Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:21 - ಪರಿಶುದ್ದ ಬೈಬಲ್‌

21 ಬೆನ್ಯಾಮೀನನ ಕುಲದವರಿಗೆ ಯೆಬೂಸಿಯರನ್ನು ಜೆರುಸಲೇಮಿನಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿನವರೆಗೂ ಅವರು ಬೆನ್ಯಾಮೀನರೊಡನೆ ಜೆರುಸಲೇಮಿನಲ್ಲಿಯೇ ವಾಸವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆರೂಸಲೇಮಿನಲ್ಲಿದ್ದ ಯೆಬೂಸಿಯರನ್ನು ಬೆನ್ಯಾಮೀನ್ಯರು ಹೊರಡಿಸಿಬಿಡಲಿಲ್ಲ. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇಮಿನಲ್ಲಿಯೇ ವಾಸವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಜೆರುಸಲೇಮಿನಲ್ಲಿದ್ದ ಯೆಬೂಸಿಯರನ್ನು ಹೊರಡಿಸಲು ಬೆನ್ಯಾಮೀನ್ಯರಿಂದ ಆಗದೆಹೋಯಿತು. ಅವರು ಇಂದಿನವರೆಗೂ, ಬೆನ್ಯಾಮೀನ್ಯರ ಸಂಗಡ ಜೆರುಸಲೇಮಿನಲ್ಲೇ ವಾಸವಾಗಿ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆರೂಸಲೇವಿುನಲ್ಲಿದ್ದ ಯೆಬೂಸಿಯರನ್ನು ಹೊರಡಿಸುವದು ಬೆನ್ಯಾಮೀನ್ಯರಿಂದ ಆಗದೆ ಹೋಯಿತು. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇವಿುನಲ್ಲಿಯೇ ವಾಸವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಬೆನ್ಯಾಮೀನ್ಯರಿಗೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಯೆಬೂಸಿಯರು ಈ ದಿನದವರೆಗೂ ಬೆನ್ಯಾಮೀನರ ಸಂಗಡ ವಾಸವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:21
13 ತಿಳಿವುಗಳ ಹೋಲಿಕೆ  

ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಹಾಕಲು ಯೆಹೂದ ಕುಲದವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಯೆಬೂಸಿಯರು ಇಂದಿನವರೆಗೂ ಜೆರುಸಲೇಮಿನಲ್ಲಿ ಯೆಹೂದ ಕುಲದವರೊಡನೆ ವಾಸವಾಗಿದ್ದಾರೆ.


ಯೆಹೂದ್ಯರು ಜೆರುಸಲೇಮಿನ ವಿರುದ್ಧ ಯುದ್ಧಮಾಡಿ ಅದನ್ನು ಗೆದ್ದುಕೊಂಡರು. ಯೆಹೂದ್ಯರು ಜೆರುಸಲೇಮಿನ ಜನರನ್ನು ಖಡ್ಗಗಳಿಂದ ಕೊಂದು ನಗರವನ್ನು ಸುಟ್ಟುಹಾಕಿದರು.


ಯೋಸೇಫನ ಕುಲದವರು ಲೂಜ್ ಎಂಬ ಬೇತೇಲ್ ನಗರದ ಮೇಲೆ ಧಾಳಿಮಾಡಲು ಹೋದರು. ಯೆಹೋವನು ಯೋಸೇಫನ ಕುಲದವರ ಸಂಗಡ ಇದ್ದನು. ಯೋಸೇಫನ ಕುಲದವರು ಬೇತೇಲ್ ನಗರಕ್ಕೆ ಕೆಲವು ಜನ ಗೂಢಚಾರರನ್ನು ಕಳುಹಿಸಿದರು. ಇವರು ಬೇತೇಲ್ ನಗರವನ್ನು ವಶಪಡಿಸಿಕೊಳ್ಳುವ ಮಾರ್ಗಗಳ ಬಗ್ಗೆ ಯೋಚಿಸುತ್ತಿದ್ದರು.


ಇಸ್ರೇಲರು ಈ ಜನರನ್ನು ನಾಶಪಡಿಸಲು ಸಮರ್ಥರಾಗಿರಲಿಲ್ಲ. ಆದರೆ ಸೊಲೊಮೋನನು ಅವರನ್ನು ತನ್ನ ಕೆಲಸ ಮಾಡಲು ಗುಲಾಮರನ್ನಾಗಿ ಇಟ್ಟುಕೊಂಡನು; ಅವರು ಇಂದಿಗೂ ಗುಲಾಮರಾಗಿದ್ದಾರೆ.


ದಾವೀದನೂ ಎಲ್ಲಾ ಇಸ್ರೇಲರೂ ಜೆರುಸಲೇಮಿಗೆ ಹೊರಟರು. ಆ ಕಾಲದಲ್ಲಿ ಜೆರುಸಲೇಮನ್ನು ಯೆಬೂಸ್ ಎಂದು ಕರೆಯುತ್ತಿದ್ದರು. ಯಾಕೆಂದರೆ ಜೆರುಸಲೇಮ್ ಪಟ್ಟಣದಲ್ಲಿ ಯೆಬೂಸಿಯರು ವಾಸಿಸುತ್ತಿದ್ದರು. ಆ ಪಟ್ಟಣದಲ್ಲಿದ್ದ ಜನರು ದಾವೀದನಿಗೆ,


ಕಾನಾನಿನಲ್ಲಿ ವಾಸವಾಗಿದ್ದ ಅನ್ಯ ಜನಾಂಗಗಳನ್ನು ನಾಶಮಾಡಲು ಯೆಹೋವನು ಅವರಿಗೆ ಹೇಳಿದನು. ಆದರೆ ಇಸ್ರೇಲರು ದೇವರಿಗೆ ವಿಧೇಯರಾಗಲಿಲ್ಲ.


ಬೇತ್‌ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ನಗರಗಳಲ್ಲಿ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಪಟ್ಟಣಗಳಲ್ಲಿ ಕಾನಾನ್ಯರು ವಾಸವಾಗಿದ್ದರು. ಕಾನಾನ್ಯರನ್ನು ಈ ನಗರಗಳಿಂದ ಹೊರದೂಡುವುದು ಮನಸ್ಸೆ ಕುಲದವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಕಾನಾನ್ಯರು ನೆಲೆನಿಂತರು. ಅವರು ತಮ್ಮ ಮನೆಗಳನ್ನು ಬಿಡಲು ಸಮ್ಮತಿಸಲಿಲ್ಲ.


ಇದಲ್ಲದೆ ಯೆಬೂಸಿಯರಿಗೆ, ಅಮೋರಿಯರಿಗೆ, ಗಿರ್ಗಾಷಿಯರಿಗೆ,


ಈ ಜನರೆಲ್ಲರು ತಮ್ಮ ಗೋತ್ರಗಳಿಗೆ ನಾಯಕರಾಗಿದ್ದರು. ಇವರ ಗೋತ್ರ ಚರಿತ್ರೆಯಲ್ಲಿ ಇವರನ್ನು ನಾಯಕರ ಪಟ್ಟಿಯಲ್ಲಿ ಸೇರಿಸಲಾಗಿದೆ. ಇವರೆಲ್ಲಾ ಜೆರುಸಲೇಮಿನಲ್ಲಿ ವಾಸವಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು