ್ಲಿ ಆರಾದಿನ ದಕ್ಷಿಣದಲ್ಲಿರುವ ಯೆಹೂದ ಮರುಭೂಮಿಗೆ ಬಂದು ಅಲ್ಲಿಯ ಜನರ ಸಂಗಡ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕೇನ್ಯನೂ ಮೋಶೆಯ ಮಾವನೂ ಆದ [ಹೋಬಾಬನ] ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು, ಯೆಹೂದ ಗೋತ್ರದವರ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೆಹೂದದ ಗೋತ್ರದವರ ಮರುಭೂಮಿಗೆ ಬಂದು, ಅಲ್ಲಿನ ಜನರ ಸಂಗಡ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:16
26 ತಿಳಿವುಗಳ ಹೋಲಿಕೆ  

ಹೆಬೆರನೆಂಬ ಒಬ್ಬ ಮನುಷ್ಯನಿದ್ದನು. ಅವನು ಕೇನ್ಯರ ಕುಲದವನಾಗಿದ್ದನು. ಅವನು ಉಳಿದ ಕೇನ್ಯರನ್ನು ಬಿಟ್ಟು ಚಾನನ್ನೀಮ್ ಎಂಬ ಊರಲ್ಲಿ ಓಕ್ ವೃಕ್ಷದ ಬಳಿ ಮನೆ ಮಾಡಿಕೊಂಡಿದ್ದನು. (ಕೇನ್ಯರು ಹೋಬಾಬನ ಸಂತತಿಯವರಾಗಿದ್ದರು. ಹೋಬಾಬನು ಮೋಶೆಯ ಮಾವನಾಗಿದ್ದನು.) ಚಾನನ್ನೀಮ್ ಕೆದೆಷ್ ನಗರದ ಸಮೀಪದಲ್ಲಿತ್ತು.


ಸೌಲನು ಕೇನ್ಯದ ಜನರಿಗೆ, “ಅಮಾಲೇಕ್ಯರನ್ನು ತ್ಯಜಿಸಿ ಹೊರಗೆ ಹೋಗಿ, ಆಗ ನಿಮ್ಮನ್ನು ಅಮಾಲೇಕ್ಯರೊಂದಿಗೆ ನಾಶಗೊಳಿಸುವುದಿಲ್ಲ. ಇಸ್ರೇಲರು ಈಜಿಪ್ಟಿನಿಂದ ಹೊರ ಬಂದಾಗ ನೀವು ಅವರಿಗೆ ಅನುಕಂಪ ತೋರಿದ್ದೀರಿ” ಎಂದು ಹೇಳಿದನು. ಆದ್ದರಿಂದ ಕೇನ್ಯರು ಅಮಾಲೇಕ್ಯರನ್ನು ಬಿಟ್ಟುಹೋದರು.


ಯೆಹೋವನು ಮೋಶೆಗೆ ನೆಗೆವ್ ಮತ್ತು ಚೋಗರೂರಿನಿಂದ ಖರ್ಜೂರದ ಮರಗಳ ಪಟ್ಟಣವಾದ ಜೆರಿಕೊ ಪಟ್ಟಣದವರೆಗಿರುವ ಕಣಿವೆಯನ್ನು ತೋರಿಸಿದನು.


ಕಾನಾನ್ಯನಾಗಿದ್ದ ಅರಾದಿನ ರಾಜನು ನೆಗೆವ್‌ನಲ್ಲಿದ್ದುಕೊಂಡು ರಾಜ್ಯಭಾರ ಮಾಡುತ್ತಿದ್ದನು. ಇಸ್ರೇಲರು ಅತಾರೀಮಿನ ಮಾರ್ಗವಾಗಿ ಬರುತ್ತಾರೆಂಬ ಸುದ್ದಿಯು ಅವನಿಗೆ ಮುಟ್ಟಿತು. ಆದ್ದರಿಂದ ಅವನು ಹೋಗಿ ಇಸ್ರೇಲರೊಡನೆ ಯುದ್ಧಮಾಡಿ ಅವರಲ್ಲಿ ಕೆಲವರನ್ನು ಸೆರೆಹಿಡಿದನು.


ಇವನು ಅಮ್ಮೋನಿಯರಿಂದ ಮತ್ತು ಅಮಾಲೇಕ್ಯರಿಂದ ಸಹಾಯವನ್ನು ಪಡೆದನು. ಅವರು ಅವನೊಂದಿಗೆ ಸೇರಿಕೊಂಡು ಇಸ್ರೇಲರ ಮೇಲೆ ಧಾಳಿಮಾಡಿದರು. ಎಗ್ಲೋನ್ ಮತ್ತು ಅವನ ಸೈನಿಕರು ಇಸ್ರೇಲರನ್ನು ಸೋಲಿಸಿ ಅವರನ್ನು ಜೆರಿಕೊ ಎಂಬುವ ಖರ್ಜೂರ ನಗರದಿಂದ ಹೊರದೂಡಿದರು.


ಆದರೆ ಸೀಸೆರನು ಓಡಿಹೋದನು. ಅವನು ಯಾಯೇಲ ಎಂಬ ಒಬ್ಬ ಮಹಿಳೆ ವಾಸವಾಗಿದ್ದ ಗುಡಾರಕ್ಕೆ ಬಂದನು. ಯಾಯೇಲಳು ಹೆಬೆರನ ಹೆಂಡತಿ. ಹೆಬೆರನು ಕೇನ್ಯನಾಗಿದ್ದನು. ಹಾಚೋರಿನ ಅರಸನಾದ ಯಾಬೀನ ಮತ್ತು ಕೇನ್ಯನಾದ ಹೆಬೆರನ ಕುಟುಂಬಗಳ ಮಧ್ಯೆ ಒಳ್ಳೆಯ ಸಮಾಧಾನವಿದ್ದಿತು. ಅದಕ್ಕಾಗಿ ಸೀಸೆರನು ಯಾಯೇಲಳ ಗುಡಾರಕ್ಕೆ ಓಡಿಹೋಗಿದ್ದನು.


“ಯೆರೆಮೀಯನೇ, ರೇಕಾಬನ ಕುಟುಂಬದವರಲ್ಲಿಗೆ ಹೋಗು. ಅವರನ್ನು ಯೆಹೋವನ ಆಲಯದ ಒಂದು ಪಕ್ಕದ ಕೋಣೆಗೆ ಕರೆದು, ಕುಡಿಯುವದಕ್ಕೆ ದ್ರಾಕ್ಷಾರಸವನ್ನು ಕೊಡು.”


ಅದೇ ಸಮಯದಲ್ಲಿ ಎದೋಮ್ಯರು ಬಂದು ಯೆಹೂದ ಜನರ ಮೇಲೆ ಧಾಳಿಮಾಡಿ ಅವರನ್ನು ಸೋಲಿಸಿದರು. ಯೆಹೂದ ಜನರನ್ನು ಸೆರೆಹಿಡಿದು ತಮ್ಮ ದೇಶಕ್ಕೊಯ್ದರು. ಆಗ ಅರಸನಾದ ಆಹಾಜನು ಅಶ್ಶೂರದ ಅರಸನ ಸಹಾಯ ಕೇಳಿದನು.


ಆರನೆಯವನು ಓಚೆಮ್, ಏಳನೆಯವನು ದಾವೀದ.


ಹೊರ್ಮದ ಅರಸ ಅರಾದಿನ ಅರಸ


ಸ್ವಲ್ಪ ಸಮಯದ ನಂತರ ಮೋಶೆಯು ತನ್ನ ಮಾವನಾದ ಇತ್ರೋನನನ್ನು ಬೀಳ್ಕೊಟ್ಟನು; ಇತ್ರೋನನು ತನ್ನ ಸ್ವದೇಶಕ್ಕೆ ಹಿಂತಿರುಗಿಹೋದನು.


ಇತ್ರೋನನು ದೇವರಿಗೆ ಯಜ್ಞಗಳನ್ನು, ಕಾಣಿಕೆಗಳನ್ನು ಸಮರ್ಪಿಸಿದನು. ಆಗ ಆರೋನನು ಮತ್ತು ಇಸ್ರೇಲರ ಎಲ್ಲಾ ಹಿರಿಯರು ಮೋಶೆಯ ಮಾವನಾದ ಇತ್ರೋನನೊಡನೆ ದೇವರ ಸನ್ನಿಧಿಯಲ್ಲಿ ಊಟಮಾಡಲು ಬಂದರು.


ಆದ್ದರಿಂದ ಮೋಶೆ ತನ್ನ ಮಾವನನ್ನು ಭೇಟಿಯಾಗಲು ಹೊರಗೆ ಹೋದನು. ಮೋಶೆ ಅವನ ಮುಂದೆ ತಲೆಬಾಗಿ ಅವನಿಗೆ ಮುದ್ದಿಟ್ಟನು. ಅವರಿಬ್ಬರು ಪರಸ್ಪರ ಕ್ಷೇಮ ಸಮಾಚಾರವನ್ನು ವಿಚಾರಿಸಿಕೊಂಡರು. ಬಳಿಕ ಅವರು ಹೆಚ್ಚು ಮಾತಾಡಲು ಮೋಶೆಯ ಡೇರೆಯೊಳಕ್ಕೆ ಹೋದರು.


ಮೋಶೆಯ ಮಾವನಾದ ಇತ್ರೋನನು ಮಿದ್ಯಾನಿನಲ್ಲಿ ಯಾಜಕನಾಗಿದ್ದನು. ಮೋಶೆಗೆ ಮತ್ತು ಇಸ್ರೇಲರಿಗೆ ದೇವರು ಅನೇಕ ರೀತಿಗಳಲ್ಲಿ ಸಹಾಯ ಮಾಡಿದ್ದರ ಬಗ್ಗೆ, ಯೆಹೋವನು ಇಸ್ರೇಲರನ್ನು ಈಜಿಪ್ಟಿನಿಂದ ಹೊರಗೆ ನಡಿಸಿದ್ದರ ಬಗ್ಗೆ ಇತ್ರೋನನು ಕೇಳಿದನು.


ಬಳಿಕ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂತಿರುಗಿದನು. ಮೋಶೆ ಇತ್ರೋನನಿಗೆ, “ಈಜಿಪ್ಟಿನಲ್ಲಿರುವ ನನ್ನ ಜನರ ಬಳಿಗೆ ಹೋಗಿ ಅವರು ಇನ್ನೂ ಜೀವಂತವಾಗಿದ್ದಾರೋ ಏನೋ ನೋಡುವೆನು” ಎಂದು ಹೇಳಿದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗಿ ಬಾ” ಎಂದು ಹೇಳಿದನು.


ಮೋಶೆಯ ಮಾವನ ಹೆಸರು ಇತ್ರೋನನು. ಇತ್ರೋನನು ಮಿದ್ಯಾನಿನ ಯಾಜಕನಾಗಿದ್ದನು. ಮೋಶೆಯು ಇತ್ರೋನನ ಕುರಿಗಳಿಗೆ ಕುರುಬನಾಗಿದ್ದನು. ಒಂದು ದಿನ, ಮೋಶೆಯು ಕುರಿಗಳನ್ನು ಮರುಭೂಮಿಯ ಪಶ್ಚಿಮಭಾಗಕ್ಕೆ ನಡೆಸಿಕೊಂಡು ದೇವರ ಬೆಟ್ಟವೆಂದು ಕರೆಯಲ್ಪಡುವ ಸೀನಾಯಿ ಎಂಬ ಹೋರೇಬ್ ಬೆಟ್ಟಕ್ಕೆ ಹೋದನು.


ಆ ಕಾಲದಲ್ಲಿ ಸ್ನಾನಿಕ ಯೋಹಾನನು ಜುದೇಯದ ಅಡವಿಯಲ್ಲಿ ಬೋಧಿಸುವುದಕ್ಕೆ ಪ್ರಾರಂಭಿಸಿದನು.


ಅದಕ್ಕೆ ಅವಳು, “ನನಗೊಂದು ದಾನ ಕೊಡಬೇಕು. ನೀನು ನನಗೆ ನೆಗೆವಿನಲ್ಲಿ ನೀರಿಲ್ಲದ ಮರುಭೂಮಿಯನ್ನು ಕೊಟ್ಟಿರುವೆ. ದಯವಿಟ್ಟು ನನಗೆ ಸ್ವಲ್ಪ ನೀರಿನ ಬುಗ್ಗೆಗಳಿರುವ ಭೂಮಿಯನ್ನು ಕೊಡು” ಎಂದಳು. ಅವಳು ಕೇಳಿಕೊಂಡಂತೆಯೇ ಕಾಲೇಬನು ಅವಳಿಗೆ ಮೇಲಿನ ಮತ್ತು ಕೆಳಗಿನ ಬುಗ್ಗೆಗಳನ್ನು ಕೊಟ್ಟನು.


ದಾವೀದನು ಅನೇಕ ಸಲ ಹೀಗೆ ಮಾಡಿದನು. ಪ್ರತಿಸಲವೂ ಆಕೀಷನು ದಾವೀದನನ್ನು, “ನೀನು ಎಲ್ಲಿ ಯುದ್ಧಮಾಡಿದೆ ಮತ್ತು ಇವುಗಳನ್ನು ಎಲ್ಲಿಂದ ತಂದೆ” ಎಂದು ಕೇಳುತ್ತಿದ್ದನು. ದಾವೀದನು, “ನಾನು ಯೆಹೂದ ದೇಶದ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲಿ, “ನಾನು ಎರಹ್ಮೇಲ್ಯರ ದಕ್ಷಿಣಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ “ನಾನು ಕೇನ್ಯರ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ ಹೇಳುತ್ತಿದ್ದನು.


ರಾಕಾಲಿನವರಿಗೆ, ಎರಹ್ಮೇಲ್ಯರ ಮತ್ತು ಕೇನ್ಯರ ಪಟ್ಟಣಗಳಿಗೆ,


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಈ ದೇಶವನ್ನು ನಾನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ವಾಗ್ದಾನ ಮಾಡಿದ್ದೇನೆ. ನಿಮ್ಮ ಸಂತತಿಯವರಿಗೆ ನಾನು ಈ ದೇಶವನ್ನು ಕೊಡುವೆನು ಎಂದು ಹೇಳಿದ್ದೆನು. ಆ ದೇಶವನ್ನು ನೀನು ನೋಡುವಂತೆ ಮಾಡಿದೆನು. ಆದರೆ ನೀನು ಅದರೊಳಗೆ ಪ್ರವೇಶಿಸುವುದಿಲ್ಲ.”


ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಪಟ್ಟಣಗಳು: ಜೆರಿಕೊ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್,


ಶಾಸ್ತ್ರಿಗಳ ಸಂತಾನ: ಯಾಬೇಚ್, ತಿರ್ರಾತ್ಯ, ಶಿಮ್ಗಾತ್ಯ ಮತ್ತು ಸೂಕಾತ್ಯ ಎಂಬ ಸ್ಥಳಗಳಲ್ಲಿ ವಾಸಿಸುವರು. ಇವರು ಹಮಾತಿನಿಂದ ಬಂದ ಕೇನ್ಯರು. ಬೆತ್‌ರೇಕಾಬನ್ನು ಹಮಾತನು ಸ್ಥಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು